Horoscope Today: ಉದ್ಯೋಗದಲ್ಲಿ ವಿಶೇಷ ಬದಲಾವಣೆ ಕಂಡುಬರಲಿದೆ, ಮುಂಗೋಪ ಒಳ್ಳೆಯದಲ್ಲ; ಧನು ರಾಶಿಯಿಂದ ಮೀನದವರೆಗಿನ ದಿನಭವಿಷ್ಯ
9 ಏಪ್ರಿಲ್ 2024 ಮಂಗಳವಾರ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದಾನೆ. ಆಯಾ ರಾಶಿಗಳ ಜನರು ಮಾಡುವ ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳ ಫಲಗಳು ಸಿಗುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನ ಭವಿಷ್ಯ ಇಲ್ಲಿದೆ. (9th April 2024 Daily Horoscope)

ಇಂದಿನ ರಾಶಿ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಸಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವುದು ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀಲವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (9th April 2024 Horoscope)
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಮಂಗಳವಾರ
ತಿಥಿ: ಪಾಡ್ಯ ರಾತ್ರಿ 10.01ರವರೆಗೂ ಇರುತ್ತದೆ. ಅನಂತರ ಬಿದಿಗೆ ಆರಂಭವಾಗುತ್ತದೆ.
ನಕ್ಷತ್ರ: ರೇವತಿ ನಕ್ಷತ್ರವು ಬೆಳಿಗ್ಗೆ 8.22ರವರೆಗೂ ಇರುತ್ತದೆ. ಅನಂತರ ಅಶ್ವಿನಿ ನಕ್ಷತ್ರವು ಆರಂಭವಾಗಲಿದೆ.
ಸೂರ್ಯೋದಯ: ಬೆಳಿಗ್ಗೆ 6.10
ಸೂರ್ಯಾಸ್ತ: ಸಂಜೆ 6.31
ರಾಹುಕಾಲ: ಬೆಳಿಗ್ಗೆ 3.00 ರಿಂದ ಮಧ್ಯಾಹ್ನ 4.30
ಧನಸ್ಸು
ಹೊಸ ಸವಾಲಿನ ನಡುವೆಯೂ ಪ್ರಯತ್ನಕ್ಕೆ ತಕ್ಕಂತಹ ಫಲಿತಾಂಶವನ್ನು ಪಡೆಯುವಿರಿ. ದೃಢವಾದ ಮನಸ್ಸಿನಿಂದ ಕೆಲಸ-ಕಾರ್ಯದಲ್ಲಿ ಮುಂದುವರೆಯಲು ಪ್ರಯತ್ನಿಸುವಿರಿ. ಆತುರದಿಂದ ಮಾಡಿದ ತಪ್ಪನ್ನು ಮರೆಮಾಚಿ ಬೇರೆಯವರನ್ನು ದೂರುವಿರಿ. ಉದ್ಯೋಗದಲ್ಲಿ ವಿಶೇಷವಾದ ಬದಲಾವಣೆ ಕಂಡುಬರಲಿದೆ. ದುಡುಕಿನ ಮಾತಿನಿಂದ ಆತ್ಮೀಯರೊಂದಿಗೆ ಮನಸ್ತಾಪ ಉಂಟಾಗುತ್ತದೆ. ವಿದ್ಯಾರ್ಥಿಗಳು ಜವಾಬ್ದಾರಿಯಿಂದ ವರ್ತಿಸುತ್ತಾರೆ. ಪಾಲುದಾರಿಕೆಯ ವ್ಯಾಪಾರದಿಂದ ಆದಾಯ ಗಳಿಸುವಿರಿ. ಬಿಡುವಿನ ವೇಳೆ ಜನಸೇವೆ ಮಾಡುವಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ವಿದ್ಯಾರ್ಥಿಗಳಿಗೆ ವಿಶೇಷ ಅನುಕೂಲತೆ ದೊರಕಿಸುತ್ತದೆ. ಯಾತ್ರಾಸ್ಥಳಕ್ಕೆ ಮನೆ ಮಂದಿಯ ಜೊತೆಯಲ್ಲಿ ಭೇಟಿ ನೀಡುವಿರಿ.
ಪರಿಹಾರ: ಕೈ ಅಥವಾ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವುದರಿಂದ ಶುಭವಿರುತ್ತದೆ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಹಳದಿ ಬಣ್ಣ
ಮಕರ
ಸೋದರಿಯ ಜೀವನದಲ್ಲಿನ ಬೇಸರ ಮರೆಯಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಹೊಸ ಆಸೆಯೊಂದು ಚಿಗುರುತ್ತದೆ. ನಿಮ್ಮಲ್ಲಿನ ಹಾಸ್ಯಪ್ರಜ್ಞೆಯಿಂದ ಕುಟುಂಬದಲ್ಲಿನ ಬೇಸರ ದೂರ ಮಾಡುವಿರಿ. ಸ್ವಂತ ಮನೆಯಿದ್ದರೂ ಪರಸ್ಥಳದಲ್ಲಿ ನೆಲೆಸಬೇಕಾಗುತ್ತದೆ. ತಂದೆಯವರಿಂದ ಭೂಮಿಯೊಂದು ಉಡುಗೊರೆಯಾಗಿ ದೊರೆಯಲಿದೆ. ಯುವಕರು ಉದ್ಯೋಗದಲ್ಲಿ ನಿರೀಕ್ಷಿತ ಮಟ್ಟವನ್ನು ತಲುಪುವರು. ವ್ಯವಸಾಯದಲ್ಲಿ ಉತ್ತಮ ಪ್ರಗತಿ ಇರುತ್ತದೆ. ಮನಸ್ಸಿಗೆ ಒಪ್ಪುವಂತಹ ಕೆಲಸವನ್ನು ಮಾತ್ರ ಮಾಡುವಿರಿ. ಯಾರ ಸಲಹೆ ಸೂಚನೆಯನ್ನು ಸುಲಭವಾಗಿ ಒಪ್ಪುವುದಿಲ್ಲ. ವಿದ್ಯಾರ್ಥಿಗಳು ಕಷ್ಟವಿಲ್ಲದೆ ತಮ್ಮ ಗುರಿ ತಲುಪುವರು. ಬಿಡುವಿಲ್ಲದ ಕೆಲಸ ಕಾರ್ಯಗಳಿಂದ ದೈಹಿಕವಾಗಿ ಬಳಲುವಿರಿ. ವಾದ ವಿವಾದಗಳಿಂದ ದೂರವಿರಿ.
