ವೃಷಭ ರಾಶಿಯಲ್ಲಿ ಸೂರ್ಯ ಸಂಕ್ರಮಣದಿಂದ ಅದೃಷ್ಟ; ಧನು, ಮಕರ, ಕುಂಭ, ಮೀನ ರಾಶಿಯವರಿಗೆ ಹೆಚ್ಚು ಶುಭಫಲಗಳಿವೆ
ಸೂರ್ಯ 9 ಗ್ರಹಗಳ ಅಧಿಪತಿ. ತಿಂಗಳಿಗೊಮ್ಮೆ ತನ್ನ ಸ್ಥಾನ ಬದಲಾಯಿಸುತ್ತಾನೆ. ಮೇ 14 ರಂದು ವೃಷಭ ರಾಶಿಯಲ್ಲಿ ಸೂರ್ಯನ ಸಂಚಾರವು 12 ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ಧನು, ಮಕರ, ಕುಂಭ, ಮೀನ ರಾಶಿಯವರ ಶುಭಫಲಗಳು ಇಲ್ಲಿವೆ.

ರವಿ ಅಥವಾ ಸೂರ್ಯ ಮೇ 14 ರ ಬುಧವಾರದಂದು ವೃಷಭರಾಶಿಯನ್ನು ಪ್ರವೇಶಿಸುತ್ತಾನೆ. ಜೂನ್ ತಿಂಗಳ 15 ರ ಭಾನುವಾರದವರೆಗು ಇದೇ ರಾಶಿಯಲ್ಲಿ ಸಂಚರಿಸುತ್ತಾನೆ. ವೃಷಭ ರಾಶಿಯು ಹಣಕಾಸಿನ ವ್ಯವಹಾರವನ್ನು ಸೂಚಿಸುತ್ತದೆ. ಕುಟುಂಬದ ಹಿರಿಯರನ್ನು ಸೂಚಿಸುತ್ತದೆ. ಅಲ್ಲದೆ ಪತ್ನಿಯಿಂದ ಪತಿಗೆ ದೊರೆಯಬಹುದಾದ ಸಹಾಯವನ್ನು ಸೂಚಿಸುತ್ತದೆ. ಜನ್ಮ ಕುಂಡಲಿಯಲ್ಲಿ ರವಿ ಮತ್ತು ಶುಕ್ರರು ಶುಭವಾಗಿದ್ದಲ್ಲಿ ಶುಭಫಲಗಳು ಹೆಚ್ಚಿನ ಮಟ್ಟದಲ್ಲಿ ದೊರೆಯುತ್ತದೆ. ಸಾಮಾಜಿಕ ರಂಗದಲ್ಲಿ ಹಣಕಾಸಿನ ವಿಚಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ದೊರೆಯುತ್ತವೆ. ವೃಷಭ ರಾಶಿಯಲ್ಲಿ ಸೂರ್ಯನ ಸಂಕ್ರಮಣದಿಂದ ಧನು, ಮಕರ, ಕುಂಭ ಹಾಗೂ ಮೀನ ರಾಶಿಯವರಿಗೆ ಏನೆಲ್ಲಾ ಶುಭಫಲಗಳಿವೆ ಎಂಬುದನ್ನು ಇಲ್ಲಿ ತಿಳಿಯಿರಿ.
