Horoscope Today: ಪ್ರತಿ ಹೆಜ್ಜೆಯಲ್ಲೂ ಸಂಗಾತಿಯ ಬೆಂಬಲ, ಈ ರಾಶಿಯ ವಿದ್ಯಾರ್ಥಿಗಳಿಗೆ ಶುಭ ಯೋಗ; ಮಾರ್ಚ್‌ 21ರ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಪ್ರತಿ ಹೆಜ್ಜೆಯಲ್ಲೂ ಸಂಗಾತಿಯ ಬೆಂಬಲ, ಈ ರಾಶಿಯ ವಿದ್ಯಾರ್ಥಿಗಳಿಗೆ ಶುಭ ಯೋಗ; ಮಾರ್ಚ್‌ 21ರ ರಾಶಿಫಲ

Horoscope Today: ಪ್ರತಿ ಹೆಜ್ಜೆಯಲ್ಲೂ ಸಂಗಾತಿಯ ಬೆಂಬಲ, ಈ ರಾಶಿಯ ವಿದ್ಯಾರ್ಥಿಗಳಿಗೆ ಶುಭ ಯೋಗ; ಮಾರ್ಚ್‌ 21ರ ರಾಶಿಫಲ

21 ಮಾರ್ಚ್‌ 2024, ಗುರುವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (21st March 2024 Daily Horoscope).

21 ಫೆಬ್ರವರಿ 2024, ಗುರುವಾರದ ರಾಶಿಫಲ
21 ಫೆಬ್ರವರಿ 2024, ಗುರುವಾರದ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(21st March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ : ದ್ವಾದಶಿ ಬೆ 05.18 ರವರೆಗೂ ಇರುತ್ತದೆ. ನಂತರ ತ್ರಯೋದಶಿ ಆರಂಭವಾಗುತ್ತದೆ.

ನಕ್ಷತ್ರ : ಆಶ್ಲೇಷ ನಕ್ಷತ್ರವು ರಾತ್ರಿ 02.14 ವರೆಗೆ ಇರುತ್ತದೆ ನಂತರ ಮಖೆ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.23

ಸೂರ್ಯಾಸ್ತ: ಸಂಜೆ 06.30

ರಾಹುಕಾಲ : ಮಧ್ಯಾಹ್ನ01.30 ರಿಂದ .03.00

ಧನಸ್ಸು

ಮನದಲ್ಲಿ ಇರುವ ಕೀಳರಿಮೆಯನ್ನು ಹೋಗಲಾಡಿಸಲು ಪ್ರಯತ್ನಿಸುವಿರಿ. ಮನಸ್ಸು ಇರದೇ ಹೋದರೂ ಗೆಲ್ಲಬೇಕಾದ ಛಲ ನಿಮ್ಮಲ್ಲಿರುತ್ತದೆ. ದೈಹಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ವ್ಯಾಯಾಮವನ್ನು ಅನುಸರಿಸುವಿರಿ. ನಿಮ್ಮ ಮನದ ವಿಚಾರವನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಸೋಲನ್ನು ಒಪ್ಪದೆ ಅನಾವಶ್ಯಕವಾಗಿ ವಾದ ವಿವಾದದಲ್ಲಿ ತೊಡಗುವಿರಿ. ಹೊಸ ವ್ಯಾಪಾರವನ್ನು ಆರಂಭಿಸಲು ಆತ್ಮೀಯರಿಂದ ಹಣ ಪಡೆಯುವಿರಿ. ನೀವು ಸಂತಸವಾಗಿರುವುದು ಮಾತ್ರವಲ್ಲದೆ ಬೇರೆಯವರ ಸಂತಸಕ್ಕೆ ಕಾರಣವಾಗುವಿರಿ. ವಯಸ್ಸಿನ ಭೇದವಿಲ್ಲದೆ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ನಿಮ್ಮೆಲ್ಲಾ ಕೆಲಸ ಕಾರ್ಯಗಳಿಗೆ ಸಂಗಾತಿಯ ಪೂರ್ಣ ಸಹಕಾರ ದೊರೆಯಲಿದೆ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಸಿರು

ಮಕರ

ನಿಮ್ಮಲ್ಲಿನ ಒಳ್ಳೆಯ ಮನಸ್ಸಿಗೆ ಎಲ್ಲರೂ ಮಾರು ಹೋಗುತ್ತಾರೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಆತ್ಮೀಯರ ಸಹಾಯ ದೊರೆಯಲಿದೆ. ಸಣ್ಣಪುಟ್ಟ ಕೆಲಸಗಳಾದರೂ ಹೆಚ್ಚಿನ ಶ್ರದ್ಧೆಯಿಂದ ಪೂರ್ಣಗೊಳಿಸುವಿರಿ. ಮನದಲ್ಲಿ ಅನೇಕ ಚಿಂತೆಗಳಿರುತ್ತವೆ. ಸ್ಟಾಕ್ ಮತ್ತು ಷೇರಿನ ವ್ಯವಹಾರದಲ್ಲಿ ಹಣವನ್ನು ಹೂಡುವಿರಿ. ಕುಟುಂಬದಲ್ಲಿ ಪರಸ್ಪರ ಪ್ರೀತಿ ವಿಶ್ವಾಸವು ಹೆಚ್ಚಲಿದೆ. ಹಣಕಾಸಿನ ವ್ಯವಹಾರದಲ್ಲಿ ಸಂಗಾತಿಯ ಉತ್ತಮ ಸಹಕಾರ ದೊರೆಯಲಿದೆ. ಹಿರಿಯ ಸೋದರ ಅಥವಾ ಸೋದರಿಗೆ ಉತ್ತಮ ಆದಾಯವಿರುತ್ತದೆ. ಉದ್ಯೋಗದ ಕೆಲಸ ಕಾರ್ಯಗಳಿಗೆ ಮೊದಲ ಆದ್ಯತೆ ನೀಡುವಿರಿ ಅತಿಯಾದ ಮಾತನ್ನು ಕಡಿಮೆ ಮಾಡುವುದು ಒಳ್ಳೆಯದು. ವಿದ್ಯಾರ್ಥಿಗಳಿಗೆ ಶುಭ ಯೋಗವಿದೆ. ಕೆಲಸದ ನಡುವೆ ವಿಶ್ರಾಂತಿ ತೆಗೆದುಕೊಳ್ಳುವುದನ್ನು ಮರೆಯುವುದಿಲ್ಲ.

ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ

ಕುಂಭ

ನೀವು ತೆಗೆದುಕೊಳ್ಳುವ ಬಹುತೇಕ ತೀರ್ಮಾನಗಳು ಯಶಸ್ವಿಯಾಗುತ್ತವೆ. ಆದರೆ ಸುಲಭವಾಗಿ ಯಾರನ್ನು ನಂಬುವುದಿಲ್ಲ. ನಿಮ್ಮ ಯಶಸ್ಸನ್ನು ಕಂಡು ಅಸೂಯೆ ಪಡುವ ಜನ ಸುತ್ತಮುತ್ತ ಇರುತ್ತಾರೆ. ಆಡುವ ಮಾತಿನ ಮೇಲೆ ಹತೋಟಿ ಇರುವುದು ಒಳ್ಳೆಯದು. ಹಣಕಾಸಿನ ವಿಚಾರವನ್ನು ರಹಸ್ಯವಾಗಿಡುವಿರಿ. ಮನಸ್ಸು ಎಷ್ಟೇ ಒಳ್ಳೆಯದಾಗಲಿ ದುಡುಕಿನ ಮಾತಿನಿಂದ ಬೇರೆಯವರಲ್ಲಿ ಬೇಸರ ಮೂಡಿಸುವಿರಿ. ಮನರಂಜನಾ ಸಮಾರಂಭಗಳಿಗೆ ಹಣ ವಿನಿಯೋಗಿಸುವಿರಿ. ಉದ್ಯೋಗದಲ್ಲಿ ಯಾವುದೇ ರೀತಿಯ ಬದಲಾವಣೆಗಳು ಕಾಣುವುದಿಲ್ಲ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಆದಾಯ ವಿರುತ್ತದೆ. ಸಂಗಾತಿಯ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಶುಭ ಫಲಗಳು ದೊರೆಯುತ್ತವೆ.

ಪರಿಹಾರ : ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು ದಕ್ಷಿಣ

ಅದೃಷ್ಟದ ಬಣ್ಣ: ನೇರಳೆ

ಮೀನ

ಬೇರೆಯವರ ಮಾತನ್ನು ನಂಬಿದಲ್ಲಿ ಕುಟುಂಬದಲ್ಲಿ ತೊಂದರೆ ಉಂಟಾಗುತ್ತದೆ. ಧಾರ್ಮಿಕ ಸಂಸ್ಥೆಯ ಜವಾಬ್ದಾರಿ ದೊರೆಯಲಿದೆ. ಗುರುಪೀಠದಲ್ಲಿ ಉದ್ಯೋಗ ದೊರೆಯುತ್ತದೆ. ವ್ಯಾಪಾರ ವ್ಯವಹಾರದ ಸಲುವಾಗಿ ಸ್ಥಳ ಬದಲಾವಣೆ ಮಾಡುವಿರಿ. ವಿದ್ಯಾರ್ಥಿಗಳಿಗೆ ಸಹಪಾಠಿಗಳ ಜೊತೆ ಉತ್ತಮ ಸ್ನೇಹ ಇರುವುದಿಲ್ಲ. ಬುದ್ಧಿವಂತಿಕೆಯಿಂದ ಸಮಯಕ್ಕೆ ಸರಿಯಾಗಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ದೊರೆವ ಅವಕಾಶವನ್ನು ಸೂಕ್ತ ಮಾರ್ಗದಲ್ಲಿ ಉಪಯೋಗಿಸಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಕಷ್ಟಪಟ್ಟು ಹಣ ಆಸ್ತಿ ಕೀರ್ತಿ ಪ್ರತಿಷ್ಠೆ ಗಳಿಸುವಿರಿ. ಭೂವ್ಯವಹಾರಗಳಲ್ಲಿ ಉತ್ತಮ ಧನಲಾಭವಿರುತ್ತದೆ. ಮನೆಯ ಪೂಜಾಸ್ಥಳವನ್ನು ಬೆಲೆ ಬಾಳುವ ವಸ್ತುಗಳಿಂದ ಅಲಂಕೃತಗೊಳಿಸುವಿರಿ.

ಪರಿಹಾರ : ಸಿಹಿ ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 8

ಅಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಗುಲಾಬಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.