ಪರಿಹಾರ: ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಹಸಿರು ಬಣ್ಣ
ಕುಂಭ
ಅನುಮಾನ ಪ್ರಕೃತಿಯಿಂದ ಹೊರಬನ್ನಿ. ಮುಂಗೋಪದಿಂದ ವಾದ ವಿವಾದವನ್ನು ಎದುರಿಸುವಿರಿ. ಚುರುಕುತನದಲ್ಲಿ ದೈನಂದಿನ ಕೆಲಸ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ರಕ್ತಕ್ಕೆ ಸಂಬಂಧಿಸಿದ ದೋಷವಿದ್ದಲ್ಲಿ ಎಚ್ಚರಿಕೆ ಇರಲಿ. ಹಣಕಾಸಿನ ನಿರ್ವಹಣೆಯ ವಿಚಾರದಲ್ಲಿ ಕುಟುಂಬದಲ್ಲಿ ವಾದ ವಿವಾದ ಉಂಟಾಗುತ್ತದೆ. ಅನಪೇಕ್ಷಿತ ಬೆಳವಣಿಗೆಯಿಂದ ಉದ್ಯೋಗವನ್ನು ಬದಲಾಯಿಸುವಿರಿ. ವಿದ್ಯಾರ್ಥಿಗಳು ಶಾಂತಿಯ ಸ್ವಭಾವವನ್ನು ಬೆಳೆಸಿಕೊಳ್ಳಬೇಕು. ಎಲ್ಲರ ಜೊತೆಯಲ್ಲಿ ಸ್ನೇಹದಿಂದ ನಡೆದುಕೊಳ್ಳಿ. ಲೋಹದ ವ್ಯಾಪಾರ ವ್ಯವಹಾರದಿಂದ ಆದಾಯವು ಹೆಚ್ಚುತ್ತದೆ. ಹಳೆಯದ ಕಾಲದ ಮನೆಯನ್ನು ಕೊಂಡು ನವೀಕರಿಸು ತೀರ್ಮಾನ ಮಾಡುವಿರಿ. ಮಕ್ಕಳಿಗೆ ವಿದೇಶಿ ಕಂಪನಿಯಲ್ಲಿ ಉದ್ಯೋಗ ದೊರೆಯಲಿದೆ.
ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ನೀಲಿ ಬಣ್ಣ
ಮೀನ
ಯಾವುದೇ ಕೆಲಸವಾದರೂ ಸುಲಭವಾಗಿ ಪೂರೈಸುವ ಚಾತುರ್ಯತೆ ನಿಮಗಿರುತ್ತದೆ. ತಾಂತ್ರಿಕ ಪರಿಜ್ಞಾನ ಇರುವವರಿಗೆ ವಿದೇಶದಲ್ಲಿ ಉದ್ಯೋಗ ಲಭಿಸುತ್ತದೆ. ದೊಡ್ಡ ಮನೆತನದವರ ಮಕ್ಕಳೊಂದಿಗೆ ವಿವಾಹದ ಮಾತುಕತೆ ನಡೆಯುತ್ತದೆ. ದುಡುಕಿನ ಮಾತಿನಿಂದಾಗಿ ತೊಂದರೆಗೆ ಸಿಲುಕುವಿರಿ. ಕುಟುಂಬದ ಸಂಪೂರ್ಣ ಜವಾಬ್ದಾರಿ ಹೊರಬೇಕಾಗುತ್ತದೆ. ಕಷ್ಟದಲ್ಲಿ ಇದ್ದವರಿಗೆ ಸಹಾಯ ಮಾಡುವಿರಿ. ವ್ಯಾಪಾರ ವ್ಯವಹಾರದಲ್ಲಿ ತೊಂದರೆ ಇರದು. ಪಾಲುದಾರಿಕೆಯ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭಾಂಶ ನಿಮ್ಮದಾಗಲಿದೆ. ಭೂವಿವಾದದಿಂದ ಮುಕ್ತರಾಗುವಿರಿ. ಹೊಸ ವಾಹನ ಕೊಳ್ಳುವ ಸೂಚನೆ ಇದೆ. ಸಂಗಾತಿಯ ಜೊತೆ ಕಿರು ಪ್ರವಾಸ ಕೈಗೊಳ್ಳುವಿರಿ.
ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ನೇರಳೆ ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 85468 65832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಗೌರಿವಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
