ತಾಯಿ ಆರೋಗ್ಯದಲ್ಲಿ ಏರುಪೇರು, ಮತ್ತೊಬ್ಬರೊಂದಿಗೆ ದುಡುಕಿ ಮಾತನಾಡುವ ಮೊದಲು ಯೋಚಿಸಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ತಾಯಿ ಆರೋಗ್ಯದಲ್ಲಿ ಏರುಪೇರು, ಮತ್ತೊಬ್ಬರೊಂದಿಗೆ ದುಡುಕಿ ಮಾತನಾಡುವ ಮೊದಲು ಯೋಚಿಸಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ತಾಯಿ ಆರೋಗ್ಯದಲ್ಲಿ ಏರುಪೇರು, ಮತ್ತೊಬ್ಬರೊಂದಿಗೆ ದುಡುಕಿ ಮಾತನಾಡುವ ಮೊದಲು ಯೋಚಿಸಿ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

28 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (28th May 2024 Daily Horoscope).

ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(28th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಮಂಗಳವಾರ

ತಿಥಿ: ಪಂಚಮಿ 02.54 ರವರೆಗೂ ಇರುತ್ತದೆ. ಆನಂತರ ಷಷ್ಠಿ ಆರಂಭವಾಗುತ್ತದೆ.

ನಕ್ಷತ್ರ : ಉತ್ತರಾಷಾಢ ನಕ್ಷತ್ರವು ಬೆಳಗ್ಗೆ 09.29 ರವರೆಗು ಇರುತ್ತದೆ. ಆನಂತರ ಶ್ರವಣ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ05.52

ಸೂರ್ಯಾಸ್ತ: ಸಂಜೆ 06.41

ರಾಹುಕಾಲ: 03.32 ರಿಂದ 05.08

ರಾಶಿಫಲ

ಧನಸ್ಸು

ಕುಟುಂಬದಲ್ಲಿ ಒತ್ತಡ ಕಡಿಮೆಯಾಗಲಿದೆ. ತಂದೆಯವರ ಹಣಕಾಸಿನ ತೊಂದರೆಗೆ ಶಾಶ್ವತ ಪರಿಹಾರ ರೂಪಿಸುವಿರಿ. ಉದ್ಯೋಗದಲ್ಲಿ ಬಡ್ತಿ ದೊರೆಯು ದೂರದೂರಿಗೆ ಪಯಣಿಸುವಿರಿ. ಅನಿವಾರ್ಯವಾಗಿ ನಿಮ್ಮ ಜೀವನಶೈಲಿಯನ್ನು ಬದಲಿಸಿಕೊಳ್ಳುವಿರಿ. ಹಣಕಾಸಿನ ಯೋಜನೆಯಲ್ಲಿ ಹಣ ವಿನಿಯೋಗಿಸುವಿರಿ. ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರವಾಸಕ್ಕೆ ತೆರಳುವಿರಿ. ಮಕ್ಕಳ ಜೊತೆಯಲ್ಲಿ ಹೆಚ್ಚಿನ ವೇಳೆ ಕಳೆಯುವಿರಿ. ತಾಯಿಯ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಸಂಗಾತಿಯ ಸಹಾಯದಿಂದ ಹೊಸ ವಾಹನ ಕೊಳ್ಳುವಿರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಒಮ್ಮೆ ತೆಗೆದುಕೊಂಡ ತೀರ್ಮಾನಗಳನ್ನು ಬದಲಿಸುವಿರಿ. ವಾದ ವಿವಾದಗಳಿಂದ ದೂರ ಉಳಿಯುವಿರಿ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ತಿಳಿ ಹಸಿರು

ಮಕರ

ಮಾನಸಿಕ ಒತ್ತಡದಿಂದ ಅನಾರೋಗ್ಯಕ್ಕೆ ಒಳಗಾಗುವಿರಿ. ಸ್ನೇಹಿತರ ಜೊತೆಯಲ್ಲಿ ಮನರಂಜನಾ ಕಾರ್ಯಕ್ರಮವನ್ನು ಆಯೋಜಿಸುವಿರಿ. ಅನಾವಶ್ಯಕವಾಗಿ ಹಣವನ್ನು ಖರ್ಚು ಮಾಡುವುದಿಲ್ಲ. ಲಾಭವಿಲ್ಲದ ಕೆಲಸವನ್ನು ಮಾಡುವುದಿಲ್ಲ. ನೀವು ಅಂದುಕೊಂಡಂತೆ ಮಕ್ಕಳ ಜೀವನವನ್ನು ರೂಪಿಸುವಿರಿ. ಅತಿಯಾದ ವಾದ ವಿವಾದಗಳ ಕಾರಣ ಶಾಂತಿ ಕಳೆದುಕೊಳ್ಳುವಿರಿ. ದುಡುಕಿ ಮಾತನಾಡುವ ಮೊದಲು ಯೋಚಿಸಿ. ಸಂಗಾತಿಯೊಂದಿಗೆ ಪ್ರೀತಿ ವಿಶ್ವಾಸದಿಂದ ವರ್ತಿಸಿ. ನಿಮ್ಮ ಕೆಲಸ ಕಾರ್ಯದಲ್ಲಿ ಉತ್ತಮ ಪ್ರಗತಿ ಉಂಟಾಗುತ್ತದೆ.. ಕುಟುಂಬದ ಕಿರಿಯ ಸದಸ್ಯರೊಂದಿಗೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ಗಮನ ಇರಲಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನಸು ಗೆಂಪು

