ಹಟದ ಸ್ವಭಾವ ಬಿಟ್ಟರೆ ಬಹುತೇಕ ಸಮಸ್ಯೆ ಕಡಿಮೆ ಆದಂತೆ, ವಾಹನ ಚಲಾಯಿಸುವಾಗ ಎಚ್ಚರಿಕೆ ಅಗತ್ಯ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
8 ಜೂನ್ 2024ರ ದಿನ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (8th June 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (8th June 2024 Daily Horoscope).
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಜ್ಯೇಷ್ಠ ಮಾಸ-ಶುಕ್ಲಪಕ್ಷ-ಶನಿವಾರ
ತಿಥಿ: ಬಿದಿಗೆ 04.09 ರವರೆಗೂ ಇರುತ್ತದೆ ನಂತರ ತದಿಗೆ ಆರಂಭವಾಗುತ್ತದೆ.
ನಕ್ಷತ್ರ:ಆರ್ದ್ರೆ ನಕ್ಷತ್ರವು ರಾತ್ರಿ 08.26 ರವರೆಗೂ ಇದ್ದು ನಂತರ ಪುನರ್ವಸು ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 05.52
ಸೂರ್ಯಾಸ್ತ: ಸಂಜೆ 06.44
ರಾಹುಕಾಲ: ಬೆಳಗ್ಗೆ 09.11 ರಿಂದ 10.47
ರಾಶಿಫಲ
ಮೇಷ
ಉತ್ತಮ ಆರೋಗ್ಯ ಇದ್ದರೂ ಸ್ವಲ್ಪ ಮಟ್ಟಿಗೆ ಪಿತ್ತ ದೋಷ ಕಾಡುತ್ತದೆ. ಕಣ್ಣಿನ ದೋಷ ಇದ್ದವರು ಎಚ್ಚರಿಕೆ ವಹಿಸಬೇಕು. ಎದುರಾಗುವ ಸಮಸ್ಯೆಗಳಿಗೆ ಬುದ್ಧಿವಂತಿಕೆಯಿಂದ ಪರಿಹಾರ ಕಂಡು ಹಿಡಿಯುವಿರಿ. ಸದಾಕಾಲ ಒಳ್ಳೆಯ ಹಾದಿಯಲ್ಲಿ ನಡೆಯುವ ನೀವು ಎಲ್ಲರ ಮನ ಗೆಲ್ಲುವಿರಿ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ. ಸಮಯಕ್ಕೆ ತಕ್ಕಂತೆ ಮಾತನಾಡುವಿರಿ. ದೂರದ ಊರಿಗೆ ಪ್ರವಾಸ ಬೆಳೆಸುವುದನ್ನು ಇಷ್ಟಪಡುವಿರಿ. ಸಮಾಜದಲ್ಲಿ ಉನ್ನತ ಕೀರ್ತಿ ಪ್ರತಿಷ್ಠೆ ಲಭಿಸುತ್ತದೆ. ಕುಟುಂಬದಲ್ಲಿ ಅಸಮಾಧಾನ ಇರುತ್ತದೆ. ಉತ್ತಮ ಆದಾಯವಿದ್ದರೂ ಮಿತಿಮೀರಿದ ಖರ್ಚು ವೆಚ್ಚದಿಂದ ತೊಂದರೆಗೆ ಒಳಗಾಗುವಿರಿ. ಕಷ್ಟಕಾಲಕ್ಕಾಗಿ ಹಣ ಉಳಿಸುವುದು ಒಳ್ಳೆಯದು.
ಪರಿಹಾರ : ಸಿಹಿ ತಿಂದು ನೀರು ಕುಡಿದ ನಂತರ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಹಳದಿ
ವೃಷಭ
ವಾದ ವಿವಾದಗಳನ್ನು ಇಷ್ಟಪಡದೆ ತಪ್ಪು ಕಂಡರೂ ಮೌನ ವಹಿಸುವಿರಿ. ಒಳ್ಳೆಯ ಜನರ ಸಹವಾಸದಿಂದ ಕುಟುಂಬದ ಸಮಸ್ಯೆ ದೂರವಾಗುತ್ತದೆ. ಸಮಯಕ್ಕೆ ಸರಿಯಾಗಿ ವರ್ತಿಸುವ ಬುದ್ಧಿ ನಿಮಗಿದೆ. ಹೃದಯದ ಸಮಸ್ಯೆ ಇರುವವರು ಎಚ್ಚರಿಕೆಯಿಂದ ಇರಬೇಕು. ಸ್ತ್ರೀಯರು ಶುಭ ಫಲಗಳನ್ನು ಪಡೆಯುತ್ತಾರೆ. ಅವಿವಾಹಿತರಿಗೆ ವಿವಾಹವಾಗುವ ಸಾಧ್ಯತೆ ಇದೆ. ಮಕ್ಕಳು ಜ್ವರದಿಂದ ಬಳಲುತ್ತಾರೆ. ತಂದೆಯಿಂದ ಅವಶ್ಯಕತೆ ತಕ್ಕಂತ ಸಹಾಯ ದೊರೆಯಲಿದೆ. ನಿಮ್ಮ ಮಕ್ಕಳಿಗೆ ಉದ್ಯೋಗ, ಕೀರ್ತಿ ಲಭಿಸುತ್ತದೆ. ಹಟದ ಗುಣವನ್ನು ತೊರೆದರೆ ನೀವು ಯಾವುದೇ ರೀತಿಯ ಕೆಲಸವನ್ನು ಮಾಡಬಹುದು. ಸಾಲ ಕೊಡುವುದಾಗಲಿ ಅಥವಾ ಸಾಲ ತೆಗೆದುಕೊಳ್ಳುವುದಾಗಲಿ ಬೇಡ.
ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಹಸಿರು
ಮಿಥುನ
ಅನಾರೋಗ್ಯ ಕಾಡಲಿದೆ, ನಿಮ್ಮದಲ್ಲದ ತಪ್ಪನ್ನು ಒಪ್ಪಿಕೊಳ್ಳಬೇಕು. ಮನ ಬಿಚ್ಚಿ ಮಾತಾಡಿದರೆ ಸಮಸ್ಯೆಯೊಂದರಿಂದ ಪಾರಾಗಬಹುದು. ಹಣದ ಸಹಾಯ ದೊರೆಯುತ್ತದೆ. ಕಣ್ಣಿನ ದೋಷವಿದ್ದರೆ ನಿವಾರಣೆಯಾಗುತ್ತದೆ. ಅವಶ್ಯಕತೆಗೆ ತಕ್ಕಷ್ಟು ಹಣ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಶುಭ ವರ್ತಮಾನವೊಂದು ಬರಲಿದೆ. ಸಮಾಜದ ಗಣ್ಯ ವ್ಯಕ್ತಿ ಒಬ್ಬರ ಪರಿಚಯವಾಗುತ್ತದೆ. ಹೆಣ್ಣು ಮಕ್ಕಳಿಂದ ಸಹಾಯವಿರುತ್ತದೆ. ಖ್ಯಾತ ಹಣಕಾಸಿನ ಸಂಸ್ಥೆಯ ಒಡೆತನ ಲಭಿಸುತ್ತದೆ. ಸೋದರನ ಜೊತೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪ ಉಂಟಾಗುತ್ತದೆ. ವಾಹನ ಚಾಲನೆ ಮಾಡುವ ವೇಳೆ ತೊಂದರೆ ಉಂಟಾಗಬಹುದು. ಸೋಲಿಗೆ ಭಯಪಡದೆ ಯಶಸ್ಸು ಸಾಧಿಸುವಿರಿ. ನಿಮ್ಮ ಬಳಿ ಇರುವ ಹಣವನ್ನು ಒಳ್ಳೆಯ ಕೆಲಸಗಳಿಗೆ ಖರ್ಚು ಮಾಡುವಿರಿ.
ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ. .
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ನೀಲಿ
ಕಟಕ
ಆತುರದಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸುವಿರಿ. ದಿನ ನಿತ್ಯದ ಕೆಲಸದಲ್ಲಿ ಯಾವುದೇ ತೊಂದರೆ ಉಂಟಾಗುವುದಿಲ್ಲ. ಹಿರಿಯ ಸೋದರ ಅಥವಾ ಸೋದರಿ ಜೊತೆ ಅನಾವಶ್ಯಕವಾದ ವಿವಾದ ಇರಲಿವೆ. ನವಜಾತ ಶಿಶುಗಳಿಗೆ ಅನಾರೋಗ್ಯ ಕಾಡುತ್ತದೆ. ಮನದಲ್ಲಿ ಅಳುಕಿನ ಭಾವನೆ ಇರುವುದಿಲ್ಲ. ಆದಾಯಕ್ಕಿಂದ ಖರ್ಚು ಹೆಚ್ಚುತ್ತದೆ. ಕುಟುಂಬದ ಹಿರಿಯರು ಕಿರಿಯರಿಗೆ ಸಲಹೆ ಸೂಚನೆಗಳನ್ನು ನೀಡುತ್ತಾರೆ. ಹಣಕಾಸಿನ ವಿಚಾರದಲ್ಲಿ ನಿಮ್ಮ ನಿರ್ಧಾರವೇ ಸರಿ ಎಂಬ ಭಾವನೆ ಇರುತ್ತದೆ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ದೊರೆಯಲಿದೆ. ಸ್ವಂತ ಮನೆ ಇದ್ದರೂ ಬೇರೆ ಮನೆಯಲ್ಲಿ ವಾಸಿಸುವ ಸಾಧ್ಯತೆಗಳಿವೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ :10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನೇರಳೆ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
