Horoscope Today: ಆತ್ಮೀಯರಿಂದ ಹಣದ ಸಹಾಯ ಸಿಗತ್ತೆ, ಚಾಡಿ ಮಾತನ್ನು ನಂಬದಿರಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಆತ್ಮೀಯರಿಂದ ಹಣದ ಸಹಾಯ ಸಿಗತ್ತೆ, ಚಾಡಿ ಮಾತನ್ನು ನಂಬದಿರಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

Horoscope Today: ಆತ್ಮೀಯರಿಂದ ಹಣದ ಸಹಾಯ ಸಿಗತ್ತೆ, ಚಾಡಿ ಮಾತನ್ನು ನಂಬದಿರಿ; ಸಿಂಹದಿಂದ ವೃಶ್ಚಿಕ ರಾಶಿವರೆಗಿನ ದಿನಭವಿಷ್ಯ

ಮಾರ್ಚ್​ 9, ಶನಿವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (9 March 2024 Daily Horoscope).

ಮಾರ್ಚ್​ 9ರ ದಿನಭವಿಷ್ಯ
ಮಾರ್ಚ್​ 9ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (9 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಶನಿವಾರ

ತಿಥಿ : ಚತುರ್ದಶಿ ಸ.05.44 ರವರೆಗು ಇದ್ದು ಆನಂತರ ಅಮಾವಾಸ್ಯೆ ಆರಂಭವಾಗುತ್ತದೆ.

ನಕ್ಷತ್ರ : ಧನಿಷ್ಠ ನಕ್ಷತ್ರವು ಬೆ.06.55 ರವರೆಗೆ ಇರುತ್ತದೆ. ಉಪರಿ ಶತಬಿಷ ನಕ್ಷತ್ರ ಇರುತ್ತದೆ.

ಸೂರ್ಯೋದಯ: ಬೆ.06.29

ಸೂರ್ಯಾಸ್ತ: ಸ.06.28

ರಾಹುಕಾಲ : ಬೆ.09.00 ರಿಂದ ಬೆ.10.30

ರಾಶಿ ಫಲಗಳು

ಸಿಂಹ

ಕುಟುಂಬದಲ್ಲಿನ ಮನಸ್ತಾಪವು ಕಡಿಮೆಯಾಗಲಿದೆ. ಪರಸ್ಪರ ಮಾತುಕತೆಯಿಂದ ಸಹಜಸ್ಥಿತಿ ಮರಳುತ್ತದೆ. ಉದ್ಯೋಗದಲ್ಲಿ ಮಾಡದ ತಪ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ತಂದೆಯವರ ವ್ಯಾಪಾರದಲ್ಲಿ ಆಸಕ್ತಿ ಇರುವುದಿಲ್ಲ. ಮನಸ್ಸಿನ ಮೇಲೆ ಪರಿಣಾಮ ಬೀರುವ ಘಟನೆಯೊಂದು ಸಂಭವಿತ್ತದೆ. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಮಾನಸಿಕ ಒತ್ತಡದಿಂದ ಹೊರಬರುತ್ತ್ರಾರೆ. ಐಷಾರಾಮಿ ವಸ್ತುಗಳನ್ನು ಕೊಳ್ಳುವ ಸಾಧ್ಯತೆ ಇದೆ. ಮಕ್ಕಳ ಜೊತೆಯಲ್ಲಿ ಆಟವಾಡುತ್ತಾ ಮನರಂಜನೆಯಲ್ಲಿ ದಿನ ಕಳೆಯುವಿರಿ. ದೇವತಾ ಸೇವೆಯಲ್ಲಿ ನೆಮ್ಮದಿ ಕಾಣುವಿರಿ. ಸಮಾಜದಲ್ಲಿ ವಿಶೇಷವಾದ ಸ್ಥಾನ ಮಾನ ದೂರೆಯುತ್ತದೆ. ಸಹನೆಯಿಂದ ವರ್ತಿಸಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಕನ್ಯಾ

