ಮಕ್ಕಳ ಆರೋಗ್ಯದಲ್ಲಿ ಏರುಪೇರು, ಬಹುದಿನಗಳ ಆಸೆಯಂತೆ ಉನ್ನತ ಅಧಿಕಾರದ ಆಸೆ ನೆರವೇರಲಿದೆ; ನಾಳೆಯ ದಿನ ಭವಿಷ್ಯ
11th July Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ. (ಬರಹ: ಎಚ್. ಸತೀಶ್, ಜ್ಯೋತಿಷಿ)

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (11th July 2024 Horoscope).
ನಾಳೆಯ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ಗ್ರೀಷ್ಮ ಋತು-ಆಷಾಢ ಮಾಸ-ಶುಕ್ಲಪಕ್ಷ-ಗುರುವಾರ
ತಿಥಿ : ಪಂಚಮಿ ಬೆಳಗ್ಗೆ 08.05 ರವರೆಗು ಇದ್ದು ನಂತರ ಷಷ್ಠಿ ಆರಂಭವಾಗುತ್ತದೆ.
ನಕ್ಷತ್ರ : ಪುಬ್ಬ ನಕ್ಷತ್ರವು 12.05 ರವರೆಗೂ ಇದ್ದು ನಂತರ ಉತ್ತರ ನಕ್ಷತ್ರ ಇರುತ್ತದೆ.
ಸೂರ್ಯೋದಯ: ಬೆಳಗ್ಗೆ 06.00
ಸೂರ್ಯಾಸ್ತ: ಸಂಜೆ 06.49
ರಾಹುಕಾಲ: 02.04 ರಿಂದ 03.40
ರಾಶಿ ಫಲ
ಮೇಷ
ಉದ್ಯೋಗದಲ್ಲಿ ಯಾವುದೇ ಪ್ರಗತಿ ಇರುವುದಿಲ್ಲ. ಆದರೆ ಸ್ವಂತ ಪರಿಶ್ರಮದಿಂದ ತಡವಾಗಿ ಅಭಿವೃದ್ಧಿ ಹೊಂದುವಿರಿ. ವಿದ್ಯಾರ್ಥಿಗಳು ದೃಢವಾದ ಮನಸ್ಸಿನಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ವ್ಯಾಪಾರ ವ್ಯವಹಾರದಲ್ಲಿ ಲಾಭವಿದೆ. ಸ್ವಂತ ಉದ್ಧಿಮೆ ಇದ್ದಲ್ಲಿ ನೌಕರರ ಸಹಕಾರದ ಕಾರಣ ಯಾವುದೇ ತೊಂದರೆ ಎದುರಾಗದು. ಚಿಕ್ಕ ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ.
ಪರಿಹಾರ : ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಎಲೆ ಹಸಿರು
ವೃಷಭ
ಪಯೋಜನವಿಲ್ಲದ ವಿಚಾರಗಳಿಗೆ ಹಣ ಖರ್ಚಾಗುತ್ತದೆ. ವಿದ್ಯಾರ್ಥಿಗಳು ಮನರಂಜನೆಯಿಂದ ಕಲಿಕೆಯಿಂದ ದೂರ ಉಳಿಯುವರು. ವ್ಯಾಪಾರ ವ್ಯವಹಾರದಲ್ಲಿ ಮಧ್ಯಮ ಲಾಭ ದೊರೆಯುತ್ತದೆ. ತಂದೆಯ ಹೆಸರಿನ ಹಣದ ವಿವಾದವನ್ನು ಬಗೆಹರಿಸುವಿರಿ. ದಾಂಪತ್ಯ ಜೀವನದಲ್ಲಿ ಶಾಂತಿ ನೆಮ್ಮದಿ ಮನೆ ಮಾಡಿರುತ್ತದೆ. ಬಂಧು ಬಳಗದ ಜೊತೆ ಉತ್ತಮ ಬಾಂಧವ್ಯ ಹೊಂದುವಿರಿ.
ಪರಿಹಾರ : ಬೆಲ್ಲದಿಂದ ಮಾಡಿದ ಆಹಾರ ಸೇವಿಸಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕೇಸರಿ
ಮಿಥುನ
ಆತ್ಮವಿಶ್ವಾಸದಿಂದ ಹಣಕಾಸಿನ ಸಮಸ್ಯೆಯನ್ನು ಬಗೆಹರಿಸುವಿರಿ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ತಮ್ಮ ಗುರಿ ಸಾಧಿಸುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರುತ್ತದೆ. ಸಂಗಾತಿ ಜೊತೆ ನೆಮ್ಮದಿಯ ಜೀವನ ನಡೆಸುವಿರಿ. ಬಿಡುವು ತೆಗೆದುಕೊಳ್ಳದೆ ನಿಮ್ಮ ಕೆಲಸವನ್ನು ಪೂರೈಸುವಿರಿ. ಅವಿವಾಹಿತರಿಗೆ ವಿವಾಹದ ಬಗ್ಗೆ ಚಿಂತೆ ಇರುತ್ತದೆ. ಸೋದರರ ಜೊತೆಗೂಡಿ ಸ್ವಂತ ಮನೆಯನ್ನು ಖರೀದಿಸುವಿರಿ.
ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕಂದು
ಕಟಕ
ಉದ್ಯೋಗದಲ್ಲಿ ಬದಲಾವಣೆ ತರುವ ನಿಮ್ಮ ತೀರ್ಮಾನವನ್ನು ಮೇಲಧಿಕಾರಿಗಳು ಒಪ್ಪುತ್ತಾರೆ. ಹಣದ ತೊಂದರೆ ಇರುವುದಿಲ್ಲ. ಸ್ವಂತ ಕೆಲಸ ಕಾರ್ಯದಲ್ಲಿ ಒತ್ತಡದ ಸನ್ನಿವೇಶ ಎದುರಾಗುತ್ತದೆ. ವಿದ್ಯಾರ್ಥಿಗಳು ಯಾರ ಜೊತೆಯೂ ಬೆರೆಯದೆ ಅಭ್ಯಾಸದಲ್ಲಿ ನಿರತರಾಗುತ್ತಾರೆ. ದುಡುಕುತನದಿಂದ ಕುಟುಂಬದಲ್ಲಿ ಬೇಸರ ಉಂಟಾಗುತ್ತದೆ.
ಪರಿಹಾರ : ಮಕ್ಕಳಿಗೆ ಗೋಧಿಯಿಂದ ತಯಾರಿಸಿದ ಸಿಹಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ. ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಕೆಂಪು ಬಣ್ಣ
ಸಿಂಹ
ಕುಟುಂಬದಲ್ಲಿ ಎಲ್ಲರೊಂದಿಗೆ ಉತ್ತಮ ಸಾಮರಸ್ಯ ಇರಲಿದೆ. ಉದ್ಯೋಗದಲ್ಲಿ ವಿಶಿಷ್ಟ ಸ್ಥಾನಮಾನ ಲಭಿಸುತ್ತದೆ. ವಿದ್ಯಾರ್ಥಿಗಳು ಕಲಿಕೆಯೊಡನೆ ಮನರಂಜನೆಯಲ್ಲಿಯೂ ಮುಳುಗಲಿದ್ದಾರೆ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಲಾಭವಿದೆ. ಸಮಸ್ಯೆ ಎದುರಾದಾಗ ಕುಟುಂಬದವರು ನಿಮ್ಮ ಸಹಾಯಕ್ಕೆ ಬರಲಿದ್ದಾರೆ.
ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಕಿತ್ತಳೆ ಬಣ್ಣ
ಕನ್ಯಾ
ಹಣಕಾಸಿನ ಪರಿಸ್ಥಿತಿಯನ್ನು ಸರಿದೂಗಿಸಲು ಯಶಸ್ವಿಯಾಗುವಿರಿ. ಕಮಿಷನ್ ಆಧಾರಿತ ವ್ಯಾಪಾರದಲ್ಲಿ ಲಾಭವಿದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ಗುಣಮಟ್ಟ ಕಾಪಾಡಿಕೊಳ್ಳುತ್ತಾರೆ. ಕುಟುಂಬದ ಹಣಕಾಸಿನ ಸ್ಥಿತಿಯಲ್ಲಿ ಪ್ರಗತಿ ಕಂಡುಬರಲಿದೆ. ಕ್ರಮೇಣವಾಗಿ ನಿಮ್ಮ ಆರೋಗ್ಯದಲ್ಲಿ ಚೇತರಿಕೆ ಕಂಡುಬರುವುದು. ಕುಟುಂಬದ ಸದಸ್ಯರ ಜೊತೆಯಲ್ಲಿ ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ.
ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ ಹಳದಿ
ತುಲಾ
ಆತ್ಮೀಯರ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ. ಉದ್ಯೋಗದಲ್ಲಿ ನಿಮ್ಮ ಕರ್ತವ್ಯಕ್ಕೆ ತಕ್ಕಂಥ ಉತ್ತಮ ಪ್ರತಿಫಲ ದೊರೆಯುತ್ತವೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಗಿಯುವ ಮುನ್ನವೇ ಉದ್ಯೋಗ ಲಭಿಸುತ್ತದೆ. ಆತ್ಮೀಯರಿಂದ ಹಣಕಾಸಿನ ಸಹಾಯ ದೊರೆಯುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಸ್ಥಿರ ಆದಾಯ ದೊರೆಯುತ್ತದೆ.
ಪರಿಹಾರ : ಪಕ್ಷಿಗಳಿಗೆ ಆಹಾರ ನೀಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ ಹಸಿರು
ವೃಶ್ಚಿಕ
ಮಕ್ಕಳ ಸಹಾಯ ಸಹಕಾರ ನಿಮಗಿರುತ್ತದೆ. ಉದ್ಯೋಗದಲ್ಲಿನ ಬಿಗುವಿನ ವಾತಾವರಣ ಉಂಟಾಗಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ. ವಿದ್ಯಾರ್ಥಿಗಳಿಗೆ ಉತ್ತಮ ಸ್ಪೂರ್ತಿಯ ಅಗತ್ಯ ಇದೆ. ಹೊಸ ವ್ಯಾಪಾರ ವ್ಯವಹಾರವನ್ನು ಆರಂಭಿಸುವ ಯೋಜನೆ ಮುಂದೂಡುವಿರಿ. ಪ್ರವಾಸಕ್ಕೆ ತೆರಳಲು ಇದು ಸಕಾಲವಲ್ಲ. ಸ್ವಂತ ವ್ಯಾಪಾರವಿದ್ದಲ್ಲಿ ಮಧ್ಯಮ ಆದಾಯ ದೊರೆಯುತ್ತದೆ.
ಪರಿಹಾರ : ಸಿಹಿಯನ್ನು ತಿಂದು ನೀರು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ನೀಲಿ ಬಣ್ಣ
ಧನಸ್ಸು
ಸ್ವಂತ ಹಣಕಾಸಿನ ಸಂಸ್ಥೆಯನ್ನು ಆರಂಭಿಸುವ ಕನಸು ನನಸಾಗುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆ ಮತ್ತು ಹೆಚ್ಚಿನ ಆಸಕ್ತಿಯಿಂದ ಕಲಿಕೆಯಲ್ಲಿ ಮುಂದಿರುತ್ತಾರೆ. ಅವಿವಾಹಿತರಿಗೆ ವಿವಾಹ ಯೋಗವಿದೆ. ಮಕ್ಕಳ ಮನಸ್ಸನ್ನು ಪ್ರೀತಿಯಿಂದ ಬದಲಿಸುವಿರಿ. ಕಲಾವಿದರಿಗೆ ವಿಶೇಷ ಅವಕಾಶ ಗೌರವ ಲಭಿಸುತ್ತದೆ. ಆಪತ್ತಿನಲ್ಲಿ ಇದ್ದವರಿಗೆ ಹಣದ ಸಹಾಯ ಮಾಡುವಿರಿ. ತಂದೆಯ ಆರೋಗ್ಯದಲ್ಲಿ ತೊಂದರೆ ಇರುತ್ತದೆ.
ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ನೇರಳೆ ಬಣ್ಣ
ಮಕರ
ತಂದೆಯವರ ದುಡುಕಿನ ಮಾತಿನಿಂದಾಗಿ ವಾಗ್ವಾದ ಉಂಟಾಗುವುದು. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯುತ್ತದೆ. ಉದ್ಯೋಗದಲ್ಲಿ ಪ್ರತಿಷ್ಠಿತ ಸ್ಥಾನಮಾನ ದೊರೆಯುತ್ತದೆ. ತಪ್ಪು ಅಭಿಪ್ರಾಯದಿಂದ ದೂರವಾಗಿದ್ದ ಸೋದರರು ಪ್ರೀತಿಯಿಂದ ಮತ್ತೆ ಮರಳಿ ಬರಲಿದ್ದಾರೆ. ಸಹಪಾಠಿಗಳ ಜೊತೆಗೂಡಿ ಕಿರು ಪ್ರವಾಸ ಕೈಗೊಳ್ಳುವಿರಿ. ಸೋದರಿಗೆ ಹಣದ ಸಹಾಯವನ್ನು ಮಾಡುವಿರಿ.
ಪರಿಹಾರ : ಹಿರಿಯ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ
ಕುಂಭ
ಉದ್ಯೋಗದಲ್ಲಿ ಯಾವುದೇ ಬದಲಾವಣೆ ಉಂಟಾಗದೆ ಸ್ಥಿರತೆ ಲಭಿಸುತ್ತದೆ. ಅನಿವಾರ್ಯವಾಗಿ ಉದ್ಯೋಗ ಬದಲಿಸುವಿರಿ. ಆತ್ಮೀಯರಿಂದ ಸಾಲ ಮಾಡುವಿರಿ. ವಿದ್ಯಾರ್ಥಿಗಳಿಗಗೆ ಓದಿನ ಬಗ್ಗೆ ಆಸಕ್ತಿ ಇರುವುದಿಲ್ಲ. ವಂಶಾದಾರಿತ ವ್ಯಾಪಾರದಲ್ಲಿ ಉತ್ತಮ ಆದಾಯ ಇರುತ್ತದೆ. ಆತ್ಮವಿಶ್ವಾಸದ ಕೊರತೆ ಕಂಡು ಬರದು. ಅನಿರೀಕ್ಷಿತ ವಿಚಾರಗಳಿಗಾಗಿ ಹಣ ಖರ್ಚು ಮಾಡುವಿರಿ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 11
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಬೂದು ಬಣ್ಣ
ಮೀನ
ಆತ್ಮವಿಶ್ವಾಸದಿಂದ ಮಾಡುವ ಕೆಲಸಗಳಲ್ಲಿ ಯಶಸ್ಸು ಇರುತ್ತದೆ. ಉದ್ಯೋಗದಲ್ಲಿ ನೀರಸ ವಾತಾವರಣವಿರುತ್ತದೆ. ಸ್ವಂತ ಬುದ್ಧಿಯಿಂದ ಕೆಲಸ ಕಾರ್ಯದಲ್ಲಿ ಮುಂದುವರಿಯುವಿರಿ. ವಿದ್ಯಾರ್ಥಿಗಳು ಮಾತಿನ ಮೇಲೆ ಹತೋಟಿ ಸಾಧಿಸಬೇಕು. ಸೋದರಿ ಕಷ್ಟಪಟ್ಟು ಮನೆ ಕಟ್ಟುತ್ತಾರೆ. ಹೊಸ ಕಾರ್ಯವನ್ನು ಆರಂಭಿಸುವ ಮನಸ್ಸಿರದು. ದುರಾಸೆ ತೊರೆದು ದೊರೆಯುವ ಅವಕಾಶವನ್ನು ಸದುಪಯೋಗಬಳಸಿಕೊಳ್ಳಲಿದ್ದೀರಿ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ 2
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಕೆಂಪು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).
