ಪರಿಚಯಸ್ಥರ ಜೊತೆ ವಿವಾಹ ನಿಶ್ಚಯ; ಹಣಕಾಸಿನ ವ್ಯವಹಾರಕ್ಕಾಗಿ ಪರಸ್ಥಳಕ್ಕೆ ಪ್ರಯಾಣ: ಏಪ್ರಿಲ್ 2ರ ದಿನ ಭವಿಷ್ಯ
2 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (2nd April 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (2nd April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಮಂಗಳವಾರ
ತಿಥಿ: ಅಷ್ಟಮಿ 03.14 ರವರೆಗೂ ಇದ್ದು ನಂತರ ನವಮಿ ಆರಂಭವಾಗಲಿದೆ.
ನಕ್ಷತ್ರ : ಪೂರ್ವಾಷಾಢ ನಕ್ಷತ್ರವು ಸಂಜೆ 06.22 ರವರೆಗೂ ಇದ್ದು ನಂತರ ಉತ್ತರಾಷಾಢ ನಕ್ಷತ್ರವು ಆರಂಭವಾಗಲಿದೆ.
ಸೂರ್ಯೋದಯ: ಬೆಳಗ್ಗೆ 06.16
ಸೂರ್ಯಾಸ್ತ: ಸಂಜೆ 06.31
ರಾಹುಕಾಲ: 03.00 ರಿಂದ 04.30
ರಾಶಿಫಲ
ಸಿಂಹ
ಸಹನೆಯಿಲ್ಲದ ಕಾರಣ ಕುಟುಂಬದಲ್ಲಿ ಗಂಭೀರವಾದ ವಾತಾವರಣವಿರುತ್ತದೆ. ಅತಿಯಾದ ಆತ್ಮವಿಶ್ವಾಸದಿಂದ ಉದ್ಯೋಗದಲ್ಲಿ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಬೇಕು. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಕಂಡು ಬರುತ್ತದೆ. ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಮುಂದುವರೆಯುತ್ತಾರೆ. ಸರ್ಕಾರಿ ನೌಕರಿ ಅಥವಾ ಸರ್ಕಾರದ ಅನುದಾನದಲ್ಲಿ ನಡೆಯುತ್ತಿರುವ ಸಂಸ್ಥೆಗಳಲ್ಲಿ ಉದ್ಯೋಗ ದೊರೆಯುತ್ತದೆ. ಧಾರ್ಮಿಕ ಮನೋಭಾವನೆ ಹೆಚ್ಚುತ್ತದೆ. ವಂಶದ ಹಿರಿಯರೊಬ್ಬರ ಆಗಮನ ಸಂತಸಕ್ಕೆ ಕಾರಣವಾಗುತ್ತದೆ. ಐಷಾರಾಮಿ ವಾಹನವನ್ನು ಕೊಳ್ಳುವ ಆಸೆ ಈಡೇರಲಿದೆ. ತಂದೆಯವರ ಅವಶ್ಯಕತೆಗಳನ್ನು ಪೂರೈಸಿ ದಿನದ ಕೆಲಸವನ್ನು ಪೂರ್ಣಗೊಳಿಸುವಿರಿ.
ಪರಿಹಾರ : ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು ಉತ್ತರ
ಅದೃಷ್ಟದ ಬಣ್ಣ : ಕಿತ್ತಳೆ
ಕನ್ಯಾ
ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಸರಳ ವ್ಯಾಯಾಮವನ್ನು ಆವಲಂಭಿಸುವಿರಿ. ಯೋಗ ಆಯುರ್ವೇದದ ರೀತಿಯ ಸಾಂಪ್ರದಾಯಿಕ ವಿದ್ಯೆ ಕಲಿಯಲು ಆರಂಭಿಸುವಿರಿ. ಸಮಾಜದಲ್ಲಿ ವಿಶೇಷ ಸ್ಥಾನಗಳಿಸುವ ಆಸೆ ಈಡೇರುತ್ತದೆ. ಉದ್ಯೋಗದಲ್ಲಿ ಆಕಸ್ಮಿಕವಾಗಿ ಎದುರಾಗುವ ಸಮಸ್ಯೆಗಳನ್ನು ಗೆಲ್ಲುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಅನಾವಶ್ಯಕ ಖರ್ಚು ವೆಚ್ಚಗಳು ಕಂಡುಬರುತ್ತವೆ. ವಿವಾಹ ಯೋಗವಿದೆ. ಕುಟುಂಬದ ಹಿರಿಯರ ಆರೋಗ್ಯಕ್ಕಾಗಿ ಹೆಚ್ಚಿನ ಹಣ ವೆಚ್ಚವಾಗಬಹುದು. ಬೇಸರದಿಂದ ದೂರವಾಗಲು ಮನರಂಜನೆಯನ್ನು ಆಶ್ರಯಿಸುವಿರಿ. ಕಾನೂನಿನ ಸಹಾಯದಿಂದ ಭೂವಿವಾದವನ್ನು ಗೆಲ್ಲುವಿರಿ. ಪಶು ಸಂಗೋಪನೆಯಲ್ಲಿ ಆಸಕ್ತಿ ಇರುತ್ತದೆ. ವಿದ್ಯಾರ್ಥಿಗಳು ಉನ್ನತ ಅಧ್ಯಯನದಲ್ಲಿ ಮುಂದುವರೆಯುವರು.
ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು ಈಶಾನ್ಯ
ಅದೃಷ್ಟದ ಬಣ್ಣ: ಹಳದಿ
ತುಲಾ
ದೊರೆಯುವ ಅನುಕೂಲತೆಗಳನ್ನು ಕುಟುಂಬದ ಒಳಿತಿಗಾಗಿ ಬಳಸಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ಮಾನಸಿಕ ಒತ್ತಡಕ್ಕೆ ಒಳಗಾಗುವಿರಿ. ಉದ್ಯೋಗದಲ್ಲಿ ಆತುರದ ತೀರ್ಮಾನ ತೆಗೆದುಕೊಂಡು ತೊಂದರೆಗೆ ಒಳಗಾಗುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭವಿದೆ. ಕುಟುಂಬದ ಹಿರಿಯರ ಮತ್ತು ಸಮಾಜದ ಗಣ್ಯ ವ್ಯಕ್ತಿಗಳ ಸಹಾಯ ಸಹಕಾರ ದೊರೆಯುತ್ತದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಆದಾಯವನ್ನು ಹೆಚ್ಚಿಸಿಕೊಳ್ಳಲು ಸಣ್ಣಪ್ರಮಾಣದ ವ್ಯಾಪಾರವನ್ನು ಆರಂಭಿಸುವಿರಿ. ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳುವ ಯೋಜನೆ ಸಾಕಾರಗೊಳ್ಳಲಿದೆ. ಚಿನ್ನ ಬೆಳ್ಳಿಯ ಆಭರಣ ಕೊಳ್ಳಲು ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ. ಶೀತದ ತೊಂದರೆ ಉಂಟಾಗುತ್ತದೆ.
ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು ಪೂರ್ವ
ಅದೃಷ್ಟದ ಬಣ್ಣ: ಹಸಿರು
ವೃಶ್ಚಿಕ
ಆರೋಗ್ಯದಲ್ಲಿ ಸುಧಾರಣೆ ಕಂಡು ಬರುತ್ತದೆ. ಕುಟುಂಬದ ಹಿರಿಯರ ಸಲಹೆಯಿಂದ ಹಣದ ತೊಂದರೆಯಿಂದ ಪಾರಾಗುವಿರಿ. ಮನೆಯಲ್ಲಿ ವಿಶೇಷವಾದ ಧಾರ್ಮಿಕ ಕಾರ್ಯಕ್ರಮ ನಡೆಸುವಿರಿ. ಉದ್ಯೋಗದಲ್ಲಿ ಯಾರನ್ನೂ ಟೀಕಿಸದೆ ಸಹನೆಯಿಂದ ವರ್ತಿಸಿ. ಆತ್ಮೀಯರೊಂದಿಗೆ ಹಣಕಾಸಿನ ವಿಚಾರದಲ್ಲಿ ವಿರೋಧ ಉಂಟಾಗಬಹುದು. ವ್ಯಾಪಾರ ವ್ಯವಹಾರಗಳು ತೊಂದರೆ ಇಲ್ಲದೆ ಸಾಗುತ್ತದೆ. ಪರಿಚಯ ಇರುವವರ ಜೊತೆಯಲ್ಲಿ ವಿವಾಹ ನಿಶ್ಚಯವಾಗುತ್ತದೆ. ಹಣಕಾಸಿನ ವಿಚಾರಕ್ಕಾಗಿ ಪರಸ್ಥಳಕ್ಕೆ ಪ್ರಯಾಣ ಬೆಳೆಸುವಿರಿ. ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ ಸಂತಸ ತರುವ ಘಟನೆ ನಡೆಯಲಿದೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆಯಿಂದ ಇರಿ. ಆಹಾರ ಸೇವನೆಯಲ್ಲಿ ಇತಿಮಿತಿ ಇರಲಿ.
ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ನೇರಳೆ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
