ಉದ್ಯೋಗದ ಸ್ಥಳದಲ್ಲಿ ಮಹತ್ತರ ಬದಲಾವಣೆ, ಸಂಗಾತಿಯೊಂದಿಗೆ ವಾದ ವಿವಾದ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಉದ್ಯೋಗದ ಸ್ಥಳದಲ್ಲಿ ಮಹತ್ತರ ಬದಲಾವಣೆ, ಸಂಗಾತಿಯೊಂದಿಗೆ ವಾದ ವಿವಾದ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಭವಿಷ್ಯ

ಉದ್ಯೋಗದ ಸ್ಥಳದಲ್ಲಿ ಮಹತ್ತರ ಬದಲಾವಣೆ, ಸಂಗಾತಿಯೊಂದಿಗೆ ವಾದ ವಿವಾದ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಭವಿಷ್ಯ

29 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (29th May 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (29th May 2024 Daily Horoscope).

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಬುಧವಾರ

ತಿಥಿ: ಷಷ್ಠಿ 01.06 ರವರೆಗೂ ಇರುತ್ತದೆ ನಂತರ ಸಪ್ತಮಿ ಆರಂಭವಾಗುತ್ತದೆ.

ನಕ್ಷತ್ರ : ಶ್ರವಣ ನಕ್ಷತ್ರವು ಬೆಳಗ್ಗೆ 08.26 ರವರೆಗೂ ಇದ್ದು ನಂತರ ಧನಿಷ್ಠ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.52

ಸೂರ್ಯಾಸ್ತ: ಸಂಜೆ 06.41

ರಾಹುಕಾಲ: 12.20 ರಿಂದ 01.56

ರಾಶಿಫಲ

 

ಸಿಂಹ

ನಿಮ್ಮ ಬಗ್ಗೆ ಕುಟುಂಬದಲ್ಲಿ ಕನಿಕರದ ಭಾವನೆ ಮೂಡಲಿದೆ. ಜವಾಬ್ದಾರಿಯಿಂದ ಕುಟುಂಬಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡಲು ಅನುವಾಗುವಿರಿ. ಅದ್ಭುತ ಎನಿಸುವ ಉಡುಗೊರೆಯೊಂದು ನಿಮ್ಮದಾಗಲಿದೆ. ಹಣ ಉಳಿತಾಯದ ಬಗ್ಗೆ ಯೋಜನೆ ರೂಪಿಸುವಿರಿ. ಉದ್ಯೋಗದಲ್ಲಿ ಹೊಸದಾಗಿ ಕಲಿಯಬೇಕಾದ ವಿಚಾರಗಳಿಗೆ ಒತ್ತು ನೀಡುವಿರಿ. ನಿಮ್ಮಲ್ಲಿನ ಕಲಾ ಕೌಶಲ್ಯವನ್ನು ಆತ್ಮೀಯರಿಗೆ ಧಾರೆ ಎರೆಯುವಿರಿ. ದೃಢವಾದ ನಿರ್ಧಾರದಿಂದ ಹಣ ಉಳಿಸಲಿದ್ದೀರಿ. ಮಾತಿಗಿಂತಲೂ ಮೌನವೇ ಸರಿ ಎಂಬ ನಿರ್ಧಾರಕ್ಕೆ ಬರುವಿರಿ. ಸಂಗಾತಿ ಜೊತೆ ಮಧುರವಾದ ಸಂಬಂಧ ಇರುತ್ತದೆ. ಹೊಗಳಿಕೆಗೆ ಮರುಳಾಗಿ ಹಣದ ಸಹಾಯ ಮಾಡುವಿರಿ. ಆರೋಗ್ಯ ಸಾಮಾನ್ಯವಾಗಿರುತ್ತದೆ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಕೆಂಪು

ಕನ್ಯಾ

ನಿಮ್ಮ ಸಂಗಾತಿ ಅಪರೂಪಕ್ಕೆ ನಿಮ್ಮ ಬಗ್ಗೆ ಹೊಗಳಿಕೆಯ ಮಾತುಗಳನ್ನು ಆಡುತ್ತಾರೆ. ನಿಮ್ಮಲ್ಲಿದ್ದ ಏಕಾಂಗಿ ಮನೋಭಾವನೆ ದೂರವಾಗಲಿದೆ. ಉದ್ಯೋಗದಲ್ಲಿ ಸಂಭವಿಸುವ ಬದಲಾವಣೆಗಳು ನಿಮಗೆ ವರವಾಗಲಿದೆ. ಇಂದು ಎಲ್ಲರೊಡನೆ ಮಂಗಳ ಕಾರ್ಯವೊಂದರಲ್ಲಿ ಭಾಗಿಯಾಗುವಿರಿ. ಬಿಡುವಿನ ವೇಳೆ ಮಕ್ಕಳ ಜೊತೆ ವಿಹಾರಕ್ಕೆ ತೆರಳುವಿರಿ. ಹಿರಿಯರ ಅನುಭವದಿಂದ ಬಾಳಿನ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಿರಿ. ಬೇರೆಯವರ ತಪ್ಪನ್ನು ಮನ್ನಿಸುವ ನೀವು ನಿಮ್ಮ ತಪ್ಪಿಗೆ ಪಶ್ಚಾತಾಪ ಪಡುವಿರಿ. ಬೇರೆಯವರನ್ನು ಟೀಕಿಸದಿರಿ. ನಿಮ್ಮ ಉತ್ತಮ ಪ್ರಯತ್ನಗಳಿಗೆ ಉನ್ನತ ಫಲಿತಾಂಶ ದೊರೆಯುತ್ತದೆ. ಪಾಲುದಾರಿಕೆ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ : ಎಲೆ ಹಸಿರು

