ಮೇ ಮಾಸ ಭವಿಷ್ಯ: ಕನ್ಯಾ ರಾಶಿಯವರಿಗೆ ಯಶಸ್ಸು ಸಿಗಲಿದೆ, ಸಿಂಹ ರಾಶಿಯವರು ಸಹೋದರರಿಗೆ ಸಹಾಯ ಮಾಡುತ್ತಾರೆ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಮೇ ಮಾಸ ಭವಿಷ್ಯ: ಕನ್ಯಾ ರಾಶಿಯವರಿಗೆ ಯಶಸ್ಸು ಸಿಗಲಿದೆ, ಸಿಂಹ ರಾಶಿಯವರು ಸಹೋದರರಿಗೆ ಸಹಾಯ ಮಾಡುತ್ತಾರೆ

ಮೇ ಮಾಸ ಭವಿಷ್ಯ: ಕನ್ಯಾ ರಾಶಿಯವರಿಗೆ ಯಶಸ್ಸು ಸಿಗಲಿದೆ, ಸಿಂಹ ರಾಶಿಯವರು ಸಹೋದರರಿಗೆ ಸಹಾಯ ಮಾಡುತ್ತಾರೆ

ಮೇ ತಿಂಗಳ ಮಾಸ ಭವಿಷ್ಯ: ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಮೇ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಕೆಲವು ರಾಶಿಯವರಿಗೆ ಸವಾಲುಗಳಿವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ತಿಂಗಳ ಭವಿಷ್ಯ ಇಲ್ಲಿದೆ.

ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಮಾಸ ಭವಿಷ್ಯ
ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಮಾಸ ಭವಿಷ್ಯ

'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಅವರು ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಮೇ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.

ಸಿಂಹ ರಾಶಿ

ಹಠದ ಗುಣದಿಂದ ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸುವಿರಿ. ನಿಮ್ಮ ಸೋದರರಿಗೆ ಸಹಾಯವನ್ನು ಮಾಡುವಿರಿ. ಜನಸೇವೆ ಮಾಡುವಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ಆತಂಕ ಇದ್ದರೂ ಕುಟುಂಬದಲ್ಲಿ ಶಾಂತಿ ನೆಮ್ಮದಿಕೆ ಕೊರತೆ ಇರುವುದಿಲ್ಲ. ಉದ್ಯೋಗದಲ್ಲಿ ಸತತ ಪ್ರಯತ್ನದಿಂದ ಧನಾತ್ಮಕ ಫಲಗಳನ್ನು ಪಡೆಯುವಿರಿ. ಉದ್ಯೋಗದ ಸಲುವಾಗಿ ದೂರದ ಊರಿಗೆ ಪ್ರಯಾಣ ಬೆಳೆಸುವಿರಿ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಸಾಧಾರಣ ಯಶಸ್ಸನ್ನು ಗಳಿಸುತ್ತಾರೆ. ತಂದೆಯವರು ಆರಂಭಿಸಿದ ವ್ಯಾಪಾರ, ವ್ಯವಹಾರದಲ್ಲಿ ಸಹಾಯ ಮಾಡುವಿರಿ. ಹವ್ಯಾಸಿ ಕಲಾವಿದರಿಗೆ ಸಮಾಜದ ಉನ್ನತ ಗೌರವ ದೊರೆಯುತ್ತವೆ. ಆತ್ಮೀಯರ ಸಾಲದ ವ್ಯವಹಾರದಿಂದ ನಿಮಗೆ ನಷ್ಟ ಉಂಟಾಗುತ್ತದೆ. ಮನೆಯಲ್ಲಿರುವ ಹೆಣ್ಣು ಮಕ್ಕಳ ಜೀವನದಲ್ಲಿ ಸಕಾರಾತ್ಮಕ ಬೆಳವಣಗೆ ಉಂಟಾಗಲಿದೆ. ಅಶಕ್ತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಬೂದು ಬಣ್ಣ

