Horoscope Today: ಅನಿರೀಕ್ಷಿತ ಧನಲಾಭ, ಭೂವಿವಾದ ಎದುರಾಗಬಹುದು; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಅನಿರೀಕ್ಷಿತ ಧನಲಾಭ, ಭೂವಿವಾದ ಎದುರಾಗಬಹುದು; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

Horoscope Today: ಅನಿರೀಕ್ಷಿತ ಧನಲಾಭ, ಭೂವಿವಾದ ಎದುರಾಗಬಹುದು; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

ಫೆಬ್ರವರಿ 22, ಗುರುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (22 February 2024 Daily Horoscope).

ಫೆಬ್ರವರಿ 22ರ ದಿನಭವಿಷ್ಯ
ಫೆಬ್ರವರಿ 22ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ( February 22 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಶುಕ್ಲಪಕ್ಷ, ಗುರುವಾರ

ತಿಥಿ : ತ್ರಯೋದಶಿ ತಿಥಿಯು ಹಗಲು 01.29 ರವರೆಗು ಇದ್ದು ಆನಂತರ ಚತುರ್ದಶಿ ಆರಂಭವಾಗುತ್ತದೆ.

ನಕ್ಷತ್ರ : ಪುಷ್ಯ ನಕ್ಷತ್ರವು ಸ.05.00 ವರೆಗು ಇರುತ್ತದೆ. ಆನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.40

ಸೂರ್ಯಾಸ್ತ: ಸ.06.23

ರಾಹುಕಾಲ : ಮ. 01.30ರಿಂದ ಮ. 03.00

ರಾಶಿ ಫಲಗಳು

ಧನಸ್ಸು

ಕುಟುಂಬದಲ್ಲಿ ಪರಸ್ಪರ ಅವಲಂಬನೆ ಇರುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ನಡುವೆ ಉತ್ತಮ ಸಾಮರಸ್ಯ ಇರುತ್ತದೆ. ಹಣದ ಕೊರೆತೆ ಇರದು. ಅನಿರೀಕ್ಷಿತ ಧನಲಾಭವಿದೆ. ಐಷಾರಾಮಿ ವಾಹನ ಕೊಳ್ಳುವಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಆಧುನಿಕ ತಂತ್ರಜ್ಞಾನವನ್ನು ಆಧರಿಸಿದ ವ್ಯಾಪಾರವನ್ನು ಆರಂಭಿಸುವಿರಿ. ವಿದ್ಯಾರ್ಥಿಗಳಿಗೆ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ಕುಟುಂಬದ ವಿವಾಹವು ಮುಂದೂಡಲ್ಪಡುತ್ತದೆ. ಮನದಲ್ಲಿ ಬೇಸರವಿರುತ್ತದೆ. ತಂದೆಗೆ ಸಂಬಧಿಸಿದ ವ್ಯಾಪಾರ ಮಂದುವರೆಯುತ್ತದೆ. ಕಮೀಷನ್ ಆಧಾರಿತ ಉದ್ಯೋಗ ಅಥವಾ ವ್ಯಾಪಾರ ಲಾಭದಾಯಕ. ಕ್ರೀಡಾ ಸ್ಪರ್ಧಿಗಳಿಗೆ ಅವಕಾಶಗಳು ದೊರೆಯುತ್ತವೆ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಮಕರ

ಕುಟುಂಬದ ಜಮೀನನ್ನು ಮಾರಾಟ ಮಾಡಿ ಹೊಸ ಮನೆಯನ್ನು ಕೊಳ್ಳುವಿರಿ. ಕುಟುಂಬದಲ್ಲಿ ಒತ್ತಡವಿರುತ್ತದೆ. ವಿದೇಶದಲ್ಲಿ ಉದ್ಯೋಗ ದೊರೆವ ಸಾಧ್ಯತೆ ಇದೆ. ಉದ್ಯೋಗದಲ್ಲಿ ತೊಂದರೆ ಕಾಣದು. ವಿದ್ಯಾರ್ಥಿಗಳು ಸಮಯವರ್ಥಮಾಡದೆ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಸಂಗಾತಿಯ ಜೊತೆಯಲ್ಲಿ ಹೋಟೆಲ್ ವ್ಯಾಪಾರವನ್ನು ಆರಂಭಿಸುವಿರಿ. ಭೂವಿವಾದವೊಂದು ಎದುರಾಗುತ್ತದೆ. ಖ್ಯಾತ ವಿದ್ಯಾಸಂಸ್ಥೆಯ ನಿರ್ವಹಣೆಯ ಜವಾಬ್ದಾರಿ ಲಭಿಸುತ್ತದೆ. ಸೋದರಿಯ ಜೀವನದಲ್ಲಿ ವಿರಸದ ಸನ್ನಿವೇಶ ಎದುರಾಗುತ್ತದೆ. ಹಣದ ಕೊರತೆ ಇರುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಅತಿಯಾದ ನಿದ್ದೆ ನಿಮ್ಮ ನಿರೀಕ್ಷೆಯನ್ನು ಹುಸಿಗೊಳಿಸುತ್ತದೆ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಎಲೆಹಸಿರುಬಣ್ಣ

