Tomorrow Horoscope: ಸೋದರಿ ಜೊತೆಗಿನ ಮನಸ್ತಾಪ ಕೊನೆಯಾಗುವುದು, ಹೊಸ ಒಡವೆ ವಸ್ತ್ರಗಳಿಗೆ ಹೆಚ್ಚಿನ ಹಣ ಖರ್ಚು ; ನಾಳೆಯ ದಿನ ಭವಿಷ್ಯ
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಸೋದರಿ ಜೊತೆಗಿನ ಮನಸ್ತಾಪ ಕೊನೆಯಾಗುವುದು, ಹೊಸ ಒಡವೆ ವಸ್ತ್ರಗಳಿಗೆ ಹೆಚ್ಚಿನ ಹಣ ಖರ್ಚು ; ನಾಳೆಯ ದಿನ ಭವಿಷ್ಯ

Tomorrow Horoscope: ಸೋದರಿ ಜೊತೆಗಿನ ಮನಸ್ತಾಪ ಕೊನೆಯಾಗುವುದು, ಹೊಸ ಒಡವೆ ವಸ್ತ್ರಗಳಿಗೆ ಹೆಚ್ಚಿನ ಹಣ ಖರ್ಚು ; ನಾಳೆಯ ದಿನ ಭವಿಷ್ಯ

18th April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ಏಪ್ರಿಲ್‌ 18ರ ರಾಶಿಫಲ
ಏಪ್ರಿಲ್‌ 18ರ ರಾಶಿಫಲ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (18th April 2024 Horoscope).

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಗುರುವಾರ

ತಿಥಿ : ದಶಮಿ ಸಂಜೆ 06.37 ರವರೆಗೂ ಇದ್ದು ನಂತರ ಏಕಾದಶಿ ಆರಂಭವಾಗುತ್ತದೆ.

ನಕ್ಷತ್ರ : ಆಶ್ಲೇಷ ನಕ್ಷತ್ರವು ಬೆಳಗ್ಗೆ 09.21 ರವರೆಗೂ ಇದ್ದು ನಂತರ ಮಖೆ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 06.06

ಸೂರ್ಯಾಸ್ತ: ಸಂಜೆ 06.31

ರಾಹುಕಾಲ : 01.30 ರಿಂದ ಹ.03.00

ರಾಶಿಫಲ

ಮೇಷ

ಸಹನೆಯಿಂದ ಇರಬೇಕೆಂದು ಬಯಸಿದರೂ ಪರಿಸ್ಥಿತಿಯ ಒತ್ತಡದಿಂದ ಕೋಪದಿಂದ ವರ್ತಿಸುವಿರಿ. ಅನಾವಶ್ಯಕ ಖರ್ಚು ವೆಚ್ಚಗಳು ಬೇಸರಕ್ಕೆ ಕಾರಣವಾಗುತ್ತದೆ. ನೆಮ್ಮದಿಗಾಗಿ ಸಂಗಾತಿ ಮತ್ತು ಮಕ್ಕಳೊಂದಿಗೆ ಧಾರ್ಮಿಕ ಕೇಂದ್ರಕ್ಕೆ ತೆರಳುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಮಟ್ಟದ ಆದಾಯ ದೊರೆಯುತ್ತದೆ. ಸ್ಚಂತ ಇಚ್ಚೆಯಿಂದ ಮಕ್ಕಳಿಗೆ ಚಿನ್ನದ ಒಡವೆಯನ್ನು ಖರೀದಿ ಮಾಡುವಿರಿ.

ಪರಿಹಾರ : ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಹಸಿರು ಬಣ್ಣ

ವೃಷಭ

ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಬಂಡವಾಳ ಹೂಡಲು ಸಮಯವಲ್ಲ. ಹಣವಿದ್ದರೂ ಸಾಧಾರಣ ವ್ಯಕ್ತಿಯಂತೆ ಜೀವನ ನಡೆಸುವ ಆಸೆಇರುತ್ತದೆ. ಕುಟುಂಬದ ಸದಸ್ಯರ ಸಾಮರಸ್ಯ ಬೆಳೆಸುವಿರಿ. ಅತಿಯಾದ ಆಹಾರ ಸೇವನೆಯಿಂದ ಅಜೀರ್ಣದ ತೊಂದರೆ ಉಂಟಾಗಲಿದೆ. ಸರಿಯಾದ ಯೋಜನೆ ಇಲ್ಲದಿದ್ದರೆ ಖರ್ಚು ವೆಚ್ಚಗಳು ಕೈಮೀರುತ್ತವೆ. ಗೃಹಾಲಂಕಾರಕ್ಕೆ ಬೇಕಾದ ಪದಾರ್ಥಗಳನ್ನು ಕೊಳ್ಳುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ನೀಲಿ ಬಣ್ಣ

