Horoscope Today: ವ್ಯಾಪಾರ ವ್ಯವಹಾರಗಳಲ್ಲಿಒತ್ತಡದ ಸನ್ನಿವೇಶ, ಕೈ ಕಾಲಿಗೆ ಪೆಟ್ಟಾಗುವ ಸಾಧ್ಯತೆ, ಎಚ್ಚರಿಕೆ: ಮೇಷ, ವೃಷಭ, ಮಿಥುನ, ಕಟಕ ರಾಶಿ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ವ್ಯಾಪಾರ ವ್ಯವಹಾರಗಳಲ್ಲಿಒತ್ತಡದ ಸನ್ನಿವೇಶ, ಕೈ ಕಾಲಿಗೆ ಪೆಟ್ಟಾಗುವ ಸಾಧ್ಯತೆ, ಎಚ್ಚರಿಕೆ: ಮೇಷ, ವೃಷಭ, ಮಿಥುನ, ಕಟಕ ರಾಶಿ

Horoscope Today: ವ್ಯಾಪಾರ ವ್ಯವಹಾರಗಳಲ್ಲಿಒತ್ತಡದ ಸನ್ನಿವೇಶ, ಕೈ ಕಾಲಿಗೆ ಪೆಟ್ಟಾಗುವ ಸಾಧ್ಯತೆ, ಎಚ್ಚರಿಕೆ: ಮೇಷ, ವೃಷಭ, ಮಿಥುನ, ಕಟಕ ರಾಶಿ

5 ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (5th April 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ
ಮೇಷ, ವೃಷಭ, ಮಿಥುನ, ಕಟಕ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (5th April 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ : ಏಕಾದಶಿ ಬೆಳಗ್ಗೆ 09.43 ರವರೆಗೂ ಇರುತ್ತದೆ ನಂತರ ದ್ವಾದಶಿ ಆರಂಭವಾಗಲಿದೆ.

ನಕ್ಷತ್ರ : ಧನಿಷ್ಠ ನಕ್ಷತ್ರವು 02.52 ರವರೆಗೂ ಇದ್ದು ನಂತರ ಶತಭಿಷ ನಕ್ಷತ್ರ ಆರಂಭವಾಗಲಿದೆ.

ಸೂರ್ಯೋದಯ: ಬೆಳಗ್ಗೆ 06.11

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: 10.30 ರಿಂದ 12.00

ರಾಶಿ ಫಲ

ಮೇಷ

ಕಷ್ಟವೆನಿಸಿದರೂ ದೊರೆಯುವ ಯಶಸ್ಸು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ನಿಮ್ಮ ಹಟದ ಗುಣದಿಂದಲೇ ಕೈ ಹಿಡಿಯುವ ಕೆಲಸ ಕಾರ್ಯಗಳು ಯಶಸ್ವಿಯಾಗಲಿವೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡು ಬರದು. ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳು ಸುಲಭವಾಗಿ ತಮ್ಮ ಗುರಿ ಸಾಧಿಸುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿಒತ್ತಡದ ಸನ್ನಿವೇಶವನ್ನು ಎದುರಾಗುತ್ತದೆ. ಬೇರೊಬ್ಬರ ಸಹಾಯ ಇಲ್ಲದೆ ವ್ಯಾಪಾರ ವ್ಯವಹಾರದಲ್ಲಿನ ಸಮಸ್ಯೆ ಬಗೆಹರಿಯುತ್ತದೆ. ಆರೋಗ್ಯದ ಬಗ್ಗೆ ಗಮನವಿರಲಿ. ಪ್ರಯಾಣದ ವೇಳೆಯಲ್ಲಿ ಕಾಲುಗಳಿಗೆ ಪೆಟ್ಟಾಗುವ ಸಾಧ್ಯತೆ ಇದೆ. ಎಲ್ಲರ ಜೊತೆಯಲ್ಲಿ ಶಾಂತಿಯಿಂದ ವರ್ತಿಸಿ. ಹಣದ ತೊಂದರೆ ಇರುವುದಿಲ್ಲ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬಿಳಿ

ವೃಷಭ

ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ. ಸಾಂಪ್ರದಾಯಿಕ ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ಎಲ್ಲರ ಜೊತೆಯಲ್ಲಿ ಪ್ರೀತಿ ವಿಶ್ವಾಸದಿಂದ ಇರುವುದು ಒಳ್ಳೆಯದು. ಕುಟುಂಬದಲ್ಲಿ ಸ್ಪೂರ್ತಿದಾಯಕ ವಾತಾವರಣ ಇರುತ್ತದೆ. ಎದುರಾಗುವ ಸವಾಲುಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಇರುತ್ತದೆ. ವಿಶ್ರಾಂತಿ ಇಲ್ಲದ ದುಡಿಮೆ ಇರುತ್ತದೆ. ಉದ್ಯೋಗದಲ್ಲಿ ಏಕಾಂಗಿಯಾಗಿ ಕಾರ್ಯ ನಿರ್ವಹಿಸುವಿರಿ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಲಾಭ ನಷ್ಟ ಸರಿಸಮನಾಗಿರುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಕಲಿಕೆಯಲ್ಲಿ ಮಗ್ನರಾಗುತ್ತಾರೆ. ಪಾರುದಾರಿಕೆ ವ್ಯಾಪಾರದಲ್ಲಿ ಗೊಂದಲದ ಕ್ಷಣ ಎದುರಾಗುತ್ತದೆ. ವಿವಾಹದ ಮಾತುಕತೆ ನಡೆಯುತ್ತವೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೇಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 11

