ರಾಜಕೀಯದಲ್ಲಿ ಉನ್ನತ ಸ್ಥಾನಮಾನ, ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವ ಅವಕಾಶ; ಜು 8ರ ದಿನ ಭವಿಷ್ಯ
ಜುಲೈ 8ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (ಬರಹ: ಎಚ್. ಸತೀಶ್, ಜ್ಯೋತಿಷಿ).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (8th July 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಡ ಮಾಸ-ಶುಕ್ಲಪಕ್ಷ-ಸೋಮವಾರ
ತಿಥಿ : ತದಿಗೆ ಬೆಳಗ್ಗೆ05.01 ರವರೆಗೂ ಇದ್ದು ನಂತರ ಚೌತಿ ಆರಂಭವಾಗುತ್ತದೆ.
ನಕ್ಷತ್ರ : ಆಶ್ಲೇಷ ನಕ್ಷತ್ರವು ದಿನಪೂರ್ತಿ ಇರುತ್ತದೆ.
ಸೂರ್ಯೋದಯ: ಬೆಳಗ್ಗೆ 05.58
ಸೂರ್ಯಾಸ್ತ: ಸಂಜೆ 06.49
ರಾಹುಕಾಲ: ಬೆಳಗ್ಗೆ 07.40 ರಿಂದ 09.16 ವರೆಗೆ
ರಾಶಿಫಲ
ಸಿಂಹ
ನೇರವಾದ ನಡೆನುಡಿಯಿಂದ ವಿವಾದಕ್ಕೆ ಒಳಗಾಗುವಿರಿ. ಹಿರಿಯರ ಮಧ್ಯಸ್ಥಿಕೆಯಿಂದ ಗೊಂದಲದಿಂದ ಪಾರಾಗುವಿರಿ. ಕುಟುಂಬದಲ್ಲಿ ಬಿಗುವಿನ ವಾತಾವರಣ ಉಂಟಾಗುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯಲಿದೆ. ಕುಟುಂಬದ ಹಿರಿಯರ ಜವಾಬ್ದಾರಿ ನಿಮ್ಮದಾಗುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಾರೆ. ರಾಜಕೀಯದಲ್ಲಿ ಉನ್ನತ ಸ್ಥಾನಮಾನ ದೊರೆಯುತ್ತದೆ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಸಂಗಾತಿಯ ಜೊತೆ ಬೇಡದ ವಿಚಾರಗಳಿಗೆ ವಾದ ವಿವಾದ ಇರುತ್ತದೆ. ತಂದೆಯವರ ಸೂಚನೆಯಂತೆ ಹೊಸ ವ್ಯಾಪಾರದಲ್ಲಿ ತೊಡಗುವಿರಿ. ಪಶುಸಂಗೋಪನೆಯಲ್ಲಿ ಆಸಕ್ತಿ ಉಂಟಾಗಲಿದೆ.
ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ಹಸಿರು
ಕನ್ಯಾ
ಬಹುದಿನದ ನಂತರ ಉದ್ಯೋಗ ಬದಲಿಸುವಿರಿ. ಆರೋಗ್ಯದಲ್ಲಿ ನಿಧಾನವಾಗಿ ಚೇತರಿಕೆ ಕಂಡುಬರುತ್ತದೆ. ಕುಟುಂಬದಲ್ಲಿ ಹಣಕಾಸಿನ ವಿಚಾರದಲ್ಲಿ ಮಾತುಕತೆ ನಡೆಯುತ್ತದೆ. ಸಂಬಂಧಗಳ ನಿಜವಾದ ಅರ್ಥವನ್ನು ಎಲ್ಲರಿಗೂ ತಿಳಿಸುವಿರಿ. ಸಂಗಾತಿಯ ಮನಸ್ಸು ಅರಿಯಲು ಇದು ಉತ್ತಮ ಸಮಯ. ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವ ಸಾಧ್ಯತೆಗಳಿವೆ. ಸಾಲದ ವ್ಯವಹಾರ ಮಾಡದಿರಿ. ವ್ಯಾಪಾರ ವ್ಯವಹಾರದಲ್ಲಿ ಹಣದ ತೊಂದರೆ ಇರುವುದಿಲ್ಲ. ವಿದ್ಯಾರ್ಥಿಗಳು ತಮ್ಮ ತಪ್ಪಿಗೆ ಬೇರೆಯವರನ್ನು ದೂರಲಿದ್ದಾರೆ. ವಿದ್ಯಾರ್ಥಿಗಳು ಸಮೂಹಕಲಿಕೆಯಲ್ಲಿ ನಿರತರಾಗಲಿದ್ದಾರೆ. ಕುಟುಂಬದ ಸದಸ್ಯರ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ. ಅನಾವಶ್ಯಕವಾದ ಟೀಕೆಗಳಿಂದ ದೂರ ಉಳಿಯಿರಿ.
ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ : ನೀಲಿ
ತುಲಾ
ಕುಟುಂಬದಲ್ಲಿ ಔತಣ ಕೂಟವೊಂದನ್ನು ಆಯೋಜಿಸುರಿವಿ. ನಿಮ್ಮ ಮಕ್ಕಳ ಬೇಡಿಕೆಗಳಿಗೆ ಕೊನೆ ಇರದು. ಉದ್ಯೋಗದಲ್ಲಿ ತಪ್ಪು ಮಾಡಿದರೂ ಅಧಿಕಾರಿಗಳು ಮನ್ನಿಸುತ್ತಾರೆ. ಎಲ್ಲರ ಮನ್ನಣೆ ಗಳಿಸುವಿರಿ. ಪ್ರೀತಿಯಿಂದ ವರ್ತಿಸಿ ಕುಟುಂಬದ ಎಲ್ಲರ ಪ್ರೀತಿ-ವಿಶ್ವಾಸವನ್ನು ಸಂಪಾದಿಸುವಿರಿ. ಉದ್ಯೋಗ ಬದಲಿಸುವ ಸೂಚನೆಗಳಿವೆ. ಹಣಕಾಸಿನ ತೊಂದರೆ ಎದುರಾಗದು. ಆತ್ಮೀಯ ಸ್ನೇಹಿತರೊಂದಿಗೆ ದೂರದೂರಿಗೆ ಪ್ರವಾಸಕ್ಕೆ ತೆರಳುವಿರಿ. ವಿದ್ಯಾರ್ಥಿಗಳು ಒತ್ತಡದ ನಡುವೆಯೂ ಯಶಸ್ಸು ಕಾಣುತ್ತಾರೆ. ದಿಢೀರನೆ ವಿವಾಹ ನಿಶ್ಚಯವಾಗುತ್ತದೆ. ಕಾನೂನು ಸಲಹೆಗಾರರನ್ನು ಭೇಟಿ ಮಾಡುವಿರಿ ಸಮಾಜದಲ್ಲಿ ಉನ್ನತ ಗೌರವ ಲಭಿಸುತ್ತದೆ.
ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ನೇರಳೆ
ವೃಶ್ಚಿಕ
ನಿಮ್ಮಲ್ಲಿ ಇರುವ ಬುದ್ಧಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಪ್ರಯತ್ನಿಸುವಿರಿ. ಸಂದಿಗ್ದ ಪರಿಸ್ಥಿತಿಯಲ್ಲಿ ಸಹನೆ ಕಳೆದುಕೊಳ್ಳುವುದಿಲ್ಲ. ಆದರೆ ನಿಮ್ಮ ಪ್ರತಿಸ್ಪರ್ಧಿಗಳು ಎದುರಾದಾಗ ಸಹನೆ ಕಳೆದುಕೊಳ್ಳುವಿರಿ. ಕುಟುಂಬದ ಸದಸ್ಯರು ಪರಸ್ಪರ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುತ್ತಾರೆ. ಉದ್ಯೋಗದಲ್ಲಿ ಎದುರಾಗುವ ತೊಂದರೆಯಿಂದ ಪಾರಾಗುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿರಿ. ನಿಮ್ಮ ಅಧಿಕಾರದಲ್ಲಿ ಕೆಲಸ ಮಾಡುವವರ ಬಗ್ಗೆ ಅನುಕಂಪ ಇರಲಿ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ಮಟ್ಟ ತಲುಪುತ್ತಾರೆ. ಹೊಸ ವ್ಯಾಪಾರ ವ್ಯವಹಾರಗಳನ್ನು ಆರಂಭಿಸಲು ಸಾಧ್ಯವಾಗದು. ಭೂಸಂಬಂಧಿತ ಪ್ರಕ್ರಿಯೆಗಳಿಂದ ಉತ್ತಮ ಆದಾಯ ಗಳಿಸುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
