Horoscope Today: ಆಕಸ್ಮಿಕವಾಗಿ ವಿವಾಹ ನಿಶ್ಚಯ, ಹಣದ ತೊಂದರೆಯಿಂದ ಹೊರಬರುವಿರಿ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಆಕಸ್ಮಿಕವಾಗಿ ವಿವಾಹ ನಿಶ್ಚಯ, ಹಣದ ತೊಂದರೆಯಿಂದ ಹೊರಬರುವಿರಿ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ

Horoscope Today: ಆಕಸ್ಮಿಕವಾಗಿ ವಿವಾಹ ನಿಶ್ಚಯ, ಹಣದ ತೊಂದರೆಯಿಂದ ಹೊರಬರುವಿರಿ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ

ಮಾರ್ಚ್​ 10, ಭಾನುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (10 March 2024 Daily Horoscope).

ಮಾರ್ಚ್​ 10ರ ದಿನಭವಿಷ್ಯ
ಮಾರ್ಚ್​ 10ರ ದಿನಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. 10 March 2024 Daily Horoscope).

ಇಂದಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಭಾನುವಾರ

ತಿಥಿ : ಅಮಾವಾಸ್ಯೆ ಬೆ.03.22 ರವರೆಗು ಇದ್ದು ಆನಂತರ ಪಾಡ್ಯ ಆರಂಭವಾಗುತ್ತದೆ.

ನಕ್ಷತ್ರ : ಪೂರ್ವಾಭಾದ್ರ ನಕ್ಷತ್ರವು ರಾ.03.37 ರವರೆಗೆ ಇರುತ್ತದೆ. ಆನಂತರ ಉತ್ತರಾಭಾದ್ರ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆ.06.29

ಸೂರ್ಯಾಸ್ತ: ಸ.06.28

ht ಸ.04.30 ರಿಂದ ಸ.06.00

ರಾಶಿ ಫಲಗಳು

ಮೇಷ

ಮನದಲ್ಲಿ ಸದಾಕಾಲ ಒಳ್ಳೆಯ ಯೋಚನೆಗಳು ಮೂಡುತ್ತವೆ. ಇದರಿಂದಾಗಿ ಕುಟುಂಬದ ಎಲ್ಲರ ಸಹಾಯ ಸಹಕಾರ ದೊರೆಯಲಿದೆ. ಕುಟುಂಬದ ಜವಾಬ್ದಾರಿಯು ಕಡಿಮೆಯಾಗುತ್ತದೆ. ಸಹೋದ್ಯೋಗಿಗಳ ಒಲವನ್ನು ಗಳಿಸುವಿರಿ. ಹೊಸ ನಿರೀಕ್ಷೆಗಳ ಕಾರಣ ಉದ್ಯೋಗವನ್ನು ಬದಲಿಸಬಹುದು. ಭವಿಷ್ಯದ ಜೀವನಕ್ಕಾಗಿ ಹಣವನ್ನು ಉಳಿಸುವ ಯೋಜನೆ ರೂಪಿಸುವಿರಿ. ನಿಮ್ಮ ಹಣಕಾಸಿನ ವ್ಯವಹಾರಗಳಿಗೆ ಆತ್ಮೀಯರ ಸಹಕಾರವಿರುತ್ತದೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲವು ದೊರೆಯುತ್ತದೆ. ಆಕಸ್ಮಿಕವಾಗಿ ವಿವಾಹ ನಿಶ್ಚಯವಾಗಬಹುದು. ಆತ್ಮೀಯರೊಂದಿಗೆ ಪ್ರವಾಸ ಕೈಗೊಳ್ಳುವಿರಿ. ಸಂಗಾತಿಯ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಮನೆಯ ದುರಸ್ತಿಗಾಗಿ ಹಣವನ್ನು ಹೊಂದಿಸಬೇಕಾಗಬಹುದು.

ಪರಿಹಾರ : ಗೋಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ವೃಷಭ

ಆತ್ಮೀಯರು ನಡೆಸುವ ಸಂತೋಷಕೂಟದಲ್ಲಿ ಭಾಗವಹಿಸಲು ತೆರಳುವಿರಿ. ಅತಿಯಾದ ಆಹಾರ ಸೇವನೆಯಿಂದ ದೂರವಿರುವುದು ಒಳ್ಳೆಯದು. ಕುಟುಂಬದಲ್ಲಿನ ಜವಾಬ್ದಾರಿಯು ನಿಮ್ಮದಾಗಲಿದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಏರುಪೇರು ಕಂಡು ಬರಬಹುದು. ಹಣಕಾಸಿನ ಕೊರತೆಯನ್ನು ಎದುರಿಸುವಿರಿ. ಕುಟುಂಬದ ಸದಸ್ಯರೊಬ್ಬರ ವಿವಾಹಕ್ಕೆ ಹಣದ ಅವಶ್ಯಕತೆ ಇರುತ್ತದೆ. ಮಿತ್ರರೊಬ್ಬರ ಆಗಲಿಕೆ ಮನಸ್ಸಿಗೆ ನೋವನ್ನು ಉಂಟುಮಾಡುತ್ತದೆ. ಭವಿಷ್ಯದ ಬಗ್ಗೆ ಯೋಚಿಸದೆ ಪ್ರಸಕ್ತ ಸನ್ನಿವೇಶಕ್ಕೆ ಹೊಂದಿಕೊಂಡು ನಡೆಯುವಿರಿ. ಸಾಂಸಾರಿಕ ಜೀವನದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಉದ್ಯೋಗದಲ್ಲಿನ ಗೌರವವಿತ ಸ್ಥಾನಮಾನ ದೊರೆಯುತ್ತದೆ. ಮೊಮ್ಮಕ್ಕಳ ಆಗಮನ ಕುಟುಂಬದ ಆನಂದವನ್ನು ಹೆಚ್ಚಿಸುತ್ತದೆ. ನಿರೀಕ್ಷಿಸಿದ ಘಟನೆಗಳು ನಡೆಯದೇ ಹೋದಲ್ಲಿ ಬೇಸರಕ್ಕೆ ಒಳಗಾಗುವಿರಿ.

