Horoscope Today: ಜೀವನಕ್ಕೆ ಸಾಕಾಗುವಷ್ಟು ಹಣ ಗಳಿಸುವಿರಿ, ಉದ್ಯೋಗ ಬದಲಿಸುವ ಸೂಚನೆ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ
ಫೆಬ್ರವರಿ 27, ಮಂಗಳವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (27 February 2024 Daily Horoscope).

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ( February 27 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಮಂಗಳವಾರ
ತಿಥಿ : ತದಿಗೆ ತಿಥಿಯು ರಾ.11.05 ರವರೆಗು ಇದ್ದು ಆನಂತರ ಚೌತಿ ಆರಂಭವಾಗುತ್ತದೆ.
ನಕ್ಷತ್ರ : ಹಸ್ತ ನಕ್ಷತ್ರವು ಬೆ.05.05 ವರೆಗು ಇರುತ್ತದೆ. ಆನಂತರ ಚಿತ್ತೆ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆ.06.35
ಸೂರ್ಯಾಸ್ತ: ಸ.06.26
ರಾಹುಕಾಲ : ಮ.03.00 ರಿಂದ ಬೆ.04.30
ರಾಶಿ ಫಲಗಳು
ಧನಸ್ಸು
ಕುಟುಂಬದಲ್ಲಿನ ಅನಿಶ್ಚಿತ ವಾತಾವರಣದ ಕಾರಣ ಮನಸ್ಸು ಸ್ಥಿಮಿತದಲ್ಲಿ ಇರುವುದಿಲ್ಲ. ಅನವಶ್ಯಕ ಕೋಪಕ್ಕೆ ಒಳಗಾಗುವಿರಿ. ಅದೃಷ್ಟದ ಕಾರಣ ಕೈಹಿಡಿದ ಕೆಲಸ ಕಾರ್ಯಗಳು ಯಶಸ್ವಿಯಾಗುತ್ತದೆ. ತಾಯಿಯವರ ಆರೋಗ್ಯದಲ್ಲಿ ಸ್ಥಿರತೆ ಇರುವುದಿಲ್ಲ. ದಿನ ಕಳೆದಂತೆ ಪ್ರೀತಿ ವಿಶ್ವಾಸದಿಂದ ಎಲ್ಲರ ಜೊತೆ ಬೆರೆಯುವಿರಿ. ಸಂಗಾತಿಯ ಮಹದಾಸೆಯೊಂದು ನೆರವೇರುತ್ತದೆ. ಉದ್ಯೋಗದ ಉನ್ನತಿ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ವರಮಾನ ಇರಲಿದೆ. ವಿದ್ಯಾರ್ಥಿಗಳು ವ್ಯಾಸಂಗವನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಹಣದ ಅತಿಯಾಸೆ ಇರದು. ಆದರೆ ಜೀವನಕ್ಕೆ ಸಾಕಾಗುವಷ್ಟು ಹಣವನ್ನು ಗಳಿಸುವಿರಿ. ವಂಶಾಧಾರಿತ ವೃತ್ತಿಯನ್ನು ಮುಂದುವರಿಸುವಿರಿ. ಧಾರ್ಮಿಕ ಕಾರ್ಯವೊಂದರ ನೇತೃತ್ವ ನಿಮ್ಮದಾಗುತ್ತದೆ.
ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಮಕರ
ಸಮಯವನ್ನು ಅರಿತು ನಡೆವ ಕಾರಣ ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ಎಲ್ಲರೊಂದಿಗೆ ಸುಖಜೀವನ ನಡೆಸುವಿರಿ. ಉದ್ಯೋಗದಲ್ಲಿ ಕಾರ್ಯದ ಒತ್ತಡ ಅಧಿಕವಾಗಿರುತ್ತದೆ. ಮಾತುಕತೆಯ ಮೂಲಕ ಆಸ್ತಿಯ ವಿವಾದ ಬಗೆಹರಿಸುವಿರಿ. ಬಾಯಿಗೆ ಸಂಬಂಧಿಸಿದಂತೆ ಅನಾರೋಗ್ಯ ಇರುತ್ತದೆ. ಅತಿಯಾದ ಓಡಾಟದಿಂದಾಗಿ ಕೈಕಾಲುಗಳಲ್ಲಿ ಶಕ್ತಿ ಕಡಿಮೆಯಾಗುತ್ತದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ಉತ್ತಮ ಫಲಿತಾಂಶ ಪಡೆಯುತ್ತಾರೆ. ವಾಸಸ್ಥಳವನ್ನು ಬದಲಾಯಿಸುವಿರಿ. ಸ್ನೇಹಿತರೊಬ್ಬರಿಗೆ ಹಣದ ಸಹಾಯ ಮಾಡುವಿರಿ. ಎಲ್ಲರನ್ನೂ ಅನುಮಾನದ ದೃಷ್ಠಿಯಲ್ಲಿ ನೋಡುವಿರಿ. ಮನೆಯಲ್ಲಿ ಮಂಗಳಕಾರ್ಯವೊಂದು ಯಶಸ್ವಿಯಾಗಿ ನಡೆಯಲಿದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.
