ಮತ್ತೊಬ್ಬರ ತಪ್ಪಿಗೆ ನೀವು ಶಿಕ್ಷೆ ಅನುಭವಿಸಬೇಕಾಗಬಹುದು, ವಿಶ್ರಾಂತಿ ಇರದ ದುಡಿಮೆಯಿಂದ ನಿಶ್ಯಕ್ತಿ ಕಾಡಲಿದೆ; ಜೂ 23ರ ರಾಶಿಫಲ
ಜೂನ್ 23ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (23rd June 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(23rd June 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಭಾನುವಾರ
ತಿಥಿ : ಬಿದಿಗೆ ರಾತ್ರಿ 04.17ರವರೆಗು ಇದ್ದು ಆನಂತರ ತದಿಗೆ ಆರಂಭವಾಗುತ್ತದೆ.
ನಕ್ಷತ್ರ : ಪೂರ್ವಾಷಾಢ ನಕ್ಷತ್ರವು 06.11 ರವರೆಗೆ ಇದ್ದು ಆನಂತರ ಉತ್ತರಾಷಾಢ ನಕ್ಷತ್ರ ಆರಂಭವಾಗಲಿದೆ.
ಸೂರ್ಯೋದಯ: ಬೆಳಗ್ಗೆ 05.53
ಸೂರ್ಯಾಸ್ತ: ಸಂಜೆ 06.48
ರಾಹುಕಾಲ: ಸಂಜೆ 05.13 ರಿಂದ 06.50
ರಾಶಿಫಲ
ಧನಸ್ಸು
ಉತ್ತಮ ಕಲ್ಪನಾ ಶಕ್ತಿಯು ಕುಟುಂಬದ ಸಮಸ್ಯೆಗಳನ್ನು ಬಗೆಹರಿಸುತ್ತದೆ. ಧಾರ್ಮಿಕ ವಿಚಾರಗಳನ್ನು ತಿಳಿಯಲು ಪ್ರಯತ್ನಿಸುವಿರಿ. ನಿಮ್ಮಲ್ಲಿರುವ ಸನ್ನಡತೆಯಿಂದ ಎಲ್ಲರ ಮನಸ್ಸನ್ನು ಗೆಲ್ಲುವಿರಿ. ಸಮಾಜದಲ್ಲಿ ವಿಶಿಷ್ಟ ಸ್ಥಾನವನ್ನು ಪಡೆಯುವಿರಿ. ನೀವಾಗಿಯೇ ಕಷ್ಟದಲ್ಲಿರುವವರಿಗೆ ನೆರವಾಗುವಿರಿ. ಆರಂಭಿಸಿದ ಪ್ರತಿಯೊಂದು ಕೆಲಸದಲ್ಲಿಯೂ ಯಶಸ್ಸು ದೊರೆಯುತ್ತದೆ. ಬೇರೊಬ್ಬರ ಅಧೀನದಲ್ಲಿ ಕೆಲಸ ನಿರ್ವಹಿಸಲು ಇಷ್ಟಪಡುವುದಿಲ್ಲ. ನಿಮಗೆ ಬೇಗನೆ ಕೋಪ ಬರುತ್ತದೆ. ಆದರೆ ನೀವಾಗಿಯೇ ಸಮಾಧಾನಗೊಳ್ಳುವಿರಿ. ನಿಮ್ಮ ನೇರವಾದ ನಡೆ ನುಡಿ ಕೆಲವರಲ್ಲಿ ಬೇಸರವನ್ನು ಮೂಡಿಸುತ್ತದೆ. ತಪ್ಪು ನಿರ್ಧಾರಗಳನ್ನು ಕೈಗೊಳ್ಳುವುದಿಲ್ಲ. ಉತ್ತಮ ವರಮಾನದಿಂದ ಸಂತೋಷಗೊಳ್ಳುವಿರಿ.
