Horoscope Today: ಕುಟುಂಬದ ಆಸ್ತಿ ನಿಮ್ಮದಾಗಲಿದೆ, ಅಧಿಕಾರಿಗಳಿಗೆ ವಿವಾದ ಎದುರಾಗಲಿದೆ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
22 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (22nd April 2024 Daily Horoscope).

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (22nd April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಸೋಮವಾರ
ತಿಥಿ: ಚತುರ್ದಶಿ ರಾತ್ರಿ 2.24 ರವರೆಗೂ ಇರುತ್ತದೆ. ಅನಂತರ ಹುಣ್ಣಿಮೆ ಆರಂಭವಾಗುತ್ತದೆ.
ನಕ್ಷತ್ರ: ಹಸ್ತ ನಕ್ಷತ್ರವು ಸಂಜೆ 7.19 ರವರೆಗೂ ಇರುತ್ತದೆ. ಅನಂತರ ಚಿತ್ತಾ ನಕ್ಷತ್ರವು ಆರಂಭವಾಗುತ್ತದೆ.
ಸೂರ್ಯೋದಯ: ಬೆಳಿಗ್ಗೆ 6.04
ಸೂರ್ಯಾಸ್ತ: ಸಂಜೆ 6.32
ರಾಹುಕಾಲ: ಬೆಳಿಗ್ಗೆ 7.41 ರಿಂದ ಬೆಳಿಗ್ಗೆ 9.14
ಸಿಂಹ
ನಿಮ್ಮಲ್ಲಿನ ಆತ್ಮವಿಶ್ವಾಸ ಕೆಲಸ ಕಾರ್ಯವನ್ನು ಜಯದತ್ತ ನಡೆಸುತ್ತದೆ. ಬಳಿ ಇರುವ ಹಣವನ್ನು ಸಂಪೂರ್ಣವಾಗಿ ಖರ್ಚು ಮಾಡುವಿರಿ. ಕೆಲಸ ನಡುವೆ ವಿಶ್ರಾಂತಿಯನ್ನೂ ಪಡೆಯುವುದಿಲ್ಲ. ಜನಸೇವೆ ಮಾಡುವಲ್ಲಿ ಸಂತೃಪ್ತಿ ಪಡೆಯುವಿರಿ. ಕುಟುಂಬದ ಆಸ್ತಿಯೊಂದು ನಿಮ್ಮ ಪಾಲಿಗೆ ದೊರೆಯುತ್ತದೆ. ಅಧಿಕಾರಿಗಳಿಗೆ ವಿಶೇಷವಾದ ಸ್ಥಾನ ದೊರೆಯಲಿದೆ. ಯಾವ ವಿಚಾರದಲ್ಲಿಯೂ ತೃಪ್ತಿ ಇರದು. ನಿಮ್ಮ ಸಂಗಾತಿಯ ಮನಸ್ಸನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ನೀವು ಕನಸಿನಲ್ಲಿ ಕಂಡಿದ್ದ ಹಲವು ವಿಚಾರಗಳು ಇಂದು ನಿಜವಾಗಲಿವೆ. ವಿದ್ಯಾರ್ಥಿಗಳು ವಿಶೇಷವಾದ ಸೌಲಭ್ಯಗಳನ್ನು ಪಡೆಯುತ್ತಾರೆ. ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವಿರಿ.
ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ : ನೇರಳೆ ಬಣ್ಣ
ಕನ್ಯಾ
ಬೇರೆಯವರು ಮಾಡಿದ ಕೆಲಸವನ್ನು ಟೀಕಿಸುವಿರಿ. ತಪ್ಪು ಒಪ್ಪನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಉಪಯೋಗವಿಲ್ಲದ ಕೆಲಸ ಕಾರ್ಯಗಳಲ್ಲಿ ವೇಳೆಯನ್ನು ಕಳೆಯುವಿರಿ. ಸಹೋದರನಿಗೆ ನಿಮ್ಮ ಪ್ರಯತ್ನದಿಂದ ವಿವಾಹದ ಮಾತುಕತೆ ನಡೆಯುತ್ತದೆ. ಕಲಾವಿದರಾದಲ್ಲಿ ಒಳ್ಳೆಯ ಅವಕಾಶಗಳು ದೊರೆಯಲಿವೆ. ಮನೆಗೆ ಸಂಬಂಧಿಸಿದ ವೈಭವದ ಅಲಂಕಾರದ ವಸ್ತುಗಳನ್ನು ಕೊಳ್ಳುವಿರಿ. ಅಧಿಕಾರಿಗಳು ವಿವಾದವೊಂದನ್ನು ಎದುರಿಸಬೇಕಾಗುತ್ತದೆ. ದುಡುಕಿಗೆ ಕೋಪಕ್ಕೆ ಬುದ್ಧಿ ಕೊಡಬೇಡಿ. ಕುಟುಂಬದ ವಿವಾದವೊಂದು ರಾಜಿಯ ಹಂತವನ್ನು ತಲುಪುತ್ತದೆ. ಕುಟುಂಬದ ಹಿರಿಯರಿಗೆ ಅನುಕೂಲವನ್ನು ಕಲ್ಪಿಸುವಿರಿ. ಅನಿರೀಕ್ಷಿತ ಧನಲಾಭವಿರುತ್ತದೆ.
ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ : ಗುಲಾಬಿ ಬಣ್ಣ
ತುಲಾ
ಆತಂಕದಲ್ಲಿ ಮಾಡುವ ಕೆಲಸಗಳು ನಿಮಗೆ ಯಶಸ್ಸನ್ನು ಕೊಡುತ್ತವೆ. ಸಮಯ ಸಂದರ್ಭಕ್ಕೆ ಹೊಂದಿಕೊಂಡು ನಡೆದುಕೊಳ್ಳುವಿರಿ. ನಿರೀಕ್ಷಿತ ಅನುಕೂಲತೆಗಳು ದೊರೆಯುತ್ತವೆ. ಬುದ್ಧಿವಂತಿಕೆಯ ಮಾತುಕತೆಗೆ ಎಲ್ಲರೂ ನಿಮಗೆ ಸೋಲುತ್ತಾರೆ. ದಾಂಪತ್ಯಜೀವನ ಸುಖಮಯವಾಗಿರುತ್ತದೆ. ವೈಭವದ ಜೀವನ ನಡೆಸುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಲಾಭವಿರುತ್ತದೆ. ಕಂತು ವ್ಯಾಪಾರದಿಂದ ಉತ್ತಮ ವರಮಾನ ದೊರೆಯುತ್ತದೆ. ನಿಮ್ಮ ಮಧ್ಯಸ್ಥಿಕೆಯ ಕಾರಣ ಕುಟುಂಬದ ಹಣಕಾಸಿನ ವಿವಾದವೊಂದು ಸುಖಾಂತ್ಯಗೊಳ್ಳುತ್ತದೆ. ಶಾಂತಿ ಸಹನೆಯಿಂದ ಎಲ್ಲರೊಂದಿಗೆ ನಡೆದುಕೊಳ್ಳುವಿರಿ. ಕ್ರಮೇಣ ಜೀವನದ ಕಷ್ಟ ನಷ್ಟಗಳು ಕಡಿಮೆ ಆಗಲಿವೆ.
ಪರಿಹಾರ: ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ವೃಶ್ಚಿಕ
ಮನ ಬಂದಂತೆ ನಡೆಯುವ ಕಾರಣ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಯಂತ್ರ ಸಂಬಂಧೀ ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ದೊರೆಯಲಿದೆ. ಕಮೀಷನ್ ಆಧಾರಿತ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭವಿದೆ. ಹೊಸ ಪಾಲುದಾರಿಕೆ ವ್ಯಾಪಾರವನ್ನು ಆರಂಭಿಸುವಿರಿ. ಬಹುಕಾಲದಿಂದ ಕಾಡುತ್ತಿದ್ದ ಆರೋಗ್ಯದ ಸಮಸ್ಯೆ ನಿವಾರಣೆ ಆಗಲಿದೆ. ಅನಿರೀಕ್ಷಿತ ಧನಾಗಮವಿದೆ. ವೃತ್ತಿಜೀವನದಲ್ಲಿ ಅಸೂಯೆ ಪಡುವ ಜನರಿರುತ್ತಾರೆ. ನಿಮ್ಮ ವೃತ್ತಿಯ ಆಂತರಿಕ ರಹಸ್ಯವನ್ನು ಯಾರಿಗೂ ತಿಳಿಸುವುದಿಲ್ಲ. ಒತ್ತಡಕ್ಕೆ ಮಣಿದು ವೃತ್ತಿಯನ್ನು ಬದಲಾಯಿಸುವಿರಿ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದನ್ನು ನಡೆಸಿ ಕೊಡುವಿರಿ. ಪ್ರಾಣಿಗಳಿಂದ ತೊಂದರೆ ಉಂಟಾಗಲಿದೆ.
ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಬೂದುಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).