Horoscope Today: ಅನಾವಶ್ಯಕ ಕೋಪಕ್ಕೆ ಒಳಗಾಗುವಿರಿ, ಹಣದ ವ್ಯವಹಾರದಲ್ಲಿನ ತೊಂದರೆ ಇಲ್ಲ; ಧನು, ಮಕರ, ಕುಂಭ, ಮೀನ ರಾಶಿಯರ ದಿನ ಭವಿಷ್ಯ
26 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (26th May 2024 Daily Horoscope).

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (26th May 2024 Horoscope)
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಭಾನುವಾರ
ತಿಥಿ: ತದಿಗೆ ಸಂಜೆ 05.38 ರವರೆಗೂ ಇರುತ್ತದೆ. ಆನಂತರ ಚೌತಿ ಆರಂಭವಾಗುತ್ತದೆ.
ನಕ್ಷತ್ರ: ಮೂಲ ನಕ್ಷತ್ರವು ಬೆಳಗ್ಗೆ 10.31 ರವರೆಗೆ ಇರುತ್ತದೆ. ಆನಂತರ ಪೂರ್ವಾಷಾಡ ನಕ್ಷತ್ರವು ಆರಂಭವಾಗುತ್ತದೆ.
ಸೂರ್ಯೋದಯ: ಬೆಳಿಗ್ಗೆ 05.52
ಸೂರ್ಯಾಸ್ತ ಸಂಜೆ 06.40
ರಾಹುಕಾಲ: ಸಂಜೆ 05.08 ರಿಂದ 06.43 ರವರೆಗೆ
ಧನಸ್ಸು ರಾಶಿ
ಕುಟುಂಬದಲ್ಲಿ ಹಣದ ವಿಚಾರದಲ್ಲಿ ಸಂದಿಗ್ಧತೆಯ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಉಂಟಾಗುವ ಬದಲಾವಣೆಗಳಿಗೆ ಹೊಂದಿಕೊಳ್ಳುವಿರಿ. ವಿದ್ಯಾರ್ಥಿಗಳ ಯಶಸ್ಸಿಗೆ ಮಿತಿ ಇರದು. ಒತ್ತಡಕ್ಕಾಗಿ ಆರಂಭಿಸಿದ ವ್ಯಾಪಾರದಲ್ಲಿ ಉತ್ತಮ ಲಾಭವಿರುತ್ತದೆ. ಮಕ್ಕಳ ಮನಸ್ಸು ಸ್ಥಿಮಿತದಲ್ಲಿ ಇರುವುದಿಲ್ಲ. ಅನಾವಶ್ಯಕ ಕೋಪಕ್ಕೆ ಒಳಗಾಗುವಿರಿ. ನಿರ್ದಿಷ್ಟ ಗುರಿ ಇಲ್ಲದೆ ದೊರೆವ ಅವಕಾಶವನ್ನು ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಪ್ರೀತಿ ವಿಶ್ವಾಸದಿಂದ ವರ್ತಿಸಿದರೆ ಮನದಾಸೆಯೊಂದು ನೆರವೇರುತ್ತದೆ. ನಿತ್ಯಜೀವನಕ್ಕೆ ಸಾಕಾಗುವಷ್ಟು ಹಣವನ್ನು ಗಳಿಸುವಿರಿ. ತಂದೆಯವರ ವ್ಯಾಪಾರಕ್ಕೆ ಸಹಾಯಮಾಡುವಿರಿ.
ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಬೂದು
ಮಕರ ರಾಶಿ
ಕುಟುಂಬದ ಹಣಕಾಸಿನ ಸಮಸ್ಯೆಯೊಂದು ಪರಿಹಾರಗೊಳ್ಳುತ್ತದೆ. ಹೊಂದಾಣಿಕೆ ಇರುವ ಕಾರಣ ಉದ್ಯೋಗದಲ್ಲಿ ಯಾವುದೇ ತೊಂದರೆ ಎದುರಾಗದು. ಸಮಾಜದಲ್ಲಿ ನಿಮಗೆ ಉನ್ನತ ಸ್ಥಾನ ಪಡೆಯುವಿರಿ. ಅತಿಯಾಸೆ ಇರದೆ ಅವಶ್ಯಕತೆ ಇರುವ ವರಮಾನಕ್ಕೆ ಸಮಾಧಾನ ಪಡುವಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ. ಸಮಯವನ್ನು ಅರಿತು ವರ್ತಿಸುವ ಕಾರಣ ವಿದ್ಯಾರ್ಥಿಗಳು ಆತಂಕದಿಂದ ದೂರ ಇರುತ್ತಾರೆ. ದಂಪತಿಗಳು ಸಂತಸದಿಂದ ಸುಖಜೀವನ ನಡೆಸುತ್ತಾರೆ. ಆಸ್ತಿಯ ವಿವಾದವು ಸಂಗಾತಿಯ ಸಹಾಯದಿಂದ ಬಗೆಹರಿಯುತ್ತದೆ.
ಪರಿಹಾರ: ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕಂದು
ಕುಂಭ ರಾಶಿ
ಕುಟುಂಬದಲ್ಲಿ ನಿಧಾನತೆಗೆ ಪ್ರಾಧಾನ್ಯತೆ ಕಂಡುಬರುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಕಾಣದು. ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಮನರಂಜನೆಯನ್ನು ಇಷ್ಟಪಡುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ಇರದೆ ಹೋದರೂ ನಷ್ಟದ ಮಾತಿಲ್ಲ. ಬೇಸರ ಕಳೆಯಲು ಸಂತೋಷಕೂಟವನ್ನು ಏರ್ಪಡಿಸುವಿರಿ. ಮಕ್ಕಳಿಗೆ ವಿದೇಶದಲ್ಲಿ ಅಧ್ಯಯನ ಮಾಡುವ ಅವಕಾಶ ಲಭ್ಯವಾಗುತ್ತದೆ. ಬಳಸಿದ ವಾಹನವನ್ನು ವಿಲೇವಾರಿ ಮಾಡುವಿರಿ. ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಪ್ರಾಣಾಯಾಮದ ಮೊರೆ ಹೋಗುವಿರಿ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಕಪ್ಪು
ಮೀನ ರಾಶಿ
ಧಾರ್ಮಿಕ ಕ್ರಿಯಾವಿಧಿಗಳ ವೆಚ್ಚ ಅಧಿಕವಾಗುತ್ತದೆ. ಕುಟುಂಬದ ಆಸ್ತಿಯ ವಿಚಾರಗಳಲ್ಲಿ ಸ್ಥಿರವಾದ ತೀರ್ಮಾನ ಕೈಗೊಳ್ಳುವುದಿಲ್ಲ. ಉದ್ಯೋಗದಲ್ಲಿನ ವ್ಯವಹಾರಗಳು ಸರಳಗತಿಯಲ್ಲಿ ನಡೆಯಲಿವೆ. ಉದ್ಯೋಗವನ್ನು ಉಳಿಸಿಕೊಳ್ಳಲು ಕೆಲವೊಂದು ತ್ಯಾಗವನ್ನು ಮಾಡುವಿರಿ. ಹಣದ ವ್ಯವಹಾರದಲ್ಲಿನ ತೊಂದರೆ ಮರೆಯಾಗುತ್ತದೆ. ಆತ್ಮೀಯರೊಬ್ಬರು ನಿಮ್ಮ ಮಾತನ್ನು ತಪ್ಪಾಗಿ ಅರ್ಥಮಾಡಿಕೊಳ್ಳುತ್ತಾರೆ. ಸಮಾಜ ಸೇವೆ ಮಾಡುವ ಇಂಗಿತ ವ್ಯಕ್ತಪಡಿಸುವಿರಿ.ಸಾರ್ವಜನಿಕ ಸಂಘ ಸಂಸ್ಥೆಯ ಒಡೆತನ ಲಭಿಸುತ್ತದೆ. ಖರ್ಚು ವೆಚ್ಚಗಳನ್ನು ಸರಿತೂಗಿಸಲು ಬಿಡಿವಿನ ವೇಳೆ ಸಹ ವೃತ್ತಿಯನ್ನು ಮಾಡುವಿರಿ.
ಪರಿಹಾರ: ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ನಸುಗೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
(ಕನ್ನಡದಲ್ಲಿ ಕ್ರಿಕೆಟ್, ಎಚ್ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

ವಿಭಾಗ