ಆತ್ಮೀಯರ ವಿವಾಹ ಕಾರ್ಯಕ್ಕೆ ಸಹಾಯ ಮಾಡುವಿರಿ, ಬೆನ್ನು ನೋವು ಉಲ್ಬಣಿಸಲಿದೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಆತ್ಮೀಯರ ವಿವಾಹ ಕಾರ್ಯಕ್ಕೆ ಸಹಾಯ ಮಾಡುವಿರಿ, ಬೆನ್ನು ನೋವು ಉಲ್ಬಣಿಸಲಿದೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಆತ್ಮೀಯರ ವಿವಾಹ ಕಾರ್ಯಕ್ಕೆ ಸಹಾಯ ಮಾಡುವಿರಿ, ಬೆನ್ನು ನೋವು ಉಲ್ಬಣಿಸಲಿದೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಜುಲೈ 7ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್‌. ಸತೀಶ್, ಜ್ಯೋತಿಷಿ).

ಆತ್ಮೀಯರ ವಿವಾಹ ಕಾರ್ಯಕ್ಕೆ ಸಹಾಯ ಮಾಡುವಿರಿ, ಬೆನ್ನು ನೋವು ಉಲ್ಬಣಿಸಲಿದೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ
ಆತ್ಮೀಯರ ವಿವಾಹ ಕಾರ್ಯಕ್ಕೆ ಸಹಾಯ ಮಾಡುವಿರಿ, ಬೆನ್ನು ನೋವು ಉಲ್ಬಣಿಸಲಿದೆ; ಧನಸ್ಸು, ಮಕರ, ಕುಂಭ, ಮೀನ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈ ದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(7th July 2024 Daily Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಢ ಮಾಸ-ಶುಕ್ಲಪಕ್ಷ-ಭಾನುವಾರ

ತಿಥಿ : ಬಿದಿಗೆ ರಾತ್ರಿ 04.08 ರವರೆಗೂ ಇದ್ದು ನಂತರ ತದಿಗೆ ಆರಂಭವಾಗುತ್ತದೆ.

ನಕ್ಷತ್ರ : ಪುಷ್ಯ ನಕ್ಷತ್ರವು ಬೆಳಗ್ಗೆ 06.03 ರವರೆಗೆ ಇದ್ದು ನಂತರ ಆಶ್ಲೇಷ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.49

ರಾಹುಕಾಲ: ಸಂಜೆ 05.16 ರಿಂದ 06.52

ರಾಶಿಫಲ

ಧನಸ್ಸು

ಅತಿ ಸರಳ ಮಾರ್ಗದಲ್ಲಿ ಕಷ್ಟದ ಕೆಲಸ ಕಾರ್ಯಗಳನ್ನು ಸುಲಭವಾಗಿ ನಿರ್ವಹಿಸಬಲ್ಲಿರಿ. ಹಣಕಾಸಿನ ವಿಚಾರದಲ್ಲಿ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಆತ್ಮೀಯರ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡು ಬರದು. ವಿದ್ಯಾರ್ಥಿಗಳು ಆಸಕ್ತಿಯಿಂದ ಅಧ್ಯಯನದಲ್ಲಿ ತೊಡಗುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಬದಲಾವಣೆಗಳು ಎದುರಾಗಲಿವೆ. ಭೂವ್ಯವಹಾರಕ್ಕೆ ಸಬಂಧಿಸಿದ ಸಂಸ್ಥೆಯನ್ನು ಆರಂಭಿಸುವ ಸೂಚನೆ ಇದೆ. ಸಂಗಾತಿಯೊಂದಿಗೆ ವಿದೇಶಕ್ಕೆ ತೆರಳುವಿರಿ. ಆರೋಗ್ಯದಲ್ಲಿ ತೊಂದರೆ ಮರೆಯಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭವಿದೆ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಪ್ಪು

