ಆರೋಗ್ಯದಲ್ಲಿ ಸುಧಾರಣೆ, ಸಂಗಾತಿ ಜೊತೆಗಿದ್ದ ಮನಸ್ತಾಪಕ್ಕೆ ತೆರೆ; ಮೇಷ, ವೃಷಭ, ಮಿಥುನ, ಕಟಕ, ರಾಶಿಭವಿಷ್ಯ
3 ಜೂನ್ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (3rd June 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (3rd June 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಸೋಮವಾರ
ತಿಥಿ: ದ್ವಾದಶಿ ರಾತ್ರಿ 10.59 ರವರೆಗೂ ಇದ್ದು ನಂತರ ತ್ರಯೋದಶಿ ಆರಂಭವಾಗುತ್ತದೆ
ನಕ್ಷತ್ರ: ಅಶ್ವಿನಿ ನಕ್ಷತ್ರವು ರಾತ್ರಿ 11.13ರವರೆಗೂ ಇದ್ದು ನಂತರ ಭರಣಿ ನಕ್ಷತ್ರ ಆರಂಭವಾಗುತ್ತದೆ
ಸೂರ್ಯೋದಯ: ಬೆಳಗ್ಗೆ 05.52
ಸೂರ್ಯಾಸ್ತ: ಸಂಜೆ 06.42
ರಾಹುಕಾಲ: ಬೆಳಗ್ಗೆ 07.34 ರಿಂದ 09.10
ರಾಶಿಫಲ
ಮೇಷ
ಮನಸ್ಸಿನಲ್ಲಿ ನಿರಾಸೆಯ ಭಾವನೆ ಇರುತ್ತದೆ. ಹತಾಶೆಯಿಂದ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಉದ್ಯೋಗ ಬದಲಾವಣೆ ಮಾಡುವಿರಿ. ದೊರೆವ ಅವಕಾಶವನ್ನು ನಿಮ್ಮಿಚ್ಚೆಯಂತೆ ಬಳಸಿಕೊಳ್ಳುವಿರಿ. ಉತ್ತಮ ಭವಿಷ್ಯಕ್ಕಾಗಿ ಹಣವನ್ನು ವಿವಿಧ ಯೋಜನೆಯಲ್ಲಿ ಹೂಡಿಕೆ ಮಾಡುವಿರಿ. ಚಿಕ್ಕ ವಿಚಾರವಾದರೂ ಮನಸ್ಸಿಟ್ಟು, ಹಿಡಿದ ಕಾರ್ಯ ಸಾಧಿಸುವಿರಿ. ಉನ್ನತ ಉನ್ನತ ಅಧ್ಯಯನ ಮಾಡುವ ಆಸೆ ಈಡೇರಲಿದೆ. ನಿಮ್ಮ ನಿಸ್ವಾರ್ಥ ಮನೋಭಾವನೆ ಎಲ್ಲರ ಮನ ಗೆಲ್ಲುತ್ತದೆ. ಬುದ್ಧಿವಂತಿಕೆಯಿಂದ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಿರಿ. ಹಣಕಾಸಿನ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುವಿರಿ. ನಿಮ್ಮ ಕನಸುಗಳು ಸುಲಭವಾಗಿ ನನಸಾಗಲಿವೆ. ಪ್ರೀತಿ ವಿಶ್ವಾಸಕ್ಕೆ ಸೋಲುವ ಕಾರಣ ಮಾನಸಿಕ ನೆಮ್ಮದಿ ಇರುತ್ತದೆ. ಸಂಗಾತಿಯ ಜೊತೆ ಇದ್ದ ವಿರಸವು ಮರೆಯಾಗುತ್ತದೆ. ಆರೋಗ್ಯದಲ್ಲಿ ಸ್ಥಿರತೆ ಇರುತ್ತದೆ. ಸಾಲದ ವ್ಯವಹಾರ ಒಳ್ಳೆಯದಲ್ಲ.
ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕೆಂಪು
ವೃಷಭ
ಕುಟುಂಬದವರೊಡನೆ ಮನರಂಜನೆಯಿಂದ ದಿನ ಕಳೆಯುವಿರಿ. ಮಕ್ಕಳ ಜೀವನದ ಕಷ್ಟಗಳು ಮರೆಯಾಗಿ ಉತ್ತಮ ಫಲಿತಾಂಶಗಳು ದೊರೆಯಲಿವೆ. ನಿಮ್ಮ ಮನದಲ್ಲಿನ ಗೊಂದಲ ನಿವಾರಣೆ ಆಗಲಿದೆ. ಮಕ್ಕಳ ಜೊತೆ ಸಂತೋಷಕೂಟಕ್ಕೆ ತೆರಳುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ. ಎಷ್ಟೇ ಬುದ್ಧಿ ಇದ್ದರೂ ಹಣಕಾಸಿನ ವಿಚಾರದಲ್ಲಿ ತಪ್ಪು ನಿರ್ಧಾರ ಕೈಗೊಳ್ಳುವಿರಿ. ಮಾನಸಿಕ ಒತ್ತಡದಿಂದ ಹೊರ ಬರಲು ಪ್ರಯತ್ನಿಸಿ. ನಿಮ್ಮಲ್ಲಿನ ಸಕಾರಾತ್ಮಕ ಮನೋಭಾವನೆ ನಿರಾಸೆಯನ್ನು ದೂರ ಮಾಡಲಿದೆ. ಹೊಸ ಮನೆ ಕೊಳ್ಳುವ ಆಸೆಗೆ ಎಲ್ಲರ ಸಹಕಾರ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸಂತಸ ಮನೆ ಮಾಡಿರುತ್ತದೆ. ನಿಮ್ಮ ಮನಸ್ಸನ್ನು ಬದಲಾಯಿಸುವಲ್ಲಿ ಎಲ್ಲರೂ ವಿಫಲರಾಗುತ್ತಾರೆ. ಪಾಲುದಾರಿಕೆ ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಕಿತ್ತಳೆ
ಮಿಥುನ
ಆರೋಗ್ಯವನ್ನು ಕಾಪಾಡಿಕೊಳ್ಳಲು ಆಧುನಿಕತೆಯ ಮೊರೆ ಹೋಗುವಿರಿ. ದೇಹದ ತೂಕ ಕಡಿಮೆ ಮಾಡಿಕೊಳ್ಳುವ ನಿರ್ಧಾರ ಎಲ್ಲರ ಸಂತೋಷಕ್ಕಾಗಿ ಕಾರಣವಾಗಲಿದೆ. ಉತ್ತಮ ಆದಾಯ ಇದ್ದರೂ ಅನಾವಶ್ಯಕ ಖರ್ಚುವೆಚ್ಚಗಳು ಎದುರಾಗಲಿವೆ. ಆತುರದ ನಿರ್ಧಾರದಿಂದ ಅಪೂರ್ವವಾದ ಉದ್ಯೋವಕಾಶವನ್ನು ಕಳೆದುಕೊಳ್ಳಬಹುದು. ಹಣಕಾಸಿನ ವ್ಯವಹಾರಗಳನ್ನು ಸ್ವತಂತ್ರವಾಗಿ ನಿರ್ವಹಿಸಿ ಎಲ್ಲರ ಮನ ಸೆಳೆಯುವಿರಿ. ನಿಮ್ಮ ಆಕರ್ಷಣಾ ವ್ಯಕ್ತಿತ್ವ ಸಮಾಜದ ನಾಯಕರನ್ನಾಗಿ ಮಾಡುತ್ತದೆ. ಸ್ನೇಹಿತರ ಜೊತೆ ಪಾಲುದಾರಿಕೆ ವ್ಯಾಪಾರವನ್ನು ಆರಂಭಿಸುವಿರಿ. ಸಂಗಾತಿಗೆ ನಿಮ್ಮ ಆರೋಗ್ಯದ ಬಗ್ಗೆ ಚಿಂತೆ ಇರುತ್ತದೆ. ಮಕ್ಕಳ ಚಟುವಟಿಕೆಗಳಿಂದ ಎಲ್ಲರೂ ಸಂತೋಷದಿಂದ ಇರುತ್ತಾರೆ.
ಪರಿಹಾರ : ತಾಯಿಯ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಹಳದಿ
ಕಟಕ
ಅನಿರೀಕ್ಷಿತ ಧನಲಾಭವಿದೆ. ವಾಹನ ಅಥವಾ ಲೋಹದ ವಸ್ತುವಿನಿಂದ ತೊಂದರೆ ಇದೆ ಎಚ್ಚರವಿರಲಿ. ತಂದೆಯವರ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲು ಕಾರಣರಾಗುವಿರಿ. ಭೂ ವ್ಯವಹಾರದಲ್ಲಿ ಹೆಚ್ಚಿನ ಲಾಭ ಇರಲಿದೆ. ಕಷ್ಟಪಟ್ಟು ಗಳಿಸಿದ ಹಣವನ್ನು ಸಮಾಜಸೇವೆಗಾಗಿ ಖರ್ಚು ಮಾಡುವಿರಿ. ಕುಟುಂಬದಲ್ಲಿ ವಿಶೇಷ ಗೌರವ ದೊರೆಯುತ್ತದೆ. ಸಂಗಾತಿಯೊಂದಿಗೆ ಸಂತಸದಿಂದ ಬಾಳ್ವೆ ನಡೆಸುವಿರಿ. ಬಿಡುವಿಲ್ಲದ ಕೆಲಸದಿಂದ ನೆಮ್ಮದಿ ಕಳೆದುಕೊಳ್ಳುವಿರಿ. ಮನೆ ಮಂದಿ ಜೊತೆ ಮನರಂಜನಾ ಸ್ಥಳಕ್ಕೆ ತೆರಳುವಿರಿ. ನಿಮ್ಮ ಅಗತ್ಯಗಳನ್ನು ಪೂರೈಸಲು ಸಂಗಾತಿಯು ಪ್ರಯತ್ನಿಸುತ್ತಾರೆ. ವಿದ್ಯಾರ್ಥಿಗಳ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಉಂಟಾಗಲಿವೆ. ಆತ್ಮೀಯರೊಬ್ಬರ ಆಗಮನ ಸಂತಸ ಉಂಟುಮಾಡಲಿದೆ.
ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಹಸಿರು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
