Horoscope Today: ಮನೆಯ ಹೆಣ್ಣುಮಗಳ ವಿವಾಹದ ಮಾತುಕತೆ, ಬಂಧುಗಳ ಜೊತೆ ಹಣದ ವಿವಾದ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಮನೆಯ ಹೆಣ್ಣುಮಗಳ ವಿವಾಹದ ಮಾತುಕತೆ, ಬಂಧುಗಳ ಜೊತೆ ಹಣದ ವಿವಾದ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

Horoscope Today: ಮನೆಯ ಹೆಣ್ಣುಮಗಳ ವಿವಾಹದ ಮಾತುಕತೆ, ಬಂಧುಗಳ ಜೊತೆ ಹಣದ ವಿವಾದ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಫೆಬ್ರವರಿ 22, ಗುರುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (22 February 2024 Daily Horoscope).

ಫೆಬ್ರವರಿ 22ರ ದಿನಭವಿಷ್ಯ
ಫೆಬ್ರವರಿ 22ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ( February 22 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಶುಕ್ಲಪಕ್ಷ, ಗುರುವಾರ

ತಿಥಿ : ತ್ರಯೋದಶಿ ತಿಥಿಯು ಹಗಲು 01.29 ರವರೆಗು ಇದ್ದು ಆನಂತರ ಚತುರ್ದಶಿ ಆರಂಭವಾಗುತ್ತದೆ.

ನಕ್ಷತ್ರ : ಪುಷ್ಯ ನಕ್ಷತ್ರವು ಸ.05.00 ವರೆಗು ಇರುತ್ತದೆ. ಆನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.40

ಸೂರ್ಯಾಸ್ತ: ಸ.06.23

ರಾಹುಕಾಲ : ಮ. 01.30ರಿಂದ ಮ. 03.00

ರಾಶಿ ಫಲಗಳು

ಸಿಂಹ

ಗೆಲುವನ್ನೇ ಹವ್ಯಾಸವನ್ನಾಗಿ ಮಾಡಿಕೊಳ್ಳುವಿರಿ. ಅತಿಯಾದ ಸಿಡುಕುತನ ಕುಂಟುಂಬದ ಶಾಂತಿಯನ್ನು ಕದಡುತ್ತದೆ. ಉದ್ಯೋಗದಲ್ಲಿ ಜವಾಬ್ದಾರಿಯತ ಸ್ಥಾನ ಲಭ್ಯವಾಗಲಿದೆ. ಉತ್ತಮ ಅವಕಾಶ ದೊರೆತು ವೃತ್ತಿಯನ್ನು ಬದಲಾಯಿಸುವಿರಿ. ಉಪಯೋಗಿಸಿದ ವಾಹನಗಳ ಮಾರಾಟದಲ್ಲಿ ಲಾಭವಿದೆ. ಕೋಪವನ್ನು ಕಡಿಮೆ ಮಾಡಿಕೊಳ್ಳಿರಿ. ಕುಟುಂಬದ ಐಕ್ಯತೆಗಾಗಿ ದುಡಿಯುವಿರಿ. ಜೀವನದ ನಿರ್ವಹಣೆಗಾಗಿ ತಂದೆಯವರಿಂದ ಹಣದ ಸಹಾಯ ದೊರೆಯುತ್ತದೆ. ಬಿಡುವಿಲ್ಲದ ಕೆಲಸ ಇರುತ್ತದೆ. ಹೆಚ್ಚಿದ ಜವಾಬ್ದಾರಿ ನೆಮ್ಮದಿಯಿಲ್ಲದಂತೆ ಮಾಡುತ್ತದೆ. ಅನಾರೋಗ್ಯವಿರುತ್ತದೆ. ವೃಥಾತಿರುಗಾಟ ಇರುತ್ತದೆ. ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಸ್ಥಾನ ಮಾನ ದೊರೆಯುತ್ತದೆ. ಬೇರೆಯವರಿಂದ ಹಣವನ್ನು ಪಡೆಯದಿರಿ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

ಕನ್ಯಾ

ಕುಟುಂಬದ ಭೂವಿವಾದವನ್ನು ಪರಿಹರಿಸಿ ನೆಮ್ಮದಿ ನೆಲೆಸಲು ಕಾರಣರಾಗುವಿರಿ. ಹಣಕಾಸಿನ ವ್ಯವಹಾರದಲ್ಲಿ ತಂದೆಯ ವಿರೋಧ ಉಂಟಾಗುತ್ತದೆ. ಉದ್ಯೋಗದಲ್ಲಿ ಪ್ರಮುಖ ಜವಾಬ್ದಾರಿಯನ್ನು ಪೂರೈಸುವಿರಿ. ಹಿರಿಯ ಸೋದರನ ಪಾಲುಗಾರಿಕೆಯಲ್ಲಿ ವ್ಯಾಪಾರವೊಂದನ್ನು ಆರಂಭಿಸುವಿರಿ. ಮನೆಯ ಹೆಣ್ಣುಮಗಳ ವಿವಾಹದ ಮಾತುಕತೆ ನಡೆಯುತ್ತದೆ. ತಾಯಿಯವರ ಆರೋಗ್ಯದ ಬಗ್ಗೆ ಗಮನ ಇರಲಿ. ದೇಶ ವಿದೇಶಗಳನ್ನು ಸುತ್ತುವ ಯೋಚನೆ ಮಾಡುವಿರಿ. ಹಣದ ವಿಚಾರದಲ್ಲಿ ತೊಂದರೆ ಉಂಟಾಗಬಹುದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಯಶಸ್ಸು ದೊರೆಯುತ್ತದೆ. ಹಣ ಕಾಸಿನ ವ್ಯವಹಾರದಲ್ಲಿ ಹಿರಿಯರ ಸಲಹೆಯನ್ನು ಪಡೆಯಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಎಳನೀರು ಮತ್ತು ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ತುಲಾ