ಕುಂಭ

ಆತ್ಮೀಯರ ಜೊತೆ ಅನಾವಶ್ಯಕ ವಾದ ವಿವಾದಗಳು ಇರುತ್ತವೆ. ಮನದ ನೋವನ್ನು ಮರೆಮಾಚಿ ಶಾಂತವಾಗಿರಲು ಪ್ರಯತ್ನಿಸುವಿರಿ. ಹಣದ ಕೊರತೆಯಿಂದ ಬೇಸರಕ್ಕೆ ಒಳಗಾಗುವಿರಿ. ಕುಟುಂಬದಲ್ಲಿ ಒಮ್ಮತ ಇರುವುದಿಲ್ಲ. ಆತಂಕದ ಪರಿಸ್ಥಿತಿಯಲ್ಲಿ ಬುದ್ಧಿವಂತಿಕೆಯಿಂದ ವರ್ತಿಸುವಿರಿ. ಕುಟುಂಬದವರ ಸಲಹೆಯನ್ನು ಪಾಲಿಸಿದಲ್ಲಿ ತೊಂದರೆಯಿಂದ ಪಾರಾಗುವಿರಿ. ನಿಮ್ಮ ಮಕ್ಕಳ ಗುರುತರ ಸಾಧನೆ ಸಂತೋಷಕ್ಕೆ ಕಾರಣವಾಗುತ್ತದೆ. ನಿಮ್ಮ ನಿರೀಕ್ಷೆಯಂತೆ ಆರ್ಥಿಕ ಪರಿಸ್ಥಿತಿಯಲ್ಲಿ ಪ್ರಗತಿ ಕಂಡುಬರುತ್ತದೆ. ನಿಮ್ಮ ಹೆಸರನ್ನು ತಮ್ಮ ಸ್ವಾರ್ಥಕ್ಕೆ ಬಳಸುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಸಾಲದ ವ್ಯವಹಾರದಲ್ಲಿ ಜಾಗರೂಕರಾಗಿರಿ. ಬಿಡುವಿನ ಸಮಯವನ್ನು ಆನಂದಿಸಲು ಜನರಿಂದ ದೂರ ಉಳಿಯಲು ಬಯಸುವಿರಿ. ನಿಮ್ಮ ಮನಸ್ಸಿಗೆ ಇಷ್ಟವೆನಿಸುವ ಕೆಲಸವನ್ನು ಆಯ್ಕೆ ಮಾಡುವಿರಿ. ವೈವಾಹಿಕ ಜೀವನ ಸಂತಸದಿಂದ ಕೂಡಿರುತ್ತದೆ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಮೀನ

ನಿಮ್ಮಲ್ಲಿನ ಆತ್ಮವಿಶ್ವಾಸ ಕಡಿಮೆ ಆಗಲಿದೆ. ಎಂದಿನಂತೆ ಚುರುಕುತನದಿಂದ ಕೆಲಸ ಕಾರ್ಯವನ್ನು ಆರಂಭಿಸುವಿರಿ. ಆರೋಗ್ಯ ಸ್ಥಿರವಾಗಿರುತ್ತದೆ. ಸಹೋದ್ಯೋಗಿಗಳು ನಿಮ್ಮನ್ನು ಬೆಂಬಲಿಸುತ್ತಾರೆ. ಆತ್ಮೀಯರು ನಿಮ್ಮೊಂದಿಗೆ ಪಾಲುದಾರಿಕೆಯ ವ್ಯಾಪಾರ ಆರಂಭಿಸುತ್ತಾರೆ. ಮನಸ್ಸಿನ ಶಾಂತಿ ಒಳ್ಳೆಯ ಕೆಲಸಗಳನ್ನು ಮಾಡಲು ನಿಮ್ಮನ್ನು ಪ್ರೇರೇಪಿಸುತ್ತದೆ. ರಾತ್ರಿಯ ಪ್ರಯಾಣ ಮಾಡುವುದರಿಂದ ದೂರವಿರಿ. ಏಕಾಂಗಿಯಾಗಿ ಇರುವವರು ಕುಟುಂಬದವರೊಡನೆ ಬಾಳಲು ಇಚ್ಚಿಸುತ್ತಾರೆ. ವಿಶೇಷ ವ್ಯಕ್ತಿಯೊಬ್ಬರನ್ನು ಭೇಟಿಯಾಗುವ ಅವಕಾಶ ದೊರೆಯುತ್ತದೆ. ಕುಟುಂಬದ ಹಿರಿಯರ ಸಹಾಯ ದೊರೆಯುತ್ತದೆ. ಹೊಸ ವ್ಯಾಪಾರ ಆರಂಭಿಸುವ ಸೂಚನೆಗಳಿವೆ. ಸಂಗಾತಿಯ ಆರೋಗ್ಯದಲ್ಲಿ ತೊಂದರೆ ಇರುತ್ತದೆ.

ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ನಸು ಗೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.