Tomorrow Horoscope: ಹಣದ ವಿಚಾರದಲ್ಲಿ ಭಿನ್ನಾಭಿಪ್ರಾಯ, ಕುಟುಂಬದಲ್ಲಿ ನಡೆಯಬೇಕಿದ್ದ ಶುಭಕಾರ್ಯ ಮುಂದೂಡಿಕೆ ; ನಾಳೆಯ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಹಣದ ವಿಚಾರದಲ್ಲಿ ಭಿನ್ನಾಭಿಪ್ರಾಯ, ಕುಟುಂಬದಲ್ಲಿ ನಡೆಯಬೇಕಿದ್ದ ಶುಭಕಾರ್ಯ ಮುಂದೂಡಿಕೆ ; ನಾಳೆಯ ದಿನ ಭವಿಷ್ಯ

Tomorrow Horoscope: ಹಣದ ವಿಚಾರದಲ್ಲಿ ಭಿನ್ನಾಭಿಪ್ರಾಯ, ಕುಟುಂಬದಲ್ಲಿ ನಡೆಯಬೇಕಿದ್ದ ಶುಭಕಾರ್ಯ ಮುಂದೂಡಿಕೆ ; ನಾಳೆಯ ದಿನ ಭವಿಷ್ಯ

13th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (13th April 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಶನಿವಾರ

ತಿಥಿ : ಪಂಚಮಿ 04.01 ರವರೆಗೂ ಇದ್ದು ನಂತರ ಷಷ್ಠಿ ಆರಂಭವಾಗುತ್ತದೆ.

ನಕ್ಷತ್ರ : ಮೃಗಶಿರ ನಕ್ಷತ್ರವು ರಾತ್ರಿ 04.37 ರವರೆಗೂ ಇದ್ದು ನಂತರ ಆರ್ದ್ರೆ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.08

ಸೂರ್ಯಾಸ್ತ: ಸಂಜೆ 06.31

ರಾಹುಕಾಲ: ಬೆಳಗ್ಗೆ 09.00 ರಿಂದ 10.30

ಮೇಷ

ಕುಟುಂಬದಲ್ಲಿ ಗೌರವವನ್ನು ಸಂಪಾದಿಸುವಿರಿ. ನಿಮ್ಮ ಆರೋಗ್ಯದ ಕಾಳಜಿ ಇರಲಿ. ಉದ್ಯೋಗದಲ್ಲಿನ ಅನಿರೀಕ್ಷತ ಬದಲಾವಣೆಗಳು ಶುಭಫಲಗಳನ್ನು ನೀಡುತ್ತವೆ. ವ್ಯಾಪಾರ ವ್ಯವಹಾರದ ಬಗ್ಗೆ ಆಸಕ್ತಿ ಇರುವುದಿಲ್ಲ. ಪ್ರಾಮಾಣಿಕ ಮನೋಭಾವನೆಯಿಂದ ಸಮಾಜದಲ್ಲಿ ಉನ್ನತ ಸ್ಥಾನವನ್ನು ಗಳಿಸುವಿರಿ. ಕುಟುಂಬದಲ್ಲಿ ನಡೆಯಬೇಕಿದ್ದ ವಿವಾಹ ಕಾರ್ಯವು ಮುಂದೆ ಹೋಗಲಿದೆ. ಸ್ನೇಹಿತರ ಆಗಮನ ಹೊಸ ಪರಿವರ್ತನೆಗೆ ಕಾರಣವಾಗಲಿದೆ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬೂದು ಬಣ್ಣ

ವೃಷಭ

ಉದ್ಯೋಗದಲ್ಲಿ ಆಶಾದಾಯಕ ಬದಲಾವಣೆ ಉಂಟಾಗಲಿದೆ. ಹೆಚ್ಚಿನ ಪ್ರಯತ್ನ ಪಟ್ಟಲ್ಲಿ ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಸೂಕ್ತ ಬದಲಾವಣೆ ಮಾಡುವಿರಿ. ಅತಿಯಾದ ಆತ್ಮವಿಶ್ವಾಸದಿಂದ ಸಂದಿಗ್ದತೆಗೆ ಒಳಗಾಗುವಿರಿ. ನರದ ದೋಷ ಇದ್ದಲ್ಲಿ ವೈದ್ಯರನ್ನು ಬೇಟಿ ಆಗುವುದು ಉತ್ತಮ. ಆಸ್ತಿಯ ವಿವಾದ ಕುಟುಂಬದ ನೆಮ್ಮದಿಗೆ ಧಕ್ಕೆ ತರುತ್ತದೆ. ತಂದೆ ಮತ್ತು ಸೋದರರ ನಡುವಿನ ಹಣದ ವಿಚಾರದ ಭಿನಾಭಿಪ್ರಾಯ ನೆಮ್ಮದಿ ಕೆಡಿಸುತ್ತದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 3

