Horoscope Today: ಆತ್ಮೀಯರಿಂದ ಉಡುಗೊರೆ ದೊರೆಯಲಿದೆ, ಷೇರು ಮಾರುಕಟ್ಟೆ ಹೂಡಿಕೆಯಲ್ಲಿ ಉತ್ತಮ ಲಾಭ; ಮೇ 22ರ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಆತ್ಮೀಯರಿಂದ ಉಡುಗೊರೆ ದೊರೆಯಲಿದೆ, ಷೇರು ಮಾರುಕಟ್ಟೆ ಹೂಡಿಕೆಯಲ್ಲಿ ಉತ್ತಮ ಲಾಭ; ಮೇ 22ರ ರಾಶಿಫಲ

Horoscope Today: ಆತ್ಮೀಯರಿಂದ ಉಡುಗೊರೆ ದೊರೆಯಲಿದೆ, ಷೇರು ಮಾರುಕಟ್ಟೆ ಹೂಡಿಕೆಯಲ್ಲಿ ಉತ್ತಮ ಲಾಭ; ಮೇ 22ರ ರಾಶಿಫಲ

22 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (22nd May 2024 Daily Horoscope).

 ಮೇ 22ರ ರಾಶಿಫಲ
ಮೇ 22ರ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(22nd May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ: ಚತುರ್ದಶಿ ಸಂಜೆ 05.35 ರವರೆಗೂ ಇರುತ್ತದೆ ನಂತರ ಹುಣ್ಣಿಮೆ ಆರಂಭವಾಗುತ್ತದೆ.

ನಕ್ಷತ್ರ : ಸ್ವಾತಿ ನಕ್ಷತ್ರವು ಬೆಳಗ್ಗೆ 07.01 ರವರೆಗು ಇರುತ್ತದೆ ನಂತರ ವಿಶಾಖ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.39

ರಾಹುಕಾಲ: 12.20 ರಿಂದ ಹ. 01.55

ರಾಶಿಫಲ

ಧನಸ್ಸು

ನಿಮ್ಮ ಕಾರ್ಯಕ್ಕೆ ಕುಟುಂಬದ ಎಲ್ಲರ ಸಹಕಾರ ಇರಲಿದೆ. ಹೊಸಬರ ಆಗಮನದಿಂದ ಮನೆಯಲ್ಲಿ ಸಂತೋಷ ತುಂಬಿರುತ್ತದೆ. ಆತ್ಮಸ್ಥೈರ್ಯದಿಂದ ಉದ್ಯೋಗದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯುತ್ತದೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತಂದೆಯಿಂದ ಹಣದ ಸಹಾಯ ದೊರೆಯುತ್ತದೆ. ಸ್ವಂತ ಕೆಲಸ ಕಾರ್ಯಗಳಲ್ಲಿ ಪ್ರಗತಿ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಹಿಂದೊಮ್ಮೆ ತೆಗೆದುಕೊಂಡ ನಿರ್ಧಾರಗಳಿಗೆ ಬದ್ಧರಾಗುವಿರಿ. ಕ್ರಮೇಣವಾಗಿ ಆರೋಗ್ಯ ಸುಧಾರಿಸುತ್ತದೆ. ಮಿತಿ ಮೀರಿದ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವಿರಿ. ಆತ್ಮೀಯರಿಂದ ಉಡುಗೊರೆ ದೊರೆಯಲಿದೆ.

ಪರಿಹಾರ: ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬೂದು

ಮಕರ

ಕುಟುಂಬದಲ್ಲಿ ಹಿರಿಯರ ಒತ್ತಡದ ಮಾತು ಬೇಸರ ಮೂಡಿಸುತ್ತದೆ. ಉದ್ಯೋಗದ ಕೆಲಸ ಕಾರ್ಯಗಳ ಒತ್ತಡ ಇರುವುದಿಲ್ಲ. ನಿಮ್ಮ ಸ್ವಂತ ಕೆಲಸ ಕಾರ್ಯಗಳ ಕಾರ್ಯ ವ್ಯಾಪ್ತಿ ಹೆಚ್ಚುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ವೆಚ್ಚಕ್ಕೆ ತಕ್ಕಷ್ಟು ಆದಾಯ ದೊರೆಯಲಿದೆ. ಮಾಡುವ ಕೆಲಸ ಕಾರ್ಯಗಳನ್ನು ನಿಧಾನಗತಿಯಲ್ಲಿ ಪೂರ್ಣಗೊಳಿಸುವಿರಿ. ಸಹೋದ್ಯೋಗಿಗಳ ವಿಶ್ವಾಸ ಗಳಿಸುವಿರಿ. ವಿದ್ಯಾರ್ಥಿಗಳು ಕಷ್ಟಪಟ್ಟು ಎಲ್ಲರ ಗಮನ ಸೆಳೆದು ಸಾಧನೆ ಮಾಡುವರು. ಬೇರೆಯವರ ಹಣಕಾಸಿನ ವಿವಾದವನ್ನು ಪರಿಹರಿಸುವಿರಿ. ಆಸ್ತಿ ವಿಚಾರದಲ್ಲಿ ಅನಾವಶ್ಯಕವಾಗಿ ಮಧ್ಯಸ್ಥಿಕೆ ವಹಿಸದಿರಿ. ಹಿರಿಯ ಸೋದರನ ಜೊತೆಗೂಡಿ ಪಾಲುಗಾರಿಕೆಯ ವ್ಯಾಪಾರ ಆರಂಭಿಸುವಿರಿ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಂದು

