Tomorrow Horoscope: ಈ ರಾಶಿಯವರು ಇರುವೆಗಳಿಗೆ ಆಹಾರ ಧಾನ್ಯ ಹಾಕಿ ದಿನದ ಕೆಲಸವನ್ನು ಆರಂಭಿಸಿದರೆ ಶುಭ; ನಾಳೆಯ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಈ ರಾಶಿಯವರು ಇರುವೆಗಳಿಗೆ ಆಹಾರ ಧಾನ್ಯ ಹಾಕಿ ದಿನದ ಕೆಲಸವನ್ನು ಆರಂಭಿಸಿದರೆ ಶುಭ; ನಾಳೆಯ ದಿನ ಭವಿಷ್ಯ

Tomorrow Horoscope: ಈ ರಾಶಿಯವರು ಇರುವೆಗಳಿಗೆ ಆಹಾರ ಧಾನ್ಯ ಹಾಕಿ ದಿನದ ಕೆಲಸವನ್ನು ಆರಂಭಿಸಿದರೆ ಶುಭ; ನಾಳೆಯ ದಿನ ಭವಿಷ್ಯ

13th March 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (13th March 2024 Horoscope).

ನಾಳೆಯ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ: ಉತ್ತರಾಯಣ-ಶಿಶಿರ ಋತು-ಫಾಲ್ಗುಣ ಮಾಸ-ಶುಕ್ಲಪಕ್ಷ-ಬುಧವಾರ

ತಿಥಿ: ತದಿಗೆ ಬೆಳಗ್ಗೆ 08.25 ವರೆಗೂ ಇರುತ್ತದೆ ನಂತರ ಉಪರಿ ಚೌತಿ ಇರುತ್ತದೆ.

ನಕ್ಷತ್ರ: ಅಶ್ವಿನಿ ನಕ್ಷತ್ರವು ರಾ.11.06 ರವರೆಗೆ ಇರುತ್ತದೆ ಆನಂತರ ಭರಣಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ06.29

ಸೂರ್ಯಾಸ್ತ: ಸಂಜೆ 06.29

ರಾಹುಕಾಲ: ಮಧ್ಯಾಹ್ನ 12.00 ರಿಂದ 01.30

ಮೇಷ

ಸಂಪಾದಿಸಿದ ಹಣವನ್ನು ಸುಲಭವಾಗಿ ಖರ್ಚು ಮಾಡುವುದಿಲ್ಲ. ಬಹು ಹಿಂದಿನ ದಿನದ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಿರಿ. ಉದ್ಯೋಗದಲ್ಲಿ ನಿರೀಕ್ಷಿಸಿದ ಅನುಕೂಲತೆಗಳು ದೊರೆಯಲಿವೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ಮನದ ಆತಂಕ ಮರೆಯಾಗಿ ಉತ್ತಮ ಆರೋಗ್ಯ ದೊರೆಯಲಿದೆ. ಸ್ವಂತ ಕೆಲಸ ಕಾರ್ಯಗಳಿಗೆ ಮೊದಲ ಆದ್ಯತೆ ನೀಡುವಿರಿ. ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಕುಟುಂಬದ ವಾತಾವರಣ ಎಲ್ಲರಿಗೂ ಸ್ಪೂರ್ತಿದಾಯಕವಾಗಿರುತ್ತದೆ.