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಕಂದು ಬಣ್ಣ

ಮಿಥುನ

ಕುಟುಂಬದಲ್ಲಿ ಮಂಗಳ ಕಾರ್ಯವೊಂದು ನಡೆಯಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರವನ್ನು ಗಳಿಸಲು ಪ್ರಯತ್ನಿಸುವಿರಿ. ಕಠಿಣವಾದ ಕೆಲಸ ಕಾರ್ಯಗಳನ್ನು ಮಾಡಲು ಇಚ್ಚಿಸುವುದಿಲ್ಲ. ಕೆಲಸ ಕಾರ್ಯಗಳ ನಡುವೆ ವಿಶ್ರಾಂತಿ ಪಡೆಯುವಿರಿ. ಕೈ ಹಿಡಿದ ಕಾರ್ಯವನ್ನು ಪೂರ್ಣಗೊಳಿಸುವವರೆಗೂ ಹೊಸ ಕೆಲಸ ಆರಂಭಿಸುವುದಿಲ್ಲ. ಧಾರ್ಮಿಕ ವಿಧಿ ವಿಧಾನಗಳಲ್ಲಿ ಹೆಚ್ಚಿನ ಆಸಕ್ತಿ ಮೂಡುತ್ತದೆ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಪ್ಪು

ಕಟಕ

ಬುದ್ಧಿವಂತಿಕೆಯಿಂದ ನಿಮಗೆ ಅನುಕೂಲಕರವಾಗುವಂತಹ ಸನ್ನಿವೇಶಗಳನ್ನು ರೂಪಿಸುವಿರಿ. ಕುಟುಂಬದ ಹಿರಿಯರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ಮನೆಯನ್ನು ಅಲಂಕರಿಸಬೇಕಾದ ಸರಂಜಾಮಗಳಿಗೆ ಹೆಚ್ಚಿನ ಹಣ ಬೇಕಾಗಬಹುದು. ಹಣಕಾಸಿನ ಪರಿಸ್ಥಿತಿಯನ್ನು ಸರಿಪಡಿಸಲು ಬಿಡುವಿನ ವೇಳೆ ವ್ಯಾಪಾರವೊಂದನ್ನು ಆರಂಭಿಸುವಿರಿ. ಭವಿಷ್ಯದ ಚಿಂತನೆಯಿಂದ ಹಣದ ಯೋಜನೆಯನ್ನು ಆರಂಭಿಸುರಿ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕೆಂಪು

ಸಿಂಹ

ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ ಹೊಸ ಅವಕಾಶಗಳಿಗಾಗಿ ಕಾಯುವಿರಿ. ಕಾದು ನೋಡುವ ತಂತ್ರವೂ ಉತ್ತಮ ಫಲಗಳನ್ನು ನೀಡುತ್ತವೆ. ನಿಮ್ಮ ಮಕ್ಕಳ ಉದ್ಯೋಗದಲ್ಲಿ ಎದುರಾಗುವ ಬದಲಾವಣೆಗಳು ಅನುಕೂಲಕರವಾಗಿರುತ್ತದೆ. ನಿಮಗೆ ವಾಣಿಜ್ಯೋದ್ಯಮದಲ್ಲಿ ಅವಕಾಶ ದೊರೆಯುತ್ತದೆ. ಎದುರಾಗುವ ಕೆಲಸ ಕಾರ್ಯಗಳಲ್ಲಿ ನಿಶ್ಚಿತವಾಗಿ ಗೆಲ್ಲುವಿರಿ. ಆರಂಭಿಸಬೇಕಿದ್ದ ಉದ್ಯಮ ಹಣದ ಕೊರತೆ ಕಾರಣ ಮುಂದೂಡಲ್ಪಡುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಕನ್ಯಾ

