Horoscope Today: ಉನ್ನತ ಅಧ್ಯಯನ ಮಾಡುವ ಅವಕಾಶ, ಆತುರದ ನಿರ್ಧಾರದಿಂದ ಸಮಸ್ಯೆ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
4 ಜೂನ್ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (4th June 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (4th June 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ವೈಶಾಖ ಮಾಸ-ಕೃಷ್ಣಪಕ್ಷ-ಮಂಗಳವಾರ
ತಿಥಿ: ತ್ರಯೋದಶಿ ರಾತ್ರಿ 09.15 ರವರೆಗೂ ಇರುತ್ತದೆ ನಂತರ ಚತುರ್ದಶಿ ಆರಂಭವಾಗುತ್ತದೆ.
ನಕ್ಷತ್ರ: ಭರಣಿ ನಕ್ಷತ್ರವು ರಾತ್ರಿ 09.58ರವರೆಗೂ ಇದ್ದು ನಂತರ ಕೃತ್ತಿಕ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.52
ಸೂರ್ಯಾಸ್ತ: ಸಂಜೆ 06.42
ರಾಹುಕಾಲ: 03.34 ರಿಂದ ಸಂಜೆ 05.10
ರಾಶಿ ಫಲ
ಮೇಷ
ಕಡಿಮೆ ಅವಧಿಯಲ್ಲಿ ಹೆಚ್ಚಿನ ಕೆಲಸಗಳನ್ನು ಮಾಡಬೇಕಾಗುತ್ತದೆ. ಬಿಡುವಿಲ್ಲದ ಕಾರಣ ಆರೋಗ್ಯವನ್ನು ಕಡೆಗಣಿಸಿದಲ್ಲಿ ತೊಂದರೆ ಉಂಟಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ವಿಶೇಷ ಆಸಕ್ತಿ ತೋರುವಿರಿ. ಮಾತಿನಲ್ಲಿ ಮೋಡಿ ಮಾಡಿ ಸ್ವಂತ ಕೆಲಸಗಳನ್ನು ಪೂರ್ಣಗೊಳಿಸುವಿರಿ. ಭೂವ್ಯವಹಾರದಲ್ಲಿ ಉತ್ತಮ ಲಾಭ ಗಳಿಸುವಿರಿ. ಉದ್ಯೋಗ ಬದಲಾಯಿಸುವ ಸಾಧ್ಯತೆಗಳಿವೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ನಿಮ್ಮ ನಿರೀಕ್ಷೆ ನಿಜವಾಗಲಿದೆ. ಹಣಕಾಸಿನ ಸಹಾಯ ದೊರೆಯುತ್ತದೆ. ವಂಶದ ಹಿರಿಯರನ್ನು ಭೇಟಿ ಮಾಡುವಿರಿ. ವಂಶದ ಆಸ್ತಿಯ ಹಂಚಿಕೆಯಲ್ಲಿ ನಿಮ್ಮ ಪಾತ್ರ ಮುಖ್ಯವಾಗುತ್ತದೆ. ದಂಪತಿ ನಡುವೆ ಉತ್ತಮ ಹೊಂದಾಣಿಕೆ ಇರಲಿದೆ. ತಪ್ಪು ನಿರ್ಧಾರದಿಂದ ಸ್ನೇಹಿತರೊಬ್ಬರು ದೂರವಾಗಬಹುದು. ಅವಿವಾಹಿತರಿಗೆ ವಿವಾಹ ನಿಶ್ಚಯವಾಗುತ್ತದೆ. ಹಣದ ವ್ಯವಹಾರದಲ್ಲಿ ಬೇಸರ ಉಂಟಾಗಲಿದೆ.
ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ನೀಲಿ
ವೃಷಭ
ಉತ್ತಮ ಆದಾಯ ಇರುತ್ತದೆ. ಆದರೆ ಅತಿಯಾದ ಖರ್ಚು ವೆಚ್ಚಗಳನ್ನು ನಿಯಂತ್ರಿಸಬೇಕಾಗುತ್ತದೆ. ಆತ್ಮೀಯರ ಸಹಾಯ ಸದಾ ದೊರೆಯುತ್ತದೆ. ಕುಟುಂಬದ ಭಿನ್ನಾಭಿಪ್ರಾಯಗಳನ್ನು ನಿವಾರಿಸುವಿರಿ. ಖರ್ಚು ವೆಚ್ಚಗಳು ಹೆಚ್ಚಾದರೂ ವಿಚಲಿತರಾಗದೆ ಆದಾಯವನ್ನು ಹೆಚ್ಚಿಸಿಕೊಳ್ಳುವ ದಾರಿ ಹುಡುಕುವಿರಿ. ಆತ್ಮೀಯರ ಹಣದ ಸಹಾಯ ನೆಮ್ಮದಿಯನ್ನು ನೀಡುತ್ತದೆ. ಮಕ್ಕಳ ಜೊತೆ ಸಂತೋಷದಿಂದ ದಿನ ಕಳೆಯುವಿರಿ. ಹಣದ ಆಸೆ ಇರುವುದಿಲ್ಲ. ಕಷ್ಟವೆನಿಸಿದರೂ ಸಂಗಾತಿಯ ಮನೋಭಿಲಾಷೆಯನ್ನು ಪೂರೈಸುವಿರಿ. ಒತ್ತಡದಿಂದ ದೂರವಾಗಲು ಕುಟುಂಬದರೊಡನೆ ಕಿರು ಪ್ರವಾಸ ಕೈಗೊಳ್ಳುವಿರಿ. ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸವೊಂದನ್ನು ಪೂರ್ಣಗೊಳಿಸುವಲ್ಲಿ ಯಶಸ್ಸು ಗಳಿಸುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ.
ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನೇರಳೆ
ಮಿಥುನ
ಐಷಾರಾಮಿ ಜೀವನಕ್ಕಾಗಿ ಹಾತೊರೆಯುವಿರಿ. ಉದ್ಯೋಗದಲ್ಲಿ ಅನಾವಶ್ಯಕ ವಾದ ವಿವಾದಗಳು ಎದುರಾಗುತ್ತವೆ. ಹೆಚ್ಚಿನ ಪ್ರಯತ್ನದಿಂದ ವಿದೇಶಕ್ಕೆ ತೆರಳುವ ಆಸೆ ಈಡೇರಲಿದೆ. ಮನದಲ್ಲಿನ ನೋವನ್ನು ಮರೆತು ಎಲ್ಲರ ಜೊತೆ ಸಂತೋಷ ಮತ್ತು ಆನಂದದಿಂದ ದಿನಕಳೆಯುವಿರಿ. ಗೃಹಿಣಿಯರಿಗೆ ತವರಿನ ಸಹಾಯ ದೊರೆಯುತ್ತದೆ. ಒಳ್ಳೆಯ ಕೆಲಸ ಕಾರ್ಯಗಳಿಗಾಗಿ ಹಣ ಖರ್ಚು ಮಾಡುವಿರಿ. ಕುಟುಂಬದಲ್ಲಿನ ಸಮಸ್ಯೆಗಳು ದೂರವಾಗಲಿವೆ. ಹೆಚ್ಚಿನ ಕುಟುಂಬದ ಜವಾಬ್ದಾರಿಗಳನ್ನು ಯಾವುದೇ ಅಡೆ ತಡೆ ಇಲ್ಲದೆ ನಿರ್ವಹಿಸುವಿರಿ. ಸೋಲಿನ ಭಯದಲ್ಲಿ ಸಿಡುಕುತನದಿಂದ ವರ್ತಿಸುವಿರಿ. ಮಕ್ಕಳನ್ನು ಪ್ರೀತಿಯಿಂದ ಕಾಪಾಡುವಿರಿ. ಯಶಸ್ಸಿನ ಹಾದಿಯಲ್ಲಿ ಸಾಗುತ್ತಾ ಶಾಂತಿಯಿಂದ ಬಾಳುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಗುಲಾಬಿ
ಕಟಕ
ಇಂದು ಅನಿರೀಕ್ಷಿತವಾಗಿ ದೊಡ್ಡ ಮೊತ್ತದ ಹಣ ನಿಮ್ಮ ಕೈ ಸೇರುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಕಷ್ಟವೆನಿಸಿದರೂ ಕೈಹಿಡಿದ ಕೆಲಸ ಕಾರ್ಯಗಳನ್ನು ಪರಿಪೂರ್ಣಗೊಳಿಸುವಿರಿ. ವಿದ್ಯಾರ್ಥಿಗಳು ತಮ್ಮ ಸಾಧನೆಯಿಂದ ಕುಟುಂಬದವರ ಪ್ರೀತಿ ಗಳಿಸುತ್ತಾರೆ. ಉನ್ನತ ಅಧ್ಯಯನ ಮಾಡುವ ಅವಕಾಶ ದೊರೆಯುತ್ತದೆ. ಉತ್ತಮ ಪ್ರಯತ್ನದ ಕಾರಣ ಆರ್ಥಿಕ ಬಿಕ್ಕಟ್ಟು ನಿವಾರಣೆ ಆಗಲಿದೆ. ನಿಮ್ಮ ಹಣೆ ಅಥವಾ ತಲೆಗೆ ಪೆಟ್ಟಾಗಬಹುದು. ಮನೆಯಲ್ಲಿ ಚಿಕ್ಕ ಮಕ್ಕಳಿದ್ದಲ್ಲಿ ಆರೋಗ್ಯದ ಬಗ್ಗೆಎಚ್ಚರಿಕೆ ಇರಬೇಕು. ಸಂಗಾತಿಯ ಮನಸ್ಸಿನ ಭಾವನೆಗಳನ್ನು ಅರ್ಥಮಾಡಿಕೊಂಡು ನಡೆದುಕೊಳ್ಳುವಿರಿ. ಆತುರದ ನಿರ್ಧಾರದ ಕಾರಣ ದೊರೆಯುವ ಅಮೂಲ್ಯವಾದ ಅವಕಾಶವನ್ನು ಕಳೆದುಕೊಳ್ಳುವಿರಿ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಬಿಳಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
