ಮೇ ಮಾಸ ಭವಿಷ್ಯ: ಧನು ರಾಶಿಯವರಿಗೆ ಉದ್ಯೋಗದಲ್ಲಿ ತೊಂದರೆ ಇಲ್ಲ, ಮಕರ ರಾಶಿಯವರ ಸ್ವಂತ ವ್ಯಾಪಾರದಲ್ಲಿ ಲಾಭಗಳಿವೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಮೇ ಮಾಸ ಭವಿಷ್ಯ: ಧನು ರಾಶಿಯವರಿಗೆ ಉದ್ಯೋಗದಲ್ಲಿ ತೊಂದರೆ ಇಲ್ಲ, ಮಕರ ರಾಶಿಯವರ ಸ್ವಂತ ವ್ಯಾಪಾರದಲ್ಲಿ ಲಾಭಗಳಿವೆ

ಮೇ ಮಾಸ ಭವಿಷ್ಯ: ಧನು ರಾಶಿಯವರಿಗೆ ಉದ್ಯೋಗದಲ್ಲಿ ತೊಂದರೆ ಇಲ್ಲ, ಮಕರ ರಾಶಿಯವರ ಸ್ವಂತ ವ್ಯಾಪಾರದಲ್ಲಿ ಲಾಭಗಳಿವೆ

ಮೇ ತಿಂಗಳ ಮಾಸ ಭವಿಷ್ಯ: ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಮೇ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಕೆಲವು ರಾಶಿಯವರಿಗೆ ಸವಾಲುಗಳಿವೆ. ಧನು, ಮಕರ, ಕುಂಭ, ಮೀನ ರಾಶಿಯವರ ತಿಂಗಳ ಭವಿಷ್ಯ ಇಲ್ಲಿದೆ.

ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಮಾಸ ಭವಿಷ್ಯ
ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರ ಮಾಸ ಭವಿಷ್ಯ

'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಮೇ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ಧನಸ್ಸು, ಮಕರ , ಕುಂಭ, ಮೀನ ರಾಶಿಯವರಿಗೆ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.

ಧನು ರಾಶಿ

ಆತಂಕದ ಪರಿಸ್ಥಿತಿಯಲ್ಲಿ ಬುದ್ಧಿವಂತಿಕೆಯಿಂದ ವರ್ತಿಸುವಿರಿ. ಆತ್ಮವಿಶ್ವಾಸವು ನಿಮ್ಮ ನೆಚ್ಚಿನ ಫಲಿತಾಂಶಕ್ಕೆ ಕಾರಣವಾಗುತ್ತದೆ. ಸಮಯ ಸಂದರ್ಭಕ್ಕೆ ತಕ್ಕಂತಹ ತೀರ್ಮಾನಗಳನ್ನು ತೆಗೆದುಕೊಳ್ಳುವಿರಿ. ವಿಶೇಷವಾದ ಅಧ್ಯಯನದಿಂದ ವಿದ್ಯಾರ್ಥಿಗಳು ವಿಶೇಷ ಸಾಧನೆಗೆ ಪಾತ್ರರಾಗುತ್ತಾರೆ. ಹಣಕಾಸಿನ ವಿಚಾರದಲ್ಲಿ ಯಾವುದೇ ತೊಂದರೆ ಕಾಣುವುದಿಲ್ಲ. ದಿಢೀರನೇ ಮನಸ್ಸು ಬದಲಾಯಿಸುವ ಕಾರಣ ಕುಟುಂಬದಲ್ಲಿ ಬೇಸರವಿರುತ್ತದೆ. ಹಣ ಕಾಸಿನ ವ್ಯವಹಾರದಲ್ಲಿ ಕೊಂಚ ನಷ್ಟವಾಗುತ್ತದೆ. ಕುಟುಂಬದಲ್ಲಿ ಮಕ್ಕಳಿಂದಾಗಿ ಸಂತೋಷದ ವಾತಾವರಣ ಇರುತ್ತದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಇರುವುದಿಲ್ಲ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಅತಿಯಾಗಿ ಮಾತನಾಡದೆ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಕತ್ತಿನಲ್ಲಿ ಊತ ಅಥವಾ ನೂವಿನ ತೊಂದರೆ ಇರುತ್ತದೆ.

ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಮಕರ ರಾಶಿ

ಸ್ವಂತ ಆಸೆ ಆಕಾಂಕ್ಷೆಗಳಿಗೆ ಮೊದಲ ಆದ್ಯತೆ ನೀಡುವಿರಿ. ಆತ್ಮೀಯರ ಕೆಲಸ ಕಾರ್ಯಗಳನ್ನು ಮುತುವರ್ಜಿಯಿಂದ ಪೂರ್ಣಗೊಳಿಸುವಿರಿ. ನಿಮ್ಮಲ್ಲಿ ಒಳ್ಳೆಯ ಗುಣವಿದ್ದರೂ ದುಡುಕಿ ಮಾತನಾಡುವ ಕಾರಣ ಕೆಟ್ಟ ಹೆಸರನ್ನು ಗಳಿಸುವಿರಿ. ಶಾಂತಿ ಸಂಯಮದಿಂದ ಇದ್ದಲ್ಲಿ ಕೆಲಸ ಕಾರ್ಯಗಳಲ್ಲಿ ಆತ್ಮೀಯರ ಸಹಾಯ ದೊರೆಯುತ್ತದೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಎದುರಾಗದು. ಸತತ ಪ್ರಯತ್ನದಿಂದ ವಿದ್ಯಾರ್ಥಿಗಳು ಹೊಸ ಸಾಧನೆ ಮಾಡುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮಗತಿಯ ಲಾಭ ದೊರೆಯಲಿದೆ. ಯಂತ್ರೋಪಕರಣಗಳಿಂದ ಪೆಟ್ಟಾಗುವ ಸಾಧ್ಯತೆಗಳಿವೆ. ಸೋದರಿಯ ಜೊತೆಯಲ್ಲಿ ವ್ಯಾಪಾರವನ್ನು ಆರಂಭಿಸುವಿರಿ. ಸಮಾಜ ಸೇವೆಯಿಂದ ಸಮಾಜದಲ್ಲಿ ವಿಶೇಷವಾದ ಗೌರವ ಗಳಿಸುವಿರಿ. ಕಲುಷಿತ ಆಹಾರ ಸೇವನೆಯಿಂದ ಅನಾರೋಗ್ಯದ ತೊಂದರೆ ಎದುರಿಸುವಿರಿ.