ಕುಂಭ

ದುಡುಕಿನ ಮಾತಿನಿಂದ ಸಂಗಾತಿಯ ಮನಸ್ಸಿಗೆ ಬೇಸರ ಮಾಡುವಿರಿ. ಕುಟುಂಬದಲ್ಲಿ ಬೇಸರದ ವಾತಾವರಣವಿರುತ್ತದೆ. ಮುಖ್ಯವಾದ ಕೆಲಸ ಕಾರ್ಯಗಳು ನಿಧಾನವಾಗಿ ಸಾಗಲಿವೆ. ಹಣಕಾಸಿನ ವಿಚಾರಗಳನ್ನು ರಹಸ್ಯವಾಗಿ ಇಡುವಿರಿ. ವ್ಯಾಪಾರ ವ್ಯವಹಾರಗಳ ಆದಾಯ ಹೆಚ್ಚುತ್ತದೆ. ಆಡುವ ಮಾತಿನ ಮೇಲೆ ಗಮನ ಇರಲಿ. ನಿಮ್ಮ ಪ್ರೀತಿ ಆರೈಕೆಯಲ್ಲಿ ಮಕ್ಕಳು ಸಂತೋಷವಾಗಿರುತ್ತಾರೆ. ಸ್ವಂತಂತ್ಯ್ರ ಜೀವನ ಇಷ್ಟಪಡುತ್ತಾರೆ. ವಿದ್ಯಾರ್ಥಿಗಳ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಅನಾವಶ್ಯಕವಾಗಿ ಶಾಂತಿ ಕದಡುವ ಕೆಲಸವೊಂದು ನಡೆಯುತ್ತದೆ. ಪೋಷಕರ ಸಹಾಯದಿಂದ ಮಕ್ಕಳಿಗೆ ಹೊಸ ಭವಿಷ್ಯ ದೊರೆಯುತ್ತದೆ. ಆಧ್ಯಾತ್ಮಿಕ ನೆಲೆಗಟ್ಟಿನಲ್ಲಿ ಜೀವನ ನಡೆಸುವಿರಿ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ತಿಳಿ ಹಸಿರು

ಮೀನ

ಆತ್ಮೀಯರ ಕೆಲಸ ಕಾರ್ಯದಲ್ಲಿ ಕೈಗೂಡಿಸುವಿರಿ. ಕುಟುಂಬದ ಬಹುನಿರೀಕ್ಷೆಯ ಕೆಲಸವೊಂದು ನೆರವೇರುತ್ತದೆ. ಕುಟುಂಬದ ಹಿರಿಯರಿಂದ ಹಣದ ಸಹಾಯ ದೊರೆಯುತ್ತದೆ. ಉದ್ಯೋಗದಲ್ಲಿ ಬುದ್ಧಿವಂತಿಕೆಯಿಂದ ನಿಮ್ಮ ಕೆಲಸ ಸಾಧಿಸುವಿರಿ. ದಾಂಪತ್ಯದಲ್ಲಿ ಇದ್ದ ಮನಸ್ತಾಪ ಬಗೆಹರಿಯುತ್ತದೆ. ನೆರೆಹೊರೆಯವರ ಜೊತೆ ಉತ್ತಮ ಬಾಂಧವ್ಯ ಮೂಡುತ್ತದೆ. ಅವಿವಾಹಿತರಿಗೆ ವಿವಾಹ ನಿಶ್ಚಯ ಆಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಸರ್ವಾಧಿಕಾರಿಯ ಧೋರಣೆ ತೋರುವಿರಿ. ಅನಾರೋಗ್ಯದ ತೊಂದರೆಯನ್ನು ಎದುರಿಸುವಿರಿ. ಆತಂತಕ ಪರಿಸ್ಥಿತಿಯಲ್ಲಿಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮನಸ್ಸಿನಿಂದ ಅಭ್ಯಾಸದಲ್ಲಿ ನಿರತರಾಗುತ್ತಾರೆ. ಹೊಸ ಮನೆಯನ್ನು ಕೊಳ್ಳುವ ನಿರ್ಧಾರ ಮಾಡುವಿರಿ. ಸಭೆ ಸಮಾರಂಭದಿಂದ ದೂರ ಉಳಿಯುವಿರಿ.

ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿ ದಾರದಲ್ಲಿ ಕಟ್ಟಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.