Horoscope Today: ಪ್ರತಿಭೆಯ ಮೇಲೆ ಸಂಪೂರ್ಣ ನಂಬಿಕೆ, ಉದ್ಯೋಗದಲ್ಲಿ ತೊಂದರೆ ಇಲ್ಲ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಪ್ರತಿಭೆಯ ಮೇಲೆ ಸಂಪೂರ್ಣ ನಂಬಿಕೆ, ಉದ್ಯೋಗದಲ್ಲಿ ತೊಂದರೆ ಇಲ್ಲ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

Horoscope Today: ಪ್ರತಿಭೆಯ ಮೇಲೆ ಸಂಪೂರ್ಣ ನಂಬಿಕೆ, ಉದ್ಯೋಗದಲ್ಲಿ ತೊಂದರೆ ಇಲ್ಲ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

24 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (24th June 2024 Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಯ ದಿನ ಭವಿಷ್ಯ ತಿಳಿಯಿರಿ
ಮೇಷ, ವೃಷಭ, ಮಿಥುನ, ಕಟಕ ರಾಶಿಯ ದಿನ ಭವಿಷ್ಯ ತಿಳಿಯಿರಿ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (10th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಸೋಮವಾರ

ತಿಥಿ: ತದಿಗೆ ರಾತ್ರಿ 02.44ರವರೆಗು ಇದ್ದು, ಆನಂತರ ಚೌತಿ ಆರಂಭವಾಗುತ್ತದೆ.

ನಕ್ಷತ್ರ : ಉತ್ತರಾಷಾಡ ನಕ್ಷತ್ರವು ಸಂಜೆ 05.35 ರವರೆಗೆ ಇದ್ದು, ಆನಂತರ ಶ್ರವಣ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳ್ಗೆ 05.54

ಸೂರ್ಯಾಸ್ತ: ಸಂಜೆ 06.48

ರಾಹುಕಾಲ : ಬೆಳಗ್ಗೆ 07.37 ರಿಂದ ಬೆ.09.13

ಮೇಷ ರಾಶಿ

ನಿಮ್ಮಲ್ಲಿರುವ ಧೈರ್ಯ ಸಾಹಸದ ಗುಣ ಒಳ್ಳೆಯದು. ಆದರೆ ಹಠದಿಂದ ಕುಟುಂಬದವರ ಅವ ಕೃಪೆಗೆ ಗುರಿಯಾಗುವಿರಿ. ಸದಾ ನಿಮ್ಮಲ್ಲಿ ಉತ್ಸಾಹ ಮತ್ತು ಲವಲವಿಕೆ ಕಂಡುಬರುತ್ತದೆ. ಅನಾವಶ್ಯಕವಾಗಿ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡುವುದಿಲ್ಲ. ಉತ್ಸಾಹದಿಂದ ಬೇರೆಯವರ ಜವಾಬ್ದಾರಿಯನ್ನೂ ನಿರ್ವಹಿಸುತ್ತಾರೆ. ನಿಮ್ಮಲ್ಲಿರುವ ಗುಟ್ಟನ್ನು ಉಳಿಸಿಕೊಳ್ಳಲು ವಿಫಲರಾಗುವಿರಿ. ನಿಮ್ಮನ್ನು ನಂಬಿ ಬಂದವರಿಗೆ ಮೋಸ ಮಾಡದೆ ಸಹಾಯ ಮಾಡುವಿರಿ. ದಾನ ಧರ್ಮದ ಕಾರ್ಯದಲ್ಲಿ ನಿರತರಾಗುವಿರಿ. ಎಲ್ಲರನ್ನು ಸೋದರ ಪ್ರೇಮದಿಂದ ಕಾಣುವಿರಿ. ಆದರೆ ನಿಮ್ಮ ಮನಸ್ಸನ್ನು ಅರ್ಥ ಮಾಡಿಕೊಳ್ಳುವವರು ಬಲು ಕಡಿಮೆ.

ಪರಿಹಾರ: ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ವೃಷಭ ರಾಶಿ

ನಿಮ್ಮಲ್ಲಿ ವಿಶೇಷವಾಗಿ ಸಹನೆ ಮತ್ತು ನಾಯಕತ್ವದ ಗುಣಗಳಿವೆ. ಆದರೆ ಸಮಯವನ್ನು ಅರ್ಥಮಾಡಿಕೊಳ್ಳದೆ ಎಲ್ಲರೊಡನೆ ನಿಷ್ಟೂರವಾಗಿ ನಡೆದುಕೊಳ್ಳುವಿರಿ. ಇದರಿಂದ ಅನಾವಶ್ಯಕ ವಾದ ವಿವಾದಗಳು ಉಂಟಾಗುತ್ತವೆ. ಅನಾರೋಗ್ಯವಿರುತ್ತದೆ. ಮನದಲ್ಲಿ ಸದಾ ಕಾಲ ಆಗಬೇಕಾದ ಕೆಲಸ ಕಾರ್ಯಗಳ ಬಗ್ಗೆ ಚಿಂತೆ ಇರುತ್ತದೆ. ಕರುಳಿನ ತೊಂದರೆ ನಿಮ್ಮನ್ನು ಬಾಧಿಸಬಹುದು. ನಿಮ್ಮ ಆಪ್ತ ಸ್ನೇಹಿತರಿಂದಲೇ ನಿಮ್ಮ ಕೆಲಸ ಕಾರ್ಯಗಳಿಗೆ ತೊಡಕು ಉಂಟಾಗುತ್ತದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡು ಬರುವುದಿಲ್ಲ.