ಧನು ರಾಶಿ
ಯಾವುದೇ ವಿಚಾರದಲ್ಲಿಯೂ ನಿರ್ದಿಷ್ಟವಾದ ತೀರ್ಮಾನಗಳನ್ನು ತೆಗೆದುಕೊಳ್ಳುವುದಿಲ್ಲ. ನಿಮ್ಮ ಮನಸ್ಸಿಗೆ ಇಷ್ಟವನಿಸುವ ಕೆಲಸ ಕಾರ್ಯಗಳನ್ನು ಆಯ್ಕೆ ಮಾಡಿಕೊಳ್ಳುವಿರಿ. ಹಣದ ಕೊರತೆ ಕಂಡು ಬರುತ್ತದೆ. ಆದರೆ ಅನಿರೀಕ್ಷಿತ ಧನ ಲಾಭವಿರುತ್ತದೆ. ಆರೋಗ್ಯದಲ್ಲಿ ಯಾವುದೇ ತೊಂದರೆ ಕಂಡುಬರುವುದಿಲ್ಲ. ಅತಿ ಮುಖ್ಯವಾದ ಪ್ರವಾಸಗಳನ್ನು ಸಹ ಕೈ ಬಿಡಬೇಕಾಗುತ್ತದೆ. ಮನರಂಜನೆಯ ಮನಸ್ಸು ಇದ್ದರೂ ಸಾಧ್ಯವಾಗದು. ತಮಗೆ ವಿರೋಧಿಗಳು ನೆಮ್ಮದಿಯಿಂದ ಇರಲು ಬಿಡುವುದಿಲ್ಲ. ಅನಾರೋಗ್ಯ ಇದ್ದರೂ ದುಡಿಯಬೇಕಾದ ಅನಿವಾರ್ಯತೆ ಇರುತ್ತದೆ.
ದಂಪತಿ ನಡುವೆ ಉತ್ತಮ ಅನುಬಂಧ ಇರುತ್ತದೆ. ಮಕ್ಕಳು ನಿಮ್ಮ ನಿರೀಕ್ಷೆಯನ್ನು ಮೀರಿ ಕಲಿಕೆಯಲ್ಲಿ ಹೊಸ ಸಾಧನೆ ಮಾಡುತ್ತಾರೆ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡು ಬರುವುದಿಲ್ಲ. ಒಂದಕ್ಕಿಂತಲೂ ಹೆಚ್ಚಿನ ಉದ್ಯೋಗವನ್ನು ಮಾಡಬಲ್ಲಿರಿ. ಅಜೀರ್ಣದ ತೊಂದರೆ ನಿಮ್ಮನ್ನು ಕಾಡುತ್ತದೆ. ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳಬೇಕಾದ ಆಸೆ ಕಾರ್ಯರೂಪಕ್ಕೆ ಬರುತ್ತದೆ. ಕುಟುಂಬದ ಹಿರಿಯರ ಜೊತೆ ಹಣಕಾಸಿನ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡುತ್ತದೆ.
ಮಕರ ರಾಶಿ
ಆತುರದ ಸ್ವಭಾವವಿರುತ್ತದೆ. ಅತಿ ಮುಖ್ಯ ಕೆಲಸದಲ್ಲಿಯೂ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಉತ್ತಮ ಆದಾಯ ಇರುತ್ತದೆ. ಸುಲಭವಾಗಿ ಹಣವನ್ನು ಖರ್ಚು ಮಾಡುವುದಿಲ್ಲ. ಹಣ ಉಳಿತಾಯ ಮಾಡಲು ಹಲವು ಯೋಜನೆಗಳನ್ನು ರೂಪಿಸುವಿರಿ. ಮನೆ ಮಂದಿಯ ಜೊತೆ ಪ್ರವಾಸಕ್ಕೆ ತೆರಳುವಿರಿ. ಬಹುದಿನದಿಂದ ಕಾಡುತ್ತಿದ್ದ ಆರೋಗ್ಯದಲ್ಲಿನ ಸಮಸ್ಯೆಯೂ ಪರಿಹಾರಗೊಳ್ಳುತ್ತದೆ. ಸ್ವತಂತ್ರವಾಗಿ ಹಣಕಾಸಿನ ವ್ಯವಹಾರವನ್ನು ನಿರ್ವಹಿಸುವಿರಿ. ಬಂಧು ಬಳಗದವರಿಂದ ದೂರ ಉಳಿಯಿರಿ. ಮನೆಯಲ್ಲಿ ನಡೆಯಬೇಕಿದ್ದ ವಿವಾಹವು ಕೆಲದಿನ ಮುಂದೆ ಹೋಗಲಿದೆ.
