Horoscope Today; ಉದ್ಯೋಗ ಪ್ರಗತಿ ನಿಧಾನ, ವಿವಾಹ ಯೋಗ, ಚಿನ್ನ ಬೆಳ್ಳಿ ಖರೀದಿ, ಮೇಷದಿಂದ ಕಟಕ ರಾಶಿವರೆಗಿನ ದಿನ ಭವಿಷ್ಯ
7 ಏಪ್ರಿಲ್ 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದಾನೆ. ಆಯಾ ರಾಶಿಗಳ ಜನರು ಮಾಡುವ ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳ ಫಲಗಳು ಸಿಗುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನ ಭವಿಷ್ಯ ಇಲ್ಲಿದೆ. (7th April 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (7th April 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣಪಕ್ಷ, ಭಾನುವಾರ
ತಿಥಿ: ಚತುರ್ದಶಿ ರಾ. 02.34 ರ ವರೆಗೂ ಇರುತ್ತದೆ. ಆನಂತರ ಅಮಾವಾಸ್ಯೆ.
ನಕ್ಷತ್ರ ಪೂರ್ವಾಭಾದ್ರ ನಕ್ಷತ್ರವು ಹ.11.53 ರವರೆಗೂ ಇರುತ್ತದೆ. ಆನಂತರ ಉತ್ತರಾಭಾದ್ರ ನಕ್ಷತ್ರವು ಆರಂಭವಾಗಲಿದೆ.
ಸೂರ್ಯೋದಯ ಬೆಳಗ್ಗೆ 06.11ಕ್ಕೆ
ಸೂರ್ಯಾಸ್ತ ಸಂಜೆ 06.31ಕ್ಕೆ
ರಾಹುಕಾಲ: ಹ. 04.30 ರಿಂದ ಸ. 06.00
ಮೇಷ - ಉದ್ಯೋಗದಲ್ಲಿ ನಿಧಾನ ಪ್ರಗತಿ
ಸದಾ ಧನಾತ್ಮಕ ಚಿಂತನೆಯ ಮನಸ್ಸು. ಕೌಟುಂಬಿಕವಾಗಿ ಅನುಕೂಲಕರ ಕೆಲಸ ಶುರುಮಾಡುವಿರಿ. ಹಣಕಾಸಿನ ವಿಚಾರದಲ್ಲಿಯೂ ಒಮ್ಮತದ ನಿರ್ಧಾರ ತೆಗೆದುಕೊಳ್ಳುವಿರಿ. ಉದ್ಯೋಗದಲ್ಲಿ, ಕೆಲಸ ಕಾರ್ಯದಲ್ಲಿ ನಿಧಾನಗತಿಯ ಪ್ರಗತಿ ಕಾಣುವ ಕಾರಣ ಮಾನಸಿಕ ನೆಮ್ಮದಿ ಕಡಿಮೆ. ಬಿಡುವಿಲ್ಲದ ಕೆಲಸ ಕಾರ್ಯದ ಕಾರಣ ವಿಶ್ರಾಂತಿಯ ಕೊರತೆ ಕಂಡು ಬರುತ್ತದೆ. ವಿದ್ಯಾರ್ಥಿಗಳು ಆಟ ಪಾಠಗಳಲ್ಲಿ ಮುಂದಿರುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಮಕ್ಕಳ ಅಭ್ಯುದಯಕ್ಕಾಗಿ ಎಲ್ಲರ ವಿರೋಧವನ್ನು ಎದುರಿಸುವಿರಿ. ಸಹನೆ ಕಳೆದುಕೊಂಡಲ್ಲಿ ತಪ್ಪುನಿರ್ಧಾರ ತೆಗೆದುಕೊಳ್ಳುವಿರಿ.
ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ
ವೃಷಭ - ಅವಿವಾಹಿತರಿಗೆ ವಿವಾಹ ಯೋಗ
ವಿವಾದ ಎದುರಾಗಲಿದೆ. ಇದು ಬೇರೆಯವರ ಸಲಹೆಯನ್ನು ಸ್ವೀಕರಿಸದೇ ಇರುವ ಕಾರಣ ಉಂಟಾಗಲಿದೆ. ಕೌಟುಂಬಿಕವಾಗಿ ಕ್ಷಣಕಾಲ ಬೇಸರ ಉಂಟಾಗುತ್ತದೆ. ಮಾನಸಿಕ ಒತ್ತಡ ಹೆಚ್ಚುವ ಕಾರಣ ಆರೋಗ್ಯದಲ್ಲಿ ತೊಂದರೆ ಆಗಲಿದೆ. ಆತಂಕದ ನಡುವೆಯೂ ಉದ್ಯೋಗದಲ್ಲಿ ನಿರೀಕ್ಷಿತ ಯಶಸ್ಸು ಗಳಿಸುವಿರಿ. ವಿದ್ಯಾರ್ಥಿಗಳು ಗಡಿಬಿಡಿಯಿಂದ ತಪ್ಪು ನಿರ್ಧಾರ ಕೈಗೊಳ್ಳುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಆದಾಯದ ಕೊರತೆ ಇರುವುದಿಲ್ಲ. ದಂಪತಿಗಳ ನಡುವೆ ಹೊಂದಾಣಿಕೆ ಕಂಡು ಬರುತ್ತದೆ. ಆತ್ಮೀಯರ ಜೊತೆಯಲ್ಲಿ ಸಹಕಾರ ಮನೋಭಾವನೆ ಉಂಟಾಗುತ್ತದೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಇರಲಿವೆ. ದುರ್ಬಲರಿಗೆ ಹಣದ ಸಹಾಯ ಮಾಡುವಿರಿ. ಆತಂಕವಿಲ್ಲದೆ ದಿನದ ಕೆಲಸವನ್ನು ಆರಂಭಿಸುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ 10
