Horoscope Today: ಧನು ರಾಶಿಯವರಿಗೆ ಮಾತಿನ ದೋಷ, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಹೇಗಿದೆ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಧನು ರಾಶಿಯವರಿಗೆ ಮಾತಿನ ದೋಷ, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಹೇಗಿದೆ ರಾಶಿಫಲ

Horoscope Today: ಧನು ರಾಶಿಯವರಿಗೆ ಮಾತಿನ ದೋಷ, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಹೇಗಿದೆ ರಾಶಿಫಲ

Horoscope Today June 26 (ಜೂನ್ 26ರ ರಾಶಿ ಭವಿಷ್ಯ): ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು ರಾಶಿಯವರಿಗೆ ಮಾತಿನ ದೋಷ, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಹೇಗಿದೆ ರಾಶಿಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (26th June 2024 Horoscope).

ಧನು ರಾಶಿಯವರಿಗೆ ಮಾತಿನ ದೋಷ, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಹೇಗಿದೆ ರಾಶಿಫಲ
ಧನು ರಾಶಿಯವರಿಗೆ ಮಾತಿನ ದೋಷ, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಹೇಗಿದೆ ರಾಶಿಫಲ

ಇಂದಿನ ದಿನ ಭವಿಷ್ಯ (ಜೂನ್ 26ರ ರಾಶಿ ಭವಿಷ್ಯ): 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (26th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯನ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣಪಕ್ಷ, ಬುಧವಾರ

ತಿಥಿ : ಪಂಚಮಿ ರಾ.10.44 ರವರೆಗು ಇದ್ದು ಆನಂತರ ಷಷ್ಥಿ ಆರಂಭವಾಗುತ್ತದೆ.

ನಕ್ಷತ್ರ : ಧನಿಷ್ಠ ನಕ್ಷತ್ರವು ಹ. 03.22 ರವರೆಗೆ ಇದ್ದು ಆನಂತರ ಶತಭಿಷ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ ಬೆ.05.55

ಸೂರ್ಯಾಸ್ತ ಸ.06.48

ರಾಹುಕಾಲ : ಹ. 12.26 ರಿಂದ ಹ. 02.02

ಧನಸ್ಸು

ಹಣಕಾಸಿನ ವಿಚಾರದಲ್ಲಿ ಯಾರನ್ನೂ ನಂಬುವುದಿಲ್ಲ. ವಿವಾದಗಳಿಲ್ಲದೆ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವುದಿಲ್ಲ. ಒಟ್ಟಾರೆ ಮಾತಿನ ದೋಷದಿಂದ ಮನಸ್ಸಿನ ನೆಮ್ಮದಿ ಕಡಿಮೆಯಾಗುತ್ತದೆ. ಉತ್ತಮ ಆದಾಗ ಬರುತ್ತದೆ. ಆತ್ಮೀಯರಿಗೂ ನೀಡಿದ್ದ ದೊಡ್ಡ ಮೊತ್ತದ ಹಣವು ಕಂತಿನ ರೂಪದಲ್ಲಿ ದೊರೆಯಲಿದೆ. ನೋಡಲು ಸಾಮಾನ್ಯದಂತೆ ಕಂಡರು ಮಾಡುವ ಕೆಲಸ ಕಾರ್ಯಗಳು ದೊಡ್ಡಮಟ್ಟದಲ್ಲಿ ಇರುತ್ತದೆ. ಸಾಮಾನ್ಯವಾಗಿ ಸೋಲುವುದಿಲ್ಲ. ಉತ್ತಮ ಆರೋಗ್ಯವಿರುತ್ತದೆ. ದೂರವಾಗಿದ್ದ ಕುಟುಂಬದ ಸದಸ್ಯರೊಬ್ಬರು ಮರಳಿ ಬರುತ್ತಾರೆ. ಕುಟುಂಬದ ಹಿರಿಯರನ್ನು ಗೌರವ ಭಾವನೆಯಿಂದ ಕಾಣುವಿರಿ. ನಿಮ್ಮ ರೀತಿ ನೀತಿಗಳು ಎಲ್ಲರಿಗೂ ಮಾದರಿಯಾಗುತ್ತದೆ. ಪ್ರವಾಸ ಮಾಡಲು ಬಯಸುವುದಿಲ್ಲ. ಇದ್ದಲ್ಲಿಯೇ ಸಂತೋಷಪಡುವ ಜನರೆಂದರೆ ನೀವೆಂದು ಹೇಳಬಹುದು.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈಋತ್ಯ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಮಕರ

ಹಣಕಾಸಿನವಿಚಾರದಲ್ಲಿ ಯಾವ ಸಲಹೆಯನ್ನು ಒಪ್ಪುವುದಿಲ್ಲ. ಯಾವುದೆ ವಿಚಾರವನ್ನು ಮರೆಮಾಚದೆ ಹೇಳುವ ಕಾರಣ ವಿವಾದವು ಸದಾ ಬೆನ್ನಿಗಿರುತ್ತದೆ. ತಪ್ಪನ್ನು ಕಂಡಾಗ ಶಿಕ್ಷಿಸದೆ ಹೋದರು ಖಂಡಿಸುವಿರಿ. ಇದರಿಂದ ವಿರೋಧಿಗಳು ಹೆಚ್ಚುತ್ತಾರೆ. ಮೌನವಾಗಿದ್ದರೆ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಆದ್ದರಿಂದ ಸದಾಕಾಲ ಮಾತಿನಲ್ಲಿ ನಿರತರಾಗುವಿರಿ. ನಿಮಗೆ ದೊರೆಯಬೇಕಾದ ಹಕ್ಕಿಗಾಗಿ ಹೋರಾಟ ಮಾಡುವಿರಿ. ಕಾನೂನು ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಮಾಡುವ ಹಣದ ವ್ಯವಹಾರದಲ್ಲಿ ಉತ್ತಮ ಲಾಭವಿದೆ. ಹಣದ ಕೊರತೆ ಬಹುವಾಗಿ ಕಾಡುತ್ತದೆ. ಕುಟುಂಬದ ಖರ್ಚು ವೆಚ್ಚವನ್ನು ಎಲ್ಲರೂ ಹಂಚಿಕೊಳ್ಳುವ ಕಾರಣ ತೊಂದರೆ ಇರುವುದಿಲ್ಲ. ಚಿಂತೆಗೆ ಒಳಗಾಗದೆ ಕೆಲಸ ಕಾರ್ಯದಲ್ಲಿ ನಿರತರಾಗುವಿರಿ.

