Horoscope Today: ವಾಣಿಜ್ಯ ವ್ಯವಹಾರಗಳಲ್ಲಿ ಹೆಚ್ಚಿನ ಆದಾಯ, ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ: ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
Daily Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (6th May 2024 Daily Horoscope).
ದಿನ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (6th May 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಸೋಮವಾರ
ತಿಥಿ : ತ್ರಯೋದಶಿ 01.01 ರವರೆಗೂ ಇದ್ದು ನಂತರ ಚತುರ್ದಶಿ ಆರಂಭವಾಗುತ್ತದೆ.
ನಕ್ಷತ್ರ : ರೇವತಿ ನಕ್ಷತ್ರವು 04.29 ರವರೆಗೂ ಇದ್ದು ನಂತರ ಅಶ್ವಿನಿ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.57
ಸೂರ್ಯಾಸ್ತ: ಸಂಜೆ 06.35
ರಾಹುಕಾಲ: ಬೆಳಗ್ಗೆ 07.35 ರಿಂದ 09.10
ರಾಶಿಫಲ
ಮೇಷ
ಮಕ್ಕಳು ಉದ್ಯೋಗದ ಸಲುವಾಗಿ ಕುಟುಂಬದಿಂದ ದೂರ ಉಳಿಯುವರು. ನಿಮಗೆ ಉದ್ಯೋಗದಲ್ಲಿ ಬಡ್ತಿ ದೊರೆಯುತ್ತದೆ. ಹೆಚ್ಚಿದ ಕುಟುಂಬದ ಜವಾಬ್ದಾರಿಯು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಬಹುರಾಷ್ಟ್ರೀಯ ಕಂಪನಿ ಜೊತೆಯಲ್ಲಿ ಪಾಲುದಾರಿಕೆ ದೊರೆಯುತ್ತದೆ. ಸೋದರನ ಹಣದ ವಿವಾದವನ್ನು ಪರಿಹರಿಸುವಿರಿ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮುಂದುವರೆಯುವರು. ಬೇಸಾಯಗಾರರಿಗೆ ಅನುಕೂಲಕರ ಪರಿಸ್ಥಿತಿ ಇರಲಿದೆ. ವ್ಯವಸಾಯಕ್ಕೆ ಬೇಕಾದ ಗೊಬ್ಬರ ಮುಂತಾದ ವಸ್ತುಗಳ ಮಾರಾಟದಲ್ಲಿ ಲಾಭವಿದೆ. ಅಳುಕಿನ ಮನಸ್ಸಿನಿಂದ ಯಾವುದೇ ಕೆಲಸವನ್ನು ನಿರ್ವಹಿಸದಿರಿ. ಆತ್ಮೀಯರ ಸಹಾಯ ದೊರೆಯುತ್ತದೆ.
ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ
ವೃಷಭ
ಅತಿಯಾದ ಆತ್ಮವಿಶ್ವಾಸದ ಕಾರಣ ತಂದೆಯವರ ಕೆಲಸದಲ್ಲಿ ಹಿನ್ನೆಡೆ ಉಂಟಾಗಬಹುದು. ಕುಟುಂಬದ ಅಧಿಕಾರ ನಿಮಗೆ ದೊರೆಯುತ್ತದೆ. ವಾಣಿಜ್ಯ ವ್ಯವಹಾರಗಳಲ್ಲಿ ಹೆಚ್ಚಿನ ಆದಾಯ ದೊರೆಯಲಿದೆ. ಮನೆತನದ ಗೌರವ ಘನತೆಗೆ ಧಕ್ಕೆ ಕೆಲಸದಿಂದ ದೂರ ಉಳಿಯುವಿರಿ. ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ. ಹಣಕಾಸಿನ ವ್ಯವಹಾರದಲ್ಲಿ ಕೆಲಕಾಲ ಬೇಸರದ ವಾತಾವರಣ ಇರುತ್ತದೆ. ಸಮಾಜದ ಗಣ್ಯವ್ಯಕ್ತಿಗಳ ಸ್ನೇಹ ನಿಮಗೆ ದೊರೆಯುತ್ತದೆ. ದಂಪತಿಗಳ ನಡುವಿನ ಹಣದ ಮನಸ್ತಾಪ ಕೊನೆ ಆಗಲಿದೆ. ಮಾಡುವ ಖರ್ಚುಗಳಿಗೆ ಲೆಕ್ಕ ದೊರೆಯುವುದಿಲ್ಲ. ಒಡವೆ ವಸ್ತ್ರಗಳಿಗೆ ಹೆಚ್ಚಿನ ಹಣದ ಅವಶ್ಯಕತೆ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.
ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ : ಬಿಳಿ
ಮಿಥುನ
ಕಷ್ಟವಾದ ಕೆಲಸ ಕಾರ್ಯಗಳನ್ನು ಸುಲಭವಾಗಿ ಮಾಡುವಿರಿ. ವಿಶೇಷವಾದ ವಿಷಯಗಳನ್ನು ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಶುಭವಿರುತ್ತದೆ. ಉದ್ಯೋಗದಲ್ಲಿ ಸ್ವಪ್ರತಿಭೆಯಿಂದ ಉನ್ನತ ಮಟ್ಟ ತಲುಪುವಿರಿ. ಧಾರ್ಮಿಕ ಕಾರ್ಯಗಳನ್ನು ಆಯೋಜಿಸುವವರು ಉತ್ತಮ ಅದಾಯದ ಜೊತೆ ಜನಪ್ರಿಯತೆಯನ್ನು ಗಳಿಸುತ್ತಾರೆ. ವಜ್ರ ವೈಢೂರ್ಯಗಳ ವ್ಯಾಪಾರದಲ್ಲಿ ಲಾಭವಿರುತ್ತದೆ. ತಿನ್ನುವುದರಲ್ಲಿ ಮಿತಿ ಇಲ್ಲದೇ ಹೋದಲ್ಲಿ ಅಜೀರ್ಣತೆ ಉಂಟಾಗುತ್ತದೆ. ತಂದೆಯೊಡನೆ ಹಣಕಾಸಿನ ವಿಚಾರದಲ್ಲಿ ಬಿನ್ನಾಭಿಪ್ರಾಯ ಉಂಟಾಗುತ್ತದೆ. ಬಂದು ವರ್ಗದಲ್ಲಿ ಮುಖ್ಯ ವ್ಯಕ್ತಿಯಾಗಿ ಹೊರ ಹೊಮ್ಮುವಿರಿ. ಕುಟುಂಬದಲ್ಲಿ ನಿಮ್ಮ ಮಾತನ್ನು ಯಾರೂ ಮೀರಲಾರರು. ಅನಿರೀಕ್ಷಿತ ಧನಲಾಭ ಇದೆ.
ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಬೂದು
ಕಟಕ
ತಂದೆಯ ಸಹಕಾರದಿಂದ ದೊಡ್ಡ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ಸಂತಾನ ಲಾಭವಿದೆ. ದುಬಾರಿ ಒಡವೆ ವಸ್ತ್ರಗಳನ್ನು ಖರೀದಿಸುವಿರಿ. ಮಕ್ಕಳಿಗೆ ವಿವಾಹ ಯೋಗವಿದೆ. ಧಾರ್ಮಿಕ ವಿಧಿವಿಧಾನಗಳಿಂದ ನಿಮ್ಮ ಮಾನಸಿಕ ನೋವು ಮಾಯವಾಗಲಿವೆ. ತಂದೆಯ ಆರೋಗ್ಯದಲ್ಲಿ ತೊಂದರೆ ಇರುತ್ತದೆ. ಆಹಾರ ಸಂಸ್ಕರಣೆಗೆ ಸಂಬಂಧಿಸಿದ ವ್ಯಾಪಾರದಲ್ಲಿ ಲಾಭವಿದೆ. ಸಮಾಜದಲ್ಲಿ ವಿಶೇಷ ಸ್ಥಾನ ಮಾನ ದೊರೆಯುತ್ತದೆ. ಹಣಕಾಸಿಗೆ ಸಂಬಂಧಿಸಿದಂತೆ ಮಕ್ಕಳ ಜೊತೆ ವಾದ ವಿವಾದ ಇರುತ್ತವೆ. ಮಾತಿನಲ್ಲಿ ಒರಟುತನ ಇದ್ದರೂ ಶುಭ್ರವಾದ ಮನಸ್ಸು ಇರುತ್ತದೆ. ನಡೆ ನುಡಿಯಲ್ಲಿ ತಾಳ್ಮೆ ಇದ್ದರೆ ಒಳ್ಳೆಯದು. ದುಡುಕಿನ ಮಾತುಕತೆ ಬೇಡ. ಮಕ್ಕಳ ಸಂರಕ್ಷಣೆಯ ಬಗ್ಗೆ ವಿಶೇಷ ಕಾಳಜಿ ಇರಲಿ.
ಪರಿಹಾರ : ನೆರೆಹೊರೆಯ ಮಕ್ಕಳಿಗೆ ಸಿಹಿ ತಿಂಡಿ ನೀಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಆಕಾಶ ನೀಲಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).