ಮಿಥುನ

ಸ್ನೇಹಿತರೊಂದಿಗೆ ಕಿರು ಪ್ರವಾಸ ಕೈಗೊಳ್ಳುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯ ಹೆಚ್ಚಲಿದೆ. ಬಂಧು-ಬಳಗದವರ ಆಗಮದಿಂದ ಖುಷಿಯಾಗುವಿರಿ. ದಿನಾಂತ್ಯಕ್ಕೆ ಮುಖ್ಯ ಕೆಲಸವನ್ನು ಮಾಡಲೇಬೇಕಾಗಿ ಬರುತ್ತದೆ. ದೇಹಾಲಸ್ಯವು ನಿಮ್ಮನ್ನು ಬಾಧಿಸುತ್ತದೆ. ಎಲ್ಲರ ಜೊತೆ ಸಂತಸದಿಂದ ಬಾಳುವಿರಿ. ಹೊಸ ಒಡವೆ ವಸ್ತುಗಳಿಗೆ ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಅಶಕ್ತರಿಗೆ ಹೊಸ ಬಟ್ಟೆ ಮತ್ತು ಆಹಾರದ ವ್ಯವಸ್ಥೆ ಮಾಡುವಿರಿ.

ಪರಿಹಾರ : ತಾಯಿಯವರ ಆಶೀರ್ವಾದ ಪಡೆದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನೇರಳೆ ಬಣ್ಣ

ಕಟಕ

ಅನಿರೀಕ್ಷಿತ ಖರ್ಚು ವೆಚ್ಚಗಳಿಂದ ಬೇಸರಕ್ಕೆ ಒಳಗಾಗುವಿರಿ. ಆಕಸ್ಮಿಕವಾಗಿ ಬರುವ ಸೋದರಿ ಅಥವ ಅವರ ಮಕ್ಕಳು ಸಂತಸವನ್ನು ಉಂಟು ಮಾಡುತ್ತಾರೆ. ದಿನಾಂತ್ಯಕ್ಕೆ ಕುಟುಂಬದ ಸದಸ್ಯರ ಜೊತೆಯಲ್ಲಿ ಮನರಂಜನಾ ಸ್ಥಳಕ್ಕೆ ಭೇಟಿ ನೀಡುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಯಾವುದೇ ಹಿನ್ನಡೆ ಲಭಿಸದು. ಸ್ವಂತ ಶಾಲಾ ಕಾಲೇಜುಗಳನ್ನು ನಡೆಸುವವರಿಗೆ ಹೆಚ್ಚಿನ ಕೆಲಸ ಕಾರ್ಯಗಳಿರುತ್ತವೆ.

ಪರಿಹಾರ : ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಸಿಂಹ

ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಕುಟುಂಬದ ಕೆಲಸ ಕಾರ್ಯಗಳಲ್ಲಿ ಶುಭಫಲಗಳನ್ನು ಪಡೆಯುವಿರಿ. ಕುಟುಂಬದಲ್ಲಿ ಶಾಂತಿ ನೆಮ್ಮದಿ ಇರುತ್ತದೆ. ಮಕ್ಕಳ ಜೊತೆಯಲ್ಲಿ ಸಂತೋಷದಿಂದ ವೇಳೆ ಕಳಿಯುವಿರಿ. ಸಂಬಂಧಿಕರಿಂದ ಮಕ್ಕಳಿಗೆ ವಿಶೇಷ ಉಡುಗೊರೆ ದೊರೆಯಲಿದೆ. ಗೃಹಬಳಕೆಯ ಪದಾರ್ಥಗಳ ವ್ಯಾಪಾರದಲ್ಲಿ ಹೇರಳ ಸಂಪಾದನೆ ಇರುತ್ತದೆ.

