Horoscope Today: ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ, ಸಾಮಾಜಿಕ ರಂಗದಲ್ಲಿ ಗಣ್ಯಸ್ಥಾನ; ಧನಸ್ಸು, ಮಕರ, ಕುಂಭ, ಮೀನ ರಾಶಿ ದಿನ ಭವಿಷ್ಯ
20 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (20th May 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(20th May 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಸೋಮವಾರ
ತಿಥಿ: ದ್ವಾದಶಿ 02.44 ವರೆಗೂ ಇರುತ್ತದೆ ನಂತರ ತ್ರಯೋದಶಿ ಆರಂಭವಾಗುತ್ತದೆ.
ನಕ್ಷತ್ರ: ಚಿತ್ತೆ ನಕ್ಷತ್ರವು ರಾತ್ರಿ 04.53 ರವರೆಗೂ ಇದ್ದು ನಂತರ ಸ್ವಾತಿ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.51
ಸೂರ್ಯಾಸ್ತ: ಸಂಜೆ 06.38
ರಾಹುಕಾಲ: ಬೆಳಗ್ಗೆ 07.32 ರಿಂದ 09.08
ರಾಶಿಫಲ
ಧನಸ್ಸು
ಮಗಳ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ರಿಯಲ್ ಎಸ್ಟೇಟ್ ಉದ್ದಿಮೆಯಲ್ಲಿ ಹೆಚ್ಚಿನ ವರಮಾನ ಇರುತ್ತದೆ. ತಂದೆಯ ಪ್ರಯತ್ನದಿಂದ ಕುಟುಂಬದಲ್ಲಿ ಹೊಂದಾಣಿಕೆ ಇರುತ್ತದೆ. ಮಕ್ಕಳಿಗೆ ಪರಸ್ಥಳದಲ್ಲಿ ಉದ್ಯೋಗ ದೊರೆಯುತ್ತದೆ. ಹಣದ ಕೊರತೆ ಕಡಿಮೆ ಆಗಲಿದೆ. ವಿದ್ಯಾರ್ಥಿಗಳು ಏಕಾಗ್ರಚಿತ್ತತೆಯಿಂದ ಕಲಿಕೆಯಲ್ಲಿ ಯಶಸ್ಸನ್ನು ಕಾಣುತ್ತಾರೆ. ತಾಯಿಗೆ ಅನಾರೋಗ್ಯ ಇರುತ್ತದೆ. ನೀರಿನೊಂದಿಗೆ ಚೆಲ್ಲಾಟವಾಡದಿರಿ. ವೈವಾಹಿಕ ಜೀವನದಲ್ಲಿ ಮರೆಯದ ಘಟನೆಯೊಂದು ನಡೆಯಲಿದೆ. ಗೃಹಿಣಿಯರಿಗೆ ಉದ್ಯೋಗದಲ್ಲಿ ಧನಾತ್ಮಕ ತಿರುವು ದೊರೆಯಲಿದೆ. ಹೋಟೆಲ್ ವ್ಯಾಪಾರ ಲಾಭದಾಯಕವಾಗಿರುತ್ತದೆ. ಸಾಲವಾಗಿ ಹಣ ನೀಡುವುದಾಗಲೀ ಮತ್ತೊಬ್ಬರಿಂದ ಪಡೆಯುವುದಾಗಲೀ ಮಾಡದಿರಿ.
ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ
ಮಕರ
ಹಣಕಾಸಿನ ಸಂಸ್ಥೆಯನ್ನು ಆರಂಭಿಸುವ ಆಸಕ್ತಿ ಉಂಟಾಗಲಿದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಾಣದು. ವ್ಯವಸಾಯಕ್ಕೆ ಅಗತ್ಯವಾದ ಯಂತ್ರೋಪಕರಣಗಳ ಸರಬರಾಜಿನಲ್ಲಿ ಲಾಭವಿದೆ. ಸೋದರಿಗೆ ವಿವಾಹದ ನೆಂಟಸ್ಥಿಕೆ ಕೂಡಿ ಬರುತ್ತದೆ. ಕುಟುಂಬದ ನಿರ್ವಹಣೆಗಾಗಿ ಉಪವೃತ್ತಿಯೊಂದನ್ನು ಆರಂಭಿಸುವಿರಿ. ಮಿತಿ ಮೀರಿದ ಖರ್ಚು ವೆಚ್ಚಗಳು ಬೇಸರ ಮೂಡಿಸಲಿದೆ. ಚಿನ್ನ ಬೆಳ್ಳಿಯ ಪದಾರ್ಥಗಳಿಗೆ ಹಣ ಖರ್ಚಾಗುತ್ತದೆ. ಕಷ್ಟಪಡದೆ ಬರಿ ಮಾತಿನಿಂದ ಕೆಲಸ ಸಾಧಿಸಲು ಸಫಲರಾಗುವಿರಿ. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುವರು. ಗರ್ಭಿಣಿಯರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು. ಕುಟುಂಬದಲ್ಲಿ ಒಮ್ಮತದ ಕೊರತೆ ಇರುತ್ತದೆ.
ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಬಿಳಿ
ಕುಂಭ
ಆಸ್ತಿ ವಿಚಾರದಲ್ಲಿ ತಂದೆಯವರಿಗೆ ಸರಿಯಾದ ಪಾಲು ದೊರೆಯುವುದಿಲ್ಲ. ಕುಟುಂಬದಲ್ಲಿ ಹಣಕಾಸಿನ ಕಾರಣ ವಿರಸದ ಸನ್ನಿವೇಶವಿರುತ್ತದೆ. ಉದ್ಯೋಗದಲ್ಲಿ ಆಂತರಿಕ ಸಮಸ್ಯೆ ಎದುರಾಗುತ್ತದೆ. ವಿದ್ಯಾರ್ಥಿಗಳು ಕ್ರಮೇಣವಾಗಿ ತಮ್ಮ ಜವಾಬ್ದಾರಿಯನ್ನು ಅರಿಯುತ್ತಾರೆ. ಸ್ವಂತ ಬಳಕೆಗಾಗಿ ವಾಹನ ಕೊಳ್ಳುವಿರಿ. ಕುಟುಂಬದಲ್ಲಿ ಮಂಗಳಕಾರ್ಯವೊಂದು ನಡೆಯಲಿದೆ. ಸೋದರಿಯ ಜೀವನದಲ್ಲಿ ವಿವಾದ ದೂರವಾಗಲಿದೆ. ಕೈಹಿಡಿದ ಕೆಲಸ ಕಾರ್ಯಗಳು ಯಶಸ್ವಿಯಾಗುವವರೆಗೂ ರಹಸ್ಯ ಕಾಪಾಡುವಿರಿ. ತಂದೆಯ ಆರೋಗ್ಯದ ಬಗ್ಗೆ ಗಮನ ಇರಲಿ. ಧಾರ್ಮಿಕ ವಿಧಿ ವಿಧಾನಗಳಲ್ಲಿ ಆಸಕ್ತಿ ತೋರುವಿರಿ. ಸೇಡಿನ ಮನೋಭಾವನೆ ತೊರೆದು ಎಲ್ಲರ ಮನಗೆಲ್ಲುವಿರಿ.
ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಸಸಸಣ್ಣ: ಆಕಾಶ ನೀಲಿ
ಮೀನ
ಬಂಧು ಬಾಂಧವರೊಂದಿಗೆ ಉತ್ತಮ ಒಡನಾಟ ಇರುತ್ತದೆ. ಪ್ರೀತಿ ಪಾತ್ರರಿಗೆ ಅನುಕೂಲವಾಗುವಂತೆ ಹಣಕಾಸಿನ ವ್ಯವಹಾರವನ್ನು ಆರಂಭಿಸುವಿರಿ. ಒಳ್ಳೆಯ ಸಮಯಕ್ಕೆ ಕಾದು ಸ್ವಂತ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಯಂತ್ರ ವಾಹನಕ್ಕೆ ಸಂಬಂಧಿಸಿದ ವ್ಯಾಪಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಯಾರ ಸಹಾಯಕ್ಕಾಗಿಯೂ ಕಾಯುವುದಿಲ್ಲ. ಬೇರೆಯವರ ಹಣಕಾಸಿನ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿದಲ್ಲಿ ತೊಂದರೆ ಅನುಭವಿಸುವಿರಿ. ಖ್ಯಾತ ಸಂಸ್ಥೆಯೊಂದರಲ್ಲಿ ಉದ್ಯೋಗ ಲಭಿಸುತ್ತದೆ. ವಿದ್ಯಾರ್ಥಿಗಳು ಮಹತ್ತರ ಸಾಧನೆಗೆ ಸಾಕ್ಷಿಯಾಗುತ್ತಾರೆ. ಸಾಮಾಜಿಕ ರಂಗದಲ್ಲಿ ಗಣ್ಯಸ್ಥಾನ ಲಭಿಸುತ್ತದೆ. ಧಾರ್ಮಿಕ ಕ್ರಿಯಾವಿಧಿಗಳಲ್ಲಿ ಆಸಕ್ತಿ ಮತ್ತು ನಂಬಿಕೆ ಉಂಟಾಗಲಿದೆ.
ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ 6
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ವಿಭಾಗ