Horoscope Today: ಉದ್ಯೋಗದಲ್ಲಿ ನಿರೀಕ್ಷಿಸಿದ ಮಟ್ಟದ ಯಶಸ್ಸು, ರಾಜಕೀಯ ಪ್ರವೇಶದ ಆಸೆ ಈಡೇರಲಿದೆ; ಏಪ್ರಿಲ್ 5ರ ರಾಶಿ ಭವಿಷ್ಯ
5 ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (5th April 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(5th April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ-ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಕೃಷ್ಣಪಕ್ಷ-ಶುಕ್ರವಾರ
ತಿಥಿ : ಏಕಾದಶಿ ಬೆಳಗ್ಗೆ 09.43 ರವರೆಗೂ ಇರುತ್ತದೆ ನಂತರ ದ್ವಾದಶಿ ಆರಂಭವಾಗಲಿದೆ.
ನಕ್ಷತ್ರ : ಧನಿಷ್ಠ ನಕ್ಷತ್ರವು 02.52 ರವರೆಗೂ ಇದ್ದು ನಂತರ ಶತಭಿಷ ನಕ್ಷತ್ರ ಆರಂಭವಾಗಲಿದೆ.
ಸೂರ್ಯೋದಯ: ಬೆಳಗ್ಗೆ 06.11
ಸೂರ್ಯಾಸ್ತ: ಸಂಜೆ 06.31
ರಾಹುಕಾಲ: 10.30 ರಿಂದ 12.00
ರಾಶಿ ಫಲ
ಧನಸ್ಸು
ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಇರಲಿದೆ. ಯಾವುದೇ ಸಮಸ್ಯೆ ನಿಮ್ಮನ್ನು ಭಾದಿಸದು. ಉದ್ಯೋಗದಲ್ಲಿ ಸತತ ಬದಲಾವಣೆಗೆ ಹೊಂದಿಕೊಂಡು ಹೋಗುವಿರಿ. ಬೇರೆಯವರನ್ನು ಸುಲಭವಾಗಿ ನಂಬುವುದಿಲ್ಲ. ಕೋಪದಿಂದ ತಪ್ಪಾದ ನಿರ್ಧಾರ ತೆಗೆದುಕೊಳ್ಳುವಿರಿ. ನಿಮ್ಮ ಪ್ರತಿಭೆಗೆ ಒಪ್ಪುವ ಅವಕಾಶ ದೊರೆಯುತ್ತದೆ. ಭವಿಷ್ಯದ ಜೀವನಕ್ಕಾಗಿ ಹಣದ ಉಳಿತಾಯ ಮಾಡುವಿರಿ. ತಮ್ಮ ಇಚ್ಚೆಗೆ ಅನುಗುಣವಾದ ವಿಷಯವನ್ನು ವಿದ್ಯಾರ್ಥಿಗಳು ಆಯ್ಕೆ ಮಾಡುತ್ತಾರೆ. ಹಣಕಾಸಿನ ವಿಚಾರದಲ್ಲಿ ಆತ್ಮೀಯರಿಗೆ ನೀಡಿದ ಮಾತನ್ನು ಉಳಿಸಿಕೊಳ್ಳಲು ಸಾಧ್ಯವಾಗದು. ಆರೋಗ್ಯದ ಸಮಸ್ಯೆ ನಿವಾರಣೆಯಾಗಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ.
