ವೃಷಭ ರಾಶಿ ಭವಿಷ್ಯ ಜುಲೈ 11; ಖರೀದಿಗೆ ಮುನ್ನ ಜೇಬು ಮುಟ್ಟಿ ನೋಡ್ಕೊಳ್ಳಿ, ಪ್ರೀತಿಗೆ ಜೈ, ಉದ್ಯೋಗದಲ್ಲೂ ಸೈ
Taurus Daily Horoscope July 11, 2024: ರಾಶಿಚಕ್ರಗಳಪೈಕಿ ಎರಡನೇಯದೇ ವೃಷಭ ರಾಶಿಚಕ್ರದ ಚಿಹ್ನೆ. ಜನನದ ಸಮಯದಲ್ಲಿ ಚಂದ್ರನು ವೃಷಭ ರಾಶಿಯಲ್ಲಿ ಸಾಗುತ್ತಿರುವ ಜನರನ್ನು ವೃಷಭ ರಾಶಿಯವರು ಎನ್ನುತ್ತಾರೆ. ಜುಲೈ 11ರ ವೃಷಭ ರಾಶಿಯವರ ರಾಶಿ ಭವಿಷ್ಯ ಪ್ರಕಾರ, ಈ ದಿನ ಖರೀದಿಗೆ ಮುನ್ನ ಜೇಬು ಮುಟ್ಟಿ ನೋಡ್ಕೊಳ್ಳಿ. ಪ್ರೀತಿಗೆಜೈ, ಉದ್ಯೋಗದಲ್ಲೂ ಸೈ ಅನ್ನಿಸಿಕೊಳ್ಳುವಿರಿ.

ವೃಷಭ ರಾಶಿಯವರು ಇಂದು (ಜುಲೈ 11) ಆರಾಮ ಸ್ಥಿತಿಯಿಂದ ಹೊರಗೆ ಬಂದು ಕೆಲಸ ಮಾಡಬೇಕಾದ ಸನ್ನಿವೇಶ ಉಂಟಾಗಬಹುದು. ಇದೊಂದು ರೀತಿಯಲ್ಲಿ ಬೆಳವಣಿಗೆಯ ಅವಕಾಶವಾಗಿದ್ದು, ಪ್ರಜ್ಞಾಪೂರ್ವಕವಾಗಿ ಬಳಸಿಕೊಳ್ಳಬೇಕು. ಹೊಸ ಅನುಭವಗಳನ್ನು ಸ್ವೀಕರಿಸಲು ಸಿದ್ಧರಾಗಿರಿ. ನಿಮ್ಮ ಅಂತಃಪ್ರಜ್ಞೆಯನ್ನು ನಂಬಿ ಮುನ್ನಡೆಯಿರಿ. ಅದು ನಿಮ್ಮ ಮಾರ್ಗದರ್ಶಿಯಾಗಿರಲಿ. ಬದಲಾವಣೆಯನ್ನು ಸ್ವೀಕರಿಸಲು ಹಿಂಜರಿಯಬೇಡಿ. ಅಂದ ಹಾಗೆ, ಎಲ್ಲ ರಾಶಿಗಳ ದಿನ ಭವಿಷ್ಯ ಹಿಂದೂಸ್ತಾನ್ ಟೈಮ್ಸ್ ಕನ್ನಡ ಜಾಲತಾಣದಲ್ಲಿದೆ. ನೀವು ಅದನ್ನೂ ಓದಬಹುದು.
ವೃಷಭ ರಾಶಿಯವರ ಪ್ರೇಮ ಜೀವನ (Taurus Love Horoscope): ವೃಷಭ ರಾಶಿಯವರು ಪ್ರೀತಿ ಪ್ರೇಮದ ವಿಷಯಗಳಲ್ಲಿ, ನಿಮ್ಮ ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡಲು ಇಂದು ಉತ್ತಮ ದಿನ. ನೀವು ಒಬ್ಬಂಟಿಯಾಗಿದ್ದರೆ, ಎಲ್ಲೋ ಹೋದಲ್ಲಿ ಅನಿರೀಕ್ಷಿತವಾಗಿ ನಿಮ್ಮ ಮನಗೆಲ್ಲುವವರನ್ನು ಭೇಟಿ ಮಾಡಲು ಸಿದ್ಧರಾಗಿರಿ. ನಿಮ್ಮ ನೈಸರ್ಗಿಕ ಮೋಡಿ ಜನರನ್ನು ನಿಮ್ಮ ಕಡೆಗೆ ಆಕರ್ಷಿಸುತ್ತದೆ. ನಿಜವಾದ ಸಂಬಂಧಗಳು ರೂಪುಗೊಳ್ಳಬಹುದು. ಬದಲಾವಣೆಯನ್ನು ಸ್ವೀಕರಿಸಿ ಮತ್ತು ನಿಮ್ಮ ನೈಜ ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಹಿಂಜರಿಯದಿರಿ. ನಿಮ್ಮ ದೃಢ ಸ್ವಭಾವವು ನಿಮ್ಮ ಸಂಬಂಧದಲ್ಲಿ ಭದ್ರತೆಯ ಭಾವವನ್ನು ಉಂಟುಮಾಡಬಹುದು.
ವೃಷಭ ರಾಶಿ ದಿನ ಭವಿಷ್ಯ ಜುಲೈ 11; ಉದ್ಯೋಗ, ಆದಾಯ, ಆರೋಗ್ಯ
ವೃಷಭ ರಾಶಿ ವೃತ್ತಿ ಭವಿಷ್ಯ (Taurus Professional Horoscope): ವೃತ್ತಿಕ್ಷೇತ್ರದಲ್ಲಿ ಇಂದು ಪೂರಕ ವಾತಾವರಣ ಇರಲಿದೆ. ನೀವು ಹೊಸ ಪ್ರಾಜೆಕ್ಟ್ ಅಥವಾ ಹೊಸ ಹೊಣೆಗಾರಿಕೆಯನ್ನು ಪಡೆಯಬಹುದು. ಅದು ನಿಮಗೆ ಉದ್ಯೋಗದಲ್ಲಿ ಮುನ್ನಡೆ ಸಾಧಿಸಲು ಅಗತ್ಯವಿರುವಂಥದ್ದಾಗಿರುತ್ತದೆ. ನಿಮ್ಮ ಕೌಶಲ ಮತ್ತು ಸೃಜನಶೀಲತೆಯನ್ನು ಪ್ರಸ್ತುತಪಡಿಸಲು ಇದನ್ನು ಒಂದು ಅವಕಾಶವಾಗಿ ತೆಗೆದುಕೊಳ್ಳಿ. ಹೊಸ ಆಲೋಚನೆಗಳನ್ನು ಅಳವಡಿಸಿಕೊಳ್ಳುವ ನಿಮ್ಮ ಇಚ್ಛೆಯೊಂದಿಗೆ ನಿಮ್ಮ ಪ್ರಾಯೋಗಿಕ ವಿಧಾನವು ಸಹೋದ್ಯೋಗಿಗಳು ಮತ್ತು ಹಿರಿಯರ ನಡುವೆ ನಿಮಗೆ ಗೌರವವನ್ನು ತಂದುಕೊಡುತ್ತದೆ. ಕೆಲಸದ ಮೇಲೆ ಗಮನವನ್ನು ಕೇಂದ್ರೀಕರಿಸಿಕೊಳ್ಳಿ. ತಂಡದ ಕೆಲಸವು ಪ್ರಭಾವಶಾಲಿ ಫಲಿತಾಂಶಗಳನ್ನು ನೀಡುತ್ತದೆ ಎಂಬುದನ್ನು ನೆನಪಿಡಿ. ನೆಟ್ವರ್ಕಿಂಗ್ ನಿಮಗೆ ಲಾಭದಾಯಕ ಅವಕಾಶಗಳನ್ನು ತರುತ್ತದೆ.
ವೃಷಭ ರಾಶಿ ಆರ್ಥಿಕ ಜೀವನ (Taurus Money Horoscope): ಹಣದ ವಿಷಯದಲ್ಲಿ, ಎಚ್ಚರಿಕೆಯಿಂದ ಯೋಜನೆ ರೂಪಿಸಿಕೊಳ್ಳಬೇಕಾದ ದಿನ. ಅದೇ ರೀತಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ದಿನ. ಯಾವುದೇ ಹಠಾತ್ ಖರೀದಿಗೆ ಮನಸ್ಸಾಗಬಹುದು. ಆದರೆ, ನಿಮ್ಮ ಬಜೆಟ್ ಗಮನಿಸಿಕೊಂಡು ಮುಂದುವರಿಯಿರಿ. ಹೊಸ ಹೂಡಿಕೆ ಅವಕಾಶಗಳನ್ನು ಪರಿಗಣಿಸಿ, ಆದರೆ ಹೂಡಿಕೆ ಮಾಡುವ ಮೊದಲು ಸಂಪೂರ್ಣ ತಿಳಿವಳಿಕೆ ಪಡೆದುಕೊಂಡಿರುವುದನ್ನು ಖಚಿತಪಡಿಸಿಕೊಳ್ಳಿ. ನಿಮ್ಮ ದೀರ್ಘಾವಧಿಯ ಹಣಕಾಸಿನ ಗುರಿಗಳ ಮೇಲೆ ಕೇಂದ್ರೀಕರಿಸಲು ಮತ್ತು ಅಗತ್ಯ ಬದಲಾವಣೆಗಳನ್ನು ಮಾಡಲು ಇದು ಉತ್ತಮ ಸಮಯ. ನೆನಪಿಡಿ, ತಾಳ್ಮೆ ಮತ್ತು ಪರಿಶ್ರಮವು ಉತ್ತಮ ಆರ್ಥಿಕ ಭವಿಷ್ಯವನ್ನು ನಿರ್ಮಿಸುವ ಕೀಲಿಗಳಾಗಿವೆ.
ವೃಷಭ ರಾಶಿ ಆರೋಗ್ಯ ರಾಶಿ (Taurus Health Horoscope): ಇಂದು ನೀವು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ದೈಹಿಕ ಚಟುವಟಿಕೆ ಮತ್ತು ಪೌಷ್ಟಿಕ ಆಹಾರವನ್ನು ಒಳಗೊಂಡಿರುವ ಸಮತೋಲನದ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಗಮನಹರಿಸಿ. ನಿಮ್ಮ ಆರೋಗ್ಯದ ಬಗ್ಗೆ ನೀವು ಗಮನ ಹರಿಸುತ್ತಿದ್ದರೆ, ಆರೋಗ್ಯಕರ ಆಹಾರ ಕ್ರಮ ಅಳವಡಿಸಿಕೊಳ್ಳುವುದಕ್ಕೆ ಇದು ಸಕಾಲ. ಒತ್ತಡವನ್ನು ಕಡಿಮೆ ಮಾಡಲು ಯೋಗ ಅಥವಾ ಧ್ಯಾನದಂತಹ ಚಟುವಟಿಕೆಗಳ ಮೊರೆ ಹೋಗಬಹುದು. ಯಾವುದೇ ದೈಹಿಕ ಅಸ್ವಸ್ಥತೆ ಉಂಟಾದರೂ ಅದರ ಬಗ್ಗೆ ಗಮನ ಕೊಡಿ. ಅಗತ್ಯವಿದ್ದರೆ ತಜ್ಞರ ಸಲಹೆ ಪಡೆಯಲು ಹಿಂಜರಿಯಬೇಡಿ. ಸಣ್ಣ ಪ್ರಯತ್ನಗಳು ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ.
ವೃಷಭ ರಾಶಿಯವರಿಗೆ ತಿಳಿದಿರಲೇಬೇಕಾದ ಮಾಹಿತಿಯಿದು
ವೃಷಭ ರಾಶಿಗೆ ಅಧಿಪತಿ: ಶುಕ್ರ, ವೃಷಭ ರಾಶಿಯವರಿಗೆ ಶುಭ ದಿನಾಂಕಗಳು: 5, 6, 15, 18, 19, 20, 25, 29. ವೃಷಭ ರಾಶಿಯವರಿಗೆ ಶುಭ ದಿನಗಳು: ಸೋಮವಾರ, ಬುಧವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರ. ವೃಷಭ ರಾಶಿಯವರಿಗೆ ಶುಭ ಸಂಖ್ಯೆಗಳು: 5, 6, 8. ವೃಷಭ ರಾಶಿಯವರಿಗೆ ಶುಭ ವರ್ಣ: ಪಿಂಕ್, ಹಸಿರು ಮತ್ತು ಬಿಳಿ. ವೃಷಭ ರಾಶಿಯವರಿಗೆ ಅಶುಭ ವರ್ಣ: ಕೆಂಪು ಮತ್ತು ಹಳದಿ. ವೃಷಭ ರಾಶಿಯವರಿಗೆ ಶುಭ ದಿಕ್ಕು: ದಕ್ಷಿಣ ಮತ್ತು ನೈರುತ್ಯ. ವೃಷಭ ರಾಶಿಯವರಿಗೆ ಶುಭ ತಿಂಗಳು: ಜನವರಿ 15 ರಿಂದ ಏಪ್ರಿಲ್15. ವೃಷಭ ರಾಶಿಯವರಿಗೆ ಶುಭ ಹರಳು: ಹಸಿರು ಪಚ್ಚೆ ಮತ್ತು ನೀಲಮಣಿ. ವೃಷಭ ರಾಶಿಯವರಿಗೆ ಶುಭ ರಾಶಿ: ಮಿಥುನ, ಕನ್ಯಾ ಮತ್ತು ಮಕರ. ವೃಷಭ ರಾಶಿಯವರಿಗೆ ಅಶುಭ ರಾಶಿ: ಕಟಕ, ಧನುಸ್ಸು ಮತ್ತು ಮೇಷ.
ವೃಷಭ ರಾಶಿಯವರಿಗೆ ಶುಭಫಲಕ್ಕಾಗಿ ಸರಳ ಪರಿಹಾರಗಳು
1) ಇಂದ್ರಾಕ್ಷಿ ಸ್ತೋತ್ರ: ಪ್ರತಿದಿನ ಶ್ರೀ ಇಂದ್ರಾಕ್ಷಿ ಸ್ತೋತ್ರ ಪಠಿಸುವುದರಿಂದ ಅಥವಾ ಕೇಳಿಸಿಕೊಳ್ಳುವುದರಿಂದ ಆತ್ಮಶಕ್ತಿಯು ಹೆಚ್ಚುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ.
2) ಈ ದಾನಗಳಿಂದ ಶುಭ ಫಲ: ಬಿಳಿಬಣ್ಣದ ಬಟ್ಟೆ ಮತ್ತು ಗೋಧಿ ಅಥವಾ ರವೆಯನ್ನು ದಾನ ನೀಡುವುದರಿಂದ ಖರ್ಚುವೆಚ್ಚಗಳು ಕಡಿಮೆ ಆಗಲಿವೆ.
3) ದೇವಸ್ಥಾನ ಮತ್ತು ದೇವರ ಪೂಜೆ: ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಗೆ ಪಂಚಾಮೃತ ಅಭಿಷೇಕ ಮಾಡಿಸುವುದು ಕ್ಷೇಮಕರ. ಮನೆಯಲ್ಲಿಯೂ ಶ್ರೀ ಸತ್ಯನಾರಾಯಣ ಪೂಜೆ ಮಾಡಬಹುದು. ಹೂ ಬಿಡುವ ಗಿಡಗಳನ್ನು ಪೋಷಿಸಿದಲ್ಲಿ ಎಲ್ಲಾರೀತಿಯ ಸಮಸ್ಯೆಗಳು ದೂರವಾಗುತ್ತವೆ.
4) ಈ ಬಣ್ಣದ ಕರವಸ್ತ್ರ ಉಪಯೋಗಿಸಿ: ನೀಲಿ ಮತ್ತು ಹಸಿರು ಬಣ್ಣದ ಕರವಸ್ತ್ರ ಬಳಸಿದರೆ ನಿರೀಕ್ಷಿತ ಫಲಗಳು ದೊರೆಯಲಿವೆ.
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.
ಗಮನಿಸಿ: ಇದು ವೈದಿಕ ಜ್ಯೋತಿಷ್ಯದ ಪದ್ಧತಿಯಲ್ಲಿ ಗೋಚಾರ ಆಧರಿಸಿದ ಬರಹ. ನಿಖರ ವಿವರ ಮತ್ತು ಸಮರ್ಪಕ ಪರಿಹಾರಗಳಿಗಾಗಿ ಓದುಗರು ತಮ್ಮ ಜನ್ಮಜಾತಕವನ್ನು ಸಹ ಪರಿಗಣಿಸಬೇಕು. ನಿಮ್ಮ ಕುಲಗುರುಗಳು ಅಥವಾ ಜ್ಯೋತಿಷಿಗಳ ಸಲಹೆ ಪಡೆಯಬೇಕು. ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

ವಿಭಾಗ