ಅದೃಷ್ಟದ ದಿಕ್ಕು ಈಶಾನ್ಯ
ಅದೃಷ್ಟದ ಬಣ್ಣ : ಕೇಸರಿಬಣ್ಣ
ಮಿಥುನ - ಚಿನ್ನ ಬೆಳ್ಳಿ ಖರೀದಿ ಯೋಗ
ಮನಸ್ಸಿನಲ್ಲಿ ಅನಾವಶ್ಯಕ ಚಿಂತೆ ಇರಲಿದೆ. ಹಣದ ಕೊರತೆ ಕಂಡು ಬರುವುದಿಲ್ಲ. ಉತ್ತಮ ಜ್ಞಾನವನ್ನು ಗಳಿಸಲು ಧ್ಯಾನದ ಮಾರ್ಗವನ್ನು ಅವಲಂಬಿಸುವಿರಿ. ಹಣ ಒಂದೇ ಜೀವನವಲ್ಲ ಧ್ಯೇಯವಲ್ಲ ಎಂಬ ನಂಬಿಕೆ ನಿಮ್ಮಲಿರುತ್ತದೆ. ಕುಟುಂಬದಲ್ಲಿ ಹೊಂದಾಣಿಕೆ ಇರುತ್ತದೆ. ಉದ್ಯೋಗದಲ್ಲಿ ಅನಿರೀಕ್ಷಿತ ಪ್ರಗತಿ ಕಂಡು ಬಂದು ಉನ್ನತ ಅಧಿಕಾರ ದೊರೆಯುತ್ತದೆ. ವಿದ್ಯಾರ್ಥಿಗಳು ಸಹಪಾಠಿಗಳೊಂದಿಗೆ ಉನ್ನತ ಅಧ್ಯಯನದಲ್ಲಿ ತೊಡಗುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಉದ್ಯಮಿಗಳಿಗೆ ವಿಶೇಷ ಆಸರೆ ದೊರೆಯುತ್ತದೆ. ಚಿನ್ನ ಬೆಳ್ಳಿಯ ಒಡವೆಗಾಗಿ ಹೆಚ್ಚಿನ ಹಣ ವೆಚ್ಚವಾಗಲಿದೆ. ಬಡ ರೋಗಿಗಳಿಗೆ ಸಹಾಯಮಾಡುವಿರಿ. ಕುಟುಂಬದ ಹಿರಿಯರಿಗೆ ವಿಶೇಷವಾದ ಅನುಕೂಲತೆಗಳು ದೊರೆಯುತ್ತವೆ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ
ಕಟಕ - ಸ್ವಂತ ಮನೆ ಖರೀದಿ ಚಿಂತನೆ
ಅಸಾಧ್ಯವೆಂಬ ಕೆಲಸ ಕಾರ್ಯಗಳೂ ಆತ್ಮೀಯರ ಸಹಾಯದಿಂದ ಸುಲಭವಾಗಿ ನೆರವೇರುತ್ತದೆ. ನಿಮ್ಮೆಲ್ಲ ಆಶೋತ್ತರಗಳು ಈಡೇರಲಿವೆ. ಕುಟುಂಬದಲ್ಲಿ ಸ್ನೇಹಮಯ ವಾತಾವರಣ ಕಂಡು ಬರುತ್ತದೆ. ಉದ್ಯೋಗದಲ್ಲಿ ಕೀಳರಿಮೆ ತೋರದೆ ಪ್ರತಿ ಕೆಲಸದಲ್ಲಿಯೂ ಮುತುವರ್ಜಿ ತೋರುವಿರಿ. ಹಿರಿಯ ಅಧಿಕಾರಿಗಳ ಕೃಪಾಶೀರ್ವಾದ ದೊರೆಯುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಚೇತೋಹಾರಿ ಬೆಳವಣಿಗೆಯನ್ನು ಕಾಣುತ್ತವೆ. ವಿದ್ಯಾರ್ಥಿಗಳಿಗೆ ಉನ್ನತದ ಅಧ್ಯಯನದ ಅವಕಾಶ ದೊರೆಯುತ್ತದೆ. ತಂದೆಯವರ ಸಹಾಯದಿಂದ ಸ್ವಂತ ಮನೆ ಖರೀದಿಸುವ ಚಿಂತನೆ ನಡೆಸುವಿರಿ. ಧಾರ್ಮಿಕ ಕೇಂದ್ರಕ್ಕೆ ಹಣದ ಸಹಾಯವನ್ನು ಮಾಡುವಿರಿ. ಆತುರದಿಂದ ಯಾವುದೇ ಕೆಲಸ ಆರಂಭಿಸದಿರಿ.
ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕೆಂಪು ಬಣ್ಣ
-------------------------------
ಜ್ಯೋತಿಷಿ- ಎಚ್. ಸತೀಶ್, ಬೆಂಗಳೂರು
ಮೊಬೈಲ್: 85468 65832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಗೌರಿವಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.
ವಿಭಾಗ