ಕನ್ಯಾ ರಾಶಿ

ಉದ್ಯೋಗದ ಯಾವುದೇ ವಿಚಾರವಾದರೂ ಆಸಕ್ತಿಯಿಂದ ನಿರ್ವಹಿಸುವುದಿಲ್ಲ. ಆರೋಗ್ಯಕ್ಕೆ ಸಂಬಧಿಸಿದ ವಿಚಾರಗಳನ್ನು ನಿರ್ಲಕ್ಷಿಸುವಿರಿ. ಕುಟುಂಬದ ಕೆಲಸ ಕಾರ್ಯದಲ್ಲಿ ದೃಢವಾದ ನಿಲುವನ್ನು ತಾಳಲಾರರಿರಿ. ಬದಲಾಗುವ ನಿಮ್ಮ ಮನಸ್ಸು ಅಥವಾ ತೀರ್ಮಾನಗಳು ಬೇಸರಕ್ಕೆ ಕಾರಣವಾಗುತ್ತವೆ. ಎದುರಾಗುವ ತೊಂದರೆಗೆ ಬೆದರದೆ ಜೀವನದಲ್ಲಿ ಮುಂದುವರೆಯುವಿರಿ. ಕುಟುಂಬದ ಸದಸ್ಯರ ನಡುವೆ ಅಸಹಕಾರದ ವಾತಾವರಣ ಕಂಡು ಬರುತ್ತದೆ. ಉದ್ಯೋಗವನ್ನು ಬದಲಿಸುವಿರಿ, ಆದರೆ ವಿಶೇಷತೆ ಏನು ಇರುವುದಿಲ್ಲ. ವಿದ್ಯಾರ್ಥಿಗಳು ಅನಾವಶ್ಯಕ ವಿಚಾರಗಳಿಂದ ದೂರವಿರುವುದು ಒಳಿತು. ಮಾತು ಕಡಿಮೆ ಮಾಡಿದಲ್ಲಿ ಜೀವನದಲ್ಲಿ ಯಶಸ್ಸು ದೊರೆಯುತ್ತದೆ. ಆದಾಯ ಹೆಚ್ಚಿಸಿಕೊಳ್ಳುವ ಸಲುವಾಗಿ ಸಣ್ಣ ವ್ಯಾಪಾರವನ್ನು ಆರಂಭಿಸುವಿರಿ. ಪುಟ್ಟ ಮಕ್ಕಳಿಗೆ ಅನಾರೋಗ್ಯ ಇರುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ಕಂದು ಬಣ್ಣ

ತುಲಾ ರಾಶಿ

ಕುಟುಂಬದಲ್ಲಿ ಹೆಚ್ಚಿನ ಖರ್ಚು ವೆಚ್ಚಗಳಿರುತ್ತವೆ. ನೀವು ಇದ್ದಕಡೆ ಹಾಸ್ಯಕ್ಕೆ ಬರ ಇರುವುದಿಲ್ಲ. ಉದ್ಯೋಗದಲ್ಲಿ ನಿಮ್ಮ ಮನ ಒಪ್ಪುವ ಪ್ರಸಂಗಗಳು ನಡೆಯಲಿವೆ. ನಿರೀಕ್ಷಿತ ಧನಲಾಭದ ಕಾರಣ ಮನಸ್ಸಿಗೆ ನೆಮ್ಮದಿ ಇರುತ್ತದೆ. ಬೇಸರದ ಸನ್ನಿವೇಶಗಳು ದಾಂಪತ್ಯ ಜೀವನದಲ್ಲಿ ನಿಮ್ಮಲ್ಲಿನ ಕ್ಷಮಾ ಗುಣದಿಂದಾಗಿ ಉದ್ಯೋಗದಲ್ಲಿನ ಸಮಸ್ಯೆಗಳು ದೂರವಾಗುತ್ತವೆ. ದಂಪತಿ ನಡುವೆ ಉತ್ತಮ ಸಹಾಯ ಸಹಕಾರ ಇರುತ್ತದೆ. ಆತ್ಮೀಯರೊಬ್ಬರ ಆಗಮನ ಸಂತಸವನ್ನು ನೀಡುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ . ಒಲ್ಲದ ಮನಸ್ಸಿನಿಂದ ಉದ್ಯೋಗವನ್ನು ಬದಲಾಯಿಸುವಿರಿ. ವಿದ್ಯಾರ್ಥಿಗಳು ಕಲಿಕೆ ಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲಿ ಮುಂದಿರುತ್ತಾರೆ. ಆತ್ಮೀಯರಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಕಪ್ಪು ಬಣ್ಣ