ಪರಿಹಾರ: ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

ಕುಂಭ ರಾಶಿ

ಮನಸ್ಸಿನಲ್ಲಿರುವ ಆತಂಕವನ್ನು ಬೇರೆಯವರಿಗೆ ತಿಲಿಸುವುದಿಲ್ಲ. ನೋವು ನಲಿವನ್ನು ಸಮಾನವಾಗಿ ತೆಗೆದುಕೊಳ್ಳುವಿರಿ. ಕೌಟುಂಬಿಕ ವಿಚಾರಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸುವಿರಿ. ಮನೆತನದ ಭೂಮಿಯ ವಿವಾದ ಒಂದರಲ್ಲಿ ಏಕಾಂಗಿಯಾಗಿ ಹೋರಾಡುವಿರಿ. ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಗಳಿಸುವಿರಿ. ನಿಮ್ಮಲ್ಲಿರುವ ಗೆಲ್ಲುವ ಛಲ ಎಲ್ಲರಿಗೂ ಸ್ಫೂರ್ತಿಯಾಗುತ್ತದೆ. ಗೋಪ್ಯತೆಯ ಕಾರಣ ಸ್ವಂತ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ವಿದೇಶಿ ಸಂಸ್ಥೆಯೊಂದರ ಪಾಲುಗಾರಿಕೆಯು ದೊರೆಯುತ್ತದೆ. ಆರೋಗ್ಯದಲ್ಲಿ ಏರು ಪೇರು ಕಂಡುಬರಲಿದೆ. ಸಂಗೀತ ಬಲ್ಲ ಕಲಾವಿದರಿಗೆ ವಿಶೇಷ ಗೌರವಾದರಗಳು ಲಭಿಸುತ್ತದೆ. ಪಾಲುಗಾರಿಕೆಯ ವ್ಯಾಪಾರ ವ್ಯವಹಾರಗಳಲ್ಲಿ ತೊಂದರೆ ಇರದು. ಕುಟುಂಬದ ವಯೋವೃದ್ಧರಿಗೆ ಅನಾರೋಗ್ಯ ಕಾಡುತ್ತದೆ.

ಪರಿಹಾರ: ಕುಟುಂಬದ ಹಿರಿಯರಿಗೆ ಬೆಳ್ಳಿಯ ವಸ್ತುವನ್ನು ಉಡುಗೊರೆಯಾಗಿ ನೀಡಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಹಾಲಿನ ಬಣ್ಣ

ಮೀನ ರಾಶಿ

ಹಿರಿವಯಸ್ಸಿನವರನ್ನು ಪ್ರೀತಿ ಗೌರವದಿಂದ ಕಾಣುವಿರಿ. ಖರ್ಚು ವೆಚ್ಚಗಳಿಗೆ ಮಿತಿ ಇರುವುದಿಲ್ಲ. ಪಕ್ಷಪಾತ ತೋರದೆ ಎಲ್ಲರನ್ನೂ ಸಮಾನ ಭಾವನೆಯಿಂದ ಕಾಣುವಿರಿ. ಉದ್ಯೋಗದಲ್ಲಿ ನಿಮ್ಮ ಕಾರ್ಯದಕ್ಷತೆಗೆ ಸೂಕ್ತ ಗೌರವ ದೊರೆಯುತ್ತದೆ. ಅನಿರೀಕ್ಷಿತವಾಗಿ ಉದ್ಯೋಗದಲ್ಲಿ ಉನ್ನತ ಅಧಿಕಾರ ದೊರೆಯುತ್ತದೆ. ಕೃಷಿ ಅಥವಾ ಕೃಷಿಸಂಬಧಿತ ಕೆಲಸದಲ್ಲಿ ಆಸಕ್ತಿ ಉಂಟಾಗುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ಬಿಡುವಿನ ವೇಳೆಯಲ್ಲಿ ಉಪವೃತ್ತಿಯನ್ನು ಆರಂಭಿಸುವಿರಿ. ಸೋದರಿಯ ಜೀವನದ ಸಮಸ್ಯೆ ಕೊನೆಯಾಗಲು ಸಹಕಾರ ನೀಡುವಿರಿ. ತಂದೆಯವರಿಗೆ ಮನೆತನದಿಂದ ಧನ ಲಾಭವಿದೆ. ಕುಟುಂಬದಲ್ಲಿರುವ ಕಲಹವು ಕೊನೆಗೊಳ್ಳುತ್ತದೆ. ಹಣದ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಮನೆಯಲ್ಲಿ ಸಾಕಿರುವ ಪ್ರಾಣಿಗಳಲ್ಲಿ ಅನಾರೋಗ್ಯ ಉಂಟಾಗಲಿದೆ. ಮಕ್ಕಳನ್ನು ಅನಾವಶ್ಯಕವಾಗಿ ಅನುಮಾನಿಸುವಿರಿ.

ಪರಿಹಾರ: ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.