ಪರಿಹಾರ : ಹಣೆಯಲ್ಲಿ ತಿಲಕವನ್ನು ಇಟ್ಟು ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 4
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಹಳದಿ
ಮಕರ
ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಕೆಲಸ ಕಾರ್ಯಗಳ ಚೊಕ್ಕವಾಗಿ ನಿರ್ವಹಿಸುವಿರಿ. ಮನದಲ್ಲಿ ಕೀಳರಿಮೆ ಇರುವುದಿಲ್ಲ. ಚಿಕ್ಕದಾದ ಮತ್ತು ಸರಳವಾದ ಕೆಲಸವಾದರೂ ಮನಸ್ಸಿಟ್ಟು ಪೂರ್ಣಗೊಳಿಸುವಿರಿ. ಒಳ್ಳೆಯ ಗುಣವಿದ್ದರೂ ದುಡುಕಿ ಮಾತನಾಡುವ ಕಾರಣ ಕೆಟ್ಟ ಹೆಸರನ್ನು ಗಳಿಸುವಿರಿ. ಶಾಂತಿ ಸಂಯಮದಿಂದ ವರ್ತಿಸಲು ಪ್ರಯತ್ನಿಸಿ. ಉದ್ಯೋಗದಲ್ಲಿ ನಿರೀಕ್ಷಿಸಿದ ಮಟ್ಟದ ಯಶಸ್ಸು ಲಭಿಸುತ್ತದೆ. ಗಲಿಬಿಲಿಯ ವಾತಾವರಣದಲ್ಲಿ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಲಿದ್ದಾರೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಮಟ್ಟದ ಲಾಭ ದೊರೆಯಲಿದೆ. ಪಾಲುದಾರಿಕೆ ವ್ಯಾಪಾರ ಆರಂಭಿಸುವಿರಿ. ರಾಜಕೀಯ ಪ್ರವೇಶಿಸುವ ಆಸೆ ಫಲಿಸಲಿದೆ. ಪ್ರಾಣಿಗಳಿಗೆ ನೀರಿನ ವ್ಯವಸ್ಥೆ ಮಾಡುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಹಸಿರು
ಕುಂಭ
ಮನದ ಭಾವನೆಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳುವಿರಿ. ಅಕಸ್ಮಿಕವಾದ ವಿಚಾರಗಳು ಕುಟುಂಬದಲ್ಲಿ ಸಂತಸವನ್ನು ಹೆಚ್ಚಿಸುತ್ತದೆ. ಕುಟುಂಬಕ್ಕೆ ಸಂಬಂಧಿಸಿದ ವಿವಾದವು ಪರಿಹಾರಗೊಳ್ಳಲಿದೆ. ಏಕಾಂಗಿಯಾಗಿ ಹಲವು ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ನಿಮ್ಮಲ್ಲಿರುವ ಗೆಲ್ಲುವ ಛಲ ಎಲ್ಲರಿಗೂ ಸ್ಪೂರ್ತಿಯಾಗುತ್ತದೆ. ಸ್ವಂತ ಕೆಲಸ ಕಾರ್ಯಗಳು ಅತಿ ನಿಧಾನವಾಗುವ ಕಾರಣ ಮಾನಸಿಕ ಒತ್ತಡ ಅನುಭವಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ವಿದೇಶಿ ಸಂಸ್ಥೆಯೊಂದರ ಪಾಲುದಾರಿಕೆಯು ದೊರೆಯುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ. ತೆರೆಮರೆಯ ಕಲಾವಿದರಿಗೆ ವಿಶೇಷ ಗೌರವ ಮತ್ತು ಪ್ರಶಸ್ತಿ ಲಭಿಸುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆ ಇರದು. ಉದ್ಯೋಗದಲ್ಲಿ ನಿರೀಕ್ಷಿತ ಫಲಿತಾಂಶಗಳು ದೊರೆಯುತ್ತವೆ.
ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ನೇರಳೆ ಬಣ್ಣ
ಮೀನ
ವಯಸ್ಸಿನ ಬೇಧ ಇಲ್ಲದೆ ಎಲ್ಲರನ್ನೂ ಪ್ರೀತಿ ವಿಶ್ವಾಸದಿಂದ ಕಾಣುವಿರಿ. ನಿಮ್ಮ ಕಾರ್ಯವಿಧಾನವನ್ನು ಎಲ್ಲರೂ ಒಪ್ಪುತ್ತಾರೆ. ದಕ್ಷ ಆಡತದಿಂದ ಹಿರಿಯ ಅಧಿಕಾರಿಗಳ ಸಹಾಯ ದೊರೆಯುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಾಣುವುದಿಲ್ಲ. ಉನ್ನತ ಅಧಿಕಾರದ ಆಸೆ ಇರುವುದಿಲ್ಲ. ಕೃಷಿ ಉತ್ಪನ್ನಗಳ ವ್ಯಾಪಾರದಲ್ಲಿ ಹೆಚ್ಚಿನ ಲಾಭ ದೊರೆಯುತ್ತದೆ. ಹವ್ಯಾಸಕ್ಕೆಂದು ಆರಂಭಿಸಿದ ಬರವಣಿಗೆಯು ಜೀವನ ನಡೆಸಲು ಸಹಕಾರಿಯಾಗುತ್ತದೆ. ತಂದೆಯವರಿಗೆ ಅನಿರೀಕ್ಷಿತ ಧನ ಲಾಭವಿದೆ. ಕುಟುಂಬದಲ್ಲಿರುವ ಕಲಹ ದೂರವಾಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ವಿಶೇಷ ಲಾಭ ದೊರೆಯುತ್ತದೆ. ಮನೆಯಲ್ಲಿ ಸಾಕಿರುವ ಪ್ರಾಣಿಗಳ ಆರೋಗ್ಯ ನಿರ್ವಹಣೆಗೆ ಹೆಚ್ಚಿನ ಹಣದ ಅವಶ್ಯಕತೆ ಇರುತ್ತದೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಎಳನೀರು ಮತ್ತು ದೀಪದ ಎಣ್ಣೆ ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