Horoscope Today: ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ, ಮಕ್ಕಳ ಜೊತೆ ಮನಸ್ತಾಪ ಉಂಟಾಗುವ ಸಾಧ್ಯತೆ: ಮಾರ್ಚ್‌ 29ರ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ, ಮಕ್ಕಳ ಜೊತೆ ಮನಸ್ತಾಪ ಉಂಟಾಗುವ ಸಾಧ್ಯತೆ: ಮಾರ್ಚ್‌ 29ರ ರಾಶಿಫಲ

Horoscope Today: ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ, ಮಕ್ಕಳ ಜೊತೆ ಮನಸ್ತಾಪ ಉಂಟಾಗುವ ಸಾಧ್ಯತೆ: ಮಾರ್ಚ್‌ 29ರ ರಾಶಿಫಲ

29 ಮಾರ್ಚ್‌ 2024, ಶುಕ್ರವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (29th March 2024 Daily Horoscope).

29 ಮಾರ್ಚ್‌ 2024, ಶುಕ್ರವಾರ
29 ಮಾರ್ಚ್‌ 2024, ಶುಕ್ರವಾರ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (29th March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ : ಚೌತಿ 04.56 ವರೆಗೂ ಇದ್ದು ನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ : ವಿಶಾಖ ನಕ್ಷತ್ರವು ಸಂಜೆ 05.35 ರವರೆಗೂ ಇರುತ್ತದೆ ನಂತರ ಅನೂರಾಧಾ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.16

ಸೂರ್ಯಾಸ್ತ: ಸಂಜೆ 06.30

ರಾಹುಕಾಲ : ಬೆಳಗ್ಗೆ 10.30 ರಿಂದ 12.00

ರಾಶಿ ಫಲ

ಸಿಂಹ

ಕುಟುಂಬದಲ್ಲಿ ಬೇರೆಯವರ ತೀರ್ಮಾನಗಳಿಗೆ ಬದ್ಧರಾಗಬೇಕಾಗುತ್ತದೆ. ಉದ್ಯೋಗದಲ್ಲಿ ಅನಿರೀಕ್ಷಿತ ಉಪಯೋಗಕರ ಘಟನೆಗಳು ನಡೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅನುಮಾನದ ಮಾತಿಗೆ ಬೆಲೆ ನೀಡದಿರಿ. ವಿದ್ಯಾರ್ಥಿಗಳು ಹಟದ ಗುಣ ಉತ್ತಮ ಫಲಗಳನ್ನು ನೀಡಲಿದೆ. ಹಣದ ವಿಚಾರದಲ್ಲಿ ಆತ್ಮೀಯರ ಸಲಹೆಯನ್ನು ಪಾಲಿಸಬೇಕಾಗುತ್ತದೆ. ಮಕ್ಕಳ ಜೊತೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಹೊಸ ವ್ಯಾಪಾರವನ್ನು ಆರಂಭಿಸುವ ಯೋಚನೆ ಮಾಡುವಿರಿ. ಭೂ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಸಾಲದ ವ್ಯವಹಾರ ಮಾಡದಿರಿ. ಮನೆ ಮಂದಿಯ ಜೊತೆ ಪ್ರವಾಸಕ್ಕೆ ತೆರಳುವಿರಿ .

ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಹಳದಿ

ಕನ್ಯಾ

ಕುಟುಂಬದ ಆಲೋಚನೆಗಳನ್ನು ಕಾರ್ಯರೂಪಕ್ಕೆ ತರುವಿರಿ. ಉದ್ಯೋಗದಲ್ಲಿ ತೆಗೆದುಕೊಂಡ ತಪ್ಪು ನಿರ್ಧಾರದಿಂದ ಆತಂಕದ ಕ್ಷಣವನ್ನು ಎದುರಿಸದಿರಿ. ವ್ಯಾಪಾರ ವ್ಯವಹಾರಗಳಲ್ಲಿ ಖರ್ಚಿಗೆ ತಕ್ಕ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಶಾಂತಿ ಸಹನೆ ಬೆಳೆಸಿಕೊಳ್ಳಬೇಕು. ಕಷ್ಟ ಪಟ್ಟು ಕೂಡಿಟ್ಟ ಹಣ ಖರ್ಚಾಗಬಹುದು. ಆತ್ಮೀಯರ ಆಸ್ತಿಯ ವಿವಾದ ಬಗೆಹರಿಸುವಿರಿ. ಸಂಗೀತ ನಾಟ್ಯದಂತಹ ಕಲೆ ಬಲ್ಲವರಿಗೆ ವಿಶೇಷ ಅವಕಾಶ ದೊರೆಯಲಿದೆ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಬದಲಿಸದಿರಿ. ಗೆಲುವಿನ ದೃಷ್ಠಿಯಿಂದ ಸಣ್ಣಪುಟ್ಟ ವಿಚಾರಗಳನ್ನೂ ಹೆಚ್ಚಿನ ಪ್ರಯತ್ನದಿಂದ ಪೂರೈಸುವಿರಿ. ಆತ್ಮೀಯರ ಆಗಮನದಿಂದ ಕುಟುಂಬದಲ್ಲಿ ಸಂತಸ ಉಂಟಾಗುತ್ತದೆ. ಸಾಕು ಪ್ರಾಣಿಯಿಂದ ತೊಂದರೆ ಉಂಟಾಗಬಹುದು.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು ಉತ್ತರ

