ವ್ಯಾಪಾರದಲ್ಲಿ ಸಾಧಾರಣ ಪ್ರಗತಿ, ಮಾರಾಟ ಪ್ರತಿನಿಧಿಗಳಿಗೆ ಉತ್ತಮ ಆದಾಯ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವ್ಯಾಪಾರದಲ್ಲಿ ಸಾಧಾರಣ ಪ್ರಗತಿ, ಮಾರಾಟ ಪ್ರತಿನಿಧಿಗಳಿಗೆ ಉತ್ತಮ ಆದಾಯ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ವ್ಯಾಪಾರದಲ್ಲಿ ಸಾಧಾರಣ ಪ್ರಗತಿ, ಮಾರಾಟ ಪ್ರತಿನಿಧಿಗಳಿಗೆ ಉತ್ತಮ ಆದಾಯ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

20 ಜೂನ್‌ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (20th June 2024 Daily Horoscope).

ವ್ಯಾಪಾರದಲ್ಲಿ ಸಾಧಾರಣ ಪ್ರಗತಿ, ಮಾರಾಟ ಪ್ರತಿನಿಧಿಗಳಿಗೆ ಉತ್ತಮ ಆದಾಯ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ವ್ಯಾಪಾರದಲ್ಲಿ ಸಾಧಾರಣ ಪ್ರಗತಿ, ಮಾರಾಟ ಪ್ರತಿನಿಧಿಗಳಿಗೆ ಉತ್ತಮ ಆದಾಯ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(20th June 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ: ತ್ರಯೋದಶಿ ಬೆಳಗ್ಗೆ 06.13 ರವರೆಗೂ ಇದ್ದು ನಂತರ ಚತುರ್ದಶಿ ತಿಥಿ ಇರುತ್ತದೆ.

ನಕ್ಷತ್ರ : ಅನೂರಾಧ ನಕ್ಷತ್ರವು ಸಂಜೆ 05.22 ರವರೆಗೆ ಇದ್ದು ನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ05.53

ಸೂರ್ಯಾಸ್ತ: ಸಂಜೆ 06.48

ರಾಹುಕಾಲ: 02.01 ರಿಂದ 03.37

ರಾಶಿಫಲ

ಧನಸ್ಸು

ಕುಟುಂಬದಲ್ಲಿ ಬೇರೆಯವರ ಹಸ್ತಕ್ಷೇಪ ಉಂಟಾಗುತ್ತದೆ. ಹಣಕಾಸಿನ ಕಾರಣದಿಂದಾಗಿ ಆತ್ಮೀಯರ ಜೊತೆ ಮನಸ್ತಾಪ ಉಂಟಾಗುತ್ತದೆ. ಬೇರೆಯವರ ಮನಸ್ಸನ್ನು ನೋಯಿಸದೆ ಪ್ರೀತಿ ತೋರಿದರೆ ಸಮಸ್ಯೆಗಳೇ ಇರುವುದಿಲ್ಲ. ಶಾಂತಿ ಸೌಹಾರ್ದದಿಂದ ಕುಟುಂಬದ ವಿವಾದವೊಂದು ಸುಖಾಂತ್ಯಗೊಳ್ಳುತ್ತದೆ. ಭೂವ್ಯವಹಾರದಲ್ಲಿ ಹೆಚ್ಚಿನ ಲಾಭಾಂಶ ಗಳಿಸುವಿರಿ. ಯಂತ್ರೋಪಕರಣಗಳಿಂದ ತೊಂದರೆ ಆಗಬಹುದು ನೆನಪಿರಲಿ. ವ್ಯಾಪಾರದಲ್ಲಿ ಸಾಧಾರಣ ಪ್ರಗತಿ ಕಂಡುಬರುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಕಾಣುವುದಿಲ್ಲ. ಪರಿಸ್ಥಿತಿಗೆ ಹೊಂದಿಕೊಂಡು ಹೋಗುವ ಕಾರಣ ಸಮಸ್ಯೆಗಳು ಕಡಿಮೆ. ಮಕ್ಕಳ ಜವಾಬ್ದಾರಿ ಹೆಚ್ಚುತ್ತದೆ. ನಿಮ್ಮ ಮನದಾಸೆಯೊಂದು ನನಸಾಗಲಿದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಮಕರ

ಬಾಕಿ ಉಳಿದ ಕೆಲಸಗಳನ್ನು ಪೂರೈಸುವ ತವಕ ಇರುತ್ತದೆ. ಬೇರೆಯವರು ಮಾಡಿದ ತಪ್ಪನ್ನು ತಿದ್ದುವುದರಲ್ಲಿ ದಿನ ಕಳೆಯುತ್ತದೆ. ಉತ್ತಮ ಆರೋಗ್ಯ ನೆಮ್ಮದಿ ನೀಡುತ್ತದೆ. ನಿಮ್ಮ ಸ್ವಂತ ಕೆಲಸ ಕಾರ್ಯಗಳಿಗೂ ವೇಳೆ ನೀಡಿರಿ. ಹಣದ ವಿವಾದಕ್ಕೆ ಮಾತುಕತೆಯಿಂದ ಅಂತ್ಯ ಹಾಡುವಿರಿ. ಬುದ್ಧಿವಾದ ಹೇಳಲು ಹೋದರೆ ವಿವಾದಕ್ಕೆ ಒಳಗಾಗುವಿರಿ. ಕಾರ್ಮಿಕ ವೃಂದಕ್ಕೆ ವೇತನದ ಸಮಸ್ಯೆ ಬಗೆಹರಿಯುತ್ತದೆ. ವಿದ್ಯಾರ್ಥಿಗಳು ಸಹನೆಯಿಂದ ತಮ್ಮ ಗುರಿ ತಲುಪುತ್ತಾರೆ. ಜನರ ಶ್ರೇಯೋಭಿವೃದ್ಧಿಗಾಗಿ ಸಂಘ ಸಂಸ್ಥೆಯನ್ನು ಆರಂಭಿಸುವಿರಿ. ಗೃಹಿಣಿಯರಿಗೆ ಹಾರ್ಮೋನಿನ ತೊಂದರೆ ಇರುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿನ ನಷ್ಟ ಕಡಿಮೆ ಆಗಲಿದೆ