ಪರಿಹಾರ : ಕಪ್ಪುಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಉತ್ತರ

ಬಣ್ಣ: ಕಿತ್ತಳೆ

ವೃಷಭ

ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ. ಉದ್ಯೋಗದಲ್ಲಿ ಪ್ರತಿ ವಿಚಾರವನ್ನು ಹಾಸ್ಯದ ದೃಷ್ಟಿಕೋನದಿಂದ ನೋಡಬೇಡಿ. ಅನಾವಶ್ಯಕ ವಾದ ವಿವಾದಗಳು ಎದುರಾಗಲಿವೆ. ಹೊಸ ಉದ್ಯೋಗಕ್ಕಾಗಿ ಆತ್ಮೀಯರ ಸಹಾಯ ಬಯಸುವಿರಿ. ನಿಮ್ಮ ಆಕರ್ಷಕ ಮಾತು ಎಲ್ಲರ ಗಮನ ಸೆಳೆಯುತ್ತದೆ. ಎಲ್ಲರ ಸಹಾಯವು ನಿಮಗಿರುವ ಕಾರಣ ಕುಟುಂಬದಲ್ಲೂ ನೆಮ್ಮದಿ ಇರುತ್ತದೆ. ಸಮಯ ಪ್ರಜ್ಞೆ ಮತ್ತು ಹಾಸ್ಯದ ಮನೋಭಾವ ಉತ್ತಮ ಬಾಂಧವ್ಯಕ್ಕೆ ಕಾರಣವಾಗುತ್ತದೆ.

ಪರಿಹಾರ : ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ಹಳದಿ

ಮಿಥುನ

ನಿಮ್ಮ ಕೆಲಸ ಕಾರ್ಯಗಳಿಗೆ ಬಾಳ ಸಂಗಾತಿಯಿಂದ ಆಕ್ಷೇಪ ವ್ಯಕ್ತವಾಗಬಹುದು. ಯಾವುದೇ ಕೆಲಸವನ್ನು ಸುಲಭವಾಗಿ ಮಾಡಲಾರಿರಿ. ಉದ್ಯೋಗದಲ್ಲಿ ಉಂಟಾಗುವ ಅನಿರೀಕ್ಷಿತ ತಿರುವವುಗಳು ನಿಮ್ಮ ಪರವಾಗಿರುತ್ತದೆ. ನಿಮ್ಮಲ್ಲಿರುವ ವಿಶೇಷ ಪ್ರತಿಭೆಯು ಸಮಾಜದಲ್ಲಿ ವಿಶಿಷ್ಟ ಸ್ಥಾನ ತಂದು ನೀಡುತ್ತದೆ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕಾಗಿ ಹೊಸ ಯೋಜನೆಯನ್ನು ರೂಪಿಸುತ್ತಾರೆ. ಆಪತ್ಕಾಲದಲ್ಲಿ ಇದ್ದವರಿಗೆ ಹಣ ಸಹಾಯ ಮಾಡುವಿರಿ.

ಪರಿಹಾರ : ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಸಿರು

ಕಟಕ

ಕೇವಲ ಕುಟುಂಬವಲ್ಲದೆ ಉದ್ಯೋಗದ ನಿರ್ವಹಣೆಯ ಜವಾಬ್ದಾರಿಯನ್ನು ಒಪ್ಪಿಕೊಳ್ಳುವಿರಿ. ಬೇರೆಯವರ ಕೆಲಸ ಕಾರ್ಯಗಳನ್ನು ಅನಾವಶ್ಯಕವಾಗಿ ಟೀಕಿಸುವಿರಿ. ಸ್ನೇಹ ಸಂಬಂಧವನ್ನು ಉಳಿಸಿಕೊಳ್ಳಲು ಪ್ರಯತ್ನಿಸುವಿರಿ. ದಂಪತಿ ನಡುವೆ ಉತ್ತಮ ಹೊಂದಾಣಿಕೆ ಇರಲಿದೆ. ಕಷ್ಟಪಟ್ಟು ದುಡಿದ ಹಣವನ್ನು ಕುಟುಂಬದ ಸದಸ್ಯರ ಮನರಂಜನೆಗಾಗಿ ಖರ್ಚು ಮಾಡುವಿರಿ. ಕುಟುಂಬದಲ್ಲಿ ಸಂತೋಷದ ಸನ್ನಿವೇಶವು ಎದುರಾಗುತ್ತದೆ. ಅನಾವಶ್ಯಕ ಚರ್ಚು ವೆಚ್ಚಗಳನ್ನು ಕಡಿತಗೊಳಿಸುವಿರಿ. ಕುಟುಂಬದಲ್ಲಿರುತ್ತದೆ ಒಮ್ಮತವಿರುತ್ತದೆ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ಸಿಂಹ