ಪರಿಹಾರ : ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು :ಪೂರ್ವ

ಅದೃಷ್ಟದ ಬಣ್ಣ : ಬಿಳಿ ಬಣ್ಣ

ಕನ್ಯಾ

ಹಣಕಾಸಿನ ಕೊರತೆ ಕಂಡುಬರುತ್ತದೆ. ವಾಹನಗಳ ಮಾರಾಟದಲ್ಲಿ ಲಾಭ ಗಳಿಸುವಿರಿ. ಹಣಕಾಸಿನ ಸಂಸ್ಥೆಯಿಂದ ಹಣದ ಸಹಾಯ ದೊರೆಯುತ್ತದೆ. ಸ್ವಂತ ಉದ್ಧಿಮೆ ಇದ್ದಲ್ಲಿ ಉದ್ಯೋಗಸ್ಥರಿಗೆ ವಿಶೇಷವಾದ ಸೌಲಭ್ಯ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಹಳೆ ಸ್ನೇಹಿತರ ಭೇಟಿಯ ಅವಕಾಶ ಲಭಿಸುತ್ತದೆ. ಸಂಬಂಧಿಯೊಬ್ಬರ ನಡುವಿನ ಹಣಕಾಸಿನ ವಿವಾದವೊಂದು ಸುಖ್ಯಾಂತ್ಯಗೊಳ್ಳುತ್ತವೆ. ಒಂದಕ್ಕಿಂತಲೂ ಹೆಚ್ಚು ಆದಾಯ ಇರುತ್ತದೆ.

ಪರಿಹಾರ : ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ಬೂದು ಬಣ್ಣ

ತುಲಾ

ಮಕ್ಕಳ ವಿದ್ಯಾಭ್ಯಾಸದ ಸಲುವಾಗಿ ಅನಿವಾರ್ಯವಾಗಿ ಪರಸ್ಥಳಕ್ಕೆ ತೆರಳುವಿರಿ. ಹಣಕಾಸಿನ ವಿಚಾರದಲ್ಲಿ ದುಡುಕಿನ ನಿರ್ಧಾರವನ್ನು ತಗೆದುಕೊಳ್ಳದಿರಿ. ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ವ್ಯವಹಾರದಲ್ಲಿ ಹೆಚ್ಚಿನ ಹಣ ಗಳಿಸುವಿರಿ. ವಿದ್ಯಾರ್ಜನೆಯ ನಡುವೆ ಮನರಂಜನೆಯತ್ತ ವಾಲುವಿರಿ. ತಾಯಿಯವರ ಜೊತೆಗೂಡಿ ಹೊಸ ವ್ಯಾಪಾರ ಆರಂಭಿಸುವ ಸೂಚನೆಗಳಿವೆ. .

ಪರಿಹಾರ : ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ: ಕಂದು

ವೃಶ್ಚಿಕ

ಅಧಿಕಾರಿಗಳಾಗಿದ್ದಲ್ಲಿ ಉದ್ಯೋಗದಲ್ಲಿ ಹೆಚ್ಚಿದ ಜವಾಬ್ದಾರಿ ನಿಮ್ಮದಾಗಲಿದೆ. ವಿದೇಶದಲ್ಲಿ ಉದ್ಯೋಗಕ್ಕೆ ದೊರೆಯುತ್ತದೆ. ಸರ್ಕಾರದ ಅದೀನದ ಸಂಘ ಸಂಸ್ಥೆಗಳ ನಿರ್ವಹಣೆ ಮಾಡುವಿರಿ. ಸಮಾಜದಲ್ಲಿ ಗೌರವ ಪಡೆಯುವಿರಿ. ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಲಿದ್ದಾರೆ. ಕೊಟ್ಟ ಮಾತಿನ ಅನುಗುಣವಾಗಿ ಸಾಮಾಜಿಕ ಕೆಲಸಗಳ ಮಾಡಬೇಕಾಗುತ್ತದೆ. ದಿನಾಂತ್ಯಕ್ಕೆ ಪೂಜಾಕಾರ್ಯದಲ್ಲಿ ಪಾಲ್ಗೊಳ್ಳುವಿರಿ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಧನಸ್ಸು

ಕುಟುಂಬದ ಸದಸ್ಯರ ಜೊತೆಯಲ್ಲಿ ಸಂತೋಷದ ಕ್ಷಣವನ್ನು ಅನುಭವಿಸುವಿರಿ. ಉದ್ಯೋಗದಲ್ಲಿ ಆತಂಕದ ಕ್ಷಣಗಳು ಎದುರಾಗಲಿದೆ. ಬುದ್ಧಿವಂತಿಕೆಯಿಂದ ಎದುರಾಗುವ ಸಮಸ್ಯೆಗಳಿಂದ ಪಾರಾಗುವಿರಿ. ಸರಳವಾದ ಜೀವನ ಇಷ್ಟ ಪಡುವುದಿಲ್ಲ. ಅನಿರೀಕ್ಷಿತವಾಗಿ ಅಧಿಕಾರ ದೊರೆಯುತ್ತದೆ. ವಂಶದ ಆಸ್ತಿಯಲ್ಲಿ ನ್ಯಾಯಯುತ ಪಾಲು ದೊರೆಯುತ್ತದೆ. ಅವಿವಾಹಿತರಿಗೆ ವಿವಾಹದ ಮಾತುಕತೆ ನಡೆಯುತ್ತದೆ. ವಿದ್ಯಾರ್ಥಿಗಳು ಆಟ ಮನರಂಜನೆಯಲ್ಲಿ ತೊಡಗುತ್ತಾರೆ. ವ್ಯಾಸಂಗದಲ್ಲಿ ನಿರೀಕ್ಷಿತ ಗುರಿ ತಲುಪುತ್ತಾರೆ. .