ಅದೃಷ್ಟದ ಬಣ್ಣ: ಹಸಿರು

ತುಲಾ

ಕುಟುಂಬದ ಒತ್ತಡ ಕಡಿಮೆಯಾಗಲು ಸೂಕ್ತ ಬದಲಾವಣೆಯನ್ನು ತರುವಿರಿ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರವಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ದೊರೆಯುತ್ತದೆ. ಕುಟುಂಬದ ಸದಸ್ಯರ ಆರೋಗ್ಯದಲ್ಲಿ ತೊಂದರೆ ಇರಲಿದೆ. ಕೆಲಸದ ಒತ್ತಡದಿಂದ ಮಾನಸಿಕವಾಗಿ ಕುಗ್ಗುವಿರಿ. ಸಮಯದ ಅಭಾವದಿಂದ ಕೆಲಸ ಕಾರ್ಯಗಳು ಅಪೂರ್ಣಗೊಳ್ಳುತ್ತವೆ. ಆರೋಗ್ಯವನ್ನು ಉಳಿಸಿಕೊಳ್ಳಲು ಲಘು ವ್ಯಾಯಾಮವನ್ನು ಆರಂಭಿಸುವಿರಿ. ಸಂಗಾತಿಯ ಮಾತಿನ ಆಂತರ್ಯವನ್ನು ಅರಿಯದೆ ಹೋಗುವಿರಿ. ಮನೆಯ ಅಂದವನ್ನು ಹೆಚ್ಚಿಸಲು ದುಬಾರಿ ಪದಾರ್ಥಗಳನ್ನು ಕೊಳ್ಳುವಿರಿ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನೀಲಿ

ವೃಶ್ಚಿಕ

ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ಕೋಪವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸಿ. ಉದ್ಯೋಗದಲ್ಲಿನ ಬದಲಾವಣೆಯನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಅಧಿಕಾರಿಯ ಸ್ಥಾನ ಮಾನ ದೊರೆಯರೂ ಒತ್ತಡ ಕಡಿಮೆ ಆಗುವುದಿಲ್ಲ. ವ್ಯಾಪಾರ ವ್ಯವಹಾರಗಳ ಅಬಿವೃದ್ದಿಗೆ ಹೆಚ್ಚಿನ ಹಣಕಾಸಿನ ಅವಶ್ಯಕತೆ ಎದುರಾಗುತ್ತದೆ. ಮಕ್ಕಳ ವಿವಾಹದ ಬಗ್ಗೆ ಎಚ್ಚರಿಕೆಯ ತೀರ್ಮಾನ ಕೈಗೊಳ್ಳಿರಿ. ವಿದ್ಯಾರ್ಥಿಗಳು ಹಟ, ವಿವಾದವನ್ನು ಉಂಟುಮಾಡಲಿದೆ. ಕುಟುಂಬಕ್ಕೆ ಸೇರಿದ ಮುಖ್ಯವಾದ ಕೆಲಸವೊಂದು ಅಪೂರ್ಣಗೊಳ್ಳಲಿದೆ. ಹೊಸ ವ್ಯಾಪಾರವನ್ನು ಆರಂಭಿಸಿ ಯಶಸ್ಸನ್ನು ಗಳಿಸುವಿರಿ. ಅತಿಯಾದ ಓಡಾಟದಿಂದ ಬೇಸರ ಉಂಟಾಗಲಿದೆ. ಕೋಪ ಬಂದಲ್ಲಿ ಮೌನವಾಗಿರುವುದು ಒಳ್ಳೆಯದು.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೇರಳೆ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.