ಕುಂಭ

ಕುಟುಂಬದಲ್ಲಿ ಅನಿರೀಕ್ಷಿತ ಬದಲಾವಣೆ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ. ಉದ್ಯೋಗದಲ್ಲಿ ಬಡ್ತಿಯ ನಿರೀಕ್ಷೆ ಹುಸಿ ಆಗಬಹುದು. ವ್ಯಾಪಾರ ವ್ಯವಹಾರದಲ್ಲಿ ಯಾವುದೇ ಬದಲಾವಣೆ ಉಂಟಾಗುವುದಿಲ್ಲ. ವಿದ್ಯಾರ್ಥಿಗಳು ಸಹಪಾಠಿಗಳ ಜೊತೆ ವ್ಯಾಸಂಗ ಮಾಡುವುದು ಉಪಯುಕ್ತ. ಹಣಕಾಸಿನ ಕೊರತೆ ಕಂಡುಬರದು. ಪರಸ್ಥಳದಲ್ಲಿ ಅಭಿವೃದ್ದಿ ಇರುತ್ತದೆ. ಹಣಕಾಸಿನ ವಿವಾದಗಳಲ್ಲಿ ಮಧ್ಯವರ್ತಿಯಾಗಿ ಹಣವನ್ನು ಗಳಿಸುವಿರಿ. ಸ್ವಂತ ಬಳಕೆಗಾಗಿ ವಾಹನವನ್ನು ಕೊಳ್ಳುವಿರಿ. ಗಣ್ಯವ್ಯಕ್ತಿಗಳ ಸಹಾಯದಿಂದ ಜನೋಪಕಾರಿ ಸಂಘ ಸಂಸ್ಥೆಯನ್ನು ಆರಂಭಿಸುವಿರಿ. ಪಾಲುಗಾರಿಕೆ ವ್ಯಾಪಾರ ಒಳ್ಳೆಯದಲ್ಲ. ನಿಯಮಿತ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ಲಭಿಸುತ್ತದೆ.

ಪರಿಹಾರ : ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮೀನ

ಶುದ್ದವಾದ ಮನಸ್ಸಿರುತ್ತದೆ. ಎಲ್ಲರ ಜೊತೆಯಲ್ಲಿ ಆತ್ಮೀಯತೆಯಿಂದ ನಡೆದುಕೊಳ್ಳುವಿರಿ. ಕುಟುಂಬದಲ್ಲಿ ಪ್ರೀತಿ ಮಮತೆ ತುಂಬಿರುತ್ತದೆ. ಉದ್ಯೋಗದಲ್ಲಿ ಯಾವುದೆ ಬದಲಾವಣೆಗಳು ಕಾಣುವುದಿಲ್ಲ. ಹಣಕಾಸಿನ ತೊಂದರೆ ಬಾರದು. ವ್ಯಾಪಾರ ವ್ಯವಹಾರಗಳು ಕೇವಲ ಹವ್ಯಾಸಕ್ಕಾಗಿ ಮಾಡುವಿರಿ. ವಿದ್ಯಾರ್ಥಿಗಳು ಸಮಯಕ್ಕೆ ಹೊಂದಿಕೊಂಡು ಮುಂದುವರೆಯುವರು. ಮನಸ್ಸಿನ ಸಂತೋಷವನ್ನು ಉಳಿಸಿಕೊಳ್ಳಲು ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ. ಜಲಚರಗಳನ್ನು ಸಾಕುವ ಆಸೆ ಉಂಟಾಗಲಿದೆ ಮುಂದಾಲೋಚನೆಯಿಂದ ಹಣ ಉಳಿಸಲು ಯೋಜನೆಯನ್ನು ರೂಪಿಸುವಿರಿ. ಶೀತದ ತೊಂದರೆ ಕಾಡುತ್ತದೆ. ಯೋಗ ಪ್ರಾಣಾಯಾಮದಿಂದ ಉತ್ತಮ ಆರೋಗ್ಯ ಗಳಿಸುವಿರಿ.

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬೂದು ಬಣ್ಣ

------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.