ಕಚೇರಿಯಲ್ಲಿ ಸಹೋದ್ಯೋಗಿಗಳ ಬೆಂಬಲ, ಹಿರಿಯ ಅಧಿಕಾರಿಗಳಿಂದ ಪ್ರಶಂಸೆ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
31 ಮೇ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (31st May 2024 Daily Horoscope).

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಪಂಚಾಂಗಕರ್ತ ಬ್ರಹ್ಮಶ್ರೀ ಚಿಲಕಮರ್ತಿ ಪ್ರಭಾಕರ ಚಕ್ರವರ್ತಿ ಶರ್ಮ ಅವರು ಈ ಮಾಹಿತಿ ಒದಗಿಸಿದ್ದಾರೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (31st May 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಶುಕ್ರವಾರ
ತಿಥಿ: ಬೆಳಗ್ಗೆ 09:38 ವರೆಗೆ ಅಷ್ಟಮಿ ಇದ್ದು ನಂತರ ನವಮಿ ಆರಂಭವಾಗುತ್ತದೆ
ನಕ್ಷತ್ರ : ಬೆಳಗ್ಗೆ 06:14 ವರೆಗೆ ಶತಭಿಷ ನಕ್ಷತ್ರವಿದ್ದು ನಂತರ ಪೂರ್ವ ಭಾದ್ರಪದ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05:24
ಸೂರ್ಯಾಸ್ತ: ಸಂಜೆ 7:14
ರಾಹುಕಾಲ: ಬೆಳಗ್ಗೆ 10:35 ರಿಂದ 12:19 ವರೆಗೆ
ರಾಶಿ ಫಲ
ಮೇಷ ರಾಶಿ
ಮೇಷ ರಾಶಿಯವರಿಗೆ ಇಂದು ಸಾಮಾನ್ಯವಾಗಿರುತ್ತದೆ. ಬಂಧುಗಳ ಆಗಮನ ಮನೆಯಲ್ಲಿ ಸಂತೋಷ ಉಂಟು ಮಾಡುತ್ತದೆ. ಹಣಕ್ಕೆ ಸಂಬಂಧಿಸಿದ ಕೆಲವು ವಿಷಯಗಳಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳುವಿರಿ. ನಿಮ್ಮ ಸಂಗಾತಿಗಾಗಿ ನೀವು ಕೆಲವು ಹೊಸ ಉಡುಗೊರೆಗಳು ಮತ್ತು ಆಭರಣಗಳನ್ನು ಖರೀದಿಸುತ್ತೀರಿ. ಕೆಟ್ಟ ಅಭ್ಯಾಸಗಳನ್ನು ಬಿಡುವುದು ಉತ್ತಮ. ಉದ್ಯೋಗದ ಸಲುವಾಗಿ ದೂರದ ಊರಿಗೆ ಪ್ರಯಾಣಿಸಬಹುದು. ಅನಾವಶ್ಯಕ ಖರ್ಚುಗಳು ಹೆಚ್ಚಾಗಬಹುದು. ಬಹಳ ದಿನಗಳಿಂದ ನಿಮಗೆ ಬರಬೇಕಿದ್ದ ಹಣ ವಾಪಸ್ ದೊರೆಯಲಿದೆ. ಆರೋಗ್ಯ ಸುಧಾರಿಸುತ್ತದೆ. ಮೇಷ ರಾಶಿಯವರು ಹೆಚ್ಚು ಶುಭ ಫಲಗಳಿಗಾಗಿ ಲಕ್ಷ್ಮಿ ದೇವಿಯನ್ನು ಪೂಜಿಸುವುದರ ಜೊತೆಗೆ ಲಕ್ಷಿ ಅಷ್ಟಕಂ ಪಠಿಸಿದರೆ ಸೂಕ್ತ.