ವೃಶ್ಚಿಕ ರಾಶಿ

ಬದಲಾಗದ ಮನಸ್ಸು ಮತ್ತು ಹಠದ ಗುಣದಿಂದ ಉದೋಗದಲ್ಲಿನ ತೊಂದರೆಗಳನ್ನು ದೂರಮಾಡುವಿರಿ. ಒಮ್ಮತ ಇರದ ಕಾರಣ ಕುಟುಂಬದಲ್ಲಿ ಗಂಭೀರದ ವಾತಾವರಣ ಕಂಡುಬರುತ್ತದೆ. ಉದ್ಯೋಗವನ್ನು ಬದಲಿಸಬೇಕಾದ ಸನ್ನಿವೇಶ ಇರುತ್ತದೆ. ವಿದ್ಯಾರ್ಥಿಗಳು ಅಚಲವಾದ ವಿಶ್ವಾಸದಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಕುಟುಂಬದ ನಿರ್ವಹಣೆಯ ವಿಚಾರದಲ್ಲಿ ಭಿನಾಭಿಪ್ರಾಯ ಉಂಟಾಗುತ್ತದೆ. ಅವಶ್ಯಕತೆಗೆ ತಕ್ಕಷ್ಟು ಹಣವನ್ನು ಸಂಪಾದಿಸಬಲ್ಲಿರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ನಿರೀಕ್ಷೆ ಇರುತ್ತದೆ. ಚಿನ್ನ ಅಥವಾ ಬೆಳ್ಳೆಯ ಆಭರಣಗಳನ್ನು ಕೊಳ್ಳುವಿರಿ. ಹಣಕಾಸಿನ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ದೊರೆಯುತ್ತದೆ. ವಿದೇಶಕ್ಕೆ ತೆರಳುವ ಸಾಧ್ಯತೆಗಳಿವೆ. ಕುಟುಂಬದ ಹಿರಿಯರ ಸಲಹೆಯನ್ನು ಆಧರಿಸಿ ದಿನದ ಕೆಲಸವನ್ನು ಆರಂಭಿಸುವುದು ಒಳ್ಳೆಯದು. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Raghavendra M Y

TwittereMail
ರಾಘವೇಂದ್ರ ಎಂ.ವೈ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್ ಪ್ರೊಡ್ಯೂಸರ್. ರಾಶಿ ಭವಿಷ್ಯ (ಧರ್ಮ) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ, ಉದಯ ನ್ಯೂಸ್, ದಿಗ್ವಿಜಯ ನ್ಯೂಸ್, ಫಸ್ಟ್ ನ್ಯೂಸ್, ಡಿಡಿ ಚಂದನ ನ್ಯೂಸ್, ಈ-ಟಿವಿ ಭಾರತದಲ್ಲಿ ಬುಲೆಟಿನ್ ಪ್ರೊಡ್ಯೂಸರ್ ಸೇರಿ ವಿವಿಧ ವಿಭಾಗಗಳಲ್ಲಿ ಒಟ್ಟು 12 ವರ್ಷ ಅನುಭವ. ಪುಸ್ತಕ, ಪತ್ರಿಕೆ ಓದುವುದು ಇಷ್ಟ. ವಾಣಿಜ್ಯ, ಕ್ರಿಕೆಟ್, ಗ್ರಾಮೀಣ ವಿದ್ಯಮಾನಗಳ ಬಗ್ಗೆ ಇಷ್ಟಪಟ್ಟು ಬರೆಯುತ್ತಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿರುಪನಹಳ್ಳಿ ಇವರ ಸ್ವಂತ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.