Horoscope Today: ವಿದ್ಯಾರ್ಥಿಗಳಿಂದ ನಿರೀಕ್ಷೆಗೂ ಮೀರಿದ ಸಾಧನೆ, ಹೆಚ್ಚಿನ ಅಧ್ಯಯನಕ್ಕಾಗಿ ದೂರದ ಸ್ಥಳಕ್ಕೆ ಪ್ರಯಾಣ: ಏ. 24ರ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವಿದ್ಯಾರ್ಥಿಗಳಿಂದ ನಿರೀಕ್ಷೆಗೂ ಮೀರಿದ ಸಾಧನೆ, ಹೆಚ್ಚಿನ ಅಧ್ಯಯನಕ್ಕಾಗಿ ದೂರದ ಸ್ಥಳಕ್ಕೆ ಪ್ರಯಾಣ: ಏ. 24ರ ದಿನ ಭವಿಷ್ಯ

Horoscope Today: ವಿದ್ಯಾರ್ಥಿಗಳಿಂದ ನಿರೀಕ್ಷೆಗೂ ಮೀರಿದ ಸಾಧನೆ, ಹೆಚ್ಚಿನ ಅಧ್ಯಯನಕ್ಕಾಗಿ ದೂರದ ಸ್ಥಳಕ್ಕೆ ಪ್ರಯಾಣ: ಏ. 24ರ ದಿನ ಭವಿಷ್ಯ

24 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (24 April 2024 Daily Horoscope).

ಏ. 24ರ ದಿನ ಭವಿಷ್ಯ
ಏ. 24ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (24 April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ : ಪಾಡ್ಯ ಬೆಳಗ್ಗೆ5.16 ರವರೆಗೂ ಇದ್ದು ನಂತರ ಬಿದಿಗೆ ಆರಂಭವಾಗುತ್ತದೆ.

ನಕ್ಷತ್ರ: ಸ್ವಾತಿ ನಕ್ಷತ್ರವು ರಾತ್ರಿ 11.31 ರವರೆಗು ಇದ್ದು ನಂತರ ವಿಶಾಖ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.03

ಸೂರ್ಯಾಸ್ತ: ಸಂಜೆ 06.32

ರಾಹುಕಾಲ: ಮಧ್ಯಾಹ್ನ 12.22 ರಿಂದ 01.56

ರಾಶಿಫಲ

ಸಿಂಹ

ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ಕೈಕಾಲುಗಳಲ್ಲಿ ನೋವಿರುತ್ತದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಹಣಕಾಸಿನ ವ್ಯವಹಾರಗಳಲ್ಲಿ ತಪ್ಪು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಸಂಗಾತಿಯ ಒಡನಾಟದಿಂದ ನೋವನ್ನು ಮರೆಯುವಿರಿ. ಉದ್ಯೋಗದಲ್ಲಿ ಎದುರಾಗುವ ವಿರೋಧವನ್ನು ದಿಟ್ಟತನದಿಂದ ಎದುರಿಸುವಿರಿ. ಸ್ತ್ರೀಯರಿಗೆ ವಿಶೇಷ ಫಲ ದೊರೆಯಲಿವೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ಕುಟುಂಬದಲ್ಲಿ ಪರಸ್ಪರ ಅಸಹಕಾರ ಮನೋಭಾವನೆ ಇರಲಿದೆ. ವಿಶ್ರಾಂತಿ ಪಡೆಯಿರಿ. ಧೈರ್ಯದಿಂದ ಹೊಸ ಹಣಕಾಸಿನ ವ್ಯವಹಾರವನ್ನು ಆರಂಭಿಸುವಿರಿ. ವಿದ್ಯಾರ್ಥಿಗಳು ನಿರೀಕ್ಷೆಗೂ ಮೀರಿದ ಸಾಧನೆ ಮಾಡಲಿದ್ದಾರೆ. ಹೆಚ್ಚಿನ ಅಧ್ಯಯನಕ್ಕಾಗಿ ದೂರದ ಸ್ಥಳಕ್ಕೆ ತೆರಳುವಿರಿ. ಅಗತ್ಯ ಖರ್ಚು ವೆಚ್ಚಗಳನ್ನು ಕಡಿತಗೊಳಿಸಲು ಪ್ರಯತ್ನಿಸಿ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 5