ವೃಷಭ ರಾಶಿ
ವೃಷಭ ರಾಶಿಯವರಿಗೆ ಇಂದು ಅನುಕೂಲಕರ ಫಲಿತಾಂಶಗಳಿವೆ. ವಿವಿಧ ಮೂಲಗಳಿಂದ ಆದಾಯ ದೊರೆಯಲಿದೆ. ದೀರ್ಘಾವಧಿ ಯೋಜನೆಗಳನ್ನು ಜಾರಿಗೊಳಿಸಲು ಇದು ಉತ್ತಮ ಸಮಯ. ಕೆಲಸದಲ್ಲಿ ನಿಮ್ಮ ಶ್ರಮವನ್ನು ಹಿರಿಯ ಅಧಿಕಾರಿಗಳು ಗುರುತಿಸುತ್ತಾರೆ. ಆರೋಗ್ಯದ ಕಡೆ ಗಮನ ನೀಡಿ. ಉತ್ತಮ ಆಹಾರ ಸೇವಿಸಿ. ನಿಮ್ಮ ಆಡಳಿತ ಗ್ರಹ ಶುಕ್ರವು ಇಂದು ಎಲ್ಲಾ ರೀತಿಯಲ್ಲೂ ಉತ್ತಮ ಫಲಗಳನ್ನು ನೀಡಲಿದ್ದಾನೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಆತುರ ಬೇಡ. ತಾಳ್ಮೆಯಿಂದ ಯೋಚಿಸಿ , ಆತ್ಮೀಯರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಿ. ಹೆಚ್ಚಿನ ಫಲಗಳಿಗೆ ಶಂಕರಾಚಾರ್ಯ ವಿರಚಿತ ಕನಕಧಾರಾ ಸ್ತೋತ್ರವನ್ನು ಪಠಿಸುವುದರಿಂದ ಶುಭಫಲಗಳು ಉಂಟಾಗುತ್ತವೆ. ಹಾಲಿನಿಂದ ಮಾಡಿದ ಪ್ರಸಾದವನ್ನು ದೇವಿಗೆ ಅರ್ಪಿಸಿ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಇಂದು ಅನುಕೂಲಕರ ಫಲಿತಾಂಶ ದೊರೆಯಲಿದೆ. ಕೈಗೊಂಡ ಕಾರ್ಯಗಳು ಸಕಾಲದಲ್ಲಿ ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ನಿಮ್ಮ ಕಾರ್ಯಗಳನ್ನು ಎಲ್ಲರೂ ಪ್ರಶಂಶಿಸುತ್ತಾರೆ. ಕುಟುಂಬದೊಂದಿಗೆ ಶಾಂತಿ ಮತ್ತು ನೆಮ್ಮದಿ ಇರುತ್ತದೆ. ನಿರೀಕ್ಷೆಗಿಂತ ಹೆಚ್ಚಿನ ಹಣ ಬರಲಿದೆ. ವೆಚ್ಚವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು. ಉದ್ಯೋಗಿಗಳಿಗೆ ಸಹೋದ್ಯೋಗಿಗಳ ಬೆಂಬಲವಿದೆ. ಮಿಥುನ ರಾಶಿಯವರು ಹೆಚ್ಚು ಶುಭ ಫಲಗಳಿಗಾಗಿ ದೇವಿಯನ್ನು ಆರಾಧಿಸಬೇಕು. ದೇವಿ ದೇವಾಲಯಕ್ಕೆ ಭೇಟಿ ನೀಡಿ ಮತ್ತು ಸಿಹಿತಿಂಡಿಯನ್ನು ನೈವೇದ್ಯವನ್ನಾಗಿ ನೀಡಿ.
ಕರ್ಕಾಟಕ ರಾಶಿ
ಕರ್ಕಾಟಕ ರಾಶಿಯವರಿಗೆ ಇಂದು ಅನುಕೂಲಕರವಾಗಿಲ್ಲ. ಮಾನಸಿಕ ಶಾಂತಿಯ ಕೊರತೆ ನಿಮ್ಮನ್ನು ಕಾಡಲಿದೆ. ನಿಮ್ಮ ಮನಸ್ಸನ್ನು ಶಾಂತವಾಗಿಡಲು ಪ್ರಯತ್ನಿಸಿ. ದಿನಾಂತ್ಯದಲ್ಲಿ ಎಲ್ಲವೂ ಸರಿ ಆಗಲಿದೆ. ಒತ್ತಡವನ್ನು ಕಡಿಮೆ ಮಾಡಿ. ಆದಾಯ ಖರ್ಚು ಸರಿಸಮನಾಗಿ ಇರಲಿದೆ. ಕೋಪವನ್ನು ಹತೋಟಿಯಲ್ಲಿಟ್ಟುಕೊಳ್ಳಬೇಕು. ವಾದ ವಿವಾದಗಳನ್ನು ತಪ್ಪಿಸಿ. ಆರೋಗ್ಯ ಸಮಸ್ಯೆಗಳಿರುತ್ತವೆ. ವೈದ್ಯರನ್ನು ಸಂಪರ್ಕಿಸಿ. ಹೆಚ್ಚಿನ ಫಲಿತಾಂಶಗಳಿಗೆ ವಿಷ್ಣು ಸಹಸ್ರನಾಮವನ್ನು ಪಠಿಸಿ ಹಾಲು ಮತ್ತು ಸಕ್ಕರೆಯಿಂದ ಮಾಡಿದ ಪ್ರಸಾದವನ್ನು ಲಕ್ಷ್ಮಿ ದೇವಿಗೆ ನಿವೇದಿಸುವುದು ಒಳ್ಳೆಯದು.
ಬರಹ: ಬ್ರಹ್ಮಶ್ರೀ ಚಿಲಕಮರ್ತಿ ಪ್ರಭಾಕರ ಚಕ್ರವರ್ತಿ ಶರ್ಮ, ಜ್ಯೋತಿಷಿ
ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.
