Horoscope Today: ಉದ್ಯೋಗದಲ್ಲಿ ಅಸಹಜ ಸ್ಥಿತಿ ಇರಲಿದೆ, ಸ್ವಂತ ಮನೆಯ ಕನಸು ನನಸಾಗಲಿದೆ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
19th ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (19th April 2024 Daily Horoscope)

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (19th April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಶುಕ್ರವಾರ
ತಿಥಿ: ಏಕಾದಶಿ ರಾತ್ರಿ 8.25 ರವರೆಗೂ ಇರುತ್ತದೆ. ಅನಂತರ ದ್ವಾದಶಿ ಆರಂಭವಾಗುತ್ತದೆ.
ನಕ್ಷತ್ರ: ಮಖೆ ನಕ್ಷತ್ರವು ಬೆಳಿಗ್ಗೆ 11.38 ರವರೆಗೂ ಇರುತ್ತದೆ. ಅನಂತರ ಪುಬ್ಬ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಿಗ್ಗೆ 6.03
ಸೂರ್ಯಾಸ್ತ: ಸಂಜೆ 6.31
ರಾಹುಕಾಲ: ಬೆಳಿಗ್ಗೆ 10.30 ರಿಂದ ಬೆಳಿಗ್ಗೆ 12.00
ಸಿಂಹ
ಗೆಲ್ಲಲೇಬೇಕೆಂಬ ಹಠದಿಂದ ಒರಟುತನದಿಂದ ನಡೆದುಕೊಳ್ಳುವಿರಿ. ನಿಮ್ಮ ತಂದೆ ಮತ್ತು ನಿಮ್ಮ ಮಕ್ಕಳ ನಡುವಿನ ವಿರಸವು ಮರೆಯಾಗುತ್ತದೆ. ಕಷ್ಟವೆನಿಸಿದರೂ ತೆಗೆದುಕೊಂಡ ನಿರ್ಧಾರಗಳನ್ನು ಬದಲಾಯಿಸುವುದಿಲ್ಲ. ನಿಮ್ಮ ಹಠದ ನಡೆನುಡಿ ಮನೆಯಲ್ಲಿ ಅಸಹನೆಯ ವಾತಾವರಣ ಸೃಷ್ಟಿಸುತ್ತದೆ. ಉದ್ಯೋಗದಲ್ಲಿ ನಿರೀಕ್ಷಿಸಿದ ಅನುಕೂಲಗಳು ಉಂಟಾಗಲಿವೆ. ವ್ಯಾಪಾರ ವ್ಯವಹಾರಗಳಲ್ಲಿ ನಷ್ಟ ಇರುವುದಿಲ್ಲ. ವಿದ್ಯಾಭ್ಯಾಸದ ವಿಚಾರದಲ್ಲಿ ವಿದ್ಯಾರ್ಥಿಗಳ ಮನಸ್ಸನ್ನು ಬದಲಿಸಲಾಗದು. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಇರುತ್ತದೆ. ಹಣವನ್ನು ಸುಲಭವಾಗಿ ಖರ್ಚು ಮಾಡುವುದಿಲ್ಲ. ಮಕ್ಕಳಿಗೆ ಉಡುಗೊರೆಯ ರೂಪದಲ್ಲಿ ಹಣದ ಸಹಾಯ ದೊರೆಯುತ್ತದೆ.
ಪರಿಹಾರ: ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ : ತಿಳಿಹಸಿರು ಬಣ್ಣ
ಕನ್ಯಾ
ಮನಸ್ಸು ನಿಮ್ಮ ಹಿಡಿತದಲ್ಲಿ ಇರುವುದಿಲ್ಲ. ದೃಢವಾದ ನಿಲುವಿನಿಂದ ಮಾತ್ರ ದೊರೆವ ಅವಕಾಶಗಳು ನಿಮ್ಮದಾಗುತ್ತವೆ. ಮಾನಸಿಕ ನೆಮ್ಮದಿ ಇರುವುದಿಲ್ಲ. ಸವಿಮಾತಿನಿಂದ ಅನ್ಯರ ಮನಸ್ಸನ್ನು ಗೆಲ್ಲಲು ಪ್ರಯತ್ನಿಸಿ. ಉದ್ಯೋಗದಲ್ಲಿ ಅಸಹಜ ವಾತಾವರಣ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಆದಾಯದಲ್ಲಿ ಹೆಚ್ಚಳ ಕಾಣುತ್ತದೆ. ಸಂಗಾತಿಯ ಸಂದರ್ಭೋಚಿತ ತೀರ್ಮಾನಗಳು ವಿವಾದಗಳನ್ನು ದೂರ ಮಾಡುತ್ತವೆ. ಜೀವನದಲ್ಲಿ ಹೊಸ ನಿರೀಕ್ಷೆಯನ್ನು ಮೂಡಿಸುತ್ತದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿ ಕಳೆದುಕೊಳ್ಳಲಿದ್ದಾರೆ. ನಿಮ್ಮ ಮಕ್ಕಳಿಗೆ ಉಜ್ವಲ ಭವಿಷ್ಯವನ್ನು ರೂಪಿಸುವಿರಿ. ಹೊಗಳಿಕೆಗೆ ಮರುಳಾಗಿ ಹಣದ ವ್ಯವಹಾರದಲ್ಲಿ ಸಿಲುಕುವಿರಿ.