ತೆಗೆದುಕೊಂಡ ನಿರ್ಧಾರಗಳನ್ನು ಒತ್ತಡಕ್ಕೆ ಮಣಿದು ಬದಲಾಯಿಸುವುದಿಲ್ಲ. ಉದ್ಯೋಗದಲ್ಲಿ ಯಾವುದೇ ತಾರತಮ್ಯ ತೋರದೆ ಕರ್ತವ್ಯಕ್ಕೆ ಬದ್ದರಾಗುವಿರಿ. ವಿದ್ಯಾರ್ಥಿಗಳು ಆತ್ಮಾಭಿಮಾನದಿಂದ ಕಲಿಕೆಯಲ್ಲಿ ಮುಂದುವರಿಯುವರು. ಕಷ್ಟದ ದಿನಗಳ ಮರೆತು ಸಂತಸದಿಂದ ಬಾಳುವಿರಿ. ಒಳ್ಳೆಯ ಕೆಲಸಗಳಿಗೆ ಧನ ಸಹಾಯ ಮಾಡುವಿರಿ. ಯಾವುದೇ ಕೆಲಸವಾಗಲಿ ಗೌರವದಿಂದ ನೋಡುವಿರಿ. ಹೆಚ್ಚಿನ ಪ್ರಯತ್ನದಿಂದ ಜೀವನದ ಸಮಸ್ಯೆಯೊಂದನ್ನು ಬಗೆಹರಿಸುವಿರಿ. ವಿದ್ಯಾರ್ಥಿಗಳು ಉನ್ನತ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳಬಹುದು. ಬಂಧುಗಳ ಜೊತೆಯಲ್ಲಿ ಹಣದ ವಿವಾದ ಉಂಟಾಗುತ್ತದೆ. ಭೂವಿಚಾರದಲ್ಲಿ ಲೆಕ್ಕ ಪತ್ರವನ್ನು ಸರಿಯಾಗಿ ಪರಿಶೀಲಿಸಿ. ಸಾರ್ವಜನಿಕರ ಸೇವೆಯಲ್ಲಿ ನಿರತರಾಗುವಿರಿ.

ಪರಿಹಾರ : ತಾಯಿಯವರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ವೃಶ್ಚಿಕ

ಗೆಲ್ಲುವ ಛಲದಿಂದಲೇ ದಿನವನ್ನು ಆರಂಭಿಸುವಿರಿ. ಒಮ್ಮೆ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧರಾಗುವಿರಿ. ಉತ್ತಮ ಅವಕಾಶ ದೊರೆತರೂ ಉದ್ಯೋಗವನ್ನು ಬದಲಾಯಿಸುವುದಿಲ್ಲ. ಉದ್ಯೋಗದಲ್ಲಿ ವಿರೋಧ ಉಂಟಾದರೂ ಸುರಕ್ಷಿತರಾಗುವಿರಿ. ಶ್ರಮದ ಕಾಲದಲ್ಲಿ ಆತ್ಮೀಯರ ಸಲಹೆ ದೊರೆಯುತ್ತದೆ. ದುಡುಕಿನ ಮಾತುಕತೆ ಕುಟುಂಬದ ನೆಮ್ಮದಿಯನ್ನು ಕೆಡಿಸುತ್ತದೆ. ವಿದ್ಯಾರ್ಥಿಗಳು ಪ್ರಯಾಸದಿಂದ ಕಲಿಕೆಯಲ್ಲಿ ಮುಂದುವರಿಯುತ್ತಾರೆ. ಹಣಕಾಸಿನ ವಿಚಾರದಲ್ಲಿ ವಿವಾದ ಉಂಟಾಗುತ್ತದೆ. ಹಠದ ಗುಣ ಇರದು. ಉಷ್ಣವಾಯುವಿನ ದೋಷ ಇರುತ್ತದೆ. ಸಂಗಾತಿಯ ಸಹಾಯದಿಂದ ವೈಭವಯುತ ಜೀವನ ನಡೆಸುವಿರಿ. ಅನಿರೀಕ್ಷಿತ ಧನಲಾಭ ಇರುತ್ತದೆ. ಪಶುಸಂಗೋಪನೆಯಲ್ಲಿ ಆಸಕ್ತಿ ಇರುತ್ತದೆ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

--------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.