Horoscope Today: ಆತ್ಮೀಯರೇ ನಿಮ್ಮನ್ನು ಟೀಕೆ ಮಾಡಲಿದ್ದಾರೆ, ಅನಿರೀಕ್ಷಿತ ಮೂಲದಿಂದ ಹಣ ಸಿಗಲಿದೆ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಆತ್ಮೀಯರೇ ನಿಮ್ಮನ್ನು ಟೀಕೆ ಮಾಡಲಿದ್ದಾರೆ, ಅನಿರೀಕ್ಷಿತ ಮೂಲದಿಂದ ಹಣ ಸಿಗಲಿದೆ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

Horoscope Today: ಆತ್ಮೀಯರೇ ನಿಮ್ಮನ್ನು ಟೀಕೆ ಮಾಡಲಿದ್ದಾರೆ, ಅನಿರೀಕ್ಷಿತ ಮೂಲದಿಂದ ಹಣ ಸಿಗಲಿದೆ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ

28 ಮಾರ್ಚ್‌ 2024 ಗುರುವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (28th March 2024 Daily Horoscope).

ಮಾರ್ಚ್‌ 28ರ ದಿನಭವಿಷ್ಯ ಧನು ರಾಶಿಯಿಂದ ಮೀನದವರೆಗೆ
ಮಾರ್ಚ್‌ 28ರ ದಿನಭವಿಷ್ಯ ಧನು ರಾಶಿಯಿಂದ ಮೀನದವರೆಗೆ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.( 28th March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಗುರುವಾರ,

ತಿಥಿ: ತದಿಗೆ ಬೆಳಿಗ್ಗೆ 4.11 ರವರೆಗೂ ಇರುತ್ತದೆ. ಅನಂತರ ಚೌತಿ ಆರಂಭವಾಗಲಿದೆ.

ನಕ್ಷತ್ರ: ಸ್ವಾತಿ ನಕ್ಷತ್ರವು ಬೆಳಿಗ್ಗೆ 4.14 ರವರೆಗೂ ಇರುತ್ತದೆ. ಅನಂತರ ವಿಶಾಖ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಿಗ್ಗೆ 6.19

ಸೂರ್ಯಾಸ್ತ: ಸಂಜೆ 6.30

ರಾಹುಕಾಲ: ಬೆಳಿಗ್ಗೆ 1.30 ರಿಂದ ಬೆಳಿಗ್ಗೆ 3.00

ಧನಸ್ಸು

ಕುಟುಂಬದ ಹೆಚ್ಚಿನ ಜವಾಬ್ದಾರಿಯಿಂದ ದೂರ ಉಳಿಯುವಿರಿ. ಆತ್ಮೀಯರ ಟೀಕೆಗಳಿಗೆ ಬೇಸರಕ್ಕೆ ಒಳಗಾಗುವಿರಿ. ಅತಿಯಾದ ಶ್ರಮದಿಂದ ದೈಹಿಕವಾಗಿ ಬಳಲುವಿರಿ. ಉದ್ಯೋಗದಲ್ಲಿ ಸಮಾಧಾನಕರ ಬದಲಾವಣೆಗಳು ಉಂಟಾಗಲಿವೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ನಷ್ಟ ಸಮ ಪ್ರಮಾಣದಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಸಹಪಾಠಿಗಳ ಸ್ನೇಹದಿಂದ ನೆಮ್ಮದಿಯಿಂದ ಇರಲಿದ್ದಾರೆ. ಅಗತ್ಯಕ್ಕೆ ತಕ್ಕಷ್ಟು ಹಣವನ್ನು ಸಂಪಾದಿಸಬಲ್ಲಿರಿ. ಉದ್ಯೋಗ ಬದಲಿಸುವ ಅವಕಾಶಗಳನ್ನು ಬಳಸಿಕೊಳ್ಳಲು ವಿಫಲರಾಗುವಿರಿ. ಆತ್ಮೀಯರಿಂದ ಅಮೂಲ್ಯವಾದ ಉಡುಗೊರೆಗಳು ದೊರೆಯುವುದು, ಸಂಬಂಧಿಕರ ಜೊತೆಯಲ್ಲಿ ವಿವಾಹ ನಿಶ್ಚಯವಾಗುತ್ತದೆ. ಬುದ್ಧಿವಂತಿಕೆಯಿಂದ ವಿರೋಧಿಗಳ ಮನ ಗೆಲ್ಲುವಿರಿ.

