Horoscope Today: ವಿವಾದಾತ್ಮಕ ವಿಚಾರಗಳಿಂದ ದೂರ, ಉತ್ತಮ ಪ್ರಯತ್ನದಿಂದ ಆರ್ಥಿಕ ಪ್ರಗತಿ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವಿವಾದಾತ್ಮಕ ವಿಚಾರಗಳಿಂದ ದೂರ, ಉತ್ತಮ ಪ್ರಯತ್ನದಿಂದ ಆರ್ಥಿಕ ಪ್ರಗತಿ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

Horoscope Today: ವಿವಾದಾತ್ಮಕ ವಿಚಾರಗಳಿಂದ ದೂರ, ಉತ್ತಮ ಪ್ರಯತ್ನದಿಂದ ಆರ್ಥಿಕ ಪ್ರಗತಿ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

28 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (28th June 2024 Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ದಿನ ಭವಿಷ್ಯ ತಿಳಿಯಿರಿ
ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ದಿನ ಭವಿಷ್ಯ ತಿಳಿಯಿರಿ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (28th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ: ಸಸ್ತಮಿ ಸಾ. 05.58 ರವರೆಗು ಇದ್ದು ಆನಂತರ ಅಷ್ಟಮಿ ಆರಂಭವಾಗುತ್ತದೆ.

ನಕ್ಷತ್ರ: ಪೂರ್ವಾಭಾದ್ರ ನಕ್ಷತ್ರವು ಹ. 12.17 ರವರೆಗೆ ಇದ್ದು ಆನಂತರ ಉತ್ತರಾಭಾದ್ರ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.55

ಸೂರ್ಯಾಸ್ತ: ಸಂಜೆ 06.48

ರಾಹುಕಾಲ: ಬೆ. 10.50 ರಿಂದ ಹ. 12.26

ಮೇಷ ರಾಶಿ

ನಿಮ್ಮಲ್ಲಿನ ಬುದ್ಧಿಶಕ್ತಿ ಅನೀತಿಯ ವಿರುದ್ಧ ಹೋರಾಡಲು ಪ್ರೇರೇಪಿಸುತ್ತದೆ. ಮನದಲಿ ಸದಾಕಾಲ ಸಕಾರಾತ್ಮಕ ಚಿಂತನೆ ಇರುತ್ತದೆ. ತಂದೆ ಅಥವಾ ಕುಟುಂಬದ ಹಿರಿಯರ ಸಲಹೆ ಪಾಲಿಸಿದಲ್ಲಿ ವೃತ್ತಿಯಲ್ಲಿ ಪ್ರಯೋಜನಕಾರಿ ಆಗಲಿದೆ. ಹಾಸ್ಯದ ಭಾವನೆ ಮನಸಿಗೆ ಶಾಂತಿ ನೆಮ್ಮದಿ ನೀಡುತ್ತದೆ. ಮಕ್ಕಳ ಜೊತೆಗಿನ ಸುದೀರ್ಘ ಕಾಲದ ಪ್ರಯಾಣ ಒತ್ತಡದವನ್ನು ಕಡಿಮೆ ಮಾಡುತ್ತದೆ. ಜೀವನದಲ್ಲಿನ ಬಹು ನಿರೀಕ್ಷಿತ ಬದಲಾವಣೆಯು ಉಂಟಾಗಲಿದೆ. ಗಾಳಿಮಾತುಗಳ ನಂಬಿದಲ್ಲಿ ಪ್ರೀತಿಪಾತ್ರರ ಜೊತೆಗಿನ ಸ್ನೇಹ ಸಂಬಂಧದಲ್ಲಿ ಬಿರುಕು ಮೂಡುತ್ತದೆ. ನಿಮ್ಮ ಕೆಲಸದಲ್ಲಿನ ಗುಣಮಟ್ಟವು ಹಿರಿಯ ಅಧಿಕಾರಿಗಳ ಮೇಲೆ ಒಳ್ಳೆಯ ಪ್ರಭಾವ ಬೀರಲಿದೆ. ವೈವಾಹಿಕ ಜೀವನದಲ್ಲಿ ಯಾವುದೇ ತೊಂದರೆ ಎದುರಾಗುವುದಿಲ್ಲ.

