ಉದರ ಸಂಬಂಧಿ ಸಮಸ್ಯೆಯಿಂದ ಬಳಲುವಿರಿ, ಉದ್ಯೋಗದಲ್ಲಿ ಶುಭ ಸುದ್ದಿ ಕೇಳುವಿರಿ; ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
Daily Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (6th May 2024 Daily Horoscope).
ದಿನ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(6th May 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಸೋಮವಾರ
ತಿಥಿ : ತ್ರಯೋದಶಿ 01.01 ರವರೆಗೂ ಇದ್ದು ನಂತರ ಚತುರ್ದಶಿ ಆರಂಭವಾಗುತ್ತದೆ.
ನಕ್ಷತ್ರ : ರೇವತಿ ನಕ್ಷತ್ರವು 04.29 ರವರೆಗೂ ಇದ್ದು ನಂತರ ಅಶ್ವಿನಿ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.57
ಸೂರ್ಯಾಸ್ತ: ಸಂಜೆ 06.35
ರಾಹುಕಾಲ: ಬೆಳಗ್ಗೆ 07.35 ರಿಂದ 09.10
ರಾಶಿಫಲ
ಧನಸ್ಸು
ನಿಮ್ಮಲ್ಲಿರುವ ಒಳ್ಳೆಯ ಮನಸ್ಸು ಬಂಧು ಬಳಗದಲ್ಲಿ ವಿಶೇಷ ಸ್ಥಾನ ತಂದುಕೊಡುತ್ತದೆ. ಸದಾ ಕಾಲ ಕುಟುಂಬದ ಆಗು ಹೋಗುಗಳ ಬಗ್ಗೆ ಚಿಂತಿಸುವಿರಿ. ಕೋಪ ಬಂದರೂ ಕ್ಷಣದಲ್ಲಿಯೇ ಮರೆಯಾಗುವುದು. ತಪ್ಪನ್ನು ಕ್ಷಮಿಸುವ ಗುಣವಿರುವ ಕಾರಣ ನೆಮ್ಮದಿಯಿಂದ ಬಾಳುವಿರಿ. ಮಾತಿನಲ್ಲಿ ಮೋಡಿ ಮಾಡಿ ಮೋಸ ಮಾಡುವ ಜನರ ಬಗ್ಗೆ ಎಚ್ಚರವಿರಲಿ. ಹಣದ ವ್ಯವಹಾರ ಮಾಡುವ ವೇಳೆ ಎಚ್ಚರಿಕೆ ಇರಲಿ. ಉದ್ಯೋಗದಲ್ಲಿ ಶುಭಸುದ್ದಿಯೊಂದು ದೊರೆಯಲಿದೆ. ಭೂ ವಿವಾದದಲ್ಲಿ ಪರಸ್ಪರ ಮಾತುಕತೆಯಿಂದ ಮೈತ್ರಿ ಬೆಳೆಯುತ್ತದೆ. ವಿದ್ಯಾರ್ಥಿಗಳು ಮುನ್ನಡೆ ಗಳಿಸುತ್ತಾರೆ. ಉದರ ಸಂಬಂಧಿ ತೊಂದರೆ ನಿಮ್ಮನ್ನು ಕಾಡುತ್ತದೆ. ಮನೆ ಕೊಳ್ಳುವ ಯೋಜನೆಗೆ ಚಾಲನೆ ನೀಡುತ್ತೀರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕೆಂಪು
ಮಕರ
ಮಾತಿನ ಭರದಲ್ಲಿ ಸಂದಿಗ್ದತೆಗೆ ಸಿಲುಕುವಿರಿ. ಹಣಕಾಸಿನ ವಿಚಾರದಲ್ಲಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಮನೆತನದ ಭೂಮಿಯ ವಿವಾದಕ್ಕೆ ಪರಿಹಾರ ಕಂಡು ಹಿಡಿಯುವಿರಿ. ಮಾಡುವ ವೃತಿಯನ್ನು ಗೌರವದಿಂದ ಕಾಣುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶಗಳು ದೊರೆಯುತ್ತವೆ. ಕುಟುಂಬದಲ್ಲಿ ಸಾಮರಸ್ಯವಿರುತ್ತದೆ. ಕುಟುಂಬದ ಹಿರಿಯರ ಆದೇಶವನ್ನು ಪಾಲಿಸುವಲ್ಲಿ ಸಂತೋಷ ಪಡುವಿರಿ. ಅರ್ಥವಿಲ್ಲದ ಮಾತುಕತೆ ವಿವಾದಕ್ಕೆ ಕಾರಣವಾಗುತ್ತದೆ. ಮಕ್ಕಳೊಂದಿಗೆ ಪ್ರೀತಿಯಿಂದ ನಡೆದುಕೊಳ್ಳುವಿರಿ. ಕೋಪ ಬಂದರೂ ಸಂಯಮದಿಂದ ವರ್ತಿಸುವಿರಿ. ಹೊಸ ವಾಹನ ಕೊಳ್ಳುವಿರಿ. ಆಹಾರ ಸೇವನೆಯಲ್ಲಿ ಇತಿ ಮಿತಿ ಇರಲಿ.
ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕಿತ್ತಳೆ
ಕುಂಭ
ಹೆಚ್ಚಿನ ಅಧ್ಯಯನಕ್ಕಾಗಿ ಉದ್ಯೋಗ ನೀಡಿದ ಸಂಸ್ಥೆಯ ಮೂಲಕ ವಿದೇಶಕ್ಕೆ ತೆರಳುವಿರಿ. ವಾಹನ ಚಾಲನೆ ಮಾಡುವ ವೇಳೆ ತೊಂದರೆ ಉಂಟಾಗಬಹುದು ಎಚ್ಚರಿಕೆ ಇರಲಿ. ಗುರುಹಿರಿಯರ ಸೇವೆ ಮಾಡುವಿರಿ. ನಿಮ್ಮಲ್ಲಿನ ಹುದುಗಿದ ಪ್ರತಿಭೆಯ ಅನಾವರಣ ಮಾಡಲು ಅವಕಾಶ ದೊರೆಯುತ್ತದೆ. ನಿಮ್ಮ ತಾಯಿಗೆ ಸಂಬಂಧಿಸಿದ ಆಸ್ತಿ ವಿಚಾರದಲ್ಲಿ ವಿವಾದ ಉಂಟಾಗುತ್ತದೆ. ಹಣಕಾಸಿನ ವಿಚಾರದಲ್ಲಿ ದಂಪತಿಗಳಲ್ಲಿ ಪರಸ್ಪರ ಭಿನಾಭಿಪ್ರಾಯ ಇರುತ್ತದೆ. ಉದ್ಯೋಗದಲ್ಲಿ ಉನ್ನತ ಮಟ್ಟವನ್ನು ತಲುಪುವಿರಿ. ಕುಟುಂಬದ ಧಾರ್ಮಿಕ ಕಾರ್ಯವೊಂದನ್ನು ನಡೆಸಿಕೊಡುವಿರಿ. ವಿದ್ಯಾರ್ಥಿಗಳಿಗೆ ನೂತನ ತಂತ್ರಜ್ಞಾನವನ್ನು ಅಭ್ಯಾಸ ಮಾಡುವ ಅವಕಾಶ ದೊರೆಯುತ್ತದೆ.
ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಹಳದಿ
ಮೀನ
ಸ್ಥಿರವಾದ ಮನಸ್ಥಿತಿ ಇರುವುದಿಲ್ಲ. ತೆಗೆದುಕೊಂಡ ತೀರ್ಮಾನಗಳನ್ನು ಬದಲಿಸುವ ಕಾರಣ ಕೆಲಸ ಕಾರ್ಯಗಳಲ್ಲಿ ಹಿನ್ನೆಡೆ ಉಂಟಾಗಲಿದೆ. ನಿಮ್ಮ ಮಾತನ್ನು ಎಲ್ಲರೂ ಒಪ್ಪುತ್ತಾರೆ. ಸಣ್ಣ ಪ್ರಮಾಣದ ವ್ಯಾಪಾರವೊಂದನ್ನು ಆರಂಭಿಸಿ ಹಣದ ಕೊರತೆಯನ್ನು ನಿವಾರಿಸಿಕೊಳ್ಳುವಿರಿ. ಮಕ್ಕಳೊಂದಿಗೆ ಸುಮಧುರ ಸಂಬಂಧ ಇರುತ್ತದೆ. ಉತ್ತಮ ಅವಕಾಶ ದೊರೆವ ಕಾರಣ ಉದ್ಯೋಗ ಬದಲಾವಣೆ ಮಾಡುವಿರಿ. ವಿದ್ಯಾರ್ಥಿಗಳು ವಿಶೇಷ ಸಾಧನೆ ಮೂಲಕ ಜನ ಮನ್ನಣೆ ಗಳಿಸಲಿದ್ದಾರೆ. ಶೀತದ ತೊಂದರೆ ಇರುತ್ತದೆ. ಯೋಗ ಪ್ರಾಣಾಯಾಮದಿಂದ ಆರೋಗ್ಯ ಕಾಪಾಡಿಕೊಳ್ಳುವಿರಿ. ಸಮಾಜದಲ್ಲಿ ಗೌರವಾದರಗಳು ಲಭಿಸುತ್ತವೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ. ಬೇರೆಯವರಿಂದ ಹಣದ ಸಹಾಯ ನಿರೀಕ್ಷಿಸುವುದಿಲ್ಲ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಹಸಿರು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ವಿಭಾಗ