Horoscope Today: ಕುಟುಂಬದವರ ಜೊತೆ ಕಿರುಪ್ರವಾಸ ಮಾಡುವಿರಿ, ವಿವಾಹ ಮಾತುಕತೆ ನಡೆಯಲಿದೆ; ಮೇಷದಿಂದ ಕಟಕರಾಶಿವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಕುಟುಂಬದವರ ಜೊತೆ ಕಿರುಪ್ರವಾಸ ಮಾಡುವಿರಿ, ವಿವಾಹ ಮಾತುಕತೆ ನಡೆಯಲಿದೆ; ಮೇಷದಿಂದ ಕಟಕರಾಶಿವರೆಗಿನ ದಿನಭವಿಷ್ಯ

Horoscope Today: ಕುಟುಂಬದವರ ಜೊತೆ ಕಿರುಪ್ರವಾಸ ಮಾಡುವಿರಿ, ವಿವಾಹ ಮಾತುಕತೆ ನಡೆಯಲಿದೆ; ಮೇಷದಿಂದ ಕಟಕರಾಶಿವರೆಗಿನ ದಿನಭವಿಷ್ಯ

18 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (18th May 2024 Daily Horoscope).

ಕುಟುಂಬದವರ ಜೊತೆ ಕಿರುಪ್ರವಾಸ ಮಾಡುವಿರಿ, ವಿವಾಹ ಮಾತುಕತೆ ನಡೆಯಲಿದೆ; ಮೇಷದಿಂದ ಕಟಕರಾಶಿವರೆಗಿನ ದಿನಭವಿಷ್ಯ
ಕುಟುಂಬದವರ ಜೊತೆ ಕಿರುಪ್ರವಾಸ ಮಾಡುವಿರಿ, ವಿವಾಹ ಮಾತುಕತೆ ನಡೆಯಲಿದೆ; ಮೇಷದಿಂದ ಕಟಕರಾಶಿವರೆಗಿನ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (18th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲಪಕ್ಷ, ಶನಿವಾರ

ತಿಥಿ: ದಶಮಿ ಬೆಳ್ಳಿಗ್ಗೆ 10.48 ರವರೆಗೂ ಇರುತ್ತದೆ. ಅನಂತರ ಏಕಾದಶಿ ಆರಂಭವಾಗುತ್ತದೆ.

ನಕ್ಷತ್ರ: ಉತ್ತರ ನಕ್ಷತ್ರವು ರಾತ್ರಿ 11.56 ರವರೆಗೂ ಇರುತ್ತದೆ. ಅನಂತರ ಹಸ್ತ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 5.53

ಸೂರ್ಯಾಸ್ತ: ಸಂಜೆ 6.38

ರಾಹುಕಾಲ: ಬೆಳಿಗ್ಗೆ 9.09 ರಿಂದ ಬೆಳಿಗ್ಗೆ 10.44

ರಾಶಿಫಲ

ಮೇಷ

ಉತ್ತಮ ಮನೋಭಾವದಿಂದ ದಿನ ಆರಂಭಿಸುವಿರಿ. ಕುಟುಂಬದಲ್ಲಿ ಇದ್ದ ಅನಾವಶ್ಯಕ ವಾದ ವಿವಾದಗಳು ಕೊನೆಗೊಳ್ಳಲಿವೆ. ಜೀವನದಲ್ಲಿನ ಸರಳ ಬದಲಾವಣೆಗಳಿಂದ ಉತ್ತಮ ಆರೋಗ್ಯವನ್ನು ಗಳಿಸಬಹುದು. ದಿಟ್ಟತನದ ನಡೆ ನುಡಿ ಕೆಲವರಲ್ಲಿ ಬೇಸರ ಮೂಡಿಸುತ್ತದೆ. ಪಾಲುಗಾರಿಕೆಯ ವ್ಯವಹಾರದಲ್ಲಿ ತೊಡಗಿಸಿದ್ದ ಹಣವನ್ನು ಮರಳಿ ಪಡೆಯುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಕಿರು ಪ್ರವಾಸ ಮಾಡುವಿರಿ. ಸಂಗಾತಿಯ ಜೊತೆಯಲ್ಲಿ ಉತ್ತಮ ಪ್ರೀತಿ ವಿಶ್ವಾಸ ಇರಲಿದೆ. ಜೀವನದಲ್ಲಿ ಹೊಸ ರೀತಿಯ ಕೆಲಸವನ್ನು ಮಾಡುವ ಸಾಮರ್ಥ್ಯವಿರುತ್ತದೆ. ಕುಟುಂಬದ ಹಿರಿಯರ ಮಾರ್ಗದರ್ಶನವು ನಿಮಗೆ ಫಲಪ್ರದಾಯಕವಾಗಿರುತ್ತದೆ. ಖರ್ಚು ವೆಚ್ಚಗಳ ಮೇಲೆ ಹಿಡಿತ ಸಾಧಿಸುವಿರಿ.