ಮಕರ

ಕುಟುಂಬದ ಸದಸ್ಯರ ನಡುವೆ ಉತ್ತಮ ಒಡನಾಟ ಇರಲಿದೆ. ಮಕ್ಕಳ ಜೊತೆ ಸಂತಸದಿಂದ ಕಾಲ ಕಳೆಯುವಿರಿ. ಉದ್ಯೋಗದಲ್ಲಿ ಬಿಡುವಿಲ್ಲದ ಕೆಲಸ ಕಾರ್ಯಗಳಿರುತ್ತವೆ. ಉದ್ಯೋಗ ಬದಲಿಸುವ ಸಾಧ್ಯತೆಗಳು ಕಂಡುಬರುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಧನ ಲಾಭವಿದೆ. ನಿಮ್ಮಲ್ಲಿರುವ ವಾಹನವನ್ನು ಆತ್ಮೀಯರಿಗೆ ಉಡುಗೊರೆ ನೀಡುವಿರಿ. ಕಮೀಷನ್‌ ಆಧಾರಿತ ವ್ಯಾಪಾರದಲ್ಲಿ ಹೆಚ್ಚಿನ ಹಣ ಗಳಿಸುವಿರಿ. ಹಿರಿಯ ಸೋದರೊಂದಿಗೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಉಂಟಾಗುತ್ತದೆ. ವಿದ್ಯಾರ್ಥಿಗಳು ದೃಢವಾದ ಮನಸ್ಸಿನಿಂದ ಓದಿನಲ್ಲಿ ಮಗ್ನರಾಗುತ್ತಾರೆ. ಕೈಕಾಲುಗಳಲ್ಲಿ ನೋವು ಹೆಚ್ಚಾಗಿರುತ್ತದೆ. ಹಣದ ಕೊರತೆ ಎದುರಾಗುತ್ತದೆ. ಆತ್ಮೀಯರ ವಿವಾಹ ಕಾರ್ಯಕ್ಕೆ ಸಹಾಯ ಮಾಡುವಿರಿ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ :11

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ತಿಳಿ ಹಸಿರು

ಕುಂಭ

ಉದ್ಯೋಗಕ್ಷೇತ್ರದಲ್ಲಿ ಸಂತಸದ ಕ್ಷಣಗಳು ಎದುರಾಗುತ್ತವೆ. ಉನ್ನತ ಮಟ್ಟ ತಲುಪುವಿರಿ. ಆರೋಗ್ಯದಲ್ಲಿ ಸ್ಥಿರತೆ ಇರುತ್ತದೆ. ಕುಟುಂಬದಲ್ಲಿ ಬೇಸರದ ವಾತಾವರಣ ಇರುತ್ತದೆ. ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವ ಅವಕಾಶ ಪಡೆಯುವಿರಿ. ವಿದ್ಯಾರ್ಥಿಗಳಿಗೆ ಸಾಧಾರಣ ಪ್ರಗತಿ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಬಂಡವಾಳವನ್ನು ತೊಡಗಿಸುವಿರಿ. ನಿಮ್ಮ ಪಾಲಿಗೆ ಬಂದ ಲಾಭದ ಹಣದಲ್ಲಿ ಹೊಸ ಉದ್ಯಮವನ್ನು ಆರಂಭಿಸುವಿರಿ. ಸಾರ್ವಜನಿಕ ಸಭೆ ಸಮಾರಂಭಗಳನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ ಮಾಡುವವರು ಹೆಚ್ಚಿನ ಹಣ ಗಳಿಸುತ್ತಾರೆ. ಬೆನ್ನು ನೋವಿನಿಂದ ಬಳಲುವಿರಿ

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ನಸು ಗೆಂಪು ಬಣ್ಣ

ಮೀನ

ಜೀವನದ ಅತಿ ಸುಂದರವಾದ ದಿನಗಳ ನೆನಪಾಗುತ್ತದೆ. ಕುಟುಂಬದ ಎಲ್ಲರ ಮನಸ್ಸು ಒಂದಾಗಲಿದೆ. ನೆರೆಹೊರೆಯರ ನಡುವೆ ಪರಸ್ಪರ ಪ್ರೀತಿ ವಿಶ್ವಾಸ ಕಂಡುಬರುತ್ತದೆ. ಆತ್ಮೀಯರಿಂದ ಉಡುಗೊರೆಯೊಂದು ದೊರೆಯಲಿದೆ. ಅನಿರೀಕ್ಷಿತ ಧನಲಾಭವಿದೆ. ಉದ್ಯೋಗದಲ್ಲಿ ಯಶಸ್ಸು ದೊರೆಯುತ್ತದೆ. ವಿದ್ಯಾರ್ಥಿಗಳು ಉನ್ನತ ಮಟ್ಟ ತಲುಪಲಿದ್ದಾರೆ. ಲೋಹದ ವ್ಯಾಪಾರ ವ್ಯವಹಾರದಲ್ಲಿ ಹಣ ಗಳಿಸುವಿರಿ. ದುಡುಕು ಮಾತಿನಿಂದ ವಿವಾದ ಎದುರಿಸಬೇಕಾಗುತ್ತದೆ. ವಂಶದ ಆಸ್ತಿಯಲ್ಲಿ ಇದ್ದ ವಿವಾದ ಬಗೆಹರಿಯುತ್ತದೆ. ಆತ್ಮೀಯರಿಗೆ ವಿವಾಹ ಯೋಗವಿದೆ. ನಿಮ್ಮ ಮೆಚ್ಚಿನ ಪ್ರದೇಶಕ್ಕೆ ಪ್ರವಾಸಕ್ಕೆ ತೆರಳುವಿರಿ. ಕ್ರೀಡಾಪಟುಗಳಿಗೆ ವಿಶೇಷ ಅವಕಾಶವೊಂದು ದೊರೆಯಲಿದೆ.

ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.