ಪರಿಹಾರ : ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನೀಲಿಮಿಶ್ರಿತ ಬಿಳಿ ಬಣ್ಣ

ಕುಂಭ

ಬಹುನಿರೀಕ್ಷಿತ ಅಧಿಕಾರಿಯ ಪಟ್ಟ ನಿಮಗೆ ಈಗ ದೊರೆಯುತ್ತದೆ. ಚಿನ್ನವನ್ನು ಮಾರುವ ತೀರ್ಮಾನವನ್ನು ಕೈ ಬಿಡುವಿರಿ. ಕುಟುಂಬದ ಜವಾಬ್ದಾರಿಯನ್ನು ವಹಿಸಿಕೊಳ್ಳುವಿರಿ. ಸ್ವತಂತ್ರವಾದ ಜೀವನವನ್ನು ನಡೆಸಲು ಇಷ್ಟಪಡುವಿರಿ. ಸಣ್ಣಪುಟ್ಟ ತಪ್ಪುಗಳನ್ನು ಟೀಕಿಸುವಿರಿ. ಯಾವುದೇ ವಿಚಾರದಲ್ಲಿ ದುಡುಕದೆ ಸಂಯಮದಿಂದ ವರ್ತಿಸುವಿರಿ. ನಿಮ್ಮ ವಾದ ವಿವಾದಗಳಿಗೆ ಹೆದರಿ ಜನರು ದೂರ ಸರದಿಯುತ್ತಾರೆ. ಸ್ವಭಾವತಹ ನೀವು ಶಾಂತ ಚಿತ್ತರು. ಆದರೆ ಎದುರಾಗುವ ಪರಿಸ್ಥಿತಿ ಕೋಪಕ್ಕೆ ಕಾರಣವಾಗುತ್ತದೆ. ಎಲ್ಲರೊಂದಿಗೆ ನಂಬಿಕೆಯನ್ನು ಉಳಿಸಿಕೊಳ್ಳುವಿರಿ. ಹೆಣ್ಣು ಮಕ್ಕಳ ವಿವಾಹವು ಮುಂದೂಡಲ್ಪಡುತ್ತದೆ. ಗರ್ಭಿಣಿಯರು ಎಚ್ಚರಿಕೆಯಿಂದ ಇರಬೇಕು. ದಂಪತಿಗಳ ನಡುವೆಹಣಕಾಸಿನ ವಿಚಾರದಲ್ಲಿ ಒಂದೇ ರೀತಿಯ ತೀರ್ಮಾನವಿರುತ್ತದೆ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು .

ಅದೃಷ್ಟದ ಸಂಖ್ಯೆ 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಮೀನ

ನಿಮ್ಮ ಮಕ್ಕಳು ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ಹಣ ಗಳಿಸಲು ಆರಂಭಿಸುತ್ತಾರೆ. ಹೆಚ್ಚಿನ ಪ್ರೀತಿ ವಿಶ್ವಾಸದಿಂದ ಮಾತ್ರ ವಿಶೇಷ ಶುಭ ಫಲಗಳು ದೊರೆಯುತ್ತವೆ. ದುಡಿವ ಹಣದಲ್ಲಿ ಅಲ್ಪ ಭಾಗ ಉಳಿತಾಯ ಮಾಡುವಿರಿ. ಎದುರಾಗಿದ್ದ ತೊಂದರೆಗಳು ಕ್ರಮೇಣವಾಗಿ ಕಡಿಮೆಯಾಗುತ್ತದೆ. ಸಂತಾನ ಲಾಭವಿದೆ. ಕುಟುಂಬದ ಹಣಕಾಸಿನ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವಿರಿ. ವ್ಯವಹಾರದಲ್ಲಿ ಲಾಭವಿದೆ. ಯಾರಿಗೂ ಕನಿಕರ ತೋರಿಸುವುದಿಲ್ಲ. ಸಮಯ ಸಾಧಿಸಿ ವಿರೋಧಿಗಳನ್ನು ಸೋಲಿಸುವಲ್ಲಿ ಯಶಸ್ವಿಯಾಗುವಿರಿ. ಸುಲಭವಾಗಿ ನಿಮ್ಮ ಬಳಿ ಇರುವ ಹಣವನ್ನು ಖರ್ಚು ಮಾಡುವುದಿಲ್ಲ. ಪ್ರಭಾವಿಶಾಲಿ ನಾಯಕರಾಗಿ ಹೊರಹೊಮ್ಮವಿರಿ. ಉತ್ತಮ ಕೀರ್ತಿ ಪ್ರತಿಷ್ಠೆಗೆ ಯಾವುದೇ ತ್ಯಾಗವನ್ನು ಮಾಡುವಿರಿ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 7

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಹೊಗೆಯ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.