ಪರಿಹಾರ: ದಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಹಳದಿ ಬಣ್ಣ

ವೃಷಭ

ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ. ಅತಿಯಾದ ಆತ್ಮವಿಶ್ವಾಸದಿಂದ ತೊಂದರೆಯೊಂದು ಎದುರಾಗಬಹುದು. ಸಮಯಕ್ಕೆ ಸರಿಯಾಗಿ ದೊರೆಯುವ ಹಣವು ನಿಮ್ಮ ಸಮಸ್ಯೆಯನ್ನು ದೂರ ಮಾಡುತ್ತದೆ. ಕುಟುಂಬದಲ್ಲಿನ ವಿಚಾರಗಳನ್ನು ಯಾರಿಗೂ ತಿಳಿಸಲಿ. ಆತ್ಮೀಯ ಸ್ನೇಹಿತರ ಒಡನಾಟ ಮನದ ಸಂತೋಷವನ್ನು ಹೆಚ್ಚಿಸುತ್ತದೆ. ಬೇರೆಯವರ ವಿಚಾರವಾಗಿ ಕುಟುಂಬದಲ್ಲಿ ಅಶಾಂತಿ ಮೂಡುತ್ತದೆ. ಕಮಿಷನ್ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಅನಾವಶ್ಯಕ ಸಮಯವೂ ವ್ಯರ್ಥವಾಗಲಿದೆ. ದಿನನಿತ್ಯದ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿಯೂ ಸಂಗಾತಿಯ ಸಹಕಾರ ದೊರೆಯುತ್ತದೆ. ವಿದ್ಯಾಭ್ಯಾಸದಲ್ಲಿ ಆಸಕ್ತಿ ಕಡಿಮೆಯಾಗುತ್ತದೆ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಎಂದಿಗೂ ಬದಲಿಸುವುದಿಲ್ಲ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಮಿಥುನ

ಉತ್ತಮ ಆದಾಯವಿರುತ್ತದೆ. ಆದರೆ ಅದಕ್ಕೆ ಸರಿ ಸಮನಾದ ಖರ್ಚು ವೆಚ್ಚವು ಎದುರಾಗುತ್ತದೆ. ಉತ್ತಮ ಆರೋಗ್ಯವನ್ನು ಪಡೆಯಲು ಬಾಳಿನ ರೀತಿ ನೀತಿಯನ್ನು ಬದಲಿಸುವಿರಿ. ಮನಸ್ಸಿಲ್ಲದಿದ್ದರೂ ಕುಟುಂಬದ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಕೆಲವೊಂದು ಸಮಸ್ಯೆಗಳು ಮರುಕಳಿಸುತ್ತವೆ. ಆತ್ಮೀಯರ ಸಹಾಯ ಸಹಕಾರ ದೊರೆಯುವ ಕಾರಣ ನೆಮ್ಮದಿಗೆ ಕೊರತೆ ಇರುವುದಿಲ್ಲ. ವಿವಾಹ ಮಾತುಕತೆ ನಡೆಯಲಿದೆ. ಕೆಲಸ ಕಾರ್ಯಗಳಲ್ಲಿ ನಿಮ್ಮಲ್ಲಿದ್ದ ಉತ್ಸಾಹ ಕಡಿಮೆಯಾಗಲಿದೆ. ಕೆಲವೊಂದು ಕೆಲಸ ಕಾರ್ಯಗಳು ಅಪೂರ್ಣಗೊಳ್ಳಲಿದೆ. ಆರೋಗ್ಯದ ಸಮಸ್ಯೆಯು ನಿವಾರಣೆಯಾಗಲಿದೆ. ಪಾಲುಗಾರಿಕೆಯ ವ್ಯಾಪಾರವಿದ್ದಲ್ಲಿ ಎಚ್ಚರಿಕೆಯಿಂದ ವ್ಯವಹರಿಸುವುದು ಒಳ್ಳೆಯದು.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಕಟಕ

ನಿಮ್ಮಲ್ಲಿರುವ ಒಳ್ಳೆಯತನದಿಂದ ಮತ್ತು ಸಾಮಾಜಿಕ ಕಾಳಜಿಯಿಂದ ಎಲ್ಲರ ಗಮನ ಸೆಳೆಯುವಿರಿ. ದೂರದ ಊರಿನಲ್ಲಿ ವಿಶಾಲವಾದ ಮನೆಯನ್ನು ಕೊಳ್ಳುವಿರಿ. ನೀವು ಬಳಸುತ್ತಿರುವ ಹಳೆಯ ವಾಹನ ಒಂದನ್ನು ಮಾರಾಟ ಮಾಡುವಿರಿ. ಸಮಾರಂಭಗಳಲ್ಲಿ ಭಾಗವಹಿಸಲು ಆಸಕ್ತಿ ವಹಿಸುವಿರಿ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಉದ್ಯೋಗದಲ್ಲಿ ವಿಶೇಷವಾದ ಸಾಧನೆ ಮಾಡುವಿರಿ. ಕುಟುಂಬಕ್ಕೆ ಸಂಬಂಧಪಟ್ಟಂತೆ ಅನೇಕ ಧಾರ್ಮಿಕ ಕಾರ್ಯಗಳನ್ನು ಮಾಡುವಿರಿ. ಸಂಗಾತಿಯ ಜೊತೆಯಿಂದ ಮನಸ್ತಾಪವು ದೂರವಾಗಲಿದೆ. ನಿಮ್ಮದಲ್ಲದ ವಾದ ವಿವಾದಗಳಲ್ಲಿ ಪಾಲ್ಗೊಳ್ಳದಿರಿ. ನಿಮ್ಮಲ್ಲಿನ ಚಟುವಟಿಕೆಯ ಗುಣವು ಎಲ್ಲರಿಗೂ ಮಾದರಿಯಾಗುತ್ತದೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೇರಳೆಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.