ಪರಿಹಾರ : ಇರುವೆಗಳಿಗೆ ಆಹಾರ ಧಾನ್ಯ ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಕಿತ್ತಳೆ

ಮಕರ

ಪಾಲುದಾರಿಕೆ ವ್ಯಾಪಾರದಲ್ಲಿ ಹೆಚ್ಚಿನ ಲಾಭವಿರುತ್ತದೆ. ವಿದ್ಯಾರ್ಥಿಗಳು ಮನರಂಜನೆ ಮತ್ತು ಕ್ರೀಡಾಕೂಟಗಳಲ್ಲಿ ಕಾಲ ಕಳೆಯುತ್ತಾರೆ. ಕುಟುಂಬದಲ್ಲಿನ ಜವಾಬ್ದಾರಿಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವಿರಿ. ಹಣಕಾಸಿನ ವಿಚಾರವಾಗಿ ಮಾನಸಿಕ ಒತ್ತಡವಿರುತ್ತದೆ. ಹೊಸ ಮನೆ ಕೊಳ್ಳಲು ಆತ್ಮೀಯರ ನೆರವು ದೊರೆಯುತ್ತದೆ . ಬೃಹತ್ ಪ್ರಮಾಣದ ಹಣಕಾಸಿನ ವ್ಯವಹಾರವನ್ನು ಆರಂಭಿಸುವಿರಿ.

ಪರಿಹಾರ : ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಕುಂಭ

ಕಣ್ಣಿನ ದೋಷ ಇರುವವರು ಎಚ್ಚರಿಕೆ ವಹಿಸಬೇಕು. ದೊರೆಯುವ ಹೊಸ ಉದ್ಯೋಗದ ಅವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸುವಿರಿ. ಸಾಫ್ಟ್ ವೇರ್ ಕಂಪನಿಗಳಲ್ಲಿ ಕೆಲಸ ನಿರ್ವಹಿಸುವವರಿಗೆ ನೆಮ್ಮದಿ ಇರದು. ಮಕ್ಕಳು ತಮ್ಮ ಗುರಿ ತಲುಪಲು ತಾಯಿಯ ಸಹಕಾರ ಬಯಸುತ್ತಾರೆ. ಯಾವುದೆ ವಿಚಾರವನ್ನಾದರೂ ಕಡೆಗಣ್ಣಿನಿಂದ ನೋಡದಿರಿ. ವಿದ್ಯಾರ್ಥಿಗಳು ಓದಿನಲ್ಲಿ ಗಮನ ನೀಡಬೇಕು.

ಪರಿಹಾರ : ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಮೀನ

ಆತಂಕದ ಕ್ಷಣಗಳನ್ನು ಸಮರ್ಥವಾಗಿ ಎದುರಿಸುವಿರಿ. ಉದ್ಯೋಗದಲ್ಲಿ ಉನ್ನತ ಅಧಿಕಾರ ಗಳಿಸುವಿರಿ. ವಿದ್ಯಾರ್ಥಿಗಳು ಮನರಂಜನೆಯ ನಡುವೆಯೂ ಕಲಿಕೆಯಲ್ಲಿ ಮುನ್ನಡೆಯುತ್ತಾರೆ. ಸೋದರಿಯ ಕುಟುಂಬದ ಮನಸ್ತಾಪ ಕಡಿಮೆಯಾಗುತ್ತದೆ. ಸ್ವಂತ ವಾಹನವನ್ನು ಬದಲಿಸುವಿರಿ. ಸೋದರಿಗಾಗಿ ದುಬಾರಿ ಉಡುಗೊರೆ ಕೊಳ್ಳುವಿರಿ. ಮನೆ ಕೊಳ್ಳುವ ನಿರ್ಧಾರ ಮುಂದೆ ಹೋಗಲಿದೆ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ನೀಲಿ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

Whats_app_banner
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.