ಪರಿಹಾರ: ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಕರ

ಮಾಡಿದ ತಪ್ಪನ್ನು ಒಪ್ಪಿಕೊಳ್ಳುವ ದೊಡ್ಡ ಗುಣ ನಿಮ್ಮಲ್ಲಿರುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ಜ್ಞಾನ ಸಂಪಾದನೆಯ ಅವಕಾಶ ದೊರೆಯುತ್ತದೆ. ಧಾರ್ಮಿಕ ಸ್ಥಳಕ್ಕೆ ದೀರ್ಘಕಾಲದ ಪ್ರಯಾಣ ಮಾಡುವಿರಿ. ಹಣಕಾಸಿನ ವ್ಯವಹಾರದಲ್ಲಿ ಲಾಭದಾಯಕ ಬೆಳವಣಿಗೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುವರು. ಮಕ್ಕಳ ಸಲುವಾಗಿ ಹೆಚ್ಚಿನ ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಅನುಮಾನದ ದೃಷ್ಟಿಯಿಂದ ಸಹೋದ್ಯೋಗಿಗಳನ್ನು ಕಾಣದಿರಿ. ಸ್ವಂತ ಬಳಕೆಗಾಗಿ ಹೊಸ ವಾಹನವನ್ನು ಕೊಳ್ಳುವಿರಿ. ಸಂತೋಷ ಕೂಟಕ್ಕಾಗಿ ಹೆಚ್ಚಿನ ಖರ್ಚು ವೆಚ್ಚಗಳು ಎದುರಾಗುತ್ತವೆ. ದೀರ್ಘಕಾಲದಿಂದ ಇದ್ದ ಆರೋಗ್ಯದ ತೊಂದರೆ ನಿವಾರಣೆಯಾಗಲಿದೆ. ಕೆಲಸ ಮಧ್ಯೆ ವಿಶ್ರಾಂತಿ ಪಡೆಯುವಿರಿ.

ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬೂದು ಬಣ್ಣ

ಕುಂಭ

ಕುಟುಂಬದ ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಗಮನ ನೀಡುವಿರಿ. ಉದ್ಯೋಗದಲ್ಲಿ ಎಲ್ಲರೊಂದಿಗೆ ಹೊಂದಿಕೊಂಡು ಹೋಗುವಿರಿ. ಆತ್ಮೀಯರ ಗೆಳೆತನದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ವ್ಯಾಪಾರದಲ್ಲಿ ವಿಶೇಷವಾದ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಎದುರಾಗುವ ಸಮಸ್ಯೆಗಳನ್ನು ಗೆಲ್ಲುವರು. ಬಹುದಿನದಿಂದ ಇದ್ದ ಹಣದ ಸಮಸೆಗಳು ಕ್ರಮೇಣವಾಗಿ ಕಡಿಮೆಯಾಗುತ್ತದೆ. ಎಲ್ಲರ ಜೊತೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಉದ್ಯೋಗ ಬದಲಿಸುವ ಅವಕಾಶಗಳನ್ನು ಉಪಯೋಗಿಸಿಕೊಳ್ಳುವಿರಿ. ಸಂಗಾತಿಗೆ ಸಂಬಂಧಿಸಿದ ಕೆಲಸವೊಂದನ್ನು ಪೂರ್ಣಗೊಳಿಸುವಿರಿ. ತಂದೆಯೊಂದಿಗಿನ ಮನಸ್ತಾಪ ಕೊನೆಗೊಳ್ಳುವುದು. ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳುವ ಯೋಚನೆ ಇರಲಿದೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಕಂದು ಬಣ್ಣ

ಮೀನ

ಕುಟುಂಬದ ಸದಸ್ಯರ ಜೊತೆಯಲ್ಲಿ ಮನರಂಜನಾ ಸ್ಥಳಕ್ಕೆ ತೆರಳುವಿರಿ. ಅನಿರೀಕ್ಷಿತ ಧನಲಾಭ ಇರಲಿದೆ. ಒಂಟಿತನ ಇಷ್ಟಪಡುವುದಿಲ್ಲ. ಉದ್ಯೋಗದಲ್ಲಿ ಒತ್ತಡವನ್ನು ನಿವಾರಿಸುವಿರಿ. ಉತ್ತಮ ಆತ್ಮವಿಶ್ವಾಸ ಇರುತ್ತದೆ. ವ್ಯಾಪಾರ ವ್ಯವಹಾರದಲ್ಲಿನ ಹೊಸ ಯೋಜನೆಗಳನ್ನು ಅನುಮೋದಿಸುವಿರಿ. ವಿದ್ಯಾರ್ಥಿಗಳು ವಯಸ್ಸು ಚಿಕ್ಕದಾದರು ಸಾಧಕ ಬಾಧಕಗಳ ಬಗ್ಗೆ ಎಚ್ಚರಿಕೆ ವಹಿಸುತ್ತಾರೆ. ಗೃಹಿಣಿಯರು ತಮ್ಮ ಬಿಡುವಿನ ವೇಳೆಯಲ್ಲಿ ಸಣ್ಣ ಪ್ರಮಾಣದ ವ್ಯಾಪರವನ್ನು ಆರಂಭಿಸುವರು. ಅವಿವಾಹಿತರಿಗೆ ವಿವಾಹವಾಗುವ ಸೂಚನೆಗಳಿವೆ. ಎದುರಾಗುವ ಜವಾಬ್ದಾರಿಗಳನ್ನು ಒಮ್ಮೆಲೆ ಒಪ್ಪಿಕೊಳ್ಳುವುದಿಲ್ಲ. ಮನದಲ್ಲಿ ವೈರಾಗ್ಯ ಭಾವನೆ ಮೂಡುತ್ತದೆ. ಸಾಕುಪ್ರಾಣಿಗಳಿಂದ ದೂರವಿರಿ.

ಪರಿಹಾರ: ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ)

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.