ಬಿಡುವಿಲ್ಲದ ಕೆಲಸದ ಕಾರಣ ದಾಂಪತ್ಯದಲ್ಲಿ ಮನಸ್ತಾಪ ಇರಲಿದೆ. ಆತ್ಮೀಯರೊಂದಿಗೆ ವಿಶ್ವಾಸದಿಂದ ಪಾಲುಗಾರಿಕೆಯ ವ್ಯಾಪಾರವನ್ನು ಆರಂಭಿಸುವಿರಿ. ಕುಟುಂಬದ ಸದಸ್ಯರ ಸುಖ ಜೀವನಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗುವಿರಿ. ಸಾಲದ ವ್ಯವಹಾರದಿಂದ ತೊಂದರೆಗೆ ಸಿಲುಕುವಿರಿ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ : ಎಲೆ ಹಸಿರು

ಕನ್ಯಾ

ಅತಿಯಾದ ಚಿಂತೆ ಒಳ್ಳೆಯದಲ್ಲ. ಆತ್ಮೀಯರೊಬ್ಬರಿಂದ ನಿರಾಸೆ ಉಂಟಾಗಬಹುದು. ಮನಸ್ಸಿಲ್ಲದೆ ಹೋದರೂ ಕೆಲವರಿಗೆ ಹಣದ ಸಹಾಯ ಮಾಡುವಿರಿ. ಉತ್ತಮ ಅವಕಾಶ ದೊರೆಯುವ ಕಾರಣ ಉದ್ಯೋಗ ಬದಲಿಸುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಇದ್ದ ಬಿಕ್ಕಟ್ಟು ಪರಿಹಾರಗೊಳ್ಳುತ್ತದೆ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೇಸರಿ

ತುಲಾ

ದಾಂಪತ್ಯ ಜೀವನದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಬೇಸರದಿಂದ ಹೊರಬಂದು ಕಿರು ಪ್ರವಾಸ ಕೈಗೊಳ್ಳುವಿರಿ. ಉದ್ಯೋಗದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬರಲಿವೆ. ಕುಟುಂಬದಲ್ಲಿ ಒಬ್ಬರನ್ನೊಬ್ಬರು ಅರಿತು ಬಾಳುವಿರಿ. ಕೇವಲ ಲಾಭ ದೊರೆಯುವ ಕೆಲಸ ಕಾರ್ಯಗಳನ್ನು ಮಾಡಲಿಚ್ಚಿಸುವಿರಿ. ಹಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವಿರಿ. ಸಂಬಂಧಿಕರ ಜೊತೆಯಲ್ಲಿ ವಾದ ವಿವಾದ ಇರಲಿವೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಂದು

ವೃಶ್ಚಿಕ

ಹಣ ಗಳಿಸುವುದರ ಜೊತೆ ಉಳಿಸುವ ತೀರ್ಮಾನಕ್ಕೆ ಬರುವಿರಿ. ಹೆಚ್ಚಿನ ಖರ್ಚನ್ನು ಭರಿಸಲು ಸ್ವಂತ ವ್ಯಾಪಾರ ಆರಂಭಿಸುವಿರಿ. ಭವಿಷ್ಯದ ಜೀವನಕ್ಕಾಗಿ ಹಣದ ಉಳಿತಾಯ ಮಾಡುವಿರಿ. ನಿಮ್ಮ ಕೆಲಸ ಕಾರ್ಯಗಳಿಗೆ ಎಲ್ಲರಿಂದ ಮೆಚ್ಚುಗೆ ಗಳಿಸುವಿರಿ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಕೋಪ ತೊರೆದು ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ವ್ಯವಹರಿಸುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು

ಧನಸ್ಸು

ಕೂಡಿಟ್ಟ ಹಣವನ್ನು ಖರ್ಚು ಮಾಡುವ ಸಂಭವವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಆಸಕ್ತಿ ಇರುವುದಿಲ್ಲ. ಕೊಂಚವೂ ಯೋಚಿಸದೆ ಯಾವುದೇ ಕೆಲಸ ಕಾರ್ಯಗಳನ್ನು ಆರಂಭಿಸದಿರಿ. ಬೇರೆಯವರ ವಾದ ವಿವಾದಗಳಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ. ನಿಮ್ಮ ಪ್ರಯತ್ನಕ್ಕೆ ತಕ್ಕಂತ ಶುಭ ಫಲಗಳು ದೊರೆಯುತ್ತವೆ.

ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ

ಮಕರ

ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳು ಉಂಟಾಗಲಿವೆ. ತಂದೆ ಮಾಡುತ್ತಿದ್ದ ಉಪಕಸುಬೊಂದನ್ನು ಆಶ್ರಯಿಸುವಿರಿ. ಮಕ್ಕಳು ಕುಟುಂಬದ ಹಿರಿಯರ ನಿರೀಕ್ಷೆಯಂತೆ ನಡೆದುಕೊಳ್ಳುತ್ತಾರೆ. ಅವಿರತ ಶ್ರಮದ ಕೆಲಸ ಮನಸ್ಸಿಗೆ ಬೇಸರವನ್ನು ಉಂಟು ಮಾಡುತ್ತದೆ. ವಿಶ್ರಾಂತಿ ಮತ್ತು ಏಕಾಂತವನ್ನು ಬಯಸಿ ದೂರದ ಊರಿಗೆ ತೆರಳುವಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ಅನಿವಾರ್ಯ ಕಾರಣಗಳಿಗಾಗಿ ವಾಸಸ್ಥಳ ಬದಲಾಯಿಸಬೇಕಾಗುತ್ತದೆ.

ಪರಿಹಾರ : ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ

ಕುಂಭ

ದಾಂಪತ್ಯ ಜೀವನದಲ್ಲಿ ಪರಸ್ಪರ ಪ್ರೀತಿ ಮತ್ತು ನಂಬಿಕೆ ಇರಲಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಎಲ್ಲರೊಂದಿಗೆ ತಾಳ್ಮೆಯಿಂದ ವರ್ತಿಸುವಿರಿ. ಕುಟುಂಬದ ಅಗತ್ಯತೆಗಳನ್ನು ಪೂರೈಸಲು ಉತ್ಸುಕರಾಗುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆಗಳು ಕಂಡು ಬರುವುದಿಲ್ಲ.ಹೆಚ್ಚು ಮಾತನಾಡದೆ ಕೆಲಸ ಕಾರ್ಯಗಳಲ್ಲಿ ನಿರತರಾಗುವಿರಿ. ಯಶಸ್ಸು ದೊರೆಯುವವರೆಗೂ ಪ್ರಯತ್ನ ಮುಂದುವರಿಸುವಿರಿ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಹಸಿರು

ಮೀನ

ಆದಾಯಕ್ಕೆ ತಕ್ಕ ಖರ್ಚು ವೆಚ್ಚಗಳು ಬರಲಿವೆ. ಉದ್ಯೋಗ ಬದಲಿಸುವ ಸಾಧ್ಯತೆಗಳಿವೆ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಲಿದೆ. ದಂಪತಿ ನಡುವೆ ಇದ್ದ ಮನಸ್ತಾಪ ಕೊನೆಗೊಳ್ಳುವುದು. ವಿದ್ಯಾರ್ಥಿಗಳ ಫಲಿತಾಂಶವು ತೃಪ್ತಿದಾಯಕವಾಗಿರುತ್ತದೆ. ನೀರಿರುವ ಪ್ರದೇಶಗಳಿಗೆ ಪ್ರವಾಸ ಹೋದಲ್ಲಿ ಎಚ್ಚರಿಕೆಯಿಂದ ಇರುವುದು ಕ್ಷೇಮ. ಆರೋಗ್ಯದಲ್ಲಿ ಏರಿಳಿತ ಇರಲಿದೆ.

ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ : ನೀಲಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.