Horoscope Today: ಧೈರ್ಯಕ್ಕೆ ಕೊರತೆ ಇರುವುದಿಲ್ಲ, ಹಣಕಾಸಿನ ಸಮಸ್ಯೆ ಇರಲ್ಲ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಧೈರ್ಯಕ್ಕೆ ಕೊರತೆ ಇರುವುದಿಲ್ಲ, ಹಣಕಾಸಿನ ಸಮಸ್ಯೆ ಇರಲ್ಲ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

Horoscope Today: ಧೈರ್ಯಕ್ಕೆ ಕೊರತೆ ಇರುವುದಿಲ್ಲ, ಹಣಕಾಸಿನ ಸಮಸ್ಯೆ ಇರಲ್ಲ; ಮೇಷ, ವೃಷಭ, ಮಿಥುನ, ಕಟಕ ರಾಶಿ ಫಲ

30 ಜೂನ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (30th June 2024 Horoscope).

ಮೇಷ, ವೃಷಭ, ಮಿಥುನ, ಕಟಕ, ರಾಶಿಯವರ ದಿನ ಭವಿಷ್ಯ ತಿಳಿಯಿರಿ
ಮೇಷ, ವೃಷಭ, ಮಿಥುನ, ಕಟಕ, ರಾಶಿಯವರ ದಿನ ಭವಿಷ್ಯ ತಿಳಿಯಿರಿ

ಇಂದಿನ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (30th June 2024 Horoscope)

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಕೃಷ್ಣಪಕ್ಷ-ಭಾನುವಾರ

ತಿಥಿ: ನವಮಿ ಹ. 01.04 ರವರೆಗು ಇದ್ದು ಆನಂತರ ದಶಮಿ ಆರಂಭವಾಗುತ್ತದೆ.

ನಕ್ಷತ್ರ: ರೇವತಿ ನಕ್ಷತ್ರವು ಬೆ. 08.58 ರವರೆಗೆ ಇದ್ದು ಆನಂತರ ಅಶ್ವಿನಿ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 05.56

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: ಸಂಜೆ 05.15 ರಿಂದ 06.51

ಮೇಷ ರಾಶಿ

ನೀರಸವಾದ ಜೀವನವನ್ನು ಇಷ್ಟಪಡುವುದಿಲ್ಲ. ಜೀವನದಲ್ಲಿ ಸದಾ ಸವಾಲುಗಳು ಎದುರಾಗಬೇಕೆಂದು ಬಯಸುವಿರಿ. ನಿಮ್ಮಲ್ಲಿರುವ ಆತ್ಮವಿಶ್ವಾಸ ಯಾವುದೇ ರೀತಿಯ ಸನ್ನಿವೇಶಕ್ಕೂ ಹೊಂದಿಕೊಳ್ಳಬಲ್ಲದು. ಅತ್ಯಲ್ಪ ಕಾಲದಲ್ಲಿ ಹೆಚ್ಚಿನ ಕೆಲಸವನ್ನು ಮಾಡಬಲ್ಲಿರಿ. ಆದರೆ ಸಹನೆ ಬಹಳ ಕಡಿಮೆ. ಸಣ್ಣಪುಟ್ಟ ತಪ್ಪುಗಳನ್ನು ಮನ್ನಿಸಲಾರದೆ ಹೋಗುವಿರಿ. ಉದ್ಯೋಗದಲ್ಲಿ ಉನ್ನತ ಮಟ್ಟವನ್ನು ತಲುಪುವಿರಿ. ನಿಮಗೆ ಸಮಾಜದಲ್ಲಿ ನಾಯಕನ ಪಟ್ಟ ದೊರೆಯುತ್ತದೆ. ಮನೆಯಲ್ಲಿ ನೀವಿಲ್ಲದೆ ಯಾವುದೇ ಸರಳವಾದ ಕೆಲಸವೂ ನಡೆಯುವುದಿಲ್ಲ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಕಪ್ಪು

