ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ದೂರದ ಊರಿನಲ್ಲಿ ಆಸ್ತಿ ಕೊಳ್ಳುವಿರಿ, ಗಣ್ಯ ವ್ಯಕ್ತಿಗಳ ಪರಿಚಯವಾಗಲಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Horoscope Today: ದೂರದ ಊರಿನಲ್ಲಿ ಆಸ್ತಿ ಕೊಳ್ಳುವಿರಿ, ಗಣ್ಯ ವ್ಯಕ್ತಿಗಳ ಪರಿಚಯವಾಗಲಿದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

26th ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (26th April 2024 Daily Horoscope).

 ಮೇಷ, ವೃಷಭ, ಮಿಥುನ, ಕಟಕ, ರಾಶಿಯವರ ದಿನ ಭವಿಷ್ಯ
ಮೇಷ, ವೃಷಭ, ಮಿಥುನ, ಕಟಕ, ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (26th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ: ದಿನಪೂರ್ತಿ ತದಿಗೆ ಇರುತ್ತದೆ.

ನಕ್ಷತ್ರ : ಅನೂರಾಧ ನಕ್ಷತ್ರವು ರಾತ್ರಿ 02.02 ರವರೆಗೂ ಇದ್ದು ನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.57

ಸೂರ್ಯಾಸ್ತ: ಸಂಜೆ 06.32

ರಾಹುಕಾಲ: ಬೆಳಗ್ಗೆ 10.47 ರಿಂದ ಮಧ್ಯಾಹ್ನ 12.21ವರೆಗೆ

ರಾಶಿಫಲ

ಮೇಷ

ಮಾಡುವುದೆಲ್ಲಾ ಸರಿ ಎಂಬ ಮನೋಭಾವನೆಯಿಂದ ಮುಂದುವರೆಯುವಿರಿ. ಒಲುಮೆಯ ಮಾತಿನಿಂದ ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ. ಉದ್ಯೋಗದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಕಷ್ಟ ಎನಿಸುವ ವಿಚಾರವನ್ನು ಸುಲಭವಾಗಿ ಅರ್ಥೈಸಿಕೊಳ್ಳುವಿರಿ. ವಾದ ವಿವಾದಗಳನ್ನು ಸುಲಭವಾಗಿ ಗೆಲ್ಲುವಿರಿ. ಹಾಡುಗಾರರು ಮತ್ತು ಬರಹಗಾರರಿಗೆ ಸಂತೋಷದ ದಿನವಾಗಲಿದೆ. ಹಣಕಾಸಿನ ಸಂಸ್ಥೆಯನ್ನು ನಿರ್ವಹಣೆಯಲ್ಲಿ ಸಹನೆಯಿಂದ ವ್ಯವಹರಿಸಬೇಕು. ಬಹು ದಿನಗಳಿಂದ ಇದ್ದ ಮನದ ಚಿಂತೆ ದೂರವಾಗುತ್ತದೆ. ವ್ಯಾಪಾರ ವ್ಯವಹಾರಗಳು ಸುಗಮವಾಗಿ ನಡೆಯುತ್ತವೆ. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಸಂತೃಪ್ತಿ ಇರುವುದಿಲ್ಲ. ಚಿಕ್ಕ ವಯಸ್ಸಿನ ಮಕ್ಕಳಿಗೆ ಅನಾರೋಗ್ಯ ಉಂಟಾಗಲಿವೆ. ತಡವಾದರೂ ನಿಮ್ಮ ಆಸೆಗಳು ನೆರವೇರಲಿವೆ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ವೃಷಭ

ಖರ್ಚು ವೆಚ್ಚಗಳು ಹೆಚ್ಚಾದರೂ ಹೆದರುವುದಿಲ್ಲ. ಕುಟುಂಬದವರ ವಿರೋಧದ ಹೊರತಾಗಿಯೂ ಹಣಕಾಸಿನ ವ್ಯವಹಾರವನ್ನು ಆರಂಭಿಸುವಿರಿ. ಏಕಾಂಗಿತನ ನಿಮ್ಮನ್ನು ಕಾಡುತ್ತದೆ. ಜನೋಪಕಾರಿ ಕಾರ್ಯವೊಂದನ್ನು ಆರಂಭಿಸುವಿರಿ. ಉದ್ಯೋಗದಲ್ಲಿನ ಬದಲಾವಣೆಗಳಿಂದ ಯಾವುದೇ ತೊಂದರೆ ಇರದು. ಅನಾವಶ್ಯಕವಾಗಿ ಬೇರೆಯವರ ಹಣದ ವ್ಯವಹಾರಗಳ ಮಧ್ಯೆ ಭಾಗಿಯಾಗದಿರಿ. ವಿದ್ಯಾರ್ಥಿಗಳು ಗೆಲುವಿನ ಹುಮ್ಮಸ್ಸಿನಿಂದ ಬದುಕುತ್ತಾರೆ. ಉನ್ನತ ವಿದ್ಯಾಭ್ಯಾಸದ ಅವಕಾಶ ನಿಮ್ಮದಾಗಿರುತ್ತದೆ. ದೂರದ ಸ್ಥಳದಲ್ಲಿ ಸ್ಥಿರಾಸ್ತಿ ಕೊಳ್ಳುವಿರಿ. ಗಂಟಲನೋವಿನಿಂದ ಬಳಲುವಿರಿ. ಸ್ವಂತ ಕೆಲಸದಲ್ಲಿ ಗಣ್ಯವ್ಯಕ್ತಿಯೊಬ್ಬರ ಸಹಾಯ ದೊರೆಯುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 2