ಪರಿಹಾರ: ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಬಿಳಿ

ವೃಷಭ ರಾಶಿ

ಆರೋಗ್ಯದಲ್ಲಿ ಚೇತರಿಕೆ ಇರುತ್ತದೆ. ವ್ಯಾಯಾಮ ಮತ್ತು ಧ್ಯಾನವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಿರಿ. ಹೊಸ ವ್ಯಾಪಾರವನ್ನು ಪ್ರಾರಂಭಿಸಿ ಎಲ್ಲರ ಗಮನ ಸೆಳೆಯುವಿರಿ. ನಿಮ್ಮ ಬಗ್ಗೆ ನಿಮಗೆ ವಿಶ್ವಾಸವು ಹೆಚ್ಚುತ್ತದೆ. ಆತ್ಮೀಯರ ಬಗ್ಗೆ ತಪ್ಪು ಅಭಿಪ್ರಾಯ ಹೊಂದುವಿರಿ. ದಿನ ನಿತ್ಯದಂತೆ ಮನರಂಜನಾ ಸ್ಥಳಕ್ಕೆ ಮಕ್ಕಳ ಜೊತೆ ತೆರಳುವಿರಿ. ಹಿರಿಯರ ಸಲಹೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಜೀವನದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ. ಹಣಕಾಸಿನ ಯೋಜನೆಗಳು ನಿರೀಕ್ಷೆಯನ್ನು ಹುಸಿ ಮಾಡುವುದಿಲ್ಲ. ಸಮಯಕ್ಕೆ ತಕ್ಕಂತೆ ಬದುಕಲು ತೀರ್ಮಾನಿಸುವಿರಿ. ನಿಮ್ಮ ಉತ್ತಮ ಪ್ರಯತ್ನದಿಂದ ಕುಟುಂಬದ ಆದಾಯ ಹೆಚ್ಚುತ್ತದೆ. ನಿಮ್ಮ ಪ್ರೋತ್ಸಾಹದಿಂದಾಗಿ ನಿಮ್ಮ ಮಕ್ಕಳು ಹೊಸ ಚೈತನ್ಯವನ್ನು ಪಡೆಯುತ್ತಾರೆ.

ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಬೂದು ಬಣ್ಣ

ಮಿಥುನ ರಾಶಿ

ದೈನಂದಿನ ಜೀವನದಲ್ಲಿ ವಿಶೇಷವಾದ ತಿರುವುಗಳು ಎದುರಾಗಲಿವೆ. ವಾಹನ ಚಾಲನೆ ಮಾಡುವಾಗ ಎಚ್ಚರಿಕೆಯಿಂದಿರಿ. ಬೇರೆಯವರ ಕೆಲಸ ಕಾರ್ಯಗಳಲ್ಲಿ ಉದಾಸೀನತೆ ತೋರುವಿರಿ. ಸಮಸ್ಯೆಗಳನ್ನು ನೀವಾಗಿಯೇ ಉಂಟಾಗುವಂತೆ ಮಾಡುವಿರಿ. ನಿಮ್ಮ ತಾಯಿಯಯವರಿಂದ ಹಣಕಾಸಿನ ಸಹಾಯ ದೊರೆಯುವ ಸಾಧ್ಯತೆ ಇದೆ. ನಿಮ್ಮ ಉತ್ತಮ ಪ್ರಯತ್ನದಿಂದಾಗಿ ಆರ್ಥಿಕ ಪ್ರಗತಿ ಉಂಟಾಗಲಿದೆ. ಎಂಥಂಹ ಒತ್ತಡದ ಪರಿಸ್ಥಿತಿ ಎದುರಾದರೂ ತಾಳ್ಮೆಯಿಂದ ವರ್ತಿಸುವಿರಿ. ಮಕ್ಕಳ ಸಲುವಾಗಿ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಸಾಮಾಜಿಕ ಮಾಧ್ಯಮದಲ್ಲಿ ನಿಮ್ಮ ಪ್ರತಿಭೆಗೆ ತಕ್ಕ ಪುರಸ್ಕಾರ ದೊರೆಯಲಿದೆ.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕಂದು ಬಣ್ಣ

ಕಟಕ ರಾಶಿ

ಮನದಲ್ಲಿನ ಭಾವನೆಗಳನ್ನು ನಿಯಂತ್ರಿಸಲು ಸಫಲರಾಗುವಿರಿ. ನಿಮ್ಮ ಮನದಲ್ಲಿನ ಆತಂಕವನ್ನು ದೂರಮಾಡಲು ಸಂಗಾತಿಯು ಯಶಸ್ವಿಯಾಗುತ್ತಾರೆ. ಸ್ವಚಿಕಿತ್ಸೆಯ ಕಾರಣ ಆರೋಗ್ಯದಲ್ಲಿ ತೊಂದರೆ ಉಂಟುಮಾಡುತ್ತದೆ. ಮನೆಯಲ್ಲಿನ ಅನಗತ್ಯವಾದ ದುರಸ್ತಿಯಿಂದ ಹೆಚ್ಚಿನ ಹಣವನ್ನು ಖರ್ಚು ಮಾಡುವಿರಿ. ನಿಮ್ಮದೇ ತಪ್ಪಿನಿಂದಾಗಿ ಆರ್ಥಿಕ ತೊಂದರೆ ಎದುರಿಸಬೇಕಾಗುತ್ತದೆ. ಮಕ್ಕಳ ಸಹಾಯದಿಂದ ತೊಂದರೆಗಳಿಂದ ಪಾರಾಗುವಿರಿ. ಮಕ್ಕಳ ಭವಿಷ್ಯದ ಜೀವನದ ಬಗ್ಗೆ ಯೋಜನೆ ರೂಪಿಸುವಿರಿ. ವಿವಾದಾತ್ಮಕ ವಿಚಾರಗಳಿಂದ ದೂರ ಉಳಿಯುವಿರಿ. ನಿಮ್ಮ ಪ್ರತಿಸ್ಪರ್ಧಿಗಳು ಸುಲಭವಾಗಿ ಸೋಲೊಪ್ಪುತ್ತಾರೆ. ಹಾಸ್ಯದಿಂದ ತುಂಬಿದ ಮಾತುಕತೆಯಿಂದಸ್ನೇಹ ಸಂಬಂಧ ಉತ್ತಮವಾಗುತ್ತದೆ.

ಪರಿಹಾರ: ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಕಪ್ಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.