ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಕಲುಷಿತ ಆಹಾರ ಸೇವನೆಯಿಂದ ಅನಾರೋಗ್ಯ, ಭೂವಿವಾದದಿಂದ ಮನಸ್ಸಿಗೆ ಬೇಸರ; ಏ. 26ರ ರಾಶಿಫಲ

Horoscope Today: ಕಲುಷಿತ ಆಹಾರ ಸೇವನೆಯಿಂದ ಅನಾರೋಗ್ಯ, ಭೂವಿವಾದದಿಂದ ಮನಸ್ಸಿಗೆ ಬೇಸರ; ಏ. 26ರ ರಾಶಿಫಲ

26th ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (26th April 2024 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(26th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ: ದಿನಪೂರ್ತಿ ತದಿಗೆ ಇರುತ್ತದೆ.

ನಕ್ಷತ್ರ : ಅನೂರಾಧ ನಕ್ಷತ್ರವು ರಾತ್ರಿ 02.02 ರವರೆಗೂ ಇದ್ದು ನಂತರ ಜ್ಯೇಷ್ಠ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.57

ಸೂರ್ಯಾಸ್ತ: ಸಂಜೆ 06.32

ರಾಹುಕಾಲ: ಬೆಳಗ್ಗೆ 10.47 ರಿಂದ ಮಧ್ಯಾಹ್ನ 12.21ವರೆಗೆ

ರಾಶಿಫಲ

ಧನಸ್ಸು

ಪ್ರತಿ ಕೆಲಸ ಕಾರ್ಯಗಳಿಗೂ ನಿಮ್ಮ ವಿರೋಧಿಗಳು ಅಡ್ಡಿಮಾಡುತ್ತಾರೆ. ಕೋಪ ಬೇಗನೆ ಬಂದರೂ ತಕ್ಷಣವೇ ಶಾಂತರಾಗುವಿರಿ. ಸ್ಥಿರವಾದ ಮನಸ್ಸು ಇರದು. ವಿದ್ಯಾರ್ಥಿಗಳು ಬುದ್ದಿವಂತಿಕೆಯಿಂದ ಕಲಿಕೆಯಲ್ಲಿ ಮುಂದುವರಿಯುತ್ತಾರೆ. ಕುಟುಂಬದ ಸದಸ್ಯರ ನಡುವೆ ಮನಸ್ತಾಪವಿರುತ್ತದೆ. ನೌಕರ ವೃಂದಕ್ಕೆ ಯಾವುದೇ ತೊಂದರೆ ಇರದು. ಮಾರಾಟ ಪ್ರತಿನಿಧಿಗಳ ಆದಾಯದಲ್ಲಿ ಅಭಿವೃದ್ದಿಯಿರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಲಾಭವಿರುತ್ತದೆ. ಕಲುಷಿತ ಆಹಾರ ಸೇವನೆಯಿಂದ ಅನಾರೋಗ್ಯ ಕಾಡುತ್ತದೆ. ಮನದಲ್ಲಿರುವ ಆಶೋತ್ತರಗಳನ್ನು ಈಡೇರಿಸಿಕೊಳ್ಳಲು ಪ್ರಯತ್ನಿಸುವಿರಿ. ಪಾಲುದಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ. ಕೆಲಸದ ನಡುವೆ ವಿಶ್ರಾಂತಿ ಪಡೆಯಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬೂದು ಬಣ್ಣ

ಮಕರ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವವರು ಎಚ್ಚರಿಕೆ ವಹಿಸಬೇಕು. ಕಾದು ನೋಡುವ ನೀತಿಯಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಚುರುಕುತನದಿಂದ ಕುಟುಂಬದ ಅವಶ್ಯಕತೆಗಳನ್ನು ಪೂರೈಸುವಿರಿ. ಹಿರಿಯರ ಮಾರ್ಗದರ್ಶನದ ಅವಶ್ಯಕತೆ ಇದೆ. ಕಾನೂನಿನ ತೊಂದರೆಯೊಂದು ನಿಮ್ಮನ್ನು ವಿಚಲಿತರನ್ನಾಗಿ ಮಾಡುತ್ತದೆ. ನೋಡಲು ಶಾಂತಿಯಿಂದ ಇದ್ದರೂ ಸಿಟ್ಟು ಬಂದಲ್ಲಿ ಉಗ್ರವಾಗಿ ವರ್ತಿಸುವಿರಿ. ಕುಟುಂಬದಲ್ಲಿ ಘಟನೆಯೊಂದು ನಡೆಯಲಿದೆ. ನಿಷ್ಪಕ್ಷಪಾತಿಗಳಾದ ನಿಮಗೆ ಉದ್ಯೋಗದಲ್ಲಿ ಯಾವುದೆ ತೊಂದರೆ ಬಾರದು. ವ್ಯಾಪಾರದಲ್ಲಿ ಕನಿಕರ ತೋರುವುದರಿಂದ ಕೊಂಚ ನಷ್ಟವಾಗುತ್ತದೆ. ಸಂಚಾರಕ್ಕೆ ಸಂಬಂಧಿಸಿದ ವೃತ್ತಿಯಲ್ಲಿ ಶುಭವಿದೆ.