ವಿದ್ಯಾರ್ಥಿಗಳಿಗೆ ಉತ್ತಮ ಜೀವನ ರೂಪಿಸಲು ಯಾವುದೇ ತ್ಯಾಗಕ್ಕೂ ಸಿದ್ಧರಾಗುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಆಸಕ್ತಿ ಇರುವುದಿಲ್ಲ. ಅವಿವಾಹಿತರಿಗೆ ವಿವಾಹ ಯೋಗವಿದೆ. ದಾಂಪತ್ಯದಲ್ಲಿ ಗಂಭೀರದ ಸನ್ನಿವೇಶವು ಎದುರಾಗುತ್ತದೆ. ಮನೆತನಕ್ಕೆ ಸಂಬಂಧಿಸಿದ ಆಸ್ತಿಯ ವಿವರವನ್ನು ಮಾತುಕತೆಯಿಂದ ಬಗೆಹರಿಸುವಿರಿ. ಆತ್ಮೀಯರಿಗೆ ನೀಡಿದ್ದ ಹಣವು ಮರಳಿ ಕೈಸೇರುತ್ತದೆ. ಸ್ವಂತ ಉಪಯೋಗಕ್ಕಾಗಿ ಹೊಸ ವಾಹನವನ್ನು ಕೊಳ್ಳುವ ಸಾಧ್ಯತೆಗಳಿವೆ.
ಕುಂಭ ರಾಶಿ
ಶಾಂತಿ ಸಹನೆಯಿಂದ ಜೀವನ ನಡೆಸುವಿರಿ. ನಿಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ಯಾರಿಗೂ ತಿಳಿಸುವುದಿಲ್ಲ. ಕೆಲಸ ಕಾರ್ಯಗಳನ್ನು ಪೂರೈಸುವಲ್ಲಿ ಆತ್ಮೀಯರ ಸಹಾಯವನ್ನು ಪಡೆಯುವಿರಿ. ಮಕ್ಕಳ ಭವಿಷ್ಯಕ್ಕಾಗಿ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ನಿಮ್ಮ ತಪ್ಪನ್ನು ಬಾಳ ಸಂಗಾತಿಯು ಸರಿಪಡಿಸುತ್ತಾರೆ. ಹಣಕಾಸಿನ ತೊಂದರೆ ಇರುವುದಿಲ್ಲ. ಉತ್ತಮ ಭವಿಷ್ಯಕ್ಕಾಗಿ ಸಣ್ಣ ಪ್ರಮಾಣದ ವ್ಯಾಪಾರವನ್ನು ಆರಂಭಿಸುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಂಡು ಬರುವುದಿಲ್ಲ. ನಿಮ್ಮ ಪ್ರಾಮಾಣಿಕತೆಗೆ ಸಮಾಜದಲ್ಲಿ ಉತ್ತಮ ಗೌರವ ದೊರೆಯುತ್ತದೆ.
ಬೇರೆಯವರನ್ನು ಅವಲಂಬಿಸದೆ ಸ್ವತಂತ್ರ ಜೀವನ ನಡೆಸುವಿರಿ. ನೇರ ಮತ್ತು ನಿಷ್ಟುರ ಗುಣ ನಿಮ್ಮಲ್ಲಿ ಇರುತ್ತದೆ. ಸಮಾಜದಲ್ಲಿ ನಾಯಕನ ಸ್ಥಾನ ದೊರೆಯುತ್ತದೆ. ಸಮಯ ಸಂದರ್ಭಕ್ಕೆ ಹೊಂದಿಕೊಂಡು ಬಾಳುವಿರಿ. ಸದಾಕಾಲ ಆನಂದದಿಂದ ಬಾಳುವಿರಿ. ನೀವಿರುವ ಕಡೆ, ಸಂತೋಷ ಸಂಭ್ರಮಕ್ಕೆ ಬರವಿರುವುದಿಲ್ಲ. ಹೊಗಳಿಕೆಗೆ ಮರುಳಾಗಿ ತೊಂದರೆಗೆ ಒಳಗಾಗುವಿರಿ. ಅವಿವಾಹಿತರಿಗೆ ಪರಿಚಯ ಇರುವವರ ಜೊತೆ ವಿವಾಹ ಸಂಬಂಧ ಕೂಡಿಬರುತ್ತದೆ.
ಮೀನ ರಾಶಿ
ಕೈಕಾಲುಗಳಲ್ಲಿ ಊತವಿರುತ್ತದೆ. ದೇಹದಲ್ಲಿ ನೀರಿನ ಅಂಶವು ಹೆಚ್ಚುತ್ತದೆ. ಇದರಿಂದಾಗಿ ಮುಖ್ಯವಾಗಿ ಸ್ತ್ರೀಯರು ಹೆಚ್ಚಿನ ವಿಶ್ರಾಂತಿ ಪಡೆಯುತ್ತಾರೆ. ನಿಮ್ಮ ಮನಸ್ಸಿನಂತೆ ಕುಟುಂಬದಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುವುದಿಲ್ಲ. ಪುರುಷರು ತಮ್ಮ ಹಠದಂತೆ ತಮ್ಮ ಕೆಲಸ ಸಾಧಿಸುತ್ತಾರೆ. ಮಕ್ಕಳು ಉದ್ಯೋಗದ ನಿಮಿತ್ತವಾಗಿ ದೂರದ ಸ್ಥಳಕ್ಕೆ ತೆರಳುತ್ತಾರೆ. ಹಣಕಾಸಿನ ತೊಂದರೆ ಇರುವುದಿಲ್ಲ. ಆದರೆ ಮಾನಸಿಕ ನೆಮ್ಮದಿಯೂ ಇರುವುದಿಲ್ಲ. ಏಕಾಂಗಿತನವೇ ನಿಮಗೆ ದೊಡ್ಡ ಸಮಸ್ಯೆಯಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಬೇಸರ ಮೂಡಿಸುತ್ತದೆ. ಆತ್ಮೀಯರ ಮಂಗಳ ಕಾರ್ಯವೊಂದಕ್ಕೆ ಭೇಟಿ ನೀಡುವಿರಿ.
ಮಕ್ಕಳ ಅಥವಾ ಮೊಮ್ಮಕ್ಕಳ ಆರೋಗ್ಯದಲ್ಲಿ ತೊಂದರೆ ಕಂಡುಬರುತ್ತದೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಆಸಕ್ತಿ ಮೂಡುವುದಿಲ್ಲ. ವಿದೇಶದಲ್ಲಿ ನಡೆಸಿರುವವರು ಮರಳಿ ಜನ್ಮಸ್ಥಳಕ್ಕೆ ಬರುತ್ತಾರೆ. ಆತ್ಮೀಯರಿಗೆ ಹಣದ ಸಹಾಯ ಮಾಡುವಿರಿ. ವಾಹನದಿಂದ ತೊಂದರೆಯಾಗುತ್ತದೆ. ಒಮ್ಮೆ ತೆಗೆದುಕೊಂಡು ನಿರ್ಧಾರವನ್ನು ಉಳಿಸಿಕೊಳ್ಳದೆ ಅನಾವಶ್ಯಕವಾಗಿ ಬದಲಿಸುವಿರಿ. ಯಾರನ್ನು ನಂಬುವುದಿಲ್ಲ.
ಬರಹ: ಹೆಚ್. ಸತೀಶ್, ಜ್ಯೋತಿಷಿ, ಬೆಂಗಳೂರು
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಭವಿಷ್ಯವನ್ನು ಹೇಳಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).