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ಕೆಂಪು

ಮಿಥುನ

ಸ್ಥಿರವಾದ ಮನಸ್ಸಿರುವುದಿಲ್ಲ. ವ್ಯಾಪಾರ ವ್ಯವಹಾರದಲ್ಲಿ ವಿಶೇಷ ಲಾಭವಿದೆ. ಸೋದರನ ಸಹಾಯ ನಿಮ್ಮ ಜವಾಬ್ದಾರಿಯನ್ನು ಕಡಿಮೆ ಮಾಡುತ್ತದೆ. ಬುದ್ಧಿವಂತಿಕೆಯ ಮಾತಿನಲ್ಲಿ ಎಲ್ಲರನ್ನೂ ಗೆಲ್ಲುವಿರಿ. ನಿಮ್ಮ ಹೆಸರಿನಲ್ಲಿನ ಜಮೀನನ್ನು ಮಾರಾಟ ಮಾಡಿ ಮನೆಯನ್ನು ನವೀಕರಿಸುವಿರಿ. ವಿದ್ಯಾಭ್ಯಾಸದಲ್ಲಿನ ತೊಂದರೆ ನಿವಾರಣೆ ಆಗುವುದು. ವೃತ್ತಿಯಲ್ಲಿ ಅನುಕೂಲಕರ ಬದಲಾವಣೆ ಕಂಡುಬರುತ್ತದೆ. ಮನೆಯಲ್ಲಿ ವಿವಾಹದ ಮಾತುಕತೆ ನಡೆಯುತ್ತದೆ. ಮನದಲ್ಲಿ ಒಂದು ರೀತಿಯ ಆತಂಕ ಇರುತ್ತದೆ. ಪ್ರಸಕ್ತ ಸನ್ನಿವೇಶಕ್ಕೆ ಹೊಂದುಕೊಂಡು ಹೋಗುವಿರಿ. ಆದುನಿಕ ತಂತ್ರಜ್ಞಾನದ ಬಗ್ಗೆ ಅಧ್ಯಯನ ಮಾಡುವಿರಿ. ಮನೆಯ ಮಕ್ಕಳಿಗೆ ಸಂತೋಷದ ಸನ್ನಿವೇಶ ಕಲ್ಪಿಸುವಿರಿ. ತಪ್ಪನ್ನು ಖಂಡಿಸುವ ಕಾರಣ ವಿರೋಧಿಗಳು ಹೆಚ್ಚುತ್ತಾರೆ.

ಪರಿಹಾರ : ತಾಯಿಯ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಿತ್ತಳೆ

ಕಟಕ

ಮನೆಯಲ್ಲಿ ದೇವತಾ ಕಾರ್ಯವೊಂದನ್ನು ಮಾಡುವಿರಿ. ಹಣಕಾಸಿನ ಜವಾಬ್ದಾರಿಯನ್ನು ಒಪ್ಪಬೇಕಾಗುತ್ತದೆ. ಪರೋಕ್ಷವಾಗಿ ಸರ್ಕಾರದ ಕೆಲಸದಲ್ಲಿ ಭಾಗಿಯಾಗುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಇರದು. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭವಿರುತ್ತದೆ. ಆತುರದಿಂದ ಯಾವುದೇ ಕೆಲಸವನ್ನು ಮಾಡದಿರಿ. ವಿದ್ಯಾರ್ಥಿಗಳಿಗೆ ಸಂತಸದ ಸುದ್ಧಿಯೊಂದು ದೊರೆಯಲಿದೆ. ವಾಹನ ಚಾಲನೆ ಮಾಡುವಾಗ ಎಚ್ಚರಿಕೆ ಇರಲಿ. ಶೀತದ ಆಹಾರವನ್ನು ಸೇವಿಸದಿರಿ. ಆತ್ಮೀಯರ ಕುಟುಂಬ ಕಲಹವು ನಿಮ್ಮಿಂದ ಬಗೆಹರಿಯಲಿದೆ. ಮನೆಯ ಹಿರಿಯರ ಹಣಕಾಸಿನ ನೆರವಿನಿಂದ ಹಣದ ಕೊರತೆ ಕಡಿಮೆ ಆಗಲಿದೆ. ಮನದ ಬೇಸರ ದೂರವಾಗಿ ಸಂತಸದಿಂದ ಬಾಳುವಿರಿ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).