ತುಲಾ

ನಿರೀಕ್ಷಿತ ಮಟ್ಟದಲ್ಲಿ ಆರ್ಥಿಕ ಪ್ರಗತಿ ಉಂಟಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ದೊರೆಯಲಿದೆ. ಕುಟುಂಬದ ಎಲ್ಲರನ್ನೂ ವಿಶ್ವಾಸದಿಂದ ನೋಡಲು ಪ್ರಯತ್ನಿಸುವಿರಿ. ನಿಮ್ಮ ಚುರುಕುತನದಿಂದ ಬಹಳ ದಿನದ ಹಿಂದಿನ ಕೆಲಸ ಕಾರ್ಯವೊಂದು ಪೂರ್ಣಗೊಳ್ಳಲಿದೆ. ಅನಾವಶ್ಯಕವಾಗಿ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತೆಗೀಡಾಗುವಿರಿ. ನಿಮ್ಮ ಹೊಸ ಹಣಕಾಸಿನ ಯೋಜನೆಯನ್ನು ಆತ್ಮೀಯರ ಸಹಾಯದಿಂದ ಆರಂಭಿಸುವಿರಿ. ನೆರೆಹೊರೆಯವರ ವಿಶ್ವಾಸಕ್ಕೆ ಪಾತ್ರರಾಗುವಿರಿ. ಬಾಳ ಸಂಗಾತಿಯ ಮುಂಗೋಪ ಬೇಸರಕ್ಕೆ ಕಾರಣವಾಗಲಿದೆ. ಉದ್ಯೋಗದಲ್ಲಿನ ಸಮಸ್ಯೆಗಳು ತಾನಾಗಿಯೆ ಬಗೆಹರಿಯಲಿದೆ. ನಿಮ್ಮ ಪ್ರಭಾವದಿಂದ ಆತ್ಮೀಯರ ಭೂವಿವಾದವು ದೂರವಾಗಲಿದೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು ಉತ್ತರ

ಅದೃಷ್ಟದ ಬಣ್ಣ: ಕೇಸರಿ

ವೃಶ್ಚಿಕ

ಕುಟುಂಬದ ಒಳಿತಿಗಾಗಿ ಕೋಪದ ಅಸ್ತ್ರವನ್ನು ಬಳಸುವಲ್ಲಿ ಯಶಸ್ವಿಯಾಗುವಿರಿ. ಒತ್ತಾಯಕ್ಕೆ ಮಣಿದು ವಿರೋಧಿಗಳನ್ನು ಬೇಟಿ ಮಾಡುವಿರಿ. ನಿಮ್ಮ ಸಂಗಾತಿಯ ಜೊತೆ ಅನಾವಶ್ಯಕವಾದ ವಾದ ವಿವಾದ ಎದುರಾಗುತ್ತದೆ. ನಿಮ್ಮ ಮಗುವಿನ ಆರೋಗ್ಯದಲ್ಲಿ ತೊಂದರೆ ಉಂಟಾಗಲಿದೆ. ಆತ್ಮೀಯರಿಂದ ದೊರೆತ ಹಣದಿಂದ ನಿಮ್ಮ ಸಮಸ್ಯೆಗಳು ದೂರವಾಗುತ್ತವೆ. ಕೋಪದಿಂದ ಮುಕ್ತರಾದಲ್ಲಿ ಹೊಸ ಅವಕಾಶವೊಂದು ನಿಮ್ಮದಾಗಲಿದೆ. ಆಮಂತ್ರಣ ಇಲ್ಲದೆ ಹೋದರೂ ಕಾರ್ಯಕ್ರಮವೊಂದಕ್ಕೆ ಭೇಟಿ ನೀಡಬೇಕಾಗುತ್ತದೆ. ಹಿರಿಯ ಸಹೋದ್ಯೋಗಿಗಳ ಸಲಹೆಯನ್ನು ಒಪ್ಪಿದಲ್ಲಿ ಯಶಸ್ಸು ನಿಮದಾಗಲಿದೆ. ಸಂಬಂಧಿಕರಿಂದ ದೂರ ಉಳಿಯಲು ಪ್ರಯತ್ನಿಸುವಿರಿ. ಸಂಗಾತಿಯ ಪ್ರೀತಿ ವಿಶ್ವಾಸ ಹೊಸ ಆಸೆಗೆ ಕಾರಣವಾಗಲಿದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.