ಮನಸ್ಸಿಗೆ ನೆಮ್ಮದಿ ಇರದು. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ಮನಸ್ಸು ಬದಲಾಯಿಸದೆ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಜೌಗು ಪ್ರದೇಶದಲ್ಲಿನ ಮನೆಯನ್ನು ಕೊಳ್ಳುವಿರಿ. ಯಾರೊಂದಿಗೂ ಮನಬಿಚ್ಚಿ ಮಾತನಾಡುವುದಿಲ್ಲ. ವಿಶೇಷ ವ್ಯಕ್ತಿ ಒಬ್ಬರ ಪರಿಚಯ ಹೊಸ ಚೈತನ್ಯವನ್ನು ಉಂಟುಮಾಡಲಿದೆ. ಹಣದ ಕೊರತೆ ಕಡಿಮೆ ಆಗಲಿದೆ. ದಂಪತಿಗಳಲ್ಲಿ ಅನ್ಯೋನ್ಯತೆ ಮೂಡಲಿದೆ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ : ಬಿಳಿ

ತುಲಾ

ಉತ್ತಮ ಕಾರ್ಯ ನಿರ್ವಹಣೆಯ ಬಗ್ಗೆ ಹಿರಿಯ ಅಧಿಕಾರಿಗಳ ಮೆಚ್ಚುಗೆ ದೊರೆಯುತ್ತದೆ. ಸ್ವಂತ ಕೆಲಸ ಕಾರ್ಯಗಳು ಸುಲಭಗತಿಯಲ್ಲಿ ಪೂರ್ಣಗೊಳ್ಳುತ್ತವೆ. ಮನಬಿಚ್ಚಿ ಕೇಳಿದರೆ ಹಣದ ಸಹಾಯ ದೊರೆಯುತ್ತದೆ. ಸೋದರ ಮತ್ತು ನಿಮ್ಮ ಪತ್ನಿಯ ನಡುವೆ ವಾದ ವಿವಾದಗಳು ಇರಲಿವೆ. ಆತ್ಮೀಯರ ಜೀವನವನ್ನು ರೂಪಿಸುವ ಯೋಜನೆಗಳನ್ನು ರೂಪಿಸುವಿರಿ. ಒತ್ತಡ ಉಂಟಾದರೂ ಮಾನಸಿಕ ಸ್ಥಿಮಿತ ಕಳೆದುಕೊಳ್ಳದಿರಿ.

ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಖಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಬೂದು

ವೃಶ್ಚಿಕ

ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ. ಬೇಡದ ವಿಚಾರಗಳಿಗೆ ಹಣ ಖರ್ಚು ಮಾಡುವಿರಿ. ದಿನಾಂತ್ಯಕ್ಕೆ ಹಣದ ಕೊರತೆ ಅನುಭವಿಸುವಿರಿ. ಸಹನೆ ಕಳೆದುಕೊಂಡು ದುಡುಕುತನದಿಂದ ಮಾತನಾಡುವಿರಿ. ಹಣಕಾಸಿನ ವ್ಯವಹಾರದಲ್ಲಿ ಕುಟುಂಬದವರಿಂದಲೇ ವಿರೋಧ ಎದುರಿಸುವಿರಿ. ಕಾನೂನಿಗೆ ಸಂಬಂಧಿಸಿದ ವಿಚಾರದಲ್ಲಿ ಜಯ ಲಬಿಸುತ್ತದೆ. ಉಸಿರಿಗೆ ಸಂಬಂಧಿಸಿದ ತೊಂದರೆ ಇರುತ್ತದೆ.

ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಆಕಾಶ ನೀಲಿ

ಧನಸ್ಸು

ಮನೆ ಕೊಳ್ಳಲು ಸೋದರ ಮಾವ ಹಣದ ಸಹಾಯ ಮಾಡುತ್ತಾರೆ. ವಾಹನ ಕೊಳ್ಳುವ ವ್ಯವಹಾರದಲ್ಲಿ ಸೋದರಿಯು ಸಹಾಯ ನೀಡುತ್ತಾರೆ. ಕೃಷಿಕರಾದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಸಾರ್ವಜನಿಕರಿಗಾಗಿ ನೀರಿನ ವ್ಯವಸ್ಥೆ ಮಾಡುವಿರಿ. ಇಚ್ಚೆ ಇದ್ದರೆ ರಾಜಕೀಯ ಪ್ರವೇಶಿಸಲು ಇದು ಸಕಾಲ. ಉತ್ತಮ ಆದಾಯ ಇರುತ್ತದೆ. ನಿಮ್ಮಲ್ಲಿನ ಅತಿಯಾದ ಆತ್ಮವಿಶ್ವಾಸದಿಂದ ತೊಂದರೆಗೆ ಒಳಗಾಗುವಿರಿ.  