ಪರಿಹಾರ: ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಮಿಥುನ ರಾಶಿ

ಪ್ರಾಣಿಗಳಿಂದ ಹಾನಿ ಇದೆ ಎಚ್ಚರಿಕೆ ಇರಲಿ. ಮೂತ್ರದ ಸೋಂಕು ನಿಮ್ಮನ್ನು ಬಧಿಸಲಿದೆ. ಬಂಧು-ಬಳಗದವರೊಬ್ಬರಿಂದ ನಿಮ್ಮ ಪ್ರಗತಿಗೆ ಅಡಚಣೆ ಉಂಟಾಗುತ್ತದೆ. ಸಮಾಜದ ಶ್ರೇಷ್ಠ ಪದವಿ ಪುರಸ್ಕಾರ ನಿಮಗೆ ದೊರೆಯಲಿದೆ. ಕುಟುಂಬದಲ್ಲಿ ಪರಸ್ಪರ ಬೇಧ ಭಾವದ ವಾತಾವರಣ ಉಂಟಾಗುತ್ತದೆ. ಸಂಬಂಧಿಕರ ಜೊತೆಯಲ್ಲಿ ನಡೆಯಬೇಕಾದ ವಿವಾಹವು ಮುಂದೂಡಲ್ಪಡುತ್ತದೆ. ಹೊಸ ವಾಹನವನ್ನು ಕೊಳ್ಳುವಿರಿ. ಆದಾಯದ ಮಿತಿಗಿಂತಲೂ ಹೆಚ್ಚಿನ ಖರ್ಚು ವೆಚ್ಚ ತಲೆದೋರುತ್ತದೆ. ಹಣದ ಕೊರತೆ ಉಂಟಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಯಾರನ್ನೂ ನಂಬುವುದಿಲ್ಲ. ಪ್ರವಾಸವೆಂದರೆ ಬಲು ಇಷ್ಟ ಆದರೆ ಪ್ರಯಾಣ ಮಾಡಲು ಸಾಧ್ಯವಾಗುವುದಿಲ್ಲ.

ಪರಿಹಾರ: ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 11

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಕಟಕ ರಾಶಿ

ನಿಮ್ಮ ಚುರುಕುತನವನ್ನು ಮೆಚ್ಚಿ ಸ್ನೇಹಿತರೊಬ್ಬರು ಸಹಾಯ ಮಾಡುತ್ತಾರೆ. ನಿಮ್ಮ ಜೀವನದಲ್ಲಿ ಪ್ರಮುಖ ಬದಲಾವಣೆಗಳು ಕಾಣಲಿವೆ. ನಿಮ್ಮಲ್ಲಿನ ಜಾಣ್ಮೆಯ ನಡೆ ನುಡಿ ಜೀವನದಲ್ಲಿ ಉತ್ತಮ ಫಲಿತಾಂಶವನ್ನು ನೀಡುತ್ತದೆ. ಎದುರಾಗುವ ಅಡೆತಡೆಗಳನ್ನು ನಿವಾರಿಸಿ ಜೀವನದಲ್ಲಿ ಉನ್ನತಿ ಗಳಿಸುವಿರಿ. ಮೊದಲು ಫಲಿತಾಂಶದ ಬಗ್ಗೆ ಯೋಚಿಸಿ ನಂತರ ನಿಮ್ಮ ಕೆಲಸ ಕಾರ್ಯಗಳನ್ನು ಆರಂಭಿಸುವಿರಿ. ಯಾರ ಸಹಾಯವನ್ನು ಬಯಸುವುದಿಲ್ಲ. ನಿಮ್ಮ ಸ್ವಂತ ಸಾಮರ್ಥ್ಯ ಮತ್ತು ಪ್ರತಿಭೆಯ ಮೇಲೆ ಸಂಪೂರ್ಣ ನಂಬಿಕೆ ಇರುತ್ತದೆ. ಸ್ತ್ರೀಯರಾಗಲಿ ಪುರುಷರಾಗಲಿ ಅಲಂಕಾರಕ್ಕೆ ವೇಳೆಯನ್ನು ಮೀಸಲಿಡುತ್ತಾರೆ. ಹೊಸ ವಿಚಾರಗಳನ್ನು ಕಲಿಯಬೇಕೆಂಬ ಮನಸಿರುತ್ತದೆ.

ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ನೀಲಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.