ಪರಿಹಾರ : ಮನೆಯ ದೇವರ ಗುಡಿಯಲ್ಲಿ ತುಪ್ಪದ ದೀಪವನ್ನು ಹಚ್ಚಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಆಕಾಶನೀಲಿ ಬಣ್ಣ

ಮಿಥುನ

ಗೆಲ್ಲಲೇ ಬೇಕೆಂಬ ತೀರ್ಮಾನದಿಂದ ದಿನವನ್ನು ಆರಂಭಿಸುವಿರಿ. ಮನದಲ್ಲಿ ಧೈರ್ಯ ಮತ್ತು ಸಾಹಸದ ಗುಣ ಮನೆ ಮಾಡುತ್ತದೆ. ಕ್ಲಿಷ್ಟಕರ ಕೆಲಸ ಕಾರ್ಯಗಳನ್ನು ಸಹ ಸರಳಗತಿಯಲ್ಲಿ ಮಾಡಿ ಮುಗಿಸುವಿರಿ. ಅನಾವಶ್ಯಕ ಖರ್ಚು ವೆಚ್ಚಗಳು ಮನಸ್ಸಿಗೆ ಬೇಸರವನ್ನು ಉಂಟುಮಾಡುತ್ತದೆ. ಓಡಾಟದಿಂದ ಯಾವುದೇ ಕೆಲಸ ಸಿದ್ಧಿಸುವುದಿಲ್ಲ. ನಿಮ್ಮಲ್ಲಿರುವ ಹಣವನ್ನು ಸುಲಭವಾಗಿ ಖರ್ಚು ಮಾಡುವುದಿಲ್ಲ. ಕುಟುಂಬಕ್ಕೆ ಸಂಬಂಧಿಸಿದ ಅತಿ ಮುಖ್ಯವಾದ ಕೆಲಸವೊಂದನ್ನು ಸುಲಭವಾಗಿ ಪೂರ್ಣಗೊಳಿಸುವಿರಿ. ಉದ್ಯೋಗದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಸಹೋದ್ಯೋಗಿಗಳ ಸಹಾಯ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಎದುರಾಗುವ ವಿಪತ್ತನ್ನು ಸುಲಭವಾಗಿ ಗೆಲ್ಲುವಿರಿ. ಬಹುದಿನದ ಹಗರಣವೊಂದು ಸುಖಾಂತ್ಯಗೊಳ್ಳುತ್ತದೆ.

ಪರಿಹಾರ : ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ರಕ್ತದ ಬಣ್ಣ

ಕಟಕ

ಕುಟುಂಬದ ಕೆಲಸ ಕಾರ್ಯಗಳಲ್ಲಿ ಆಸಕ್ತಿ ಮೂಡುವುದಿಲ್ಲ. ಉತ್ತಮ ಪ್ರಯತ್ನ ಇಲ್ಲದೆ ಹೋದರು ಉದ್ಯೋಗದಲ್ಲಿ ಯಶಸ್ಸನ್ನು ಕಾಣುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ನಿಮ್ಮ ನಿಯಂತ್ರಣ ತಪ್ಪಬಹುದು. ಆತ್ಮೀಯರ ಸಹಕಾರದಿಂದ ಹಣದ ತೊಂದರೆಯಿಂದ ಹೊರಬರುವಿರಿ. ವಿದ್ಯಾರ್ಥಿಗಳು ಮನರಂಜನೆಯಿಂದ ದೂರವಿದ್ದು ಕಲಿಕೆಯಲ್ಲಿ ಯಶಸ್ಸನ್ನು ಗಳಿಸುತ್ತಾರೆ. ರಕ್ತಕ್ಕೆ ಸಂಬಂಧಪಟ್ಟ ದೋಷವಿದ್ದಲ್ಲಿ ಎಚ್ಚರಿಕೆ ವಹಿಸಿ. ಹಣ ಉಳಿತಾಯ ಮಾಡುವ ಗುರಿ ಇದ್ದರು ವಿಫಲರಾಗುವಿರಿ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ನಿಮ್ಮದಾಗುತ್ತದೆ. ಆತ್ಮೀಯರೊಬ್ಬರು ತಪ್ಪು ಗ್ರಹಿಕೆಯಿಂದ ನಿಮ್ಮಿಂದ ದೂರವಾಗಬಹುದು. ದಿನನಿತ್ಯದ ಆಗುಹೋಗುಗಳ ಬಗ್ಗೆ ಎಚ್ಚರಿಕೆ ಇರಲಿ. ಸಂಗಾತಿಯೊಂದಿಗೆ ಸಂತಸದಿಂದ ಬಾಳುವಿರಿ. ಆರೋಗ್ಯಕ್ಕೆ ಹಾನಿಕರವಾಗುವ ಅಭ್ಯಾಸಗಳಿಂದ ದೂರವಿರಲು ಪ್ರಯತ್ನಿಸಿ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಎಲೆಹಸಿರು ಬಣ್ಣ

------------

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.