ಪರಿಹಾರ : ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಎಲೆ ಹಸಿರು
ಮಕರ
ಆತ್ಮೀಯರಿಂದ ಸಹಾಯ ದೊರೆಯುತ್ತದೆ. ನಿಮ್ಮದಲ್ಲದ ತಪ್ಪಿಗೆ ಅಪವಾದ ಒಂದು ಬರುತ್ತದೆ. ನಿಮ್ಮ ಉನ್ನತಿಯನ್ನು ಕಂಡು ತೊಂದರೆ ನೀಡುವ ಜನರಿರುತ್ತಾರೆ. ಹಳೆಯ ಗೆಳೆಯರೊಬ್ಬರನ್ನು ಭೇಟಿ ಮಾಡುವಿರಿ. ಶಾಂತಿ ಸಂಯಮದಿಂದ ಇದ್ದಷ್ಟು ನಿಮಗೆ ಒಳ್ಳೆಯದು. ನೀವಾಗಿಯೇ ದೊಡ್ಡ ಜವಾಬ್ದಾರಿಗಳನ್ನು ವಹಿಸಿಕೊಂಡು ತೊಂದರೆಗೆ ಸಿಲುಕುವಿರಿ. ಕಣ್ಣಿನ ತೊಂದರೆ ಉಂಟಾಗುತ್ತದೆ. ಹೃದಯಕ್ಕೆ ಸಂಬಂಧಪಟ್ಟ ತೊಂದರೆ ಇದ್ದವರು ಎಚ್ಚರಿಕೆಯಿಂದ ಇರಬೇಕು. ಉಷ್ಣದ ಪದಾರ್ಥಗಳನ್ನು ಸೇವಿಸದಿರಿ. ನಿಮಗೆ ಇಷ್ಟವಾದ ವಸ್ತುವೊಂದು ಕಳೆದು ಹೋಗಬಹುದು. ಸ್ವಂತ ಬಳಕೆಗಾಗಿ ವಾಹನವೊಂದನ್ನು ಕೊಳ್ಳುವಿರಿ. ದಂಪತಿ ನಡುವೆ ಪರಸ್ಪರ ಮನಸ್ತಾಪ ಇರುತ್ತದೆ.
ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕೇಸರಿ
ಕುಂಭ
ಕುಟುಂಬದಲ್ಲಿರುವ ಒಗ್ಗಟ್ಟನ್ನು ಕಾಪಾಡಲು ಪ್ರಯತ್ನಿಸುವಿರಿ. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಹೆಚ್ಚಿನ ಶ್ರದ್ಧೆ ತೋರಿಸುತ್ತಾರೆ. ಅನಿರೀಕ್ಷಿತ ವರಮಾನದಿಂದ ಕುಟುಂಬದಲ್ಲಿ ಸಂಭ್ರಮದ ವಾತಾವರಣವಿರುತ್ತದೆ. ಉದ್ಯೋಗದಲ್ಲಿ ಉತ್ತಮ ಮುನ್ನಡೆ ಕಾಣುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಯಾವುದೇ ತೊಂದರೆಗಳಿರುವುದಿಲ್ಲ. ಆದರೆ ಪಾಲುಗಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಅಡಚಣೆ ಉಂಟಾಗುತ್ತವೆ. ದಾನ ಧರ್ಮದಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವ ಅವಕಾಶ ದೊರೆಯುತ್ತದೆ. ಚಿಕ್ಕ ಮಕ್ಕಳನ್ನು ನಾಚಿಸುವ ಉತ್ಸಾಹ ನಿಮ್ಮಲ್ಲಿರುತ್ತದೆ. ಬಿಡುವಿಲ್ಲದ ಕಾರ್ಯಕ್ರಮಗಳು ದೈಹಿಕವಾಗಿ ಸೊರಗಲು ಕಾರಣವಾಗುತ್ತದೆ. ಆದರೆ ಯಾವುದೇ ವಿಚಾರಗಳಲ್ಲಿ ದೃಢವಾದ ನಿಲುವನ್ನು ತಡೆಯಲು ವಿಫಲರಾಗುವಿರಿ.
ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ 4
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಮೀನ
ಸೋತಾಗ ಹೆದರದೆ ಗೆಲುವಿಗಾಗಿ ಸತತ ಪ್ರಯತ್ನ ಮಾಡುವಿರಿ. ನಿಮ್ಮಲ್ಲಿರುವ ಸಹನೆಯ ಗುಣಕ್ಕೆ ಎಲ್ಲರ ಪ್ರಶಂಸೆ ದೊರೆಯುತ್ತದೆ. ಹಗಲುಗನಸು ಕಾಣುವಿರಿ. ಸದಾ ಮನದಲ್ಲಿ ಧನಾತ್ಮಕ ಚಿಂತನೆಗಳು ಇರುತ್ತವೆ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಜೀವನದಲ್ಲಿ ಯಾವುದಾದರೊಂದು ಏರುಪೇರು ಇದ್ದೇ ಇರುತ್ತದೆ. ಬೇರೆಯವರ ಸಹಾಯ ಸಹಕಾರ ದೊರೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆತಾಗ ಕುಟುಂಬದವರ ಪ್ರೋತ್ಸಾಹ ಮತ್ತು ಮೆಚ್ಚುಗೆ ದೊರೆಯುತ್ತದೆ. ಇದರಿಂದ ನಿಮ್ಮ ಆತ್ಮಸ್ಥೈರ್ಯ ಹೆಚ್ಚಲಿದೆ. ಕೋಪ ಬೇಗನೆ ಬಂದರೂ ತಪ್ಪು ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಅನಾವಶ್ಯಕವಾಗಿ ಯಾರನ್ನು ನಿಂದಿಸುವುದಿಲ್ಲ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ.
ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ 7
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಕೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