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ : ಕಪ್ಪು

ಕನ್ಯಾ

ದೈನಂದಿನ ಕೆಲಸ ಕಾರ್ಯಗಳಿಗೆ ನಿಮ್ಮ ಬುದ್ದಿಶಕ್ತಿಯ ಜೊತೆಯಲ್ಲಿ ಉತ್ತಮ ಪ್ರಯತ್ನದ ಅವಶ್ಯಕತೆ ಇರುತ್ತದೆ. ಸಾಧ್ಯವಾದಷ್ಟು ತಾಳ್ಮೆಯಿಂದ ವರ್ತಿಸುವಿರಿ. ಬೇರೆಯವರಿಗೆ ಸಹಾಯ ಮಾಡುವಿರಿ ಆದರೆ ನಿಮ್ಮಲ್ಲಿರುವ ಹಣವನ್ನು ಯಾರಿಗೂ ನೀಡುವುದಿಲ್ಲ. ಕುಟುಂಬದ ಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡರೂ ಹಣಕಾಸಿನ ವಿಚಾರವನ್ನು ಇಷ್ಟಪಡುವುದಿಲ್ಲ. ಮಾನಸಿಕ ಒತ್ತಡವಿಲ್ಲದೆ ಸಂತೋಷದ ಜೀವನ ಇರಲಿದೆ. ಮೊದಲ ಆದ್ಯತೆಯನ್ನು ಸ್ವಂತ ಕೆಲಸ ಕಾರ್ಯಗಳಿಗೆ ನೀಡುವಿರಿ. ಸಂಗಾತಿ ಮತ್ತು ಮಕ್ಕಳನ್ನು ಬಿಟ್ಟು ಬೇರೆ ಯಾರನ್ನು ಸುಲಭವಾಗಿ ನಂಬುವುದಿಲ್ಲ. ಈ ದಿನ ಬಿಡುವೆ ಇಲ್ಲದಂತೆ ಕೆಲಸವನ್ನು ನಿರ್ವಹಿಸಬೇಕಾಗುತ್ತದೆ. ಆಡುವ ಮಾತಿನ ಮೇಲೆ ಹಿಡಿತವಿರುವುದು ಒಳ್ಳೆಯದು.

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ತಿಳಿ ಹಸಿರು

ತುಲಾ

ಅನಿವಾರ್ಯವಾಗಿ ಮಿತಿ ಇಲ್ಲದ ಆಹಾರ ಸೇವನೆ ಅನಾರೋಗ್ಯವನ್ನು ಉಂಟುಮಾಡುತ್ತದೆ. ಆತ್ಮೀಯರಿಗೆ ಬಹುದಿನದ ಹಿಂದೆ ನೀಡಿದ್ದ ಹಣವು ಮರಳಿ ದೊರೆಯುತ್ತದೆ. ಕುಟುಂಬದ ಆಂತರಿಕ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಮಾನಸಿಕ ನೆಮ್ಮದಿ ಇರುವುದಿಲ್ಲ. ಅಪೂರ್ಣವಾಗಿದ್ದ ಸ್ವಂತ ಕೆಲಸ ಕಾರ್ಯಗಳನ್ನು ಪ್ರಯಾಸದಿಂದ ಪೂರ್ಣಗೊಳಿಸುವಿರಿ. ದಾಂಪತ್ಯದಲ್ಲಿ ಎದುರಾಗಿದ್ದ ಮನಸ್ತಾಪವು ಕೊನೆಗೊಳ್ಳಲಿದೆ. ಸಣ್ಣ ಪುಟ್ಟ ಕೆಲಸಗಳಾದರೂ ಹೆಚ್ಚಿನ ಶ್ರದ್ಧೆಯಿಂದ ಮಾಡಬೇಕಾಗುತ್ತದೆ. ಮಕ್ಕಳಿಗೆ ಸಂಬಂಧಪಟ್ಟ ವಿಚಾರದಲ್ಲಿ ಯಶಸ್ಸನ್ನು ಗಳಿಸುವಿರಿ. ಅವಿವಾಹಿತರಿಗೆ ವಿವಾಹದ ಮಾತುಕತೆ ನಡೆಯಲಿದೆ. ಮಕ್ಕಳ ಜೊತೆ ಹೆಚ್ಚಿನ ವೇಳೆ ಕಳೆಯಲು ನಿರ್ಧರಿಸುವಿರಿ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು ಈಶಾನ್ಯ

ಅದೃಷ್ಟದ ಬಣ್ಣ: ನಸುಗೆಂಪು

ವೃಶ್ಚಿಕ

ದೈಹಿಕ ವ್ಯಾಯಾಮದಿಂದಾಗಿ ದೈಹಿಕ ಸದೃಢತೆಯನ್ನು ಪಡೆಯುವಿರಿ. ಮಕ್ಕಳು ನಿಮ್ಮ ಮಾರ್ಗದರ್ಶನದಲ್ಲಿ ನಡೆದು ಯಶಸ್ಸನ್ನು ಗಳಿಸುತ್ತಾರೆ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಮೊದಲ ಸ್ಥಾನದಲ್ಲಿ ಇರಲಿದ್ದಾರೆ. ಆತ್ಮೀಯರಿಂದ ಹಣಕಾಸಿನ ತೊಂದರೆಯು ಪರಿಹಾರಗೊಳ್ಳಲಿದೆ. ಕೋಪದ ಗುಣವನ್ನು ತೊರೆದಲ್ಲಿ ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ. ತಪ್ಪು ಮಾಡಿದವರನ್ನು ಕ್ಷಮಿಸುವುದಿಲ್ಲ. ನಿಮ್ಮ ಮನಸ್ಸಿಗೆ ಸರಿ ಎನಿಸಿದಂತಹ ಕೆಲಸಗಳನ್ನಷ್ಟೇ ಮಾಡುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಮ್ಮೆಲ್ಲ ಅಭಿಪ್ರಾಯಗಳನ್ನು ಹಂಚಿಕೊಳ್ಳುವಿರಿ. ಅವಶ್ಯಕತೆ ಬಿದ್ದಲ್ಲಿ ನೀವಾಗಿಯೇ ಆತ್ಮೀಯರಲ್ಲಿ ಸಲಹೆ ಸಹಾಯವನ್ನು ಕೋರುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.