Horoscope Today: ಸಾಲದ ವ್ಯವಹಾರ ಮಾಡದಿರಿ, ಆತುರದ ನಿರ್ಧಾರದಿಂದ ಅಪಾಯ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಸಾಲದ ವ್ಯವಹಾರ ಮಾಡದಿರಿ, ಆತುರದ ನಿರ್ಧಾರದಿಂದ ಅಪಾಯ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

Horoscope Today: ಸಾಲದ ವ್ಯವಹಾರ ಮಾಡದಿರಿ, ಆತುರದ ನಿರ್ಧಾರದಿಂದ ಅಪಾಯ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

30 ಮಾರ್ಚ್‌ 2024, ಶನಿವಾರ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (30th March 2024 Daily Horoscope).

ಮಾರ್ಚ್‌ 30ರ ದಿನಭವಿಷ್ಯ ಸಿಂಹದಿಂದ ವೃಶ್ಚಿಕ ರಾಶಿವರೆಗೆ
ಮಾರ್ಚ್‌ 30ರ ದಿನಭವಿಷ್ಯ ಸಿಂಹದಿಂದ ವೃಶ್ಚಿಕ ರಾಶಿವರೆಗೆ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (30th March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಶನಿವಾರ

ತಿಥಿ: ಪಂಚಮಿ ಸಂಜೆ 5.17 ರವರೆಗೂ ಇರುತ್ತದೆ. ಅನಂತರ ಷಷ್ಠಿ ಆರಂಭವಾಗಲಿದೆ.

ನಕ್ಷತ್ರ: ಅನುರಾದ ನಕ್ಷತ್ರವು ಸಂಜೆ 6.31 ರವರೆಗೂ ಇರುತ್ತದೆ. ಅನಂತರ ಜ್ಯೇಷ್ಠ ನಕ್ಷತ್ರವು ಆರಂಭವಾಗಲಿದೆ.

ಸೂರ್ಯೋದಯ: ಬೆಳಿಗ್ಗೆ 6.16

ಸೂರ್ಯಾಸ್ತ: ಸಂಜೆ 6.30

ರಾಹುಕಾಲ: ಬೆಳಿಗ್ಗೆ 9.00 ರಿಂದ ಬೆಳಿಗ್ಗೆ 10.30

ಸಿಂಹ

ಕುಟುಂಬದಲ್ಲಿನ ಹಿರಿಯರ ತೀರ್ಮಾನಗಳಿಗೆ ಬದ್ಧರಾಗಬೇಕಾಗುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತ ಫಲಗಳು ದೊರೆಯುತ್ತವೆ. ವ್ಯಾಪಾರ ವ್ಯವಹಾರದಲ್ಲಿನ ತೊಡಕು ನಿವಾರಣೆಯಾಗುತ್ತದೆ. ವಿದ್ಯಾರ್ಥಿಗಳ ಕಲಿಕೆಯಲ್ಲಿ ಯಾವುದೇ ತೊಂದರೆ ಕಾಣದು. ವ್ಯಾಪಾರ ವ್ಯವಹಾರಗಳಲ್ಲಿ ಸ್ವಂತ ನಿರ್ಧಾರಕ್ಕೆ ಬದ್ಧರಾಗಿರಿ. ವಿದ್ಯಾರ್ಥಿಗಳು ಹಠದ ಗುಣದಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಹಣದ ವಿಚಾರದಲ್ಲಿ ಆತ್ಮೀಯರ ಜೊತೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಹೊಸ ವ್ಯಾಪಾರವನ್ನು ಆರಂಭಿಸುವಿರಿ. ಭೂ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಸಾಲದ ವ್ಯವಹಾರ ಮಾಡದಿರಿ. ಮನೆ ಮುಂದಿರುವ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಹಾಲಿನ ಬಣ್ಣ

ಕನ್ಯಾ

ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ಉದ್ಯೋಗಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮುಂದೂಡುವಿರಿ. ಸುಲಭದ ವಿಧಾನದಲ್ಲಿ ಹಣವನ್ನು ಸಂಪಾದಿಸುವಿರಿ. ಹಿರಿಯ ಅಧಿಕಾರಿಗಳ ಪ್ರಶಂಸೆಯನ್ನು ಗಳಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವರಮಾನ ಇರಲಿದೆ. ವಿದ್ಯಾರ್ಥಿಗಳು ಆತಂಕದಿಂದ ಮುಂದಿನ ಯೋಜನೆ ರೂಪಿಸುತ್ತಾರೆ. ಸಾರ್ವಜನಿಕ ಸೇವೆಯಲ್ಲಿ ಮುನ್ನಡೆಯುವಿರಿ. ಸ್ವಂತ ಶಾಲಾ ಕಾಲೇಜನ್ನು ಆರಂಭಿಸುವ ಆಸೆ ಈಡೇರುತ್ತದೆ. ಮನಸ್ಸಿಲ್ಲದಿದ್ದರೂ ಮನೆಯನ್ನು ಬದಲಿಸುವಿರಿ. ಭೂವಿವಾದವೊಂದು ದೂರವಾಗುತ್ತದೆ. ಆತ್ಮೀಯರೊಬ್ಬರ ಉದ್ಯಮದಲ್ಲಿ ಪಾಲುದಾರಿಕೆ ಪಡೆಯುವಿರಿ. ಬೇರೆಯವರ ಸಾಲದ ವ್ಯವಹಾರದಲ್ಲಿ ಮಧ್ಯಸ್ಥಿಕೆ ಬೇಡಿ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಇರಲಿದೆ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 11

ಅಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ತುಲಾ

ಕುಟುಂಬದ ಸಮಸ್ಯೆಗಳು ಮರೆಯಾಗಲಿವೆ. ಉದ್ಯೋಗದಲ್ಲಿ ಹೆಚ್ಚಿನ ಅಧ್ಯಯನಕ್ಕಾಗಿ ವಿದೇಶಕ್ಕೆ ತೆರಳುವಿರಿ. ಆತ್ಮೀಯರ ಜೊತೆಯಲ್ಲಿ ಹಣಕಾಸಿನ ಸಂಸ್ಥೆಯೊಂದನ್ನು ಆರಂಭಿಸುವಿರಿ. ವಿದ್ಯಾರ್ಥಿಗಳಿಗೆ ಯಾವುದೆ ಸಮಸ್ಯೆ ಇರುವುದಿಲ್ಲ. ಜನಸೇವೆ ಮಾಡುವ ಆಶಯ ಇರುತ್ತದೆ. ಸಮಾಜದ ಗಣ್ಯವ್ಯಕ್ತಿಗಳ ಸಹಾಯ ಸಹಕಾರ ದೊರೆಯುತ್ತದೆ. ಹಣದ ಕೊರತೆಯ ಕಾರಣ ಮುಖ್ಯ ಕೆಲಸಗಳು ಅಪೂರ್ಣವಾಗಲಿದೆ. ಆರೋಗ್ಯದ ಬಗ್ಗೆ ಗಮನ ಇರಲಿ. ಪಾಲುದಾರಿಕೆಯ ವ್ಯಾಪಾರದಲ್ಲಿ ಎಚ್ಚರವಿರಲಿ. ಮನದ ಭಾವನೆಯನ್ನು ಮಕ್ಕಳ ಜೊತೆ ಹಂಚಿಕೊಳ್ಳುವಿರಿ. ಆತುರದ ನಿರ್ಧಾರಗಳು ವಾಗ್ವಾದಕ್ಕೆ ಕಾರಣವಾಗಲಿದೆ. ನಿಧಾನದ ನಡೆ ನುಡಿಗಳು ಆಪತ್ತಿನಿಂದ ಪಾರು ಮಾಡುತ್ತವೆ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಆಕಾಶನೀಲಿ ಬಣ್ಣ

ವೃಶ್ಚಿಕ

ಕುಟುಂಬದಲ್ಲಿ ನೀರವ ವಾತಾವರಣವಿರುತ್ತದೆ. ಕುಟುಂಬದ ಹಿರಿಯರ ನಡವಳಿಕೆಯಿಂದ ಬೇಸರಗೊಳ್ಳುವಿರಿ. ಉದ್ಯೋಗವು ಯಾವುದೇ ಬದಲಾವಣೆ ಇಲ್ಲದೆ ಸಾಗಲಿದೆ. ಅಧಿಕಾರಿಗಳ ನಡುವೆ ಉತ್ತಮ ಬಾಂಧವ್ಯ ಕಂಡು ಬರದು. ಹೊಸ ಕಾರ್ಯಯೋಜನೆಗಳು ಉದ್ಯೋಗದಲ್ಲಿ ಒತ್ತಡವನ್ನು ಹೆಚ್ಚಿಸುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹಣಕಾಸಿನ ಬಗ್ಗೆ ಎಚ್ಚರಿಕೆಯ ತೀರ್ಮಾನ ಕೈಗೊಳ್ಳಿ. ವಿದ್ಯಾರ್ಥಿಗಳು ಹಠದಿಂದಾಗಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳಬಹುದು. ಅನಿವಾರ್ಯವಾಗಿ ಸ್ವಂತ ಕೆಲಸ ಕಾರ್ಯಗಳನ್ನು ಮುಂದೂಡುವಿರಿ. ಹೊಸ ವ್ಯಾಪಾರವನ್ನು ಆರಂಭಿಸಲು ಹಿರಿಯರ ಸಹಾಯ ದೊರೆಯುತ್ತದೆ. ಭೂ ವಿವಾದವಿರುತ್ತದೆ. ಕೋಪವನ್ನು ಕಡಿಮೆ ಮಾಡಿಕೊಳ್ಳಿ.

ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ರಕ್ತದಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.