Horoscope Today: ವೈವಾಹಿಕ ಜೀವನದಲ್ಲಿ ಶುಭಸುದ್ದಿ, ಹಣಕಾಸಿನ ತೊಂದರೆ ಬಾರದು; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವೈವಾಹಿಕ ಜೀವನದಲ್ಲಿ ಶುಭಸುದ್ದಿ, ಹಣಕಾಸಿನ ತೊಂದರೆ ಬಾರದು; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

Horoscope Today: ವೈವಾಹಿಕ ಜೀವನದಲ್ಲಿ ಶುಭಸುದ್ದಿ, ಹಣಕಾಸಿನ ತೊಂದರೆ ಬಾರದು; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

ಮಾರ್ಚ್​ 19, ಮಂಗಳವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (19 March 2024 Daily Horoscope).

ಮಾರ್ಚ್​ 19ರ ದಿನಭವಿಷ್ಯ
ಮಾರ್ಚ್​ 19ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (19 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲಪಕ್ಷ, ಮಂಗಳವಾರ

ತಿಥಿ : ದಶಮಿ ರಾ.02.46 ರವರೆಗು ಇರುತ್ತದೆ. ಆನಂತರ ಏಕಾದಶಿ ಆರಂಭವಾಗುತ್ತದೆ.

ನಕ್ಷತ್ರ : ಪುನರ್ವಸು ನಕ್ಷತ್ರವು ರಾ.10.41 ರವರೆಗೆ ಇರುತ್ತದೆ. ಆನಂತರ ಪುಷ್ಯ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.24

ಸೂರ್ಯಾಸ್ತ: ಸ.06.29

ರಾಹುಕಾಲ : ಮ.03.00 ರಿಂದ ಬೆ.04.30

ರಾಶಿ ಫಲಗಳು

ಧನಸ್ಸು

ಕುಟುಂಬದಲ್ಲಿ ಸ್ಪೂರ್ತಿದಾಯಕ ವಾತಾವರಣ ನೆಲೆಸಿರುತ್ತದೆ. ಉದ್ಯೋಗದಲ್ಲಿ ಸಮಯಕ್ಕೆ ತಕ್ಕಂತೆ ನಡೆದುಕೊಂಡಲ್ಲಿ ಯಾವುದೇ ತೊಂದರೆ ಬಾರದು. ವ್ಯಾಪಾರ ವ್ಯವಹಾರದಲ್ಲಿ ಅಳುಕು ತೊರೆದು ಧೈರ್ಯದಿಂದ ಮುಂದುವರೆಯಬೇಕು. ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸದ ಕೊರತೆ ಕಂಡುಬರುತ್ತದೆ. ಕುಟುಂಬದ ಒಳಗೂ ಹೊರಗೂ ಗೌರವಯುತ ಸ್ಥಾನ ಮಾನ ದೊರೆಯುತ್ತದೆ. ಒಮ್ಮೆ ತೆಗೆದು ಕೊಂಡ ತೀರ್ಮಾನಗಳನ್ನು ಬದಲಿಸದಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಪಾಲುಗಾರಿಕೆಯ ವ್ಯಾಪಾರ ಆರಂಭಿಸುವಿರಿ. ವೈವಾಹಿಕ ಜೀವನದಲ್ಲಿ ಶುಭ ವರ್ತಮಾನವೊಂದು ಬರಲಿದೆ. ಮಕ್ಕಳ ಆಶೋತ್ತರಗಳ್ಳನ್ನು ಈಡೇರಿಸುವಲ್ಲಿ ಸಫಲರಾಗುವಿರಿ. ಆರೋಗ್ಯದ ಬಗ್ಗೆ ಗಮನವಿರಲಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಿತ್ತಳೆಬಣ್ಣ

ಮಕರ

ಕುಟುಂಬದಲ್ಲಿ ಸುಖ ಸಂತಸ ನೆಲೆಸಿರುತ್ತದೆ. ಮಕ್ಕಳ ಮನ ಗೆಲ್ಲಲು ಹೆಚ್ಚಿನ ಹಣ ಖರ್ಚುಮಾಡುವಿರಿ. ಉದ್ಯೋಗದಲ್ಲಿ ನೈಜ ಬದಲಾವಣೆ ಕಂಡುಬರುತ್ತದೆ. ಕೇವಲ ಹಣಕ್ಕೆ ಹೆಚ್ಚಿನ ಬೆಲೆ ನೀಡುವುದಿಲ್ಲ. ವ್ಯಾಪಾರ ವ್ಯವಹಾರದ ಆದಾಯದಲ್ಲಿ ಯಾವುದೆ ಕೊರತೆ ಕಾಣದು. ಎಲ್ಲರ ಸಹಕಾರ ನಿಮಗೆ ದೊರೆಯುತ್ತದೆ. ಲಾಭವಿರುವ ಕೆಲಸಗಳನ್ನು ಮಾತ್ರ ಮಾಡಲು ಇಷ್ಟ ಪಡುವಿರಿ. ಉದ್ಯೋಗ ಬದಲಿಸಲು ಸಾಧ್ಯವಾಗದು. ಹೊಸ ವ್ಯಾಪಾರವನ್ನು ಆರಂಭಿಸಲು ಇದು ಸಕಾಲವಲ್ಲ. ಕಷ್ಟಪಟ್ಟು ದುಡಿದಲ್ಲಿ ಜೀವನದಲ್ಲಿ ಉನ್ನತಿ ಕಂಡುಬರುತ್ತದೆ. ಮನರಂಜನೆ ಮರೆತು ವಿದ್ಯಾರ್ಥಿಗಳು ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡುವಿರಿ. ಹಣಕಾಸಿನ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸದಿರಿ. ಕಾರ್ಮಿಕರಿಗೆ ನಿರೀಕ್ಷಿತ ಸಹಾಯ ದೊರಯಲಿದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಕುಂಭ

ಹಠದ ಗುಣದಿಂದಾಗಿ ಕುಟುಂಬದ ಕೆಲಸ ಕಾರ್ಯಗಳಲ್ಲಿ ಹಿನ್ನೆಡೆ ಉಂಟಾಗುತ್ತದೆ. ಉದ್ಯೋಗದಲ್ಲಿನ ಸವಾಲುಗಳು ಮರೆಯಾಗಲಿವೆ. ವಿರೋಧಿಗಳನ್ನು ಯಶಸ್ವಿಯಾಗಿ ಎದುರಿಸುವಿರಿ. ವ್ಯಾಪಾರ ವ್ಯವಹಾರಗಳು ಸಣ್ಣಮಟ್ಟವಾದರೂ ಉತ್ತಮ ಲಾಭ ಗಳಿಸುವಿರಿ. ವಿದ್ಯಾರ್ಥಿಗಳು ನಿರೀಕ್ಷಿಸಿದ ಯಶಸ್ಸು ಗಳಿಸುತ್ತಾರೆ. ಸ್ವಂತ ಕೆಲಸ ಕಾರ್ಯಗಳಲ್ಲಿನ ಯಶಸ್ಸಿನ ಗುಟ್ಟನ್ನು ಸದಾ ಕಾಪಾಡುವಿರಿ. ಸೋದರನ ಜೊತೆಗಿನ ಮನಸ್ತಾಪವು ಕೊನೆಗೊಳ್ಳಲಿದೆ. ತಂದೆಯವರ ವ್ಯಾಪಾರದ ಯಶಸ್ಸಿಗೆ ಕಾರಣರಾಗುವಿರಿ. ಅನಾವಶ್ಯಕವಾಗಿ ಕೆಲಸ ಕಾರ್ಯಗಳನ್ನು ಮುಂದೂಡದಿರಿ. ಸಾಲದ ವ್ಯವಹಾರ ಬೇಡ. ಕುಟುಂಬದ ಮಂಗಳ ಕಾರ್ಯವೊಂದರ ನೇತೃತ್ವ ವಹಿಸುವಿರಿ.

ಪರಿಹಾರ : ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಮೀನ

ಕುಟುಂಬದಲ್ಲಿ ಹೊಸ ನಿರೀಕ್ಷೆ ಇರುವ ಕಾರಣ ಸಂತಸ ತುಂಬಿರುತ್ತದೆ. ಉದ್ಯೋಗದಲ್ಲಿ ಯಾವುದೇ ವಿಚಾರವೆಂದರೂ ಹೆಚ್ಚಿನ ಪ್ರಯತ್ನದಿಂದ ಯಶಸ್ಸನ್ನು ಗಳಿಸಬಹುದು. ಹಣಕಾಸಿನ ವಿಚಾರದಲ್ಲಿ ಕುಟುಂಬದ ಸದಸ್ಯರ ಸಹಾಯ ದೊರೆಯುತ್ತದೆ. ಅದೃಷ್ಟದಿಂದ ವಿದ್ಯಾರ್ಥಿಗಳ ಆಶೋತ್ತರಗಳು ನೆರವೇರಲಿವೆ. ಹಣಕಾಸಿನ ತೊಂದರೆ ಬಾರದು. ಸ್ವಂತ ಉದ್ಧಿಮೆಯನ್ನು ಆರಂಭಿಸುವ ಮಾತುಕತೆ ನಡೆಸುವಿರಿ. ಅಶಕ್ತರ ಜೀವನಕ್ಕೆ ಆಧಾರವಾಗುವಿರಿ. ಆಧುನಿಕ ತಂತ್ರಜ್ಞಾನ ಆಧಾರಿತ ಸಂಸ್ಥೆಯ ಉದ್ಯೋಗ ಇದ್ದಲ್ಲಿ ವಿದೇಶ ಪ್ರಯಾಣ ಮಾಡುವಿರಿ. ಹೊಸ ವಾಹನವನ್ನು ಕೊಳ್ಳುವಿರಿ. ಚಿನ್ನ ಮತ್ತು ಬೆಳ್ಳಿಯ ವ್ಯಾಪಾರದಲ್ಲಿ ಹೇರಳ ಲಾಭವಿರುತ್ತದೆ.

ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ನೀಲಿ ಬಣ್ಣ

--------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.