ಪರಿಹಾರ: ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ನಸುಗೆಂಪು ಬಣ್ಣ
ತುಲಾ
ಸಂಗಾತಿಯ ಬಹುದಿನದ ಕನಸೊಂದನ್ನು ಈಡೇರಿಸುವಿರಿ. ಸಂಗಾತಿಯ ಸಹಾಯದಿಂದ ಸ್ವಂತ ಮನೆಯ ಕನಸು ನನಸಾಗಲಿದೆ. ಕುಟುಂಬದಲ್ಲಿ ಸಂತೋಷದ ಜೊತೆಯಲ್ಲಿ ವಾದ ವಿವಾದವೂ ಇರಲಿದೆ. ಅತಿಯಾದ ಆಸೆ ಮತ್ತು ಉತ್ಸಾಹ ಸಮಸ್ಯೆಯನ್ನು ಉಂಟುಮಾಡಲಿದೆ. ಉದ್ಯೋಗದಲ್ಲಿ ಹೆಚ್ಚಿನ ಅನುಕೂಲಗಳು ದೊರೆಯಲಿವೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭವನ್ನು ಪಡೆಯಬಹುದು. ವಿದ್ಯಾರ್ಥಿಗಳು ನೆಮ್ಮದಿಯಿಂದ ಪ್ರವಾಸಕ್ಕೆ ತೆರಳುತ್ತಾರೆ. ಗೃಹಿಣಿಯರು ಗೃಹಕೈಗಾರಿಕೆಯನ್ನು ಆರಂಭಿಸಲು ಸಹಾಯ ಮಾಡುವಿರಿ. ಭೂವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಸಾಲದ ವ್ಯವಹಾರ ಮಾಡದಿರಿ. ಹಿರಿಯ ಅಧಿಕಾರಿಗಳಿಂದ ಉಡುಗೊರೆಯೊಂದು ದೊರೆಯಲಿದೆ.
ಪರಿಹಾರ: ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ
ವೃಶ್ಚಿಕ
ಕುಟುಂಬದ ಹಿರಿಯರನ್ನು ಭೇಟಿ ಮಾಡುವಿರಿ. ವಂಶಾಧಾರಿತ ವ್ಯಾಪಾರವೊಂದನ್ನು ಹವ್ಯಾಸಕ್ಕಾಗಿ ಆರಂಭಿಸುವಿರಿ. ಇಷ್ಟವಾಗದ ವ್ಯಕ್ತಿಯೊಬ್ಬರನ್ನು ಭೇಟಿ ಮಾಡುವಿರಿ. ಬೇರೆಯವರು ಮಾಡುವ ಸಣ್ಣ ತಪ್ಪಿಗೂ ಸಿಡುಕುವಿರಿ. ಕುಟುಂಬದಲ್ಲಿ ಒಗ್ಗಟ್ಟಿನ ಕೊರತೆ ಕಂಡುಬರುತ್ತದೆ. ಎದುರಾಗುವ ಸನ್ನಿವೇಶವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಉದ್ಯೋಗದಲ್ಲಿ ಅತಿಯಾದ ಊಹೆಗಳು ನಿರಾಸೆಯನ್ನು ಉಂಟು ಮಾಡಲಿದೆ. ವ್ಯಾಪಾರ ವ್ಯವಹಾರದಲ್ಲಿನ ನಿರೀಕ್ಷೆ ಸುಳ್ಳಾಗಲಿದೆ. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನದ ಅವಕಾಶ ಪಡೆಯುತ್ತಾರೆ. ಬಿಡುವಿನ ವೇಳೆಯಲ್ಲಿ ಧಾರ್ಮಿಕ ವಿಚಾರಗಳ ಬಗ್ಗೆ ಅಧ್ಯಯನ ಮಾಡುವಿರಿ. ಆರೋಗ್ಯವನ್ನು ಸ್ಥಿರವಾಗಿರಿಸಿಕೊಳ್ಳಲು ಪ್ರಯತ್ನಿಸಿ.
ಪರಿಹಾರ: ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿ ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಹಾಲಿನ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