ವೃಷಭ ರಾಶಿ

ಕಡಿಮೆ ಸಂಖ್ಯೆಯ ಸ್ನೇಹಿತರು ಇರುತ್ತಾರೆ. ಸ್ನೇಹಿತರನ್ನು ಅಭಿಮಾನದಿಂದ ಕಾಣುವಿರಿ. ಸಂತಸ ಸಂಭ್ರಮಕ್ಕೆ ಕೊನೆಗೆ ಇರುವುದಿಲ್ಲ. ಉತ್ತಮ ದೇಹ ದಾಢ್ಯತೆಗಾಗಿ ದೈಹಿಕ ವ್ಯಾಯಾಮವನ್ನು ಅನುಸರಿಸುವಿರಿ. ಸಣ್ಣಪುಟ್ಟ ಸೋಲಿಗೂ ಮಾನಸಿಕವಾಗಿ ಕುಗ್ಗುವಿರಿ. ಅನಾರೋಗ್ಯವಿರುತ್ತದೆ. ಮುಖ್ಯವಾಗಿ ತಲೆನೋವು ನಿಮ್ಮನ್ನು ಬಾಧಿಸುತ್ತದೆ. ಧೈರ್ಯಕ್ಕೆ ಕೊರತೆ ಇರುವುದಿಲ್ಲ. ವಿದ್ಯಾರ್ಥಿಗಳು ಸಹನಾಶೀಲರಾಗಿರುತ್ತಾರೆ. ಸ್ನೇಹಿತರ ಗುಂಪಿನಿಂದ ಹೊರಬಂದು ಏಕಾಂಗಿಯಾಗಿ ಕಲಿಕೆಯನ್ನು ಮುಂದುವರಿಸುತ್ತಾರೆ. ಪ್ರಾಮಾಣಿಕೆಯಿಂದ ನಡೆದುಕೊಳ್ಳುವಿರಿ. ನಿಮ್ಮ ವಯಸ್ಸಿನ ಜನರ ನಡುವೆ ಉನ್ನತ ಪಟ್ಟವನ್ನು ಅಲಂಕರಿಸುವಿರಿ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 10

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ತಿಳಿಹಸಿರು

ಮಿಥುನ ರಾಶಿ

ವಂಶದ ಆಸ್ತಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುವಿರಿ. ಕುಟುಂಬದಲ್ಲಿ ವಿಶೇಷವಾದ ಕಾರ್ಯಕ್ರಮವೊಂದು ನಡೆಯಲಿದೆ. ಉತ್ತಮ ಆರೋಗ್ಯಗಳಿಸಲು ಸರಿಯಾದ ಹಾದಿಯಲ್ಲಿ ನಡೆಯಬೇಕಾಗುತ್ತದೆ. ಕೆಲಸ ಕಾರ್ಯಗಳ ನಡುವೆ ವಿಶ್ರಾಂತಿ ಪಡೆಯುವುದು ಅಸಾಧ್ಯವಾಗುತ್ತದೆ. ಹಣಕಾಸಿನ ತೊಂದರೆ ಕಂಡು ಬರುವುದಿಲ್ಲ. ಹಣಕಾಸಿನ ವಿವಾದದಿಂದ ಹೊರಬರಲು ಕಾನೂನು ಕ್ರಮವನ್ನು ಅನುಸರಿಸುವಿರಿ. ಬಂದು ಮಿತ್ರರ ಮೇಲೆ ವಿಶೇಷವಾದ ಪ್ರೀತಿ ವಿಶ್ವಾಸ ಇರುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳು ಎದುರಾಗಲಿವೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನ ನೀಡುವಿರಿ.

ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 1

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಕಟಕ ರಾಶಿ

ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ಹಠದ ಗುಣದಿಂದಾಗಿ ಅಪೂರ್ವವಾದ ಅವಕಾಶವನ್ನು ಕಳೆದುಕೊಳ್ಳುವಿರಿ. ಹಣದ ಕೊರತೆ ಕಂಡುಬರುವುದಿಲ್ಲ. ದಂಪತಿ ನಡುವೆ ಉತ್ತಮ ಅನುಬಂಧ ಇರುತ್ತದೆ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಮನೆಯ ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿ ಇಡುವಿರಿ. ರುಚಿಕರ ಭೋಜನವನ್ನು ಆಸ್ವಾದಿಸುವಿರಿ. ಕಷ್ಟಕರ ಪರಿಸ್ಥಿತಿಯಲ್ಲಿಯೂ ಬುದ್ಧಿವಂತಿಕೆಯಿಂದ ಸುಖ ಜೀವನ ನಡೆಸುವಿರಿ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ನೀಲಿಮಿಶ್ರಿತ ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.