ಕುಟುಂಬದಲ್ಲಿ ಪರಸ್ಪರ ಹೊಂದಾಣಿಕೆಯ ಕೊರತೆ ಇರುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳು ಇರಲಿವೆ. ಉದ್ಯೋಗದಲ್ಲಿ ಪ್ರಯತ್ನಕ್ಕೆ ತಕ್ಕ ಫಲಗಳು ದೊರೆಯಲಿವೆ. ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಓದುವ ಹವ್ಯಾಸ ಬೆಳೆಸಿಕೂಳ್ಳಬೇಕು. ಸಂಪ್ರದಾಯಿಕ ಔಷದೋಪಚಾರದಿಂದ ಆರೋಗ್ಯದಲ್ಲಿ ಸ್ಥಿರತೆ ಉಂಟಾಗುತ್ತದೆ. ಸಂಗಾತಿಯ ಸ್ಥಿತಿ ಪ್ರಜ್ಞೆಯಿಂದ ದೊಡ್ಡ ಸಮಸ್ಯೆಯೊಂದು ನಿವಾರಣೆ ಆಗುವುದು. ಕಲಾವಿದರಿಗೆ ಶುಭವಿದೆ. ಉದ್ಯೋಗದಲ್ಲಿ ಪರಸ್ಪರ ಸಹಕಾರದ ಕೊರತೆ ಕಂಡುಬರುತ್ತದೆ. ದುಡುಕಿನ ಮಾತನಾಡದಿರಿ. ವಂಶದ ಹಿರಿಯರ ಮಾರ್ಗದರ್ಶನ ದೊರೆಯುತ್ತದೆ. ತಂದೆಯವರಿಗೆ ಅನಾವಶ್ಯಕ ಖರ್ಚು ವೆಚ್ಚಗಳಿದ್ದು, ಕುಟುಂಬದ ಜವಾಬ್ದಾರಿ ನಿಮ್ಮದಾಗಲಿದೆ. ಭೂವಿವಾದವೊಂದು ಪರಿಹಾರಗೊಳ್ಳಲಿದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬೂದು ಬಣ್ಣ

ತುಲಾ

ಕುಟುಂಬದಲ್ಲಿ ಹಣಕಾಸಿನ ವಿಚಾರದಲ್ಲಿ ಒಮ್ಮತ ಇರುವುದಿಲ್ಲ. ಉದ್ಯೋಗದಲ್ಲಿ ನಿರೀಕ್ಷಿತ ಗುರಿ ಇಲ್ಲದೆ ಕೆಲಸ ನಿರ್ವಹಿಸಬೇಕಾಗುತ್ತದೆ. ಚಂಚಲ ಮನಸ್ಸಿನ ಕಾರಣ ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ ಕಂಡುಬರುತ್ತದೆ. ಸಾರಿಗೆ ಆಧಾರಿತ ವ್ಯವಹಾರದಲ್ಲಿ ಪಾಲುದಾರಿಕೆ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಬಲ್ಲವರಿಂದ ಉತ್ತಮ ಮಾರ್ಗದರ್ಶನ ದೊರೆಯುತ್ತದೆ. ಸಮಯವನ್ನು ವ್ಯರ್ಥಮಾಡದೆ ಹೊಸ ಜವಾಬ್ದಾರಿಗಳನ್ನು ಒಪ್ಪುವಿರಿ. ಯಾರನ್ನೂ ಸುಲಭವಾಗಿ ನಂಬುವುದಿಲ್ಲ. ಕೊಲೆಸ್ಟ್ರಾಲ್​​ ಇರುವ ಆಹಾರ ಪದಾರ್ಥಗಳಿಂದ ದೂರವಿರಿ. ಚಾಡಿ ಮಾತನ್ನು ನಂಬದಿರಿ. ಭೂವಿವಾದವನ್ನು ಎಚ್ಚರಿಕೆಯಿಂದ ಪರಿಹರಿಸಲು ಪ್ರಯತ್ನಿಸಿ. ಸೋದರಿಯ ವಿವಾಹದ ಮಾತುಕತೆ ನಡೆಯುತ್ತದೆ.

ಪರಿಹಾರ : ಸಾಧು ಸಂತರ ಆಶೀರ್ವಾದವನ್ನು ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಂದು ಬಣ್ಣ

ವೃಶ್ಚಿಕ

ಕುಟುಂಬದ ಕೆಲಸ ಕಾರ್ಯಗಳಲ್ಲಿ ಆಸಕ್ತಿ ತೋರುವುದಿಲ್ಲ. ವಾತಾವರಣಕ್ಕೆ ತಕ್ಕಂತೆ ಮನಸ್ಸನ್ನು ಬದಲಾಯಿಸುವಿರಿ. ಯಾವುದೇ ಕೆಲಸವನ್ನು ಮನವಿಟ್ಟು ಮಾಡುವುದಿಲ್ಲ. ಹಿರಿಯ ಅಧಿಕಾರಿಗಳ ಉಪಟಳಕ್ಕೆ ಬೇಸತ್ತು ಉದ್ಯೋಗವನ್ನು ಬದಲಾಯಿಸುವ ಸೂಚನೆಗಳಿವೆ. ವಿದ್ಯಾರ್ಥಿಗಳು ಉತ್ತಮ ಸನ್ನಿವೇಶದ ಮಧ್ಯೆ ಹುಮ್ಮಸ್ಸಿನಿಂದ ಕೆಲಸ ನಿರ್ವಹಿಸುತ್ತಾರೆ. ಹಣಕಾಸಿನ ವಿಚಾರದಲ್ಲಿ ತಪ್ಪಾದ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು. ಭೂ ಸಂಬಂಧಿತ ಉದ್ದಿಮೆಯಲ್ಲಿ ಉತ್ತಮ ಆದಾಯ ಲಭಿಸುತ್ತದೆ. ತಾಯಿಯವರಿಂದ ಹಣದ ಸಹಾಯ ದೊರೆಯುತ್ತದೆ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

-----------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.