Horoscope Today: ಹಟದ ಗುಣದಿಂದಲೇ ಸ್ನೇಹಿತರು ನಿಮ್ಮಿಂದ ದೂರ ಉಳಿಯಲಿದ್ದಾರೆ, ಎಚ್ಚರ; ಮಾರ್ಚ್‌ 26ರ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಹಟದ ಗುಣದಿಂದಲೇ ಸ್ನೇಹಿತರು ನಿಮ್ಮಿಂದ ದೂರ ಉಳಿಯಲಿದ್ದಾರೆ, ಎಚ್ಚರ; ಮಾರ್ಚ್‌ 26ರ ರಾಶಿಫಲ

Horoscope Today: ಹಟದ ಗುಣದಿಂದಲೇ ಸ್ನೇಹಿತರು ನಿಮ್ಮಿಂದ ದೂರ ಉಳಿಯಲಿದ್ದಾರೆ, ಎಚ್ಚರ; ಮಾರ್ಚ್‌ 26ರ ರಾಶಿಫಲ

26 ಮಾರ್ಚ್‌ 2024, ಮಂಗಳವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (26th March 2024 Daily Horoscope).

26 ಮಾರ್ಚ್‌ 2024, ಮಂಗಳವಾರದ ದಿನ ಭವಿಷ್ಯ
26 ಮಾರ್ಚ್‌ 2024, ಮಂಗಳವಾರದ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (26th March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಮಂಗಳವಾರ

ತಿಥಿ : ಪಾಡ್ಯ 01.15 ರವರೆಗುಗೂ ಇದ್ದು ನಂತರ ಬಿದಿಗೆ ಆರಂಭವಾಗಲಿದೆ.

ನಕ್ಷತ್ರ : ಹಸ್ತ ನಕ್ಷತ್ರವು 12.13 ರವರೆಗೂ ಇದ್ದು ನಂತರ ಚಿತ್ತ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.21

ಸೂರ್ಯಾಸ್ತ: ಸಂಜೆ 06.30

ರಾಹುಕಾಲ : 03.00 ರಿಂದ 4.30

ರಾಶಿ ಫಲ

ಮೇಷ

ಕುಟುಂಬದಲ್ಲಿ ಅನಾವಶ್ಯಕ ವಿವಾದ ಇರುತ್ತದೆ. ಉದ್ಯೋಗದಲ್ಲಿನ ಕ್ಷಿಪ್ರ ಬದಲಾವಣೆಗಳಿಗೆ ಹೊಂದಿಕೊಳ್ಳಲಾಗದು. ಉದ್ಯೋಗ ಬದಲಾಯಿಸಲು ನಿಶ್ಚಯಿಸಿದ್ದೀರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳ ನಿರ್ಧಾರ ಬದಲಿಸಲಾಗದು. ಅಪರೂಪದ ವ್ಯಕ್ತಿಯೊಬ್ಬರ ಆಗಮನ ಆಗಲಿದೆ. ತಾಯಿಯವರು ಇಷ್ಟಪಟ್ಟ ವಾಹನವನ್ನು ಕೊಳ್ಳುವಿರಿ. ಜನರು ಹೇಳು ಹೇಳುವುದೆಲ್ಲಾ ನಿಜ ಎಂದು ನಂಬದಿರಿ. ಕಣ್ಣಿನ ತೊಂದರೆ ಉಂಟಾಗಬಹುದು. ಹಟದ ಗುಣದ ಕಾರಣ ಕೆಲವರು ನಿಮ್ಮಿಂದ ದೂರ ಉಳಿಯುತ್ತಾರೆ. ಹಣಕಾಸಿನ ವಿಚಾರದಲ್ಲಿ ಇಕ್ಕಟ್ಟಿನ ಪರಿಸ್ಥಿತಿ ಎದುರಾಗಬಹುದು. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಆರೋಗ್ಯದ ಬಗ್ಗೆ ಗಮನವಿರಲಿ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬಿಳಿ

ವೃಷಭ

ಕುಟುಂಬದಲ್ಲಿ ಕೆಲವೊಂದು ವಿಷಗಳಲ್ಲಿ ಭಿನ್ನಾಭಿಪ್ರಾಯ ಉಂಟಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಸಮಾಧಾನಕರ ಆದಾಯ ಗಳಿಸುವಿರಿ. ವಿನಾಕಾರಣ ವಿದ್ಯಾರ್ಥಿಗಳು ಆತಂಕದ ಪರಿಸ್ಥಿತಿಯಲ್ಲಿ ಇರುತ್ತಾರೆ. ಆಸ್ತಿಯ ವಿಚಾರದಲ್ಲಿ ಆತ್ಮೀಯರ ಸಹಾಯ ಇರುತ್ತದೆ. ಸೋದರಿಯ ಭೂವಿವಾದಕ್ಕೆ ಪರಿಹಾರ ಕಂಡುಹಿಡಿಯುವಿರಿ. ರಾಜಕೀಯದಲ್ಲಿ ಪ್ರಭಾವಶಾಲಿ ವ್ಯಕ್ತಿಯಾಗುವಿರಿ. ದೃಢವಾದ ಮನಸ್ಸಿನಿಂದ ಸಮಾಜವನ್ನು ತಿದ್ದುವ ಕೆಲಸವನ್ನು ಮಾಡುವಿರಿ. ಸಾಲವಾಗಿ ಪಡೆದ ಹಣ ಹಿಂದಿರುಗಿಸುವಿರಿ. ಹಣಕಾಸಿನ ವ್ಯವಹಾರದ ಮಧ್ಯಸ್ಥಿಕೆ ಒಂದರಲ್ಲಿ ಉತ್ತಮ ಹಣವನ್ನು ಸಂಪಾದಿಸುವಿರಿ. ಕಂತಿನ ವ್ಯಾಪಾರದಲ್ಲಿ ಲಾಭವಿರುತ್ತದೆ. ಮಕ್ಕಳ ಜೊತೆಯಲ್ಲಿ ಆಟ ಪಾಠಗಳ್ಳಲ್ಲಿ ಪಾಳ್ಗೊಳ್ಳುವಿರಿ

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಬೂದು

ಮಿಥುನ

ಕುಟುಂಬದಲ್ಲಿ ತಪ್ಪು ಒಪ್ಪಿನ ಬಗ್ಗೆ ಚರ್ಚೆ ಕಂಡುಬರುತ್ತದೆ. ಉದ್ಯೋಗದಲ್ಲಿನ ಕೆಲಸ ಕಾರ್ಯಗಳು ತೂಗುಯ್ಯಾಲೆಯಲ್ಲಿ ಇರಲಿವೆ. ಅಧಿಕಾರಿಗಳ ಕೆಲಸದ ಮೇಲಿನ ಒತ್ತಡವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ. ವಿದ್ಯಾರ್ಥಿಗಳು ಮಾನಸಿಕ ಒತ್ತಡದಿಂದ ದೂರವಾಗುತ್ತಾರೆ. ಕೆಲಸವನ್ನು ಶ್ರದ್ಧೆಯಿಂದ ಮಾಡಿದರೆ ಶುಭಫಲ ದೊರೆಯುತ್ತದೆ. ಸಿಡುಕುತನ ಕಡಿಮೆ ಮಾಡಿ ಜನರ ಮನಸ್ಸನ್ನು ಗೆಲ್ಲಿ. ಮನಸ್ಸಿನ ವಿಷಯಗಳನ್ನು ತೋರ್ಪಡಿಸುವುದಿಲ್ಲ. ಜಮೀನೊಂದನ್ನು ಮಾರಾಟಮಾಡಿ ಹೊಸ ಮನೆ ಕೊಳ್ಳುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಂದು

ಕಟಕ

ಕುಟುಂಬದ ಜವಾಬ್ದಾರಿ ಹೆಚ್ಚುವ ಕಾರಣ ಒತ್ತಡದಿಂದ ಬಾಳುವಿರಿ. ಕಷ್ಟ ಎನಿಸಿದರೂ ಶ್ರದ್ಧೆಯಿಂದ ಕೈಹಿಡಿದ ಕೆಲಸಗಳನ್ನು ಪೂರ್ಣಗೊಳಿಸುವಿರಿ. ಉದ್ಯೋಗದಲ್ಲಿ ಮೇಲ್ಮಟ್ಟದ ಬದಲಾವಣೆಯ ಕೆಲಸದಲ್ಲಿ ತಲ್ಲೀನರಾಗುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯಲಿದೆ. ದುಡಿದ ಹಣದಲ್ಲಿ ಬಡವರಿಗೆ ಸಹಾಯ ಮಾಡಲು ಮುಂದಾಗುವಿರಿ. ವಿದ್ಯಾರ್ಥಿಗಳು ಸಮವಯಸ್ಕರ ಮಧ್ಯೆ ನಾಯಕರಾಗಿ ಬಾಳುವರು. ರಾಜಕೀಯ ಪ್ರವೇಶಿಸುವ ಆಶಯ ಇದ್ದಲ್ಲಿ ಉತ್ತಮ ಅವಕಾಶವೊಂದು ನಿಮ್ಮದಾಗುತ್ತದೆ. ಕೃಷಿ ಕಾರ್ಯದಿಂದ ಹೆಚ್ಚಿನ ಆದಾಯ ದೊರೆಯುತ್ತದೆ. ಭೂವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಪಾಲುಗಾರಿಕೆಯ ವ್ಯಾಪಾರ ಆರಂಭಿಸುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಪ್ಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.