ಅದೃಷ್ಟದ ದಿಕ್ಕು ಉತ್ತರ

ಅದೃಷ್ಟದ ಬಣ್ಣ : ಬೂದಿ ಬಣ್ಣ

ಮಿಥುನ

ಕಷ್ಟ ನಷ್ಟಕ್ಕೆ ಬೆದರುವುದಿಲ್ಲ. ಆಡುವ ಮಾತು ತಪ್ಪಲಿದ್ದೀರಿ. ಕುಟುಂಬದ ಒಳಿತಿಗಾಗಿ ಶ್ರಮಿಸುವಿರಿ. ಧೈರ್ಯ ಸಾಹಸದ ಗುಣ ತುಂಬಿರುತ್ತದೆ. ಒಮ್ಮೆ ತೆಗೆದುಕೊಂಡ ನಿರ್ಣಯಗಳನ್ನು ಬದಲಾಯಿಸದಿರಿ. ಅತಿಯಾದ ಆತ್ಮವಿಶ್ವಾಸ ತೊಂದರೆಗೆ ಕಾರಣವಾಗುತ್ತದೆ. ಹಣದ ಬಗ್ಗೆ ದುರಾಸೆ ಇರುವುದಿಲ್ಲ. ಅವಶ್ಯಕತೆ ಇದ್ದಷ್ಟು ಹಣ ಸಂಪಾದಿಸುವಿರಿ. ಕುಟುಂಬದಲ್ಲಿ ಆಶಾದಾಯಕ ಬದಲಾವಣೆಗಳು ಕಂಡುಬರುತ್ತವೆ. ಉದ್ಯೋಗದಲ್ಲಿ ಒತ್ತಡದಿಂದ ಕೆಲಸ ನಿರ್ವಹಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಒತ್ತಡದ ನಡುವೆ ಯಶಸ್ಸನ್ನು ಗಳಿಸುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಆತ್ಮೀಯರ ಸಹಾಯ ಬೇಕಾಗುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಆಕಾಶ ನೀಲಿ

ಕಟಕ

ಚುರುಕುತನ ಮತ್ತು ಬುದ್ಧಿವಂತಿಕೆಯಿಂದ ಯಶಸ್ಸಿನ್ನು ಗಳಿಸುವಿರಿ. ಕುಟುಂಬದಲ್ಲಿ ಪ್ರತಿ ವಿಚಾರದಲ್ಲೂ ಒಮ್ಮತದ ನಿರ್ಧಾರ ತೆಗೆದುಕೊಳ್ಳುವಿರಿ. ಸಹೋದ್ಯೋಗಿಗಳ ಅಭಿಪ್ರಾಯವನ್ನು ಗೌರವಿಸುವ ಕಾರಣ ಉದ್ಯೋಗದಲ್ಲಿ ಯಶಸ್ಸು ದೊರೆಯುತ್ತದೆ. ಕಠಿಣ ಸಂದರ್ಭವೊದರಲ್ಲಿ ಸೂಕ್ತ ನಿರ್ಣಯವನ್ನು ಕೈಗೊಳ್ಳುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಅನಾವಶ್ಯಕ ವಾದ ವಿವಾದಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಯಶಸ್ಸನ್ನು ಗಳಿಸುತ್ತಾರೆ. ಆಧುನಿಕ ತಂತ್ರಜ್ಞಾನಕ್ಕೆ ಸಂಬಂಧಿಸಿದ ವ್ಯಾಪಾರ ಆರಂಭಿಸುವಿರಿ. ಗಣ್ಯ ವ್ಯಕ್ತಿಗಳ ಒಡನಾಟ ಉಂಟಾಗುತ್ತದೆ. ಭೂವಿವಾದದಿಂದ ನೆಮ್ಮದಿ ಕಳೆದುಕೊಳ್ಳುವಿರಿ.

ಪರಿಹಾರ : ಹಳದಿ ಬಣ್ಣದ ಬಟ್ಟೆಗಳನ್ನು ದಾನ ನೀಡಿ ದಿನದ ಕೆಲಸಗಳನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೆಂಪು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.