Horoscope Today: ಉದ್ಯೋಗದಲ್ಲಿ ಪ್ರಮುಖ ಸ್ಥಾನ ಸಿಗಲಿದೆ, ಅನಿರೀಕ್ಷಿತ ಬದಲಾವಣೆ ಎದುರಾಗಲಿದೆ; ಮೇಷದಿಂದ ಕಟಕ ರಾಶಿಯವರೆಗಿನ ದಿನಭವಿಷ್ಯ
ಮಾರ್ಚ್ 4, ಸೋಮವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (4 March 2024 Daily Horoscope).

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (4 March 2024 Daily Horoscope).
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣಪಕ್ಷ, ಸೋಮವಾರ
ತಿಥಿ : ನವಮಿ ರಾ.02.30 ರವರೆಗು ಇದ್ದು ಆನಂತರ ದಶಮಿ ಆರಂಭವಾಗುತ್ತದೆ.
ನಕ್ಷತ್ರ : ಜ್ಯೇಷ್ಠ ನಕ್ಷತ್ರವು ಬೆ.11.22 ರವರೆಗೆ ಇರುತ್ತದೆ. ಆನಂತರ ಮೂಲ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆ.06.34
ಸೂರ್ಯಾಸ್ತ: ಸ.06.27
ರಾಹುಕಾಲ : ಬೆ.07.30 ರಿಂದ ಬೆ.09.00
ರಾಶಿ ಫಲಗಳು
ಮೇಷ
ನೆರೆಹೊರೆಯ ಜನರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿಯ ವಾತಾವರಣವಿರುತ್ತದೆ. ಕುಟುಂಬದ ಹಣದ ವಿವಾದವೊಂದುದು ಪರಿಹಾರಗೊಳ್ಳುತ್ತದೆ. ಉದ್ಯೋಗದಲ್ಲಿ ಮನಸ್ಸಿಲ್ಲದೆ ಹೋದರು ಬೇರೆಯವರ ಸಲಹೆಯನ್ನು ಒಪ್ಪಬೇಕಾಗುತ್ತದೆ. ಅನಾವಶ್ಯಕ ಖರ್ಚು ವೆಚ್ಚಗಳನ್ನು ನಿಯಂತ್ರಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಸಂಗಾತಿಯ ಸಹಾಯ ದೊರೆಯುತ್ತದೆ. ಆರೋಗ್ಯದ ಬಗ್ಗೆ ಚಿಂತೆ ಇರುತ್ತದೆ. ದೈಹಿಕ ವ್ಯಾಯಾಮದಿಂದ ಆರೋಗ್ಯದಲ್ಲಿ ಸ್ಥಿರತೆ ಕಂಡುಬರುತ್ತದೆ. ವಿದ್ಯಾರ್ಥಿಗಳ ಯಶಸ್ಸು ಕುಟುಂಬದಲ್ಲಿ ಹೊಸ ಆಸೆಯನ್ನು ಹುಟ್ಟಿಸುತ್ತದೆ. ಬಂಧು ಬಳಗದವರೊಂದಿಗೆ ಉತ್ತಮ ಸಂಬಂಧ ಇರುವುದಿಲ್ಲ. ಸಂಗಾತಿಗೆ ಇಷ್ಟವೆನಿಸುವ ಸ್ಥಳಕ್ಕೆ ಭೇಟಿ ನೀಡುವಿರಿ. ಕೆಲಸದ ನಡುವೆ ವಿಶ್ರಾಂತಿಯಿಂದ ಬಯಸುವಿರಿ.
ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಖಡ್ಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ
ವೃಷಭ
ಕೆಲಸ ಕಾರ್ಯಗಳು ಸುಗಮವಾಗಿ ನಡೆದರೂ ಅನಾವಶ್ಯಕ ಚಿಂತೆ ಮಾಡುವಿರಿ. ನಿಮ್ಮದೇ ಆದ ತಪ್ಪಿನಿಂದ ಕುಟುಂಬದಲ್ಲಿ ನೀರಸ ವಾತಾವರಣ ತುಂಬಿರುತ್ತದೆ. ಉದ್ಯೋಗದಲ್ಲಿ ಎಲ್ಲರ ಜೊತೆ ಆತ್ಮೀಯತೆಯಿಂದ ವರ್ತಿಸುವಿರಿ. ಎದುರಾಗುವ ಅನಿರೀಕ್ಷಿತ ಬದಲಾವಣೆಗಳು ನಿಮಗೆ ಅನುಕೂಲಕರವಾಗಿರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯವಿದ್ದು ಆರ್ಥಿಕ ಪ್ರಗತಿ ಕಂಡು ಬರುತ್ತದೆ. ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಉತ್ತಮ ಅವಕಾಶವನ್ನು ದೊರೆಯಲಿದೆ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಸದ್ವಿನಿಯೋಗ ಮಾಡುವಿರಿ. ಹಳೆಯ ಸ್ನೇಹಿತರೊಬ್ಬರನ್ನು ಭೇಟಿ ಮಾಡುವಿರಿ. ಸಂಗಾತಿಯೊಂದಿಗೆ ಸುಖ ಜೀವನ ನಡೆಸುವಿರಿ. ಸಂತೋಷಕೂಟಕ್ಕೆ ಭೇಟಿ ನೀಡುವಿರಿ.
ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ : ಹಾಲಿನ ಬಣ್ಣ
ಮಿಥುನ
ಸಮಯಕ್ಕೆ ಹೆಚ್ಚಿನ ಗೌರವ ಕೊಡುವ ನೀವು ಯಾವುದಾದರೂ ಚಟುವಟಿಕೆಯಲ್ಲಿ ತೊಡಗುವಿರಿ. ಕುಟುಂಬದಲ್ಲಿನ ಬಹು ಮುಖ್ಯ ಕೆಲಸ ಪೂರ್ಣಗೊಳ್ಳಲಿದೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಅಧಿಕವಾಗಿರುತ್ತದೆ. ಸಹನೆ ಕಳೆದುಕೊಂಡು ಸಹೋದ್ಯೋಗಿಗಳೊಂದಿಗೆ ಅಸಹಜ ವರ್ತನೆ ತೋರುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಎದುರಾಗುವ ತೊಂದರೆ ಕ್ಷಣಿಕವಾಗಿರುತ್ತದೆ. ವಿದ್ಯಾರ್ಥಿಗಳು ಏಕಾಂಗಿಯಾಗಿ ಅಭ್ಯಾಸದಲ್ಲಿ ನಿರತರಾಗಬೇಕು. ಆತ್ಮೀಯರೊಬ್ಬರಿಂದ ಬೇಸರ ಉಂಟಾಗುವ ಘಟನೆ ಉಂಟಾಗುತ್ತದೆ. ಸಂಗಾತಿಯೊಂದಗಿನ ವಿರಸ ಮರೆಯಾಗುತ್ತದೆ. ಮಕ್ಕಳ ಮನಸ್ಸನ್ನು ಸಂತೋಷಗೊಳಿಸಲು ಪ್ರಯತ್ನಿಸುವಿರಿ. ಪ್ರಾಣಿ ಪಕ್ಷಿಗಳ ಸೇವೆ ಮಾಡುವಲ್ಲಿ ತಲ್ಲೀನರಾಗುವಿರಿ. ಸಾಲದ ವ್ಯವಹಾರದಿಂದ ಕುಟುಂಬದ ಶಾಂತಿ ಕೆಡಬಹುದು.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ
ಕಟಕ
ಕುಟುಂಬದ ಕೆಲಸ ಕಾರ್ಯಗಳಲ್ಲಿ ವಿಶೇಷ ಆಸಕ್ತಿ ತೋರುವಿರಿ. ಇದರಿಂದಾಗಿ ಕುಟುಂಬದವರ ಪ್ರೀತಿ ವಿಶ್ವಾಸ ದೊರೆಯುತ್ತದೆ. ಬಿಡುವಿನ ಸಮಯದಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಿರಿ. ಉದ್ಯೋಗದಲ್ಲಿನ ಪ್ರಮುಖ ಸ್ಥಾನವನ್ನು ಅಲಂಕರಿಸುವಿರಿ. ಅನಾವಶ್ಯಕ ಖರ್ಚು ವೆಚ್ಚಗಳು ಎದುರಾಗಲಿವೆ. ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ದೊರೆಯುವುದಿಲ್ಲ. ಆದರೆ ಬಂಡವಾಳಕ್ಕೆ ಮೋಸವಾಗುವುದಿಲ್ಲ. ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವರು. ಸಂಗಾತಿಯ ಜೊತೆಯಲ್ಲಿ ಅನಾವಶ್ಯಕ ವಾದ ವಿವಾದಗಳು ಇರಲಿವೆ. ಹೊಸ ಜನರ ಪರಿಚಯವನ್ನು ಸದುಪಯೋಗ ಪಡೆಸಿಕೊಳ್ಳಲು ಪ್ರಯತ್ನಿಸಿ. ನಿಮ್ಮಲ್ಲಿರುವ ಒಳ್ಳೆಯ ಗುಣವನ್ನು ಎಲ್ಲರೂ ಮೆಚ್ಚುತ್ತಾರೆ.
ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಆಕಾಶ ನೀಲಿ ಬಣ್ಣ
----------
ಜ್ಯೋತಿಷಿ: ಎಚ್. ಸತೀಶ್, ಬೆಂಗಳೂರು
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