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಸಿರು

ಕುಂಭ

ಉದ್ಯೋಗದಲ್ಲಿನ ಜವಾಬ್ದಾರಿ ಹೆಚ್ಚುತ್ತದೆ. ನಿಮ್ಮ ಕಲ್ಪನೆಗೆ ಎಲ್ಲರ ಮೆಚ್ಚುಗೆ ಮತ್ತು ಬೆಂಬಲ ವ್ಯಕ್ತವಾಗುತ್ತದೆ. ಮಾನಸಿಕ ವಿಶ್ರಾಂತಿಗಾಗಿ ಏಕಾಂಗಿಯಾಗಿ ದಿನ ಕಳೆಯುವಿರಿ. ಯಾರ ಅರಿವಿಗೂ ಬಾರಂತೆ ಹಣ ಉಳಿತಾಯ ಮಾಡುವಿರಿ. ಕುಟುಂಬದಲ್ಲಿ ನಿಮ್ಮ ತೀರ್ಮಾನಗಳಿಗೆ ಮನ್ನಣೆ ದೊರೆಯುವುದಿಲ್ಲ. ಮಕ್ಕಳ ಕೆಲಸದ ಬಗ್ಗೆ ಅಸಮಾಧಾನ ಇರುತ್ತದೆ. ಉದ್ಯೋಗ ಅರಸಿ ವಿದೇಶಕ್ಕೆ ತೆರಳುವಿರಿ. ವಿದೇಶಿ ಭಾಷೆಯನ್ನು ಕಲಿಯುವ ಆಸೆ ತೋರುವಿರಿ. ಕುಲ ಕಸುಬನ್ನು ಆಧರಿಸಿ ನಡೆಸುವ ವ್ಯಾಪಾರದಲ್ಲಿ ಲಾಭವಿರುತ್ತದೆ. ಕಂತಿನ ವ್ಯಾಪಾರದಲ್ಲಿ ಲಾಭವಿದೆ. ಮಾರಾಟ ಪ್ರತಿನಿಧಿಗಳಿಗೆ ಉತ್ತಮ ಆದಾಯ ಇರುತ್ತದೆ. ಹಣಕಾಸಿನ ಹೊಸ ಯೋಜನೆಗಳು ಮೂಲೆ ಗುಂಪಾಗುತ್ತದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 6

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಮೀನ

ಕುಟುಂಬದ ಹಿರಿಯರನ್ನು ಗೌರವದಿಂದ ಕಾಣುವಿರಿ. ಉದ್ಯೋಗದಲ್ಲಿ ಹಿರಿಯರ ಸಹಕಾರದಿಂದ ದೊಡ್ಡ ಕಾರ್ಯವೊಂದನ್ನು ನಿರ್ವಹಿಸುವಿರಿ. ದೊರೆಯುವ ಆದಾಯದಲ್ಲೇ ಸಂತೃಪ್ತಿಯ ಜೀವನ ನಡೆಸುವಿರಿ. ಕುಟುಂಬದಲ್ಲಿರುವ ಹೆಣ್ಣು ಮಕ್ಕಳ ಜೀವನದಲ್ಲಿ ವಿಶೇಷ ಬದಲಾವಣೆಗಳು ಕಾಣಲಿವೆ. ಸಂಗಾತಿಯನ್ನು ವಿಶೇಷ ಪ್ರೀತಿಯಿಂದ ಕಾಣುವಿರಿ. ಅನಿರೀಕ್ಷಿತ ಧನಲಾಭವಿದೆ. ನೆರೆಹೊರೆಯವರ ನಡುವೆ ಅನಗತ್ಯ ವಾದ ವಿವಾದ ಇರುತ್ತವೆ. ಆಡುವ ಮಾತು ಕಡಿಮೆಯಾದರೂ ಅದರಲ್ಲಿ ವಿಶೇಷ ಅರ್ಥ ಕೂಡಿರುತ್ತದೆ. ಇತಿಮಿತಿ ಇಲ್ಲದೆ ಹಣ ಖರ್ಚು ಮಾಡುವಿರಿ. ತಂದೆಯ ಜೊತೆಯಲ್ಲಿ ಅನಾವಶ್ಯಕವಾದ ಚರ್ಚೆಯ ಕಾರಣ ಮನಸ್ತಾಪ ಉಂಟಾಗುತ್ತದೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 9

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ನೇರಳೆ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.