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಂದು

ಕುಂಭ

ಧಾರ್ಮಿಕ ಕೆಲಸವೊಂದನ್ನು ಮಾಡುವಿರಿ. ಸಂಘ ಸಂಸ್ಥೆಯ ನಾಯಕತ್ವವನ್ನು ವಹಿಸಿಕೊಳ್ಳುವಿರಿ. ಸಮಾಜದಲ್ಲಿ ಉನ್ನತ ಸ್ಥಾನ ದೊರೆಯುತ್ತದೆ. ಕುಟುಂಬಕ್ಕಾಗಿ ಯಾವುದೇ ತ್ಯಾಗಕ್ಕೆ ಸಿದ್ದರಾಗುವಿರಿ. ಕೃಷಿ ಕಾರ್ಯದಲ್ಲಿ ಆಸಕ್ತಿ ಮೂಡುತ್ತದೆ. ಬೃಹತ್ ಯಂತ್ರಗಳ ತಂತ್ರಜ್ಞಾನದಲ್ಲಿ ಪರಿಣಿತಿ ಪಡೆಯುವಿರಿ. ಸುಲಭವಾಗಿ ನೀವು ಯಾರನ್ನೂ ನಂಬುವುದಿಲ್ಲ. ನೌಕರರಿಗೆ ಶುಭವಿದೆ. ವ್ಯಾಪಾರದಲ್ಲಿ ನಷ್ಟವಾಗುವುದಿಲ್ಲ. ನಿಮ್ಮ ಸೋದರ ಅಥವ ಸೋದರಿಯ ದಾಂಪತ್ಯ ಕಲಹ ಸುಖಾಂತ್ಯ ಹೊಂದುತ್ತದೆ. ಅನಿವಾರ್ಯವಾಗಿ ಆತ್ಮೀಯರಿಂದ ಹಣವನ್ನು ಪಡೆಯುವಿರಿ. ಭೂವಿವಾದವೊಂದು ನೆಮ್ಮದಿಯನ್ನು ಕದಡುತ್ತದೆ.

ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ತಿಳಿ ಹಸಿರು

ಮೀನ

ನಿರಾಸೆಯ ಮನಸ್ಥತಿ ನಿಮ್ಮನ್ನು ಕಾಡಬಹುದು. ಸಂಗೀತ ಕಲೆಯ ಅಭ್ಯಾಸದಲ್ಲಿ ತೊಡಗುವಿರಿ. ನಿಮ್ಮಲ್ಲಿರುವ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವಿರಿ. ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದುವ ಮುನ್ನವೇ ಉದ್ಯೋಗ ದೊರೆಯುತ್ತದೆ, ಪರೋಪಕಾರಿಗಳಾದ ನಿಮಗೆ ಗಣ್ಯವ್ಯಕ್ತಿಗಳ ಆಶ್ರಯ ದೊರೆಯುತ್ತದೆ. ಸಂತೋಷವನ್ನಷ್ಟೇ ಹಂಚುವ ನೀವು ನೋವನ್ನು ಮರೆಯಲು ಪ್ರವ್ಯತ್ನಿಸುವಿರಿ. ಅನಾವಶ್ಯಕ ಚಿಂತೆಯೊಂದು ನಿಮ್ಮನ್ನು ಭಾದಿಸುತ್ತದೆ. ಹೊಸ ಮನೆಯನ್ನು ಕೊಳ್ಳುವ ಬಗ್ಗೆ ಮನೆಯಲ್ಲಿ ಮಾತುಕತೆ ನಡೆಯಲಿದೆ. ಉದ್ಯೋಗದಲ್ಲಿ ಪರಸ್ಪರ ಸಮನ್ವಯದ ಭಾವನೆ ಇರುತ್ತದೆ. ವ್ಯಾಪಾರದಲ್ಲಿ ನಷ್ಟವಾಗದು. ಪಾಲುದಾರಿಕೆ ವ್ಯಾಪಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಲಿದೆ.

ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ನೇರಳೆ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).