ಪರಿಹಾರ : ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ
ಕುಂಭ
ಮಾಡಲು ಸಾಧ್ಯವೆನಿಸುವ ಕೆಲಸಗಳನ್ನು ಮಾತ್ರ ಆಯ್ಕೆ ಮಾಡುವಿರಿ. ಕುಟುಂಬದಲ್ಲಿ ಹೊಸತನ ಮನೆಮಾಡುತ್ತದೆ. ಯಾರ ಜೊತೆಯಲ್ಲಿಯೂ ಸುಲಭವಾಗಿ ಸ್ನೇಹ ಬೆಳೆಸುವುವಿಲ್ಲ. ಒತ್ತಡದ ಫಲವಾಗಿ ಸಂತೋಷಕೂಟದಲ್ಲಿ ಪಾಲ್ಗೊಳ್ಳುವಿರಿ. ಪ್ರೀತಿ ವಿಶ್ವಾಸದಿಂದ ಇರಲು ಪ್ರಯತ್ನಿಸಿ. ನಿಮ್ಮಿಂದಾದ ತಪ್ಪಿಗೂ ಬೇರೆಯವರನ್ನು ದೂರುವಿರಿ. ಗುಟ್ಟಾಗಿ ಸ್ವಂತ ಕೆಲಸ ಸಾಧಿಸುವಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ನೀರಿನ ಜೊತೆಯಲ್ಲಿ ಚೆಲ್ಲಾಟ ಆಡದಿರಿ. ಭೂವಿವಾದ ಇರುತ್ತದೆ. ವ್ಯಾಪಾರ ಮತ್ತು ಹಣಕಾಸಿನ ವ್ಯವಹಾರದಲ್ಲಿ ಯಶಸ್ಸು ಗಳಿಸುವಿರಿ. ಆರೋಗ್ಯಕ್ಕೆ ಸಂಬಂಧಿಸಿದ ಸೇವಾಧಾರಿತ ಉದ್ಯಮದಿಂದ ಧನಲಾಭವಿದೆ. ಮಕ್ಕಳಿಗೆ ಹೊಟ್ಟೆನೋವಿನ ತೊಂದರೆ ಉಂಟಾಗಬಹುದು.
ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ಮೀನ
ಕೌಟುಂಬಿಕ ಕೆಲಸವನ್ನು ಅರೆಮನಸ್ಸಿನಿಂದ ಮಾಡುವಿರಿ. ಹಿರಿಯರ ಹೆಸರಿನಲ್ಲಿದ್ದ ಆಸ್ತಿಯಲ್ಲಿ ಪಾಲು ದೊರೆಯುತ್ತದೆ. ಹಣದ ಕೊರತೆ ಕಾಣದು. ಮೋಡಿಯ ಮಾತಿನಿಂದಲೇ ಕೆಲಸ ಕಾರ್ಯಗಳನ್ನು ಸಾಧಿಸಬಲ್ಲಿರಿ. ಉದ್ಯೋಗದಲ್ಲಿ ತೊಂದರೆ ಇರದು. ಉದ್ಯೋಗ ಬದಲಾಯಿಸುವ ಸೂಚನೆಯಿದೆ. ವಿದ್ಯಾರ್ಥಿಗಳು ವಿಶೇಷವಾದ ಗೌರವಕ್ಕೆ ಪಾತ್ರರಾಗುತ್ತಾರೆ. ಕುಟುಂಬದಲ್ಲಿ ಒಮ್ಮತ ಇರುತ್ತದೆ. ಜಗಳ ಕದನಗಳನ್ನು ಇಷ್ಟಪಡುವುದಿಲ್ಲ. ಬುದ್ಧಿವಂತಿಕೆಯಿಂದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯುವಿರಿ. ಕೃಷಿಯಲ್ಲಿ ಆಸಕ್ತಿ ಇರುತ್ತದೆ. ಆಹಾರ ಸಾಮಗ್ರಿಗಳ ವ್ಯಾಪಾರದಲ್ಲಿ ಲಾಭವಿರುತ್ತದೆ. ಮನೆಗೆ ಐಷಾರಾಮಿ ವಸ್ತುಗಳನ್ನು ಕೊಳ್ಳುವಿರಿ. ಮನೆಯನ್ನು ವಿಸ್ತರಿಸಲು ತೀರ್ಮಾನಿಸುವಿರಿ.
ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ತಿಳಿನೀಲಿ
-------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