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು

ಮಕರ

ಉದ್ಯೋಗದಲ್ಲಿ ನಿರೀಕ್ಷಿಸಿದಂತೆ ಬದಲಾವಣೆ ಉಂಟಾಗದು. ಪಾಲುದಾರಿಕೆ ವ್ಯಾಪಾರದಲ್ಲಿ ಉತ್ತಮ ವರಮಾನ ಇರುತ್ತದೆ. ಹಣಕಾಸಿನ ನಿರೀಕ್ಷೆ ಹುಸಿ ಆಗದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯ ಗಳಿಸುವರು. ಹೊಸ ಕಾರ್ಯ ಆರಂಭಿಸಿದಲ್ಲಿ ಉತ್ತಮ ಆರಂಭ ದೊರೆಯುತ್ತದೆ. ಹಣಕಾಸಿನ ವಿವಾದದಿಂದ ಪಾರಾಗುವಿರಿ. ಉದ್ಯೋಗದಲ್ಲಿ ಬಡ್ತಿ ದೊರೆತು ದೂರದ ಸ್ಥಳಕ್ಕೆ ವರ್ಗವಾಗುತ್ತದೆ. ವಾಯುದೋಷ ನಿಮ್ಮನ್ನು ಕಾಡುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕೇಸರಿ

ಕುಂಭ

ಇದರಿಂದಾಗಿ ಆದಾಯದಲ್ಲಿ ಏರಿಕೆ ಉಂಟಾಗುತ್ತದೆ. ಯಾರ ಸಲಹೆ ಸೂಚನೆಯನ್ನೂ ನೀವು ಪಾಲಿಸುವುದಿಲ್ಲ. ನಿಮ್ಮ ರೀತಿ ನೀತಿಗಳನ್ನು ಒಪ್ಪುವಂತೆ ಅನ್ಯರ ಮೇಲೆ ಒತ್ತಡ ಹಾಕುವಿರಿ. ದಿನ ಪೂರ್ತಿ ವಿವಾದಗಳಲ್ಲಿಯೇ ಕಳೆಯುವಿರಿ. ನಿಮ್ಮ ಆತ್ಮೀಯರೊಬ್ಬರು ಪರೋಕ್ಷವಾಗಿ ತಪ್ಪುಗಳನ್ನು ತಿದ್ದುತ್ತಾರೆ. ಕೆಲಸ ಕಾರ್ಯಗಳ ಒತ್ತಡ ನಿಮ್ಮನ್ನು ಕಾಡುತ್ತದೆ. ಹಿರಿಯರ ಕೆಲಸ ಅಥವಾ ವ್ಯಾಪಾರ ವ್ಯವಹಾರವನ್ನು ಆರಂಭಿಸುವಿರಿ. ವಂಶದ ಆಸ್ತಿಯ ಮಾರಾಟದಲ್ಲಿ ಬರುವ ಆದಾಯದಲ್ಲಿ ಮತ್ತೊಬ್ಬರಿಗೆ ಪಾಲು ನೀಡಬೇಕಾಗುತ್ತದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಮೀನ

ಎದುರಾಗುವ ಅಡ್ಡಿ ಆತಂಕಗಳನ್ನು ಸಮರ್ಥವಾಗಿ ಎದುರಿಸುವಿರಿ. ಅವಶ್ಯಕತೆ ಇದ್ದಾಗ ತಂದೆ ಅಥವ ತಾಯಿಯ ಸಹಾಯ ನಿಮಗೆ ದೊರೆಯಲಿದೆ. ಸಂದರ್ಭಕ್ಕೆ ಅನುಗುಣವಾಗಿ ವರ್ತಿಸಬಲ್ಲ ನೀವು ಎಲ್ಲರ ಮನ ಗೆಲ್ಲುವಿರಿ. ಸಮಾಜದಲ್ಲಿಉನ್ನತ ಸ್ಥಾನ ಮಾನ ದೊರೆಯುತ್ತದೆ. ಪುರಾತನ ಪದ್ಧತಿಗಳಾದ ಆಯುರ್ವೇದ, ಯೋಗದ ಅಧ್ಯಯನದಲ್ಲಿ ಸಾಧನೆ ಮಾಡುವಿರಿ, ಹಣದ ಕೊರತೆ ಇರುತ್ತದೆ. ಆದರೂ ಬೇರೆಯವರಿಂದ ಹಣವನ್ನು ಸಾಲ ಪಡೆಯುವುದಿಲ